LIVE NOW
Published : Aug 12, 2026, 06:38 AM ISTUpdated : Aug 12, 2026, 08:57 AM IST

Karnataka Latest News Live: ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ದಾಳಿ, ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ!

ಸಾರಾಂಶ

ಬೆಂಗಳೂರು: ತಮಿಳುನಾಡಿಗೆ ನಿತ್ಯ 12000 ಕ್ಯು.ನಂತೆ 15 ದಿನ 16 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸು ವಿರೋಧಿಸಿ ಕಾವೇರಿ ಕೊಳ್ಳದ ರೈತರು ವಿವಿಧೆಡೆ ಮಂಗಳವಾರ ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರೈತ ಸಂಘಟನೆಗಳ ಕಾರ್ಯಕರ್ತರು ಕೆಲ ಕಾಲ ರಸ್ತೆ ತಡೆ ನಡೆಸಿ, ಹೆದ್ದಾರಿ ಸಂಚಾರಕ್ಕೆ ಅಡ್ಡಿಪಡಿಸಿದರು. ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ರೈತ ಸಂಘಟನೆಯ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. 

ಮದ್ದೂರಿನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

08:57 AM (IST) Aug 12

ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ದಾಳಿ, ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿಯ ವೇಳೆ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಘಟನೆಯು ಜೈಲಿನ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
Read Full Story

08:25 AM (IST) Aug 12

ಸ್ಟಾರ್‌ಗಳ ಸಂಭಾವನೆಗೂ, ಪ್ರೇಕ್ಷಕ ಚಿತ್ರಮಂದಿರಕ್ಕೆ ಬರೋದಕ್ಕೂ ಸಂಬಂಧವಿಲ್ಲ - ಟಿ.ಎನ್‌.ಸೀತಾರಾಮ್‌

ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರ ಪ್ರಕಾರ, ಸ್ಟಾರ್‌ಗಳ ಸಂಭಾವನೆಗೂ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವುದಕ್ಕೂ ಸಂಬಂಧವಿಲ್ಲ. ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಸೆಳೆಯಲು ಒಳ್ಳೆಯ ಕಥೆಗಳಿರುವ ಸಿನಿಮಾಗಳನ್ನು ಮಾಡುವುದೊಂದೇ ದಾರಿ. ಓಟಿಟಿ ಯುಗದಲ್ಲಿ ಪ್ರೇಕ್ಷಕನ ಸಮಯ ಮತ್ತು ಹಣಕ್ಕೆ ನ್ಯಾಯ ಒದಗಿಸುವಂತಹ ಅದ್ಭುತ ಕಥಾವಸ್ತುಗಳು ಚಿತ್ರರಂಗವನ್ನು ಉಳಿಸಬಲ್ಲವು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Read Full Story

08:07 AM (IST) Aug 12

ಶ್ರೀಲಂಕಾ ವಿರುದ್ಧ 2-0 ಗೆಲುವು ಅನಿವಾರ್ಯ; ಭಾರತದ WTC ಫೈನಲ್‌ ಲೆಕ್ಕಾಚಾರ ಹೀಗಿದೆ

2025-27ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ಗೇರಲು ಭಾರತ ತಂಡವು ಶ್ರೀಲಂಕಾ ವಿರುದ್ಧದ ಸರಣಿಯನ್ನು 2-0 ಅಂತರದಲ್ಲಿ ಗೆಲ್ಲುವುದು ಅತ್ಯಗತ್ಯವಾಗಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಭಾರತ, ಫೈನಲ್ ಪ್ರವೇಶಿಸಲು ಉಳಿದಿರುವ 9 ಪಂದ್ಯಗಳಲ್ಲಿ ಕನಿಷ್ಠ 7 ಗೆಲುವುಗಳನ್ನು ಸಾಧಿಸಬೇಕಾದ ಕಠಿಣ ಸವಾಲನ್ನು ಎದುರಿಸುತ್ತಿದೆ.
Read Full Story

07:54 AM (IST) Aug 12

Mangaluru - ಪಾಯಿಂಟ್ಸ್‌ಮ್ಯಾನ್ ಸಮಯಪ್ರಜ್ಞೆ - ಚಲಿಸುವ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ಸುರತ್ಕಲ್ ರೈಲು ನಿಲ್ದಾಣದಲ್ಲಿ, ಚಲಿಸುವ ರೈಲು ಹತ್ತಲು ಯತ್ನಿಸಿ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ಪಾಯಿಂಟ್ಸ್‌ಮ್ಯಾನ್ ಸಂದೀಪ್ ನಾಯಕ್ ರಕ್ಷಿಸಿದ್ದಾರೆ. ತಮ್ಮ ಸಮಯಪ್ರಜ್ಞೆಯಿಂದ ಪ್ರಯಾಣಿಕನನ್ನು ಪ್ಲಾಟ್‌ಫಾರ್ಮ್‌ಗೆ ಎಳೆದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.
Read Full Story

07:45 AM (IST) Aug 12

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್; ಅ.ನಲ್ಲಿ 3 ರೈಲುಗಳ ಸಂಚಾರ ಬಂದ್

ಮೈಸೂರು ವಿಭಾಗದಲ್ಲಿ ಹಳಿ ನಿರ್ವಹಣೆ ಕಾಮಗಾರಿಯಿಂದಾಗಿ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಮಂಗಳೂರು-ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇದೇ ವೇಳೆ, ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ನಡೆಯಲಿದೆ.
Read Full Story

07:41 AM (IST) Aug 12

FSSAI - ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ - ಇಂದಿರಾ ಕ್ಯಾಂಟೀನ್‌, ಜೆಪ್ಟೋ ಗೋದಾಮಿಗೆ ಬೀಗ!

ಆಹಾರ ಸುರಕ್ಷತೆ ಮತ್ತು FSSAI ನಿಯಮಗಳ ಉಲ್ಲಂಘನೆಗಾಗಿ, ಅಧಿಕಾರಿಗಳು ಗೊಟ್ಟಿಗೆರೆಯ ಇಂದಿರಾ ಕ್ಯಾಂಟೀನ್, ಹೊಸಕೋಟೆಯ ಜೆಪ್ಟೋ ಗೋದಾಮಿನ ಮೇಲೆ ದಾಳಿ ನಡೆಸಿ ಬೀಗ ಜಡಿದಿದ್ದಾರೆ. ಈ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆಯು ರಾಜ್ಯದ ಎಲ್ಲಾ ಹೋಟೆಲ್‌ಗಳು ಮತ್ತು ಆಹಾರ ಸೇವಾ ಸಂಸ್ಥೆಗಳಿಗೆ ಮಾರ್ಗಸೂಚಿ ಬಿಡುಗಡೆ.

Read Full Story

07:27 AM (IST) Aug 12

ಬೆಳಗಾವಿ - ಸುಮಾರು 9 km ಉದ್ದದ ಎಲಿವೇಟೆಡ್ ರೈಲ್ವೆ ಟ್ರ್ಯಾಕ್ ನಿರ್ಮಾಣಕ್ಕೆ ಆಗ್ರಹ

ರಾಜ್ಯಸಭಾ ಸದಸ್ಯ ಪ್ರೊ.ಎಂ.ನಾಗರಾಜ ಅವರು ಬೆಳಗಾವಿ ನಗರದ ನಿರಂತರ ಸಂಚಾರ ದಟ್ಟಣೆ ಮತ್ತು ರೈಲ್ವೆ ಗೇಟ್‌ಗಳಿಂದಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ, ಸುಮಾರು 9 ಕಿ.ಮೀ ಉದ್ದದ ಎಲಿವೇಟೆಡ್ ರೈಲ್ವೆ ಟ್ರ್ಯಾಕ್ ನಿರ್ಮಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Read Full Story

07:15 AM (IST) Aug 12

ಶಿವಭಕ್ತರ ಅನುಕೂಲಕ್ಕಾಗಿ Athani ಸಾರಿಗೆ ಘಟಕದಿಂದ 2 ನೂತನ ಬಸ್; ವೇಳಾಪಟ್ಟಿ ಹೀಗಿದೆ

ಶಿವಭಕ್ತರ ಅನುಕೂಲಕ್ಕಾಗಿ ಅಥಣಿ ಸಾರಿಗೆ ಘಟಕದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯಕ್ಕೆ ಎರಡು ನೂತನ ಬಸ್ ಸೇವೆಗಳನ್ನು ಆರಂಭಿಸಲಾಗಿದೆ. ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಈ ಸೇವೆಗೆ ಚಾಲನೆ ನೀಡಿದ್ದು, ಬಸ್‌ನ ಸಮಯ, ಮಾರ್ಗ ಮತ್ತು ₹938 ಟಿಕೆಟ್ ದರದ ಬಗ್ಗೆ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.
Read Full Story

More Trending News