LIVE NOW
Published : Aug 19, 2026, 05:17 AM ISTUpdated : Aug 19, 2026, 07:20 AM IST

Karnataka Latest News Live: Suraj Revanna - ಅಸಹಜ ಲೈಂ*ಗಿಕ ದೌರ್ಜನ್ಯ ಕೇಸ್ - ಮಾಫಿ ಸಾಕ್ಷಿ ಅರ್ಜಿಗೆ ಟ್ವಿಸ್ಟ್

ಸಾರಾಂಶ

ಹುಬ್ಬಳ್ಳಿ-ಧಾರವಾಡ: ನಗರದಲ್ಲಿ ಆ. 26ರಂದು ನಡೆಯುವ ಈದ್‌ ಮಿಲಾದ್‌ ಹಬ್ಬದ ಅಂಗವಾಗಿ ನಡೆಯುವ ಸಾಮೂಹಿಕ ಮೆರವಣಿಗೆಯಲ್ಲಿ ಡಿಜೆ ಹಾಗೂ ಇತರ ಸಂಗೀತ ವಾದ್ಯಗಳ ಬಳಕೆ ನಿಷೇಧಿಸಬೇಕೆಂದು ಹು-ಧಾ ಅಂಜುಮನ್ ಸಂಸ್ಥೆಗಳ ವತಿಯಿಂದ ಮಂಗಳವಾರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಈದ್ ಮಿಲಾದ್-ಉನ್-ನಬಿ ಮೆರವಣಿಗೆಯಲ್ಲಿ ಡಿಜೆ ಹಾಗೂ ಇತರ ಸಂಗೀತ ವಾದ್ಯಗಳ ಬಳಕೆಯನ್ನು ಶಾಶ್ವತವಾಗಿ ನಿಷೇಧಿಸುವಂತೆ ಜು. 31ರಂದು ಸಭೆ ನಡೆಸಿ ಇಂತಹ ನಿರ್ಣಯ ಕೈಗೊಳ್ಳಲಾಗಿದೆ. ಮೆರವಣಿಗೆಯಲ್ಲಿ ಡಿಜೆ ಹಚ್ಚುವುದರಿಂದ ರೋಗಿಗಳು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಲಿದೆ. ಹೀಗಾಗಿ ಸೌಂಡ್‌ ಸಿಸ್ಟಮ್‌ ಬಳಕೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಈ ವೇಳೆ ಅಂಜುಮನ್-ಏ-ಇಸ್ಲಾಂ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಉಪಾಧ್ಯಕ್ಷ ಬಾಷಾಸಾಬ್ ಅತ್ತಾರ, ಗೌರವ ಕಾರ್ಯದರ್ಶಿ ಬಶೀರ್ ಅಹ್ಮದ್ ಹಳ್ಳೂರ, ಸಹ ಕಾರ್ಯದರ್ಶಿ ರಫೀಕ್ ಬಂಕಾಪುರ, ಶಿಕ್ಷಣ ಮಂಡಳಿ ಸದಸ್ಯರಾದ ಇಲಿಯಾಸ್ ಮನಿಯಾರ್, ನವೀದ್ ಮುಲ್ಲಾ, ಬಶೀರ್ ಗುಡಮಾಲ್, ವಸೀಂ ಮೊಮಿನ್, ಪಾಲಿಕೆ ಸದಸ್ಯರಾದ ಇಕ್ಬಾಲ್ ನವಲೂರ, ಸಾದಿಕ್ ಯಕ್ಕುಂಡಿ, ಮುದಸ್ಸರ್ ಖೋಜೆ, ಧಾರವಾಡ ಅಂಜುಮನ್ ಸಂಸ್ಥೆಯ ಬಶೀರ್ ಅಹ್ಮದ್ ಜಾಗಿರದಾರ, ಯಾಸೀನ್ ಹಾವೇರಪೇಟ, ರಫೀಕ್ ಶಿರಹಟ್ಟಿ, ಖೈರುದ್ದೀನ್ ಶೇಖ್, ಶಮಶುದ್ಧೀನ್ ಗಿಡದೂರ ಸೇರಿ ಹಲವರಿದ್ದರು.

07:20 AM (IST) Aug 19

Suraj Revanna - ಅಸಹಜ ಲೈಂ*ಗಿಕ ದೌರ್ಜನ್ಯ ಕೇಸ್ - ಮಾಫಿ ಸಾಕ್ಷಿ ಅರ್ಜಿಗೆ ಟ್ವಿಸ್ಟ್

ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂ*ಗಿಕ ದೌರ್ಜನ್ಯ ಪ್ರಕರಣದಲ್ಲಿ, 2ನೇ ಆರೋಪಿ ಶಿವಕುಮಾರ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.

Read Full Story

07:07 AM (IST) Aug 19

Bengaluru - ಮತ್ತೊಂದು ಟೋಲ್ ಶುಲ್ಕದ 18.50 km ಉದ್ದದ ಫ್ಲೈಓವರ್ - ಕನಕಪುರ ರಸ್ತೆಗೆ ಪರ್ಯಾಯ ಮಾರ್ಗ

ಬೆಂಗಳೂರಿನ ದಕ್ಷಿಣ ಭಾಗದ ಸಂಚಾರ ದಟ್ಟಣೆ ನಿವಾರಿಸಲು, 18.50 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. 'ಬಿಒಒಟಿ' ಮಾದರಿಯಲ್ಲಿ ನಿರ್ಮಾಣವಾಗಲಿರುವ ಈ ಟೋಲ್ ಸಹಿತ ಮೇಲ್ಸೇತುವೆಯು ಕನಕಪುರ ರಸ್ತೆಗೆ ಪರ್ಯಾಯ ಮಾರ್ಗವಾಗಿ ಕಾರ್ಯನಿರ್ವಹಿಸಲಿದೆ.

Read Full Story

06:52 AM (IST) Aug 19

ಔಟರ್ ರಿಂಗ್ ರಸ್ತೆಯ 17 ಕಿ.ಮೀ ಮಾರ್ಗದ ವೈಟ್‌ ಟಾಪಿಂಗ್ ಕಾಮಗಾರಿ ಈಗ ಬೇಡ ಎಂದ ORRCA

ಔಟರ್ ರಿಂಗ್ ರೋಡ್‌ನಲ್ಲಿ ನೀಲಿ ಮೆಟ್ರೋ ರೈಲು ಸಂಚಾರ ಆರಂಭವಾದ ನಂತರವೇ ವೈಟ್ ಟಾಪಿಂಗ್ ಕಾಮಗಾರಿ ಆರಂಭಿಸುವಂತೆ ಔಟರ್ ರಿಂಗ್ ರೋಡ್ ಕಂಪನಿಗಳ ಅಸೋಸಿಯೇಷನ್ (ಒಆರ್‌ಆರ್‌ಸಿಎ) ಮನವಿ ಮಾಡಿದೆ. ಮೆಟ್ರೋ ಜೊತೆಗೆ ವೈಟ್‌ಟಾಪಿಂಗ್ ಕಾಮಗಾರಿ ಆರಂಭಿಸಿದರೆ ಈ ಮಾರ್ಗದ ವಾಹನ ಸವಾರರಿಗೆ ಭಾರಿ ಅನನುಕೂಲವಾಗುತ್ತದೆ ಎಂದು ಅಸೋಸಿಯೇಷನ್‌ ಹೇಳಿದೆ.
Read Full Story

06:37 AM (IST) Aug 19

Vande Mataram - ಕಾಂಗ್ರೆಸ್ ಎರಡೇ ಪ್ಯಾರಾ ಹಾಡೋದು - ಸೋನಿಯಾ ವಿರುದ್ಧ RSS ಕುತಂತ್ರ

ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲ, ನೇಣು ಹಾಕಿದರೂ ಎರಡೇ ಪ್ಯಾರಾ ಹಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರ ಮೇಲಿನ ಆರೋಪವು ಆರ್‌ಎಸ್‌ಎಸ್‌ನ ಕುತಂತ್ರ ಎಂದು ಅವರು ಆರೋಪಿಸಿದ್ದಾರೆ.
Read Full Story

06:28 AM (IST) Aug 19

Bengaluru - ಸೋಂಕು ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಕ್ಲಾರೆನ್ಸ್ ಶಾಲೆಗೆ ನೋಟಿಸ್‌

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಎಚ್‌1ಎನ್‌1 ಸೋಂಕಿನ ಆತಂಕದಿಂದ ರಜೆ ಘೋಷಿಸಲಾಗಿತ್ತು. ಆದರೆ, ತನಿಖೆಯ ನಂತರ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಡದ ಕಾರಣ, ಆಧಾರರಹಿತ ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿಗೆ ಪಾಲಿಕೆ ನೋಟಿಸ್ ಜಾರಿ ಮಾಡಿದೆ.
Read Full Story

06:11 AM (IST) Aug 19

Mahadayi protest farmer case - 28 ಮಹದಾಯಿ ರೈತ ಹೋರಾಟಗಾರರ ಮೇಲೆ ಕೇಸ್‌! ಏನಿದು ಪ್ರಕರಣ?

ಮಹದಾಯಿ ಯೋಜನೆಗಾಗಿ ಬೆಂಗಳೂರಿನ ಅರಣ್ಯ ಭವನದ ಎದುರು ಧರಣಿ ನಡೆಸಿದ್ದ ರೈತ ಹೋರಾಟಗಾರರ ಮೇಲೆ ಸರ್ಕಾರ ಹೊಸದಾಗಿ ಕೇಸ್ ದಾಖಲಿಸಿದೆ. ಗಲಭೆಕೋರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಸರ್ಕಾರ, ನೀರಿಗಾಗಿ ಹೋರಾಡಿದ 28 ರೈತರ ಮೇಲೆ ಕೇಸ್ ದಾಖಲಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Read Full Story

05:49 AM (IST) Aug 19

Tailoring - ಖಾಸಗಿ ಶಾಲೆಗಳೇ ಸಮವಸ್ತ್ರ ಪೂರೈಕೆ - ಟೈಲರ್‌ಗಳ ಬದುಕು ಅಯೋಮಯ! ಆದಾಯ ಕುಸಿತ

ಖಾಸಗಿ ಶಾಲೆಗಳು ನೇರವಾಗಿ ಸಮವಸ್ತ್ರಗಳನ್ನು ಮಾರಾಟ ಮಾಡುತ್ತಿರುವುದರಿಂದ, ಸಾಂಪ್ರದಾಯಿಕ ಟೈಲರ್‌ಗಳ ಆದಾಯಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಕಳೆದ ಐದು ವರ್ಷಗಳಿಂದ ಈ ಪದ್ಧತಿಯು ಜಾರಿಯಲ್ಲಿದ್ದು, ಶಾಲಾ ಸಮವಸ್ತ್ರ ಹೊಲಿಗೆಯನ್ನೇ ನಂಬಿದ್ದ ನೂರಾರು ಟೈಲರ್‌ಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕೃಷಿ ಹಿನ್ನಡೆ ಮತ್ತು ಸಿದ್ಧ ಉಡುಪುಗಳ ಹೆಚ್ಚಳವು ಅವರ ಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಿದೆ.

Read Full Story

More Trending News