ಕೊಡಗು: ರಾಜ್ಯ ಸರ್ಕಾರವು ಸಾರ್ವಜನಿಕ ಹಾಗೂ ಸರ್ಕಾರಿ ಆವರಣಗಳ ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮಸೂದೆ ತರುತ್ತಿದೆಯೇ ಹೊರತು ಆರೆಸ್ಸೆಸ್ ನಿಯಂತ್ರಿಸಲು ಮಸೂದೆ ತರುತ್ತಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಆರ್ಎಸ್ಎಸ್ ನೋಂದಣಿಗೆ ಸಂಬಂಧಿಸಿ ಆರ್ಎಸ್ಎಸ್ ಮುಖಂಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಯಾರ ಮನಸನ್ನು ನೋಯಿಸಲು ಈ ಕಾನೂನು ಮಾಡುತ್ತಿಲ್ಲ. ನ್ಯಾಯಾಲಯದ ಆದೇಶಗಳನ್ನು ಪಾಲಿಸಿಯೇ ಕಾನೂನು ರೂಪಿಸುತ್ತಿದ್ದೇವೆ. ನ್ಯಾಯಾಲಯದ ಕಾನೂನಿಗೆ ಗೌರವ ಕೊಡಬೇಕಲ್ಲವೇ? ಎಂದು ಪ್ರಶ್ನಿಸಿದರು.
ನಾವು ಭಾರತ್ ಜೋಡೋ ಕಾರ್ಯಕ್ರಮ ಮಾಡುವಾಗ ಫ್ರೀಡಂ ಪಾರ್ಕ್ನಿಂದ ರ್ಯಾಲಿ ಮಾಡಲು ಅವಕಾಶವಿರಲಿಲ್ಲ. ಆಗ ಕೋರ್ಟ್ನಿಂದಲೇ ಅನುಮತಿ ಪಡೆದಿದ್ದೆವು. ನಮ್ಮದೇ ಸರ್ಕಾರ ಇದ್ದರೂ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳಲಿಲ್ಲ. ಬಿ.ಎಲ್. ಸಂತೋಷ್ ಅವರು ಹಿರಿಯರು. ಅವರ ಮಾತಿಗೂ ಗೌರವ ಕೊಡುತ್ತೇವೆ. ಆದರೆ, ಮೊದಲಿಗೆ ಕಾನೂನಿಗೆ ಗೌರವ ಕೊಡಬೇಕು ಎಂದರು.
06:38 AM (IST) Aug 17
06:28 AM (IST) Aug 17
ಕಳೆದ 30 ವರ್ಷಗಳಿಂದ ಮದ್ಯ ಮತ್ತು ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯಕ್ಕೆ ಈ ಗ್ರಾಮ ಮಾದರಿಯಾಗಿದೆ. ಈ ಸಾಮೂಹಿಕ ನಿರ್ಧಾರದಿಂದಾಗಿ ಗ್ರಾಮದಲ್ಲಿ ಯುವಕರು ಸರಿದಾರಿಯಲ್ಲಿದ್ದು, ಆರೋಗ್ಯವಂತರಾಗಿದ್ದಾರೆ ಮತ್ತು ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ.
06:19 AM (IST) Aug 17
06:08 AM (IST) Aug 17
05:58 AM (IST) Aug 17
ಕರ್ನಾಟಕ ಸರ್ಕಾರವು 'ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026' ಅನ್ನು ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯವಾಗಲಿದ್ದು, ನಿಯಮ ಉಲ್ಲಂಘಿಸಿದರೆ ಜಾಮೀನು ರಹಿತ ಅಪರಾಧವಾಗಿ ಪರಿಗಣಿಸಿ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.
05:41 AM (IST) Aug 17
05:30 AM (IST) Aug 17