ಬೆಂಗಳೂರು: ತಮಿಳುನಾಡಿಗೆ ನಿತ್ಯ 12000 ಕ್ಯು.ನಂತೆ 15 ದಿನ 16 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸು ವಿರೋಧಿಸಿ ಕಾವೇರಿ ಕೊಳ್ಳದ ರೈತರು ವಿವಿಧೆಡೆ ಮಂಗಳವಾರ ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರೈತ ಸಂಘಟನೆಗಳ ಕಾರ್ಯಕರ್ತರು ಕೆಲ ಕಾಲ ರಸ್ತೆ ತಡೆ ನಡೆಸಿ, ಹೆದ್ದಾರಿ ಸಂಚಾರಕ್ಕೆ ಅಡ್ಡಿಪಡಿಸಿದರು. ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ರೈತ ಸಂಘಟನೆಯ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಮದ್ದೂರಿನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
08:57 AM (IST) Aug 12
08:25 AM (IST) Aug 12
08:07 AM (IST) Aug 12
07:54 AM (IST) Aug 12
07:45 AM (IST) Aug 12
07:41 AM (IST) Aug 12
ಆಹಾರ ಸುರಕ್ಷತೆ ಮತ್ತು FSSAI ನಿಯಮಗಳ ಉಲ್ಲಂಘನೆಗಾಗಿ, ಅಧಿಕಾರಿಗಳು ಗೊಟ್ಟಿಗೆರೆಯ ಇಂದಿರಾ ಕ್ಯಾಂಟೀನ್, ಹೊಸಕೋಟೆಯ ಜೆಪ್ಟೋ ಗೋದಾಮಿನ ಮೇಲೆ ದಾಳಿ ನಡೆಸಿ ಬೀಗ ಜಡಿದಿದ್ದಾರೆ. ಈ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆಯು ರಾಜ್ಯದ ಎಲ್ಲಾ ಹೋಟೆಲ್ಗಳು ಮತ್ತು ಆಹಾರ ಸೇವಾ ಸಂಸ್ಥೆಗಳಿಗೆ ಮಾರ್ಗಸೂಚಿ ಬಿಡುಗಡೆ.
07:27 AM (IST) Aug 12
ರಾಜ್ಯಸಭಾ ಸದಸ್ಯ ಪ್ರೊ.ಎಂ.ನಾಗರಾಜ ಅವರು ಬೆಳಗಾವಿ ನಗರದ ನಿರಂತರ ಸಂಚಾರ ದಟ್ಟಣೆ ಮತ್ತು ರೈಲ್ವೆ ಗೇಟ್ಗಳಿಂದಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ, ಸುಮಾರು 9 ಕಿ.ಮೀ ಉದ್ದದ ಎಲಿವೇಟೆಡ್ ರೈಲ್ವೆ ಟ್ರ್ಯಾಕ್ ನಿರ್ಮಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
07:15 AM (IST) Aug 12