ಬೆಂಗಳೂರು: ತಮಿಳುನಾಡಿಗೆ ನಿತ್ಯ 12000 ಕ್ಯು.ನಂತೆ 15 ದಿನ 16 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸು ವಿರೋಧಿಸಿ ಕಾವೇರಿ ಕೊಳ್ಳದ ರೈತರು ವಿವಿಧೆಡೆ ಮಂಗಳವಾರ ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರೈತ ಸಂಘಟನೆಗಳ ಕಾರ್ಯಕರ್ತರು ಕೆಲ ಕಾಲ ರಸ್ತೆ ತಡೆ ನಡೆಸಿ, ಹೆದ್ದಾರಿ ಸಂಚಾರಕ್ಕೆ ಅಡ್ಡಿಪಡಿಸಿದರು. ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ರೈತ ಸಂಘಟನೆಯ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಮದ್ದೂರಿನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
11:33 PM (IST) Aug 12
ಕನ್ನಡ ಚಿತ್ರರಂಗಕ್ಕೆ ಹಿಟ್ ಸಿನಿಮಾಗಳನ್ನು ನೀಡಿದ ಕಿರಣ್ ರಾಜ್, ಸಂತೋಷ್ ಆನಂದ್ರಾಮ್, ನರ್ತನ್, ಪವನ್ ಕುಮಾರ್, ತರುಣ್ ಸುಧೀರ್ ಸೇರಿದಂತೆ ಹಲವು ನಿರ್ದೇಶಕರ ಮುಂದಿನ ಸಿನಿಮಾ ಏನು? ಸ್ಯಾಂಡಲ್ವುಡ್ನ ಸದ್ಯದ ಸ್ಥಿತಿಯ ಕುರಿತ ವಿಶೇಷ ವರದಿ.
11:02 PM (IST) Aug 12
ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (KRCL) ಅನ್ನು ಸಂಪೂರ್ಣವಾಗಿ ತನ್ನ ಸುಪರ್ದಿಗೆ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
10:52 PM (IST) Aug 12
ಮಾಸ್ ಮಹಾರಾಜ ರವಿತೇಜ ನಟನೆಯ 'ಇರುಮುಡಿ' ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಕುತೂಹಲ ಕೆರಳಿಸಿರುವ ಈ ಟ್ರೇಲರ್, ರವಿತೇಜ ಅವರ ಮಾಮೂಲಿ ಮಾಸ್ ಮಸಾಲಾ ಸಿನಿಮಾಗಳಿಗಿಂತ ವಿಭಿನ್ನವಾಗಿದೆ ಅನ್ನೋದು ವಿಶೇಷ.
10:33 PM (IST) Aug 12
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಕೆಟ್ಟ ರಸ್ತೆಯಿಂದಾಗಿ ಬೈಕ್ನಿಂದ ಬಿದ್ದ ಕೇರಳ ಮೂಲದ ಯುವತಿ ಮೇಧಾ ಪೃಥ್ವಿರಾಜ್ ಮೇಲೆ ಗೂಡ್ಸ್ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯು ಅನಂತನಗರದ ರಸ್ತೆಗಳ ದುಸ್ಥಿತಿಯನ್ನು ಎತ್ತಿ ತೋರಿಸಿದೆ.
10:15 PM (IST) Aug 12
Sink Cleaning Hacks: ಸ್ಟೇನ್ಲೆಸ್ ಸ್ಟೀಲ್ ಸಿಂಕ್ ಮಂಕಾಗಿ ಕಾಣಿಸುತ್ತಿದೆಯೇ? ಕಲೆ, ಖನಿಜಾಂಶ ಹಾಗೂ ಸ್ಕ್ರಾಚ್ಗಳಿಂದ ಸಿಂಕ್ ಹೊಳಪು ಕಳೆದುಕೊಳ್ಳದಂತೆ ಮಾಡಲು ಈ 6 ಸರಳ ಕ್ಲೀನಿಂಗ್ ಟಿಪ್ಸ್ ತಿಳಿಯಿರಿ.
10:13 PM (IST) Aug 12
ಪರಪ್ಪನ ಅಗ್ರಹಾರದ ಜೈಲಿನ ಬ್ಯಾರೆಕ್ನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಫೋನ್ನಲ್ಲಿ ಧೈರ್ಯವಾಗಿ ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಸಿಸಿಬಿ ದಾಳಿಯ ಬೆನ್ನಲ್ಲೇ ಈ ಆಘಾತಕಾರಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಕರ್ತವ್ಯ ನಿರ್ಲಕ್ಷ್ಯ ತೋರಿದ ಜೈಲು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದಾರೆ.
10:08 PM (IST) Aug 12
ಕಂಟೆಂಟ್ ಕ್ರಿಯೇಟರ್ ಸುರುಚಿ, ಗುರುಗ್ರಾಮ್ನಿಂದ ಬೆಂಗಳೂರಿಗೆ ಸ್ಥಳಾಂತರಗೊಂಡಾಗ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಒಂಟಿತನ ಮತ್ತು ಮನೆ ನೆನಪಿನಿಂದ ಬಳಲಿದ ಅವರು, ನಂತರ ಬೆಂಗಳೂರಿನ ಫಿಲ್ಟರ್ ಕಾಫಿ, ಹವಾಮಾನ ಮತ್ತು ಸ್ವತಂತ್ರ ಬದುಕನ್ನು ಪ್ರೀತಿಸಲು ಆರಂಭಿಸಿದ್ದಾರೆ.
09:39 PM (IST) Aug 12
ತುಳುನಾಡಿನಾದ್ಯಂತ ಪಾರಂಪರಿಕ 'ಪಾಲೆ' ಮರದ ತೊಗಟೆಯ ಕಷಾಯ ಮತ್ತು ಪಿತೃ ಕಾರ್ಯಗಳೊಂದಿಗೆ ಆಟಿ ಅಮಾವಾಸ್ಯೆಯನ್ನು ಆಚರಿಸಲಾಯಿತು. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಕೇರಳ ಸಮಾಜಂ ವತಿಯಿಂದ ಮಲ್ಪೆ ಕಡಲತೀರದಲ್ಲಿ ಕೇರಳ ಶೈಲಿಯ 'ಬಲಿತರ್ಪಣಂ' ಆಯೋಜಿಸಲಾಗಿತ್ತು.
09:12 PM (IST) Aug 12
ಲೇಆಫ್ ಆದ ಬೆಂಗಳೂರಿನ ಉದ್ಯೋಗಿಯೊಬ್ಬರು, ಕಂಪನಿಯ ಲ್ಯಾಪ್ಟಾಪ್ ಹಿಂತಿರುಗಿಸಲು ತಮ್ಮ 2 ವರ್ಷದ ಮಗನೊಂದಿಗೆ ಕಚೇರಿಗೆ ಹೋದಾಗ ಅವಮಾನ ಎದುರಿಸಿದ್ದಾರೆ. ಮಗುವನ್ನು ಒಳಗೆ ಬಿಡದ ಈ ಘಟನೆಯು ಕಾರ್ಪೊರೇಟ್ ಜಗತ್ತಿನ ಸ್ವಾರ್ಥ ಸ್ವರೂಪವನ್ನು ಬಯಲು ಮಾಡಿದ್ದಾರೆ.
08:44 PM (IST) Aug 12
ಕರ್ನಾಟಕ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ವಿತರಣೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿದೆ. 'ವ್ಯಸನಮುಕ್ತ ಕರ್ನಾಟಕ' ನಿರ್ಮಾಣದ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದೆ.
08:33 PM (IST) Aug 12
Rukmini Vasanth: ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ರುಕ್ಮಿಣಿ ವಸಂತ್, ಇದೀಗ ಸಾಲು ಸಾಲು ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ.
08:26 PM (IST) Aug 12
ಜೈಲಿನ ಜಾಮರ್ಗಳನ್ನು ಮೀರಿ ಆಂಧ್ರ ಮೂಲದ 5ಜಿ ಸಿಮ್ಗಳನ್ನು ಅಕ್ರಮವಾಗಿ ಬಳಸುತ್ತಿರುವುದನ್ನು ಉಲ್ಲೇಖಿಸಿದ ಡಿಜಿಪಿ ಅಲೋಕ್ ಕುಮಾರ್, ಪ್ರಜ್ವಲ್ ರೇವಣ್ಣ ಮೊಬೈಲ್ ಪತ್ತೆ ಪ್ರಕರಣದಲ್ಲಿ ಏರ್ಟೆಲ್ ಸಂಸ್ಥೆಗೆ ಎಚ್ಚರಿಕೆ ನೀಡಿದ್ದಾರೆ ಮತ್ತು ಅವರನ್ನು 'ಸಹ ಆರೋಪಿ' ಎಂದು ಹೆಸರಿಸಲು ಸೂಚಿಸಿದ್ದಾರೆ.
08:14 PM (IST) Aug 12
ನಾವು ಧರಿಸುವ ಬಟ್ಟೆ, ಆಯ್ಕೆ ಮಾಡಿಕೊಳ್ಳುವ ಬಣ್ಣ, ಆಭರಣ, ಶೂ ಹಾಗೂ ಮೇಕಪ್-ಇವೆಲ್ಲವೂ ನಮ್ಮ ಒಟ್ಟಾರೆ ಲುಕ್ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಕೆಲವೊಮ್ಮೆ ಫ್ಯಾಷನ್ ಬಗ್ಗೆ ಮಾಡುವ ಸಣ್ಣ ತಪ್ಪುಗಳೇ ನಮ್ಮ..
08:03 PM (IST) Aug 12
ಭೀಮನ ಅಮಾವಾಸ್ಯೆಯ ಪ್ರಯುಕ್ತ ಸ್ಯಾಂಡಲ್ವುಡ್ ಹಾಗೂ ಕಿರುತೆರೆಯ ತಾರೆಯರು ತಮ್ಮ ಪತಿಯರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿ, ಪಾದಪೂಜೆ ನೆರವೇರಿಸಿದ್ದಾರೆ. ನೆನಪಿರಲಿ ಪ್ರೇಮ್ ಪತ್ನಿ, ಉಗ್ರಂ ಮಂಜು ದಂಪತಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಂಪ್ರದಾಯಬದ್ಧವಾಗಿ ಹಬ್ಬ ಆಚರಿಸಿದ್ದಾರೆ.
07:39 PM (IST) Aug 12
ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ಬೆಳ್ಳಿ ತೆರೆಗೆ ಕಾಲಿಟ್ಟು ನಾಲ್ಕು ದಶಕಗಳೇ ಕಳೆದಿವೆ. 1986ರ ಆಗಸ್ಟ್ 10ರಂದು ನಾಯಕಿಯಾಗಿ ಸಿನಿಪಯಣ ಆರಂಭಿಸಿದ್ದ ಹಿರಿಯ ನಟಿ ತಾರಾ ಅನುರಾಧ, ಇದೀಗ ಚಿತ್ರರಂಗದಲ್ಲಿ 40 ವರ್ಷಗಳನ್ನು ಪೂರೈಸಿದ್ದಾರೆ.
07:35 PM (IST) Aug 12
ಎಚ್ಚರಿಕೆ ನೀಡಿದ ಹೊರತಾಗಿಯೂ ಪ್ರಜ್ವಲ್ ರೇವಣ್ಣ ಕಡ್ಡಾಯವಾದ ಬಿಳಿ ಸಮವಸ್ತ್ರ ಧರಿಸಲು ನಿರಾಕರಿಸುವ ಮೂಲಕ ಜೈಲಿನ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಡಿಜಿಪಿ ಅಲೋಕ್ ಕುಮಾರ್ ಬಹಿರಂಗಪಡಿಸಿದ್ದಾರೆ. ಅವರ ಬ್ಯಾರೆಕ್ನಲ್ಲಿ ಮೊಬೈಲ್ ಪತ್ತೆಯಾದ ಸಿಸಿಬಿ ದಾಳಿಯ ಬೆನ್ನಲ್ಲೇ, ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಜೈಲು ಎಸ್ಪಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ
06:44 PM (IST) Aug 12
ಆರೋಪಿಗಳಿಂದ ನಾಲ್ಕು ಹುಲಿಯ ಕೋರೆ ಹಲ್ಲುಗಳು, ಎರಡು ದವಡೆ ಹಲ್ಲುಗಳು, ಒಂದು ಹುಲಿ ಉಗುರು ಹಾಗೂ ವನ್ಯಜೀವಿ ಅಂಗಾಂಗಗಳ ಸಾಗಣೆಗೆ ಬಳಸುತ್ತಿದ್ದ ಒಂದು ಆಟೋವನ್ನು ವಶಪಡಿಸಿಕೊಳ್ಳಲಾಗಿದೆ.
06:42 PM (IST) Aug 12
ಪತ್ನಿಯ ಮೇಲಿನ ಕೋಪಕ್ಕೆ ತಂದೆಯೊಬ್ಬ ತನ್ನ ಆರು ವರ್ಷದ ಮಗುವನ್ನ ರಭಸವಾಗಿ ಹರಿಯುತ್ತಿದ್ದ ರಾವಿ ನದಿಗೆ ಎಸೆದು ಹೋದ ಘಟನೆ ಬೆಳಕಿಗೆ ಬಂದಿದೆ. ಅಷ್ಟಕ್ಕೂ ಆಗಿದ್ದೇನು ಅನ್ನೋ ವಿವರ ಈ ಸ್ಟೋರಿಯಲ್ಲಿದೆ..
06:33 PM (IST) Aug 12
ಕನ್ನಡ ಚಿತ್ರರಂಗದಲ್ಲಿ ನಟನಾಗಿ ಮಾತ್ರವಲ್ಲದೆ ನಿರ್ಮಾಪಕರಾಗಿಯೂ ತಮ್ಮದೇ ಛಾಪು ಮೂಡಿಸಿರುವ ಡಾಲಿ ಧನಂಜಯ, ಇದೀಗ ಮತ್ತೊಂದು ವಿಭಿನ್ನ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.
06:16 PM (IST) Aug 12
ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಉಗ್ರಾಯುಧಮ್’ ಸಿನಿಮಾ ಇದೀಗ ಶೂಟಿಂಗ್ ಹಂತದಲ್ಲಿ ವೇಗ ಪಡೆದುಕೊಂಡಿದೆ. 700 ವರ್ಷಗಳ ಹಿಂದಿನ ಕಾಲಘಟ್ಟದ ಕಥೆಯನ್ನು ಒಳಗೊಂಡಿರುವ ಈ ಪೀರಿಯಡ್..
06:08 PM (IST) Aug 12
ರಾಜ್ಯದಲ್ಲಿ 50ಕ್ಕಿಂತ ಹೆಚ್ಚು ಜನರು ಭಾಗವಹಿಸುವ ಮದುವೆ ಹಾಗೂ ಸಮಾರಂಭಗಳಲ್ಲಿ ಬಡಿಸುವ ಆಹಾರಕ್ಕೆ ಕ್ಯಾಲೋರಿ ಚಾರ್ಟ್ ಪ್ರದರ್ಶನವನ್ನು ಕಡ್ಡಾಯಗೊಳಿಸಲು ಆಹಾರ ಸುರಕ್ಷತಾ ಇಲಾಖೆ ಸಿದ್ಧತೆ ನಡೆಸಿದೆ.
06:01 PM (IST) Aug 12
ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಅಭಿನಯದ ‘ಅಯೋಗ್ಯ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಮೊದಲ ಮೂರು ದಿನಗಳಲ್ಲಿ ₹6 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ.
05:36 PM (IST) Aug 12
ಶಿವರಾಜ್ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಎ ಫಾರ್ ಆನಂದ್’ ಸಿನಿಮಾ ಈಗಾಗಲೇ ಕುತೂಹಲ ಮೂಡಿಸಿದೆ. ‘ಘೋಸ್ಟ್’ ಬಳಿಕ ನಿರ್ದೇಶಕ ಶ್ರೀನಿ ಮತ್ತು ಶಿವಣ್ಣ ಮತ್ತೊಮ್ಮೆ ಒಂದಾಗುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
05:12 PM (IST) Aug 12
ಕನ್ನಡಿಗರ ಮನದಲ್ಲಿ ‘ಚೈತ್ರದ ಪ್ರೇಮಾಂಜಲಿ’, ‘ಕರ್ಪೂರದ ಗೊಂಬೆ’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಅಚ್ಚಳಿಯದೆ ಉಳಿದಿರುವ ನಟಿ ವಿನೋದಿನಿ ಶ್ವೇತಾ ಇದೀಗ ಬೇಸರದ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ.
04:54 PM (IST) Aug 12
ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪನ್ನು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದೆ. ದ್ವಿಚಕ್ರ ವಾಹನಗಳು ಕಡಿಮೆ ಸುರಕ್ಷತೆ, ಹೆಚ್ಚಿನ ಅಪಘಾತದ ಅಪಾಯ ಮತ್ತು ಸಾರ್ವಜನಿಕ ಸಾರಿಗೆಗೆ ಸೂಕ್ತವಲ್ಲ ಎಂದು ಸರ್ಕಾರ ವಾದಿಸಿದೆ.
04:49 PM (IST) Aug 12
ದಕ್ಷಿಣ ಭಾರತ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಟಾಪ್ ಹೀರೋಯಿನ್ ಆಗಿ ಮಿಂಚಿದ್ದ ನಟಿ ಯಮುನಾ, ಸ್ಟಾರ್ ಹೀರೋಗಳ ಜೊತೆ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಅಪಾರ ಜನಪ್ರಿಯತೆ ಗಳಿಸಿದ್ದರು.
04:38 PM (IST) Aug 12
Yash Toxic Trailer Sparks Controversy: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಭರ್ಜರಿ ಚರ್ಚೆ ಶುರುವಾಗಿದೆ.
04:35 PM (IST) Aug 12
03:57 PM (IST) Aug 12
ಬೆಂಗಳೂರಿನ ಮೊದಲ ಮೇಲ್ಸೇತುವೆಯಾದ ಸಿರ್ಸಿ ಸರ್ಕಲ್ ಫ್ಲೈಓವರ್, ಆರು ವರ್ಷಗಳ ನಂತರ ಬೃಹತ್ ನಿರ್ವಹಣೆಗೆ ಸಜ್ಜಾಗಿದೆ. ಈ ಯೋಜನೆಯಡಿ ಡಾಂಬರೀಕರಣ, ಎಕ್ಸ್ಪ್ಯಾನ್ಷನ್ ಜಾಯಿಂಟ್ಗಳ ಬದಲಿ ಸೇರಿದಂತೆ ಸಂಪೂರ್ಣ ಕಾಯಕಲ್ಪ ನೀಡಲಾಗುತ್ತಿದೆ.
03:47 PM (IST) Aug 12
ತೆಲಂಗಾಣದ ನಿಜಾಮಾಬಾದ್ನಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಅನಾಥರನ್ನಾಗಿಸಿ ಸಾವಿಗೆ ಶರಣಾಗಿದ್ದಾರೆ. ಅಷ್ಟಕ್ಕೂ ಈ ದಂಪತಿಗೆ ಏನಾಗಿತ್ತು ಅನ್ನೋ ವಿವರ ಈ ಸ್ಟೋರಿಯಲ್ಲಿದೆ.
03:03 PM (IST) Aug 12
02:39 PM (IST) Aug 12
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರ ಮೇಲಿನ ಆರೋಪಗಳನ್ನು ಅವರ ಬೆಂಬಲಿಗರು ತಳ್ಳಿಹಾಕಿದ್ದಾರೆ. ಬಿಜೆಪಿ ನಾಯಕರು ವಿನಾಕಾರಣ ಟೀಕೆ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
12:50 PM (IST) Aug 12
ಹಾಸನ: ಮಂಗಳೂರು ಮತ್ತು ಬೆಂಗಳೂರು ಮಾರ್ಗದಲ್ಲಿ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭವಾಗಿದ್ದು, ಇದರೊಂದಿಗೆ ಬಹುದಿನ ಕನಸು ನನಸಾಗಿದೆ. ಇಂದು ಬೆಳ್ಳಂಬೆಳಗ್ಗೆ ಸಕಲೇಶ್ವರಪುರಕ್ಕೆ ಆಗಮಿಸಿದ್ದ ವಂದೇ ಭಾರತ್ ರೈಲಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.
12:19 PM (IST) Aug 12
12:02 PM (IST) Aug 12
11:45 AM (IST) Aug 12
ರಾಕಿಂಗ್ ಸ್ಟಾರ್ ಯಶ್ ಅವರ ಮುಂಬರುವ 'ಟಾಕ್ಸಿಕ್' ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿನ 'ನಮ್ಮ ಮೆಟ್ರೋ' ರೈಲನ್ನು ಬಳಸಿಕೊಳ್ಳಲಾಗಿದೆ. ಮೆಟ್ರೋ ಬೋಗಿಗಳ ಮೇಲೆ ಸಿನಿಮಾದ ಪೋಸ್ಟರ್ಗಳನ್ನು ಅಂಟಿಸುವ ಮೂಲಕ ವಿಭಿನ್ನ ಪ್ರಚಾರಕ್ಕೆ ಚಿತ್ರತಂಡ ಮುಂದಾಗಿದ್ದು, ಈ ಸಿನಿಮಾ ಆಗಸ್ಟ್ 26 ರಂದು ಜಾಗತಿಕವಾಗಿ ಬಿಡುಗಡೆಯಾಗಲಿದೆ.
11:10 AM (IST) Aug 12
ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನೀಡಿದ್ದ ಆಹಾರ ಇಲಾಖೆಯನ್ನು ಮತ್ತೆ ನೀಡಿದ್ದರಿಂದ ಅಸಮಾಧಾನಗೊಂಡಿದ್ದ ಕೆಎಚ್ ಮುನಿಯಪ್ಪ ಅವರು, ಸಮಾಜ ಕಲ್ಯಾಣ ಇಲಾಖೆಗೆ ಪಟ್ಟುಹಿಡಿದು ಹೈಕಮಾಂಡ್ ಭೇಟಿಯನ್ನು ಮಾಡಿದ್ದರು. ಸದ್ಯ ಮುನಿಯಪ್ಪ ಅವರ ಬೇಡಿಕೆಗೆ ಮಣಿದ ಹೈಕಮಾಂಡ್ ಸಮಾಜ ಕಲ್ಯಾಣ ಇಲಾಖೆಯನ್ನು ನೀಡಿದೆ.
10:48 AM (IST) Aug 12
10:39 AM (IST) Aug 12
10:28 AM (IST) Aug 12