LIVE NOW
Published : Aug 17, 2026, 05:06 AM ISTUpdated : Aug 17, 2026, 06:38 AM IST

Karnataka Latest News Live: ಕನ್ನಡಿಗ ದಂಪತಿಯಿಂದ ವಂದೇ ಮಾತರಂ, ಜನಗಣಮನ ಗೀತೆಯೊಂದಿಗೆ ಅಮೆರಿಕದಲ್ಲಿ ಗೃಹಪ್ರವೇಶ

ಸಾರಾಂಶ

ಕೊಡಗು: ರಾಜ್ಯ ಸರ್ಕಾರವು ಸಾರ್ವಜನಿಕ ಹಾಗೂ ಸರ್ಕಾರಿ ಆವರಣಗಳ ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮಸೂದೆ ತರುತ್ತಿದೆಯೇ ಹೊರತು ಆರೆಸ್ಸೆಸ್‌ ನಿಯಂತ್ರಿಸಲು ಮಸೂದೆ ತರುತ್ತಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಆರ್‌ಎಸ್‌ಎಸ್ ನೋಂದಣಿಗೆ ಸಂಬಂಧಿಸಿ ಆರ್‌ಎಸ್‌ಎಸ್ ಮುಖಂಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಯಾರ ಮನಸನ್ನು ನೋಯಿಸಲು ಈ ಕಾನೂನು ಮಾಡುತ್ತಿಲ್ಲ. ನ್ಯಾಯಾಲಯದ ಆದೇಶಗಳನ್ನು ಪಾಲಿಸಿಯೇ ಕಾನೂನು ರೂಪಿಸುತ್ತಿದ್ದೇವೆ. ನ್ಯಾಯಾಲಯದ ಕಾನೂನಿಗೆ ಗೌರವ ಕೊಡಬೇಕಲ್ಲವೇ? ಎಂದು ಪ್ರಶ್ನಿಸಿದರು.

ನಾವು ಭಾರತ್ ಜೋಡೋ ಕಾರ್ಯಕ್ರಮ ಮಾಡುವಾಗ ಫ್ರೀಡಂ ಪಾರ್ಕ್‌ನಿಂದ ರ್‍ಯಾಲಿ ಮಾಡಲು ಅವಕಾಶವಿರಲಿಲ್ಲ. ಆಗ ಕೋರ್ಟ್‌ನಿಂದಲೇ ಅನುಮತಿ ಪಡೆದಿದ್ದೆವು. ನಮ್ಮದೇ ಸರ್ಕಾರ ಇದ್ದರೂ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳಲಿಲ್ಲ. ಬಿ.ಎಲ್‌. ಸಂತೋಷ್‌ ಅವರು ಹಿರಿಯರು. ಅವರ ಮಾತಿಗೂ ಗೌರವ ಕೊಡುತ್ತೇವೆ. ಆದರೆ, ಮೊದಲಿಗೆ ಕಾನೂನಿಗೆ ಗೌರವ ಕೊಡಬೇಕು ಎಂದರು.

06:38 AM (IST) Aug 17

ಕನ್ನಡಿಗ ದಂಪತಿಯಿಂದ ವಂದೇ ಮಾತರಂ, ಜನಗಣಮನ ಗೀತೆಯೊಂದಿಗೆ ಅಮೆರಿಕದಲ್ಲಿ ಗೃಹಪ್ರವೇಶ

ನ್ಯೂಯಾರ್ಕ್‌ನ ಆಲ್ಬನಿಯಲ್ಲಿ ನೆಲೆಸಿರುವ ಕನ್ನಡಿಗ ದಂಪತಿ ಸುಚಿತ ಮತ್ತು ಅಮೋಲ್ ಜಾಜು ಅವರ ನೂತನ ಗೃಹಪ್ರವೇಶ ಸಮಾರಂಭದಲ್ಲಿ ದೇಶಭಕ್ತಿ ಮೊಳಗಿದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಪೂಜೆಯ ನಂತರ ನೆರೆದಿದ್ದವರೆಲ್ಲರೂ 'ವಂದೇ ಮಾತರಂ' ಮತ್ತು 'ಜನಗಣಮನ' ಗೀತೆಗಳನ್ನು ಹಾಡಿ ತಾಯ್ನಾಡಿನ ಮೇಲಿನ ಪ್ರೀತಿಯನ್ನು ಮೆರೆದರು.
Read Full Story

06:28 AM (IST) Aug 17

30 ವರ್ಷದಿಂದ ಮದ್ಯ, ಗುಟ್ಕಾ ನಿಷೇಧಿಸಿ ರಾಜ್ಯದ ಮಾದರಿಯಾದ ಕೊಪ್ಪಳ ಜಿಲ್ಲೆಯ ಗ್ರಾಮ

ಕಳೆದ 30 ವರ್ಷಗಳಿಂದ ಮದ್ಯ ಮತ್ತು ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯಕ್ಕೆ ಈ ಗ್ರಾಮ ಮಾದರಿಯಾಗಿದೆ. ಈ ಸಾಮೂಹಿಕ ನಿರ್ಧಾರದಿಂದಾಗಿ ಗ್ರಾಮದಲ್ಲಿ ಯುವಕರು ಸರಿದಾರಿಯಲ್ಲಿದ್ದು, ಆರೋಗ್ಯವಂತರಾಗಿದ್ದಾರೆ ಮತ್ತು ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ.

Read Full Story

06:19 AM (IST) Aug 17

ಕರ್ನಾಟಕದ ಕರಾವಳಿಯಲ್ಲಿ ಗಣನೀಯವಾಗಿ ಕ್ಷೀಣಿಸುತ್ತಿದೆ ಕಪ್ಪೆಗಳ ಸಂತತಿ! ಯಾವುದರ ಸಂಕೇತ?

ಕರಾವಳಿ ಪ್ರದೇಶದಲ್ಲಿ ಮಳೆಯ ಅಭಾವ, ರಾಸಾಯನಿಕ ಗೊಬ್ಬರಗಳ ಬಳಕೆ ಮತ್ತು ಮಾಂಸಕ್ಕಾಗಿ ಬೇಟೆಯಾಡುವುದರಿಂದ ಕಪ್ಪೆಗಳ ಸಂತತಿ ಗಣನೀಯವಾಗಿ ಕ್ಷೀಣಿಸುತ್ತಿದೆ. ಇದು ಪರಿಸರ ವ್ಯವಸ್ಥೆಯ ಆಹಾರ ಸರಪಳಿಯ ಮೇಲೆ ಪರಿಣಾಮ ಬೀರಿದ್ದು, ಕೀಟಗಳು ಮತ್ತು ಸೊಳ್ಳೆಗಳ ಹಾವಳಿ ಹೆಚ್ಚಾಗಲು ಕಾರಣವಾಗಿದೆ. ಇದರಿಂದಾಗಿ ಹಾವುಗಳು ಆಹಾರ ಅರಸಿ ಮಾನವ ವಸತಿ ಪ್ರದೇಶಗಳಿಗೆ ಬರುತ್ತಿವೆ.
Read Full Story

06:08 AM (IST) Aug 17

ಕೆಎಎಸ್‌ ಅಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಅವರಿಂದ 283 ಸರ್ಕಾರಿ ಶಾಲೆಗಳಿಗೆ ಬಣ್ಣ

ಧಾರವಾಡ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ತಮ್ಮ 'ಪರಿಸರ ಪ್ರೇಮ ತಂಡ'ದೊಂದಿಗೆ ಸ್ವಂತ ಖರ್ಚಿನಲ್ಲಿ ಬಣ್ಣ ಮಾಸಿದ ಸರ್ಕಾರಿ ಶಾಲೆ ಮತ್ತು ಅಂಗನವಾಡಿಗಳಿಗೆ ಬಣ್ಣ ಬಳಿಯುತ್ತಿದ್ದಾರೆ. ಇಲ್ಲಿಯವರೆಗೆ 283 ಕಟ್ಟಡಗಳನ್ನು ಸುಂದರಗೊಳಿಸಿರುವ ಇವರು, ತಮ್ಮ ಬಾಲ್ಯದ ಅನುಭವದಿಂದ ಪ್ರೇರಿತರಾಗಿ ಈ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
Read Full Story

05:58 AM (IST) Aug 17

ಇನ್ಮುಂದೆ ಅನುಮತಿ ಪಡೆಯದೆ ರ್‍ಯಾಲಿ ಮಾಡಿದರೆ 3 ವರ್ಷ ಜೈಲು ಶಿಕ್ಷೆ? ವಿಧೇಯಕದಲ್ಲಿ ಏನಿದೆ?

ಕರ್ನಾಟಕ ಸರ್ಕಾರವು 'ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026' ಅನ್ನು ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯವಾಗಲಿದ್ದು, ನಿಯಮ ಉಲ್ಲಂಘಿಸಿದರೆ ಜಾಮೀನು ರಹಿತ ಅಪರಾಧವಾಗಿ ಪರಿಗಣಿಸಿ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.

Read Full Story

05:41 AM (IST) Aug 17

ಹನೂರು ಎನ್ಕೌಂಟರ್‌ಗೆ ಅರಣ್ಯ ಸಿಬ್ಬಂದಿ ‘ಜಿಂಕೆ ಮಾಂಸ’ ಸಾಕ್ಷ್ಯ; ತ.ನಾಡು ವಿಪಕ್ಷಗಳ ಆಕ್ರೋಶ

ಕಾವೇರಿ ವನ್ಯಜೀವಿ ವಿಭಾಗದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟ ಘಟನೆಯ ತನಿಖೆ ಆರಂಭವಾಗಿದೆ. ಇದು ನಕಲಿ ಎನ್‌ಕೌಂಟರ್‌ ಅಲ್ಲವೆಂದು ಸಾಬೀತುಪಡಿಸಲು, ಅರಣ್ಯ ಇಲಾಖೆಯು ಬೇಟೆಗಾರರಿಂದ ವಶಪಡಿಸಿಕೊಂಡ ಸುಮಾರು 30 ಕೆ.ಜಿ. ವನ್ಯಪ್ರಾಣಿ ಮಾಂಸವನ್ನು ತನಿಖಾಧಿಕಾರಿಗಳ ಮುಂದೆ ಸಾಕ್ಷಿಯಾಗಿ ಇರಿಸಿದೆ. ಈ ಘಟನೆಯಿಂದ ಉದ್ರಿಕ್ತರಾದ ಜನರು ಅರಣ್ಯ ಇಲಾಖೆಯ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ.
Read Full Story

05:30 AM (IST) Aug 17

SIR ನಮೂನೆ ವಾಪಸ್ ಕೊಡಲು ಇಂದೇ ಕೊನೆ ದಿನ; ಹೆಸರು ತೆಗೆದುಹಾಕಿದ್ದಾರಾ? ನೋಡಿಕೊಳ್ಳಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ, ಗಣತಿ ನಮೂನೆ ವಾಪಸ್ ನೀಡಲು ಮತ್ತು ರೋಲ್‌ಬ್ಯಾಕ್‌ಗೆ ಸೋಮವಾರ ಕೊನೆಯ ದಿನವಾಗಿದೆ. ಎಎಸ್‌ಡಿಡಿಒ ವರ್ಗಕ್ಕೆ ಸೇರಿದ ಅಂದಾಜು 1.08 ಕೋಟಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದಾಗುವ ಸಾಧ್ಯತೆಯಿದ್ದು, ಅರ್ಹರು ತಮ್ಮ ಹೆಸರು ಉಳಿಸಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳಬೇಕಿದೆ. ಪರಿಷ್ಕೃತ ಕರಡು ಮತದಾರರ ಪಟ್ಟಿಯು ಆಗಸ್ಟ್ 24 ರಂದು ಪ್ರಕಟವಾಗಲಿದೆ.
Read Full Story

More Trending News