ಹುಬ್ಬಳ್ಳಿ-ಧಾರವಾಡ: ನಗರದಲ್ಲಿ ಆ. 26ರಂದು ನಡೆಯುವ ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆಯುವ ಸಾಮೂಹಿಕ ಮೆರವಣಿಗೆಯಲ್ಲಿ ಡಿಜೆ ಹಾಗೂ ಇತರ ಸಂಗೀತ ವಾದ್ಯಗಳ ಬಳಕೆ ನಿಷೇಧಿಸಬೇಕೆಂದು ಹು-ಧಾ ಅಂಜುಮನ್ ಸಂಸ್ಥೆಗಳ ವತಿಯಿಂದ ಮಂಗಳವಾರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈದ್ ಮಿಲಾದ್-ಉನ್-ನಬಿ ಮೆರವಣಿಗೆಯಲ್ಲಿ ಡಿಜೆ ಹಾಗೂ ಇತರ ಸಂಗೀತ ವಾದ್ಯಗಳ ಬಳಕೆಯನ್ನು ಶಾಶ್ವತವಾಗಿ ನಿಷೇಧಿಸುವಂತೆ ಜು. 31ರಂದು ಸಭೆ ನಡೆಸಿ ಇಂತಹ ನಿರ್ಣಯ ಕೈಗೊಳ್ಳಲಾಗಿದೆ. ಮೆರವಣಿಗೆಯಲ್ಲಿ ಡಿಜೆ ಹಚ್ಚುವುದರಿಂದ ರೋಗಿಗಳು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಲಿದೆ. ಹೀಗಾಗಿ ಸೌಂಡ್ ಸಿಸ್ಟಮ್ ಬಳಕೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.
ಈ ವೇಳೆ ಅಂಜುಮನ್-ಏ-ಇಸ್ಲಾಂ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಉಪಾಧ್ಯಕ್ಷ ಬಾಷಾಸಾಬ್ ಅತ್ತಾರ, ಗೌರವ ಕಾರ್ಯದರ್ಶಿ ಬಶೀರ್ ಅಹ್ಮದ್ ಹಳ್ಳೂರ, ಸಹ ಕಾರ್ಯದರ್ಶಿ ರಫೀಕ್ ಬಂಕಾಪುರ, ಶಿಕ್ಷಣ ಮಂಡಳಿ ಸದಸ್ಯರಾದ ಇಲಿಯಾಸ್ ಮನಿಯಾರ್, ನವೀದ್ ಮುಲ್ಲಾ, ಬಶೀರ್ ಗುಡಮಾಲ್, ವಸೀಂ ಮೊಮಿನ್, ಪಾಲಿಕೆ ಸದಸ್ಯರಾದ ಇಕ್ಬಾಲ್ ನವಲೂರ, ಸಾದಿಕ್ ಯಕ್ಕುಂಡಿ, ಮುದಸ್ಸರ್ ಖೋಜೆ, ಧಾರವಾಡ ಅಂಜುಮನ್ ಸಂಸ್ಥೆಯ ಬಶೀರ್ ಅಹ್ಮದ್ ಜಾಗಿರದಾರ, ಯಾಸೀನ್ ಹಾವೇರಪೇಟ, ರಫೀಕ್ ಶಿರಹಟ್ಟಿ, ಖೈರುದ್ದೀನ್ ಶೇಖ್, ಶಮಶುದ್ಧೀನ್ ಗಿಡದೂರ ಸೇರಿ ಹಲವರಿದ್ದರು.
11:47 PM (IST) Aug 19
ನಾನು ಹೋಸ್ಟ್ ಮಾಡುತ್ತಿದ್ದ ಶೋ ನನಗೇ ವೈಯಕ್ತಿಕವಾಗಿ ಖುಷಿ ಕೊಡುತ್ತಿರಲಿಲ್ಲ. ಪ್ರೀತಿಯಿಂದ ಮಾಡಬೇಕಾದ ಕೆಲಸವನ್ನು ಉದ್ಯೋಗ ಅನ್ನೋ ರೀತಿಯಲ್ಲಿ ಮಾಡುತ್ತಿದ್ದೇನೆ ಅನಿಸಿತು ಎಂದು ಅನುಪಮಾ ಗೌಡ ಸಂದರ್ಶನದಲ್ಲಿ ಹೇಳಿದರು.
10:57 PM (IST) Aug 19
'ಕೂರ್ಮಾವತಾರ್' ಚಿತ್ರವನ್ನು ಹರ್ಷ ವರ್ಧನ್ ಕಡಿಯಾಲ ನಿರ್ದೇಶಿಸುತ್ತಿದ್ದು, ಬೃಹತ್ ಬಜೆಟ್ನಲ್ಲಿ ನಿರ್ಮಿಸಲಾಗುತ್ತಿದೆ. ಈ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಖ್ಯಾತ ನಟ-ನಟಿಯರ ದಂಡೇ ಇರಲಿದ್ದು, ಶಿವರಾಜ್ಕುಮಾರ್ ಜೊತೆ ತೆಲುಗು ನಟ ರಾಜ್ ತರುಣ್, ಶಿವಾಜಿ, ವರಲಕ್ಷ್ಮಿ ಶರತ್ಕುಮಾರ್, ಸಾಯಿ ಕುಮಾರ್ ಹೀಗೆ ದೊಡ್ಡ ತಾರಾಬಳಗ ಇದೆ.
10:38 PM (IST) Aug 19
ಪ್ರತಿಷ್ಠಿತ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಚೆನ್ನೈಗೆ ಸ್ಥಳಾಂತರಿಸಲಾಗಿದೆ. ಪ್ರೇಕ್ಷಕರಿಗೆ ನೇರವಾಗಿ ಪಂದ್ಯ ವೀಕ್ಷಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
10:32 PM (IST) Aug 19
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ, ಗೇರ್ ಬದಲಿಸುವ ಕಿರಿಕಿರಿಯಿಲ್ಲದ ಆಟೋಮ್ಯಾಟಿಕ್ ಕಾರುಗಳಿಗೆ ಬೇಡಿಕೆ ತೀವ್ರಗೊಂಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ವಾಹನ ತಯಾರಕ ಸಂಸ್ಥೆಗಳು ಭಾರತೀಯ ಕಾರು ಪ್ರಿಯರಿಗಾಗಿಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಕಾರುಗಳನ್ನು ಪರಿಚಯಿಸಿವೆ.
10:18 PM (IST) Aug 19
ಹಾಸನದ ಆಲೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿಯೊಬ್ಬಳು ತನ್ನ ಮಗುವಿನ ಕತ್ತು ಹಿಸುಕಿ ಜೀವ ತೆಗೆದಿದ್ದಾಳೆ. ನಂತರ ತಾನೂ ಸಾವಿಗೆ ಶರಣಾಗಿದ್ದಾಳೆ. ಕಾರಣ ಮಾತ್ರ ನಿಗೂಢವಾಗಿದೆ.
10:00 PM (IST) Aug 19
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಮತ್ತೊಂದು ಆಘಾತ ಆಗಿದೆ. ಅವರ ಮಾಜಿ ಪತಿ ಸಂಜಯ್ ಸಿಂಗ್ ಏಳು ತಿಂಗಳ ಹಿಂದೆಯೇ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.
09:28 PM (IST) Aug 19
‘ಅಗ್ನಿಪರೀಕ್ಷೆ’ಯ ಹೊಸ ಪ್ರೋಮೋದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಡ್ಯಾನ್ಸ್ ಮಾಡುತ್ತಾ ವೇದಿಕೆಗೆ ಎಂಟ್ರಿ ಕೊಡುತ್ತಾನೆ. ತಾನು ಇಷ್ಟು ಚೆನ್ನಾಗಿ ಡ್ಯಾನ್ಸ್ ಮಾಡಿದರೂ ಜಡ್ಜ್ಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಪ್ರಶ್ನಿಸುತ್ತಾನೆ.
09:15 PM (IST) Aug 19
ನಿರ್ದೇಶಕ ಡಾ.ರಾಜೇಂದ್ರ ಸಿಂಗ್ ಬಾಬು ಅವರು, ಡಾ. ವಿಷ್ಣುವರ್ಧನ್ ಅವರ ನೆನಪುಗಳನ್ನು ಸದಾ ಜೀವಂತವಾಗಿಡಲು ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿವೆ ಎಂದು ಅಭಿಪ್ರಾಯಪಟ್ಟರು. ಅವರೊಂದಿಗೆ ಕೆಲಸ ಮಾಡಿದ ಎಲ್ಲ ನಿರ್ದೇಶಕರು, ನಟ-ನಟಿಯರು, ನಿರ್ಮಾಪಕರು ಹಾಗೂ ತಂತ್ರಜ್ಞರನ್ನು ಈ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಗೆ ಕರೆತರಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
09:06 PM (IST) Aug 19
Manasa Manohar Son: ಕನ್ನಡ ಕಿರುತೆರೆಯಲ್ಲಿ ‘ಜೊತೆ ಜೊತೆಯಲಿ’ ಹಾಗೂ ‘ಲಕ್ಷ್ಮೀ ನಿವಾಸ’ ಧಾರಾವಾಹಿಗಳ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ಮಾನಸ ಮನೋಹರ್ ಅವರ ಮನೆಯಲ್ಲಿ ಇದೀಗ ಸಂಭ್ರಮದ ವಾತಾವರಣ.
08:49 PM (IST) Aug 19
ಬೆಂಗಳೂರಿನ ಬಿಡದಿಯಲ್ಲಿ 4.91 ಕೋಟಿ ರೂ. ಮೌಲ್ಯದ ಬೃಹತ್ ನಕಲಿ ಔಷಧಿ ಜಾಲ ಪತ್ತೆಯಾಗಿದ್ದು, ಐಸಿಯು ರೋಗಿಗಳಿಗೆ ನೀಡುವ ಔಷಧಿಗಳನ್ನೂ ನಕಲಿ ಲೇಬಲ್ನಡಿ ಮಾರಾಟ ಮಾಡುತ್ತಿರುವುದು ಬಯಲಾಗಿದೆ.
08:37 PM (IST) Aug 19
ಇಸ್ರೇಲ್ನ ಕಾರ್ಮೆಲ್ ಪರ್ವತದ ಇಳಿಜಾರಿನಲ್ಲಿರುವ ಒಂದು ಪ್ರಾಚೀನ ಗುಹೆಯಲ್ಲಿ ಪತ್ತೆಯಾಗಿರುವ ಸರೀಸೃಪಗಳ ಮೂಳೆಗಳು ವಿಜ್ಞಾನಿಗಳನ್ನು ನಿಜಕ್ಕೂ ಕಂಗಾಲಾಗಿಸಿವೆ. ಸುಮಾರು 11,000 ವರ್ಷಗಳ ಹಿಂದೆ ಅಲ್ಲಿ ವಾಸಿಸುತ್ತಿದ್ದ ಪ್ರಾಚೀನ ಮಾನವರು ಬರೀ ದೊಡ್ಡ ಪ್ರಾಣಿಗಳನ್ನು ಮಾತ್ರವಲ್ಲ, ಇವುಗಳನ್ನು ಆಹಾರವಾಗಿಸಿಕೊಂಡಿದ್ದರು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
08:07 PM (IST) Aug 19
Shivarajkumar Viral Video: ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರ ಸರಳತೆ ಹಾಗೂ ಕಿರಿಯ ನಟರನ್ನು ಪ್ರೋತ್ಸಾಹಿಸುವ ಗುಣಕ್ಕೆ ಅಭಿಮಾನಿಗಳಿಂದ ಸದಾ ಮೆಚ್ಚುಗೆ ವ್ಯಕ್ತವಾಗುತ್ತಿರುತ್ತದೆ.
08:00 PM (IST) Aug 19
07:49 PM (IST) Aug 19
ಆರ್ಸಿಬಿ ಪಾಡ್ಕಾಸ್ಟ್ನಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಕಿಂಗ್ ವಿರಾಟ್ ಕೊಹ್ಲಿಯ ಸಹಾಯವನ್ನು ನೆನೆದಿದ್ದಾರೆ. ಕೊಹ್ಲಿ ಬಗ್ಗೆ ಅದೆಂಥ ಗೌರವ ಇಟ್ಟುಕೊಂಡಿದ್ದಾರೆ ಅನ್ನೋ ವಿವರ ಈ ಸ್ಟೋರಿಯಲ್ಲಿದೆ.
07:47 PM (IST) Aug 19
ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಿವೇದಿತಾ ಗೌಡ ಇದೀಗ ಆಧ್ಯಾತ್ಮಿಕ ಪ್ರವಾಸವೊಂದರ ಮೂಲಕ ಗಮನ ಸೆಳೆದಿದ್ದಾರೆ. ಈ ಆಧ್ಯಾತ್ಮಿಕ ಪಯಣದ ಅನುಭವವನ್ನೂ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
07:34 PM (IST) Aug 19
ಕಂಟೆಂಟ್ ಕ್ರಿಯೇಟರ್ ಅಜಯ್ ಅಮರವಂಶಿ, ತಮ್ಮ ಪೋಷಕರ ತ್ಯಾಗಕ್ಕೆ ಕೃತಜ್ಞತೆಯಾಗಿ ಹೊಸ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಲೇಖನವು ಪೋಷಕರ ಭಾವುಕ ಪ್ರತಿಕ್ರಿಯೆ, ಮಗನ ಕೃತಜ್ಞತಾ ಭಾವ ಮತ್ತು ಈ ಹೃದಯಸ್ಪರ್ಶಿ ಘಟನೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತವಾದ ಪ್ರಶಂಸೆಯನ್ನು ವಿವರಿಸುತ್ತದೆ.
07:22 PM (IST) Aug 19
ಉದ್ಯಮಿಯೊಬ್ಬರು ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದಾಗಿ ಬೆಳಗ್ಗೆ 10:15ಕ್ಕೆ ಕಚೇರಿಗಳು ಖಾಲಿಯಾಗಿರುವುದನ್ನು ಬಹಿರಂಗಪಡಿಸಿದ್ದಾರೆ. ಈ ಸಾರಿಗೆ ಕಿರಿಕಿರಿಯು ಉದ್ಯೋಗಿಗಳ ಶಕ್ತಿ ಮತ್ತು ಉತ್ಪಾದಕತೆಯನ್ನು ಕುಗ್ಗಿಸುತ್ತಿದೆ ಎಂದು ಅವರು ಹೇಳಿದ್ದಾರೆ.
07:01 PM (IST) Aug 19
ಮುಡಾ 50:50 ಹಗರಣದಲ್ಲಿ ನಿಯಮ ಉಲ್ಲಂಘಿಸಿ ಹಂಚಿಕೆಯಾಗಿದ್ದ 1,100 ನಿವೇಶನಗಳನ್ನು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ರದ್ದುಪಡಿಸಿದ್ದು, ಈ ಮೂಲಕ ಸರ್ಕಾರಕ್ಕೆ 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಉಳಿಸಿದ್ದಾರೆ. ಈಗಾಗಲೇ ನೋಂದಣಿಯಾಗಿರುವ ಕ್ರಯಪತ್ರಗಳನ್ನು ರದ್ದುಗೊಳಿಸಲು ಕಾನೂನು ಕ್ರಮ ಜರುಗಿಸುವಂತೆ ಹಾಗೂ ಹೊಸದಾಗಿ ಖಾತಾ ಮಾಡಿಕೊಡುವುದನ್ನು ತಕ್ಷಣವೇ ತಡೆಹಿಡಿಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
06:50 PM (IST) Aug 19
‘ಅಣ್ಣಯ್ಯ’ ಧಾರಾವಾಹಿ ತನ್ನ ಭಾವನಾತ್ಮಕ ಕಥಾಹಂದರದ ಮೂಲಕ ಕಿರುತೆರೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ವಿಶೇಷವಾಗಿ ತಂಗಿಯರಿಗಾಗಿ ಎಲ್ಲವನ್ನೂ ಮಾಡುವ ಅಣ್ಣನ ಪಾತ್ರ ಹಾಗೂ ಅಣ್ಣ-ತಂಗಿಯರ ನಡುವಿನ ಬಾಂಧವ್ಯ ವೀಕ್ಷಕರಿಗೆ ತುಂಬಾ ಇಷ್ಟವಾಗಿದೆ.
06:30 PM (IST) Aug 19
ಭಾರತ ಪ್ರವಾಸಕ್ಕೆ ಬಂದಿದ್ದ ಆಸ್ಟ್ರೇಲಿಯಾದ ಮಹಿಳೆ, ತಮಿಳುನಾಡಿನ ಕಾರು ಚಾಲಕ ರಬೀಕ್ರನ್ನು ಪ್ರೀತಿಸಿ ವಿವಾಹವಾಗಿದ್ದಾರೆ. ಕುಟುಂಬದ ವಿರೋಧದ ನಡುವೆ ಒಂದಾದ ಈ ದಂಪತಿಗೆ ಮಗಳಿದ್ದಾಳೆ. ಆದರೆ ಮುಂದೆ ಆದ ಘಟನೆ ಕಣ್ಣಲ್ಲಿ ನೀರು ತರಸುತ್ತದೆ.
06:13 PM (IST) Aug 19
‘ಸೌತ್ ಇಂಡಿಯನ್ ಡ್ರೀಮ್’ ಎಂಬ ಕಾನ್ಸೆಪ್ಟ್ನಲ್ಲಿ ಸಿದ್ಧಪಡಿಸಿಕೊಂಡಿರುವ ತಮ್ಮ ಲುಕ್ನ ಹಿಂದಿನ ಕಥೆಯನ್ನು ಮೋನಿಷಾ ಹಂಚಿಕೊಂಡಿದ್ದಾರೆ. ತಮ್ಮ ಈ ವಿಶೇಷ ಲುಕ್ಗೆ ಅಭಿಮಾನಿಗಳಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
05:54 PM (IST) Aug 19
ಇಲ್ಲೊಬ್ಬ ಬೈಕ್ ಸ್ಟಂಟರ್ ಒಂದೇ ಚಕ್ರದ ಸೈಕಲ್ ತುಳಿದು ಕೇರಳದಿಂದ ನೇಪಾಳಕ್ಕೆ ಪ್ರಯಾಣ ಬೆಳೆಸಿದ್ದಾನೆ. ಈತನ ಈ ನಿರ್ಧಾರದ ಹಿಂದೆ ಒಂದು ಬಲವಾದ ಉದ್ದೇಶ ಇದೆ. ಅದನ್ನು ತಿಳಿದುಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ..
05:33 PM (IST) Aug 19
City Lights Kannada Movie: ದುನಿಯಾ ವಿಜಯ್ ನಿರ್ದೇಶನದ ಈ ಚಿತ್ರದಲ್ಲಿ ದೊಡ್ಮನೆ ಕುಡಿ ವಿನಯ್ ರಾಜ್ಕುಮಾರ್ ಹಾಗೂ ವಿಜಯ್ ಅವರ ಪುತ್ರಿ ಮೋನಿಷಾ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
05:14 PM (IST) Aug 19
ಬಹುಭಾಷಾ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಒಂದು ಹೇಳಿಕೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಲ್ಲಿದ್ದಾರೆ. ಯಾವುದೇ ಮುಜುಗರವಿಲ್ಲದೆ ತಮ್ಮ ಅಭಿಪ್ರಾಯವನ್ನು ನೇರವಾಗಿ ಹಂಚಿಕೊಂಡಿರುವ ನಟಿ..
04:55 PM (IST) Aug 19
ಕಿರುತೆರೆಯ ಮೂಲಕ ಗುರುತಿಸಿಕೊಂಡು, ಮಾಡೆಲಿಂಗ್ ಹಾಗೂ ನಟನೆಯಿಂದಲೂ ಗಮನ ಸೆಳೆದಿರುವ ಶ್ವೇತಾ ಪ್ರಸಾದ್ (Shwetha Prasad) ಇದೀಗ ತಮ್ಮ ಒಂದು ಪೋಸ್ಟ್ನಿಂದ ಸದ್ದು ಮಾಡುತ್ತಿದ್ದಾರೆ.
04:51 PM (IST) Aug 19
ಯಾರು ಎಷ್ಟು ದುಡಿಯುತ್ತಾರೋ ಗೊತ್ತಿಲ್ಲ. ಬೆಂಗಳೂರಲ್ಲಿ ಡೆಲಿವರಿ ಬಾಯ್ಸ್ ಮಾತ್ರ ಸಖತ್ ದುಡ್ಡು ಮಾಡ್ತಾರೆ ಅನ್ನೋರಿಗೇನೂ ಕಮ್ಮಿ ಇಲ್ಲ. ಅಂತವರು ಓದಲೇಬೇಕಾದ ಸ್ಟೋರಿ ಇದು.
04:45 PM (IST) Aug 19
04:34 PM (IST) Aug 19
04:23 PM (IST) Aug 19
ರಾಧಿಕಾ ಫಿಟ್ ಆಗಿರಲು ಪ್ರತಿದಿನ ಜಿಮ್ಗೆ ಹೋಗುವುದಿಲ್ಲ. ಅದೇ ರೀತಿ ಕಠಿಣ ಡಯಟ್ ಅಥವಾ ಕ್ರ್ಯಾಶ್ ಡಯಟ್ ಕೂಡ ಫಾಲೋ ಮಾಡುವುದಿಲ್ಲ. ಬದಲಿಗೆ ಸರಳವಾದ ಕೆಲವು ಅಭ್ಯಾಸಗಳನ್ನು ತಮ್ಮ ದಿನಚರಿಯ ಭಾಗವಾಗಿಸಿಕೊಂಡಿದ್ದಾರೆ.
04:21 PM (IST) Aug 19
ಕಿಚ್ಚ ಸುದೀಪ್ ಅವರ ಖಡಕ್ ನಿರೂಪಣೆ, ಹೊಸ ಮನೆ, ಹೊಸ ಸ್ಪರ್ಧಿಗಳು ಮತ್ತು ಈ ಸಲ ಅಗ್ನಿಪರೀಕ್ಷೆ ಗೆದ್ದು ಬಂದಿರೋ 'ಖತರ್ನಾಕ್' ಸ್ಪರ್ಧಿಗಳು.. ಒಟ್ಟಿನಲ್ಲಿ ಈ ಬಾರಿ ಬಿಗ್ ಬಾಸ್ ಮನೆ ರಣರಂಗವಾಗೋದಂತೂ ಗ್ಯಾರಂಟಿ! ಯಾರು ಆ ನಾಲ್ಕು ಜನ? ನಿಮ್ಮ ಫೇವರೆಟ್ ಯಾರು? ವಿವರಗಳಿಗೆ ನೋಡಿ..
04:10 PM (IST) Aug 19
ಗಂಡ ಹೆಂಡತಿ ಜಗಳಲ್ಲಿ ಇಬ್ಬರು ಮಕ್ಕಳು ಬಲಿಯಾದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪಾಪಿ ಅಪ್ಪನೊಬ್ಬ ತನಿಗಿದ್ದ ಮೂವರು ಮಕ್ಕಳಲ್ಲಿ ಇಬ್ಬರು ಮಕ್ಕಳನ್ನು ಹರಿಯುತ್ತಿರುವ ಕಾಲುವೆಗೆ ಎಸೆದಿದ್ದಾನೆ. ನಂತರ ಸ್ವತಃ ಪೊಲೀಸರಿಗೆ ಮಾಹಿತಿ ನೀಡಿ ಶರಣಾಗಿದ್ದಾನೆ. ಅಷ್ಟಕ್ಕೂ ಆಗಿದ್ದೇನು ಅನ್ನೋ ವಿವರ ಈ ಸ್ಟೋರಿಯಲ್ಲಿದೆ.
03:50 PM (IST) Aug 19
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಗಿನ್ನೆಸ್ ವಿಶ್ವ ದಾಖಲೆಗಾಗಿ ಒಂದೇ ದಿನ 15 ಲಕ್ಷ ಸಸಿಗಳನ್ನು ನೆಡುವ ಅಭಿಯಾನಕ್ಕೆ ಬರೋಬ್ಬರಿ 12.5 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
02:59 PM (IST) Aug 19
02:34 PM (IST) Aug 19
01:21 PM (IST) Aug 19
01:06 PM (IST) Aug 19
01:05 PM (IST) Aug 19
ಇಂದು ಯಶ್ ಜಗತ್ತನ್ನೇ ಗೆಲ್ಲಲು ಹೊರಟಿದ್ದಾರೆ. ಇಡೀ ಭಾರತವೇ ಯಶ್ ಸಕ್ಸಕ್ ಸ್ವಾಗತಿಸಲು ಎದುರುನೋಡುತ್ತಿದೆ. ಯಶ್ ನಟನೆ-ನಿರ್ಮಾಣದ 'ಟಾಕ್ಸಿಕ್' ಸಿನಿಮಾ ತೆರೆಗೆ ಬಂದು ಹೊಸ ಇತಿಹಾಸ ಸೃಷ್ಟಿಸಲು ಇನ್ನೇನು 7 ದಿನಗಳಷ್ಟೇ ಬಾಕಿ..! ಈ ಸಕ್ಸಸ್ ಸ್ಟೋರಿ ಹಿಂದಿನ ಮಹಾಮಂತ್ರದ ಸೀಕ್ರೆಟ್ ಇಲ್ಲಿದೆ ನೋಡಿ..
12:10 PM (IST) Aug 19
ಅಮೆರಿಕಾ ಸೇರಿದಂತೆ ಪ್ರಪಂಚದಾದ್ಯಂತ ಟಾಕ್ಸಿಕ್ ಪ್ರಚಾರಕಾರ್ಯ ಅಬ್ಬರದಿಂದ ಸಾಗಿದೆ. ಇನ್ನೇನು 09 ದಿನಗಳಲ್ಲಿ ಬಿಡುಗಡೆ ಆಗಲಿರುವ ಟಾಕ್ಸಿಕ್ ಚಿತ್ರವನ್ನು ನೋಡಲು ಜಗತ್ತಿನಾದ್ಯಂತ ಸಿನಿಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಯಶ್ ನಾಯಕತ್ವದ ಈ ಚಿತ್ರದಲ್ಲಿ ಭಾರತದ ಘಟಾನುಘಟಿ ತಾರೆಗಳು ನಟಿಸಿದ್ದಾರೆ.
11:14 AM (IST) Aug 19
10:08 AM (IST) Aug 19
ಬಾಗಲಕೋಟೆಯ ಪಿ.ಎಂ.ನಾಡಗೌಡ ಸ್ಮಾರಕ ದಂತ ವೈದ್ಯಕೀಯ ಮಹಾವಿದ್ಯಾಲಯದ 2001ರ ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು 25 ವರ್ಷಗಳ ಬಳಿಕ ಬಿವಿವಿ ಸಂಘದಲ್ಲಿ ಮತ್ತೆ ಒಂದಾದರು. ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅವರೊಂದಿಗೆ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಅವರು, ಬಾಗಲಕೋಟೆಯ ಶೈಕ್ಷಣಿಕ ಬೆಳವಣಿಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.