LIVE NOW
Published : Jun 22, 2026, 05:07 AM ISTUpdated : Jun 22, 2026, 08:29 AM IST

Karnataka Latest News Live: ದುರ್ಬಲ ಮುಂಗಾರು ನಡುವೆಯೇ 7 ದಿನ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ-ಮಳೆ

ಸಾರಾಂಶ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ಇಂತಹ ಮುಖ್ಯಮಂತ್ರಿ ಇದ್ದಾಗ ಪಕ್ಷವು ಅತ್ಯಂತ ಜಾಗರೂಕತೆಯಿಂದ ಇರಬೇಕಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನದ ಕುರಿತು ಪಕ್ಷದ ವತಿಯಿಂದ ತನಿಖೆಗೆ ಸಮಿತಿ ರಚಿಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬೆಳವಣಿಗೆ ಬಿಜೆಪಿಗೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಅಭಿಪ್ರಾಯಪಟ್ಟರು.

Rain

08:29 AM (IST) Jun 22

ದುರ್ಬಲ ಮುಂಗಾರು ನಡುವೆಯೇ 7 ದಿನ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ-ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದಾರೆ. ಮಳೆಗಾಗಿ ಹೂವಿನಹಡಗಲಿಯ ಇಟ್ಟಿಗಿ ಗ್ರಾಮದಲ್ಲಿ ಕತ್ತೆಗಳ ಮದುವೆ ಹಾಗೂ ವಿಜಯಪುರದ ಮುತ್ತಗಿ ಗ್ರಾಮದಲ್ಲಿ ಗೊಂಬೆಗಳ ಮದುವೆಯಂತಹ ಸಾಂಪ್ರದಾಯಿಕ ಆಚರಣೆಗಳ ಮೂಲಕ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.
Read Full Story

07:50 AM (IST) Jun 22

ಯಲ್ಲಾಪುರದಲ್ಲಿ H1N1 ಜ್ವರಕ್ಕೆ ವ್ಯಕ್ತಿ ಸಾವು - ಲಕ್ಷಣಗಳು ಮತ್ತು ಚಿಕಿತ್ಸೆಯ ಮಾಹಿತಿ

ಯಲ್ಲಾಪುರ ತಾಲೂಕಿನ ವ್ಯಕ್ತಿಯೊಬ್ಬರು ಇನಫ್ಲೂಯೆಂಜಾ ಎ (H1N1) ವೈರಲ್ ಜ್ವರದಿಂದ ಮೃತಪಟ್ಟಿದ್ದಾರೆ. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದು, ವೈದ್ಯರು ಜ್ವರದ ತೀವ್ರ ಲಕ್ಷಣಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
Read Full Story

06:54 AM (IST) Jun 22

ಬಿಡದಿ ಟೌನ್‌ಶಿಪ್‌ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಪಾದಯಾತ್ರೆಗೆ ಭರ್ಜರಿ ಜನ ಸ್ಪಂದನೆ

ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ 'ನಮ್ಮ ಭೂಮಿ-ನಮ್ಮ ಹಕ್ಕು' ಘೋಷಣೆಯೊಂದಿಗೆ ಬೃಹತ್ ಪಾದಯಾತ್ರೆ ನಡೆಯಿತು. ಈ ವೇಳೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಿಖಿಲ್, ರೈತರ ಭೂಮಿ ಉಳಿಸಲು ಕಾನೂನು ಹೋರಾಟಕ್ಕೂ ಸಿದ್ಧ ಎಂದರು. ಪಾದಯಾತ್ರೆ ವೇಳೆ ಯೋಜನೆ ಪರ-ವಿರೋಧ ಬಣಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು.
Read Full Story

06:47 AM (IST) Jun 22

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ - ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಮತ್ತು ಮೋದಿ ಸರ್ಕಾರದಿಂದ ದೇಶ ಹಾಳಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ ಎಂದಿರುವ ಅವರು, ರಾಮಮಂದಿರದ ನಿಧಿ ಮತ್ತು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ.
Read Full Story

06:41 AM (IST) Jun 22

Mysuru - ಅಕ್ರಮ ಬಾಂಗ್ಲರೆಂದು ಪ್ರಯಾಣಿಕರನ್ನು ಪರಿಶೀಲಿಸಿದ 6 ಮಂದಿ ವಿರುದ್ಧ ಕೇಸ್‌

ಮೈಸೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಶಂಕೆಯ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರೈಲು ಪ್ರಯಾಣಿಕರನ್ನು ತಡೆದು ಪರಿಶೀಲಿಸಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ, ಪ್ರಯಾಣಿಕರು ಅಕ್ರಮ ವಲಸಿಗರಲ್ಲ ಎಂದು ಖಚಿತಪಡಿಸಿದ ನಂತರ, ಪರಿಶೀಲನೆ ನಡೆಸಿದ 6 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Read Full Story

06:32 AM (IST) Jun 22

15,500 ಅಡಿ ಎತ್ತರದ ಶಿಖರ ಏರಿದ ಸೃಷ್ಟಿ ಮೇಟಿ; ಗದಗ ಜಿಲ್ಲೆಯ ಜಕ್ಕಲಿ ಗ್ರಾಮದ ವಿದ್ಯಾರ್ಥಿನಿ

ಗದಗ ಜಿಲ್ಲೆಯ ಜಕ್ಕಲಿ ಗ್ರಾಮದ ವಿದ್ಯಾರ್ಥಿನಿ ಸೃಷ್ಟಿ ಉಮೇಶ್ ಮೇಟಿ ಅವರು ಉತ್ತರಾಖಂಡದಲ್ಲಿ 15,500 ಅಡಿ ಎತ್ತರದ ಹುರ್ರಾ ಟಾಪ್ ಶಿಖರವನ್ನು ಯಶಸ್ವಿಯಾಗಿ ಏರಿದ್ದಾರೆ. ಎನ್‌ಸಿಸಿ ಕೆಡೆಟ್ ಆಗಿರುವ ಅವರು, ಶಿಖರದ ತುದಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ತಮ್ಮ ಗ್ರಾಮ, ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
Read Full Story

06:20 AM (IST) Jun 22

ಜಮೀನಿಗೆ ತೆರಳಲು ಸ್ವಂತ ಹಣದಲ್ಲಿ 3.5 ಕಿ.ಮೀ. ಉದ್ದದ ರಸ್ತೆ ನಿರ್ಮಿಸಿಕೊಂಡ ರೈತರು

ಕುರುಗೋಡಿನ ಮುಷ್ಟಗಟ್ಟೆ ಕಾಲುವೆ ವ್ಯಾಪ್ತಿಯ ರೈತರು, ತಮ್ಮ ಜಮೀನುಗಳಿಗೆ ಹೋಗುವ ಸರ್ವಿಸ್ ರಸ್ತೆ ಹಾಳಾಗಿದ್ದರಿಂದ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಸ್ವಯಂ ಪ್ರೇರಿತರಾಗಿದ್ದಾರೆ. ಸುಮಾರು 150 ರೈತರು ಒಟ್ಟಾಗಿ ₹3 ಲಕ್ಷ ಸಂಗ್ರಹಿಸಿ, 3.5 ಕಿ.ಮೀ. ಉದ್ದದ ರಸ್ತೆಯನ್ನು ಸ್ವಂತ ಖರ್ಚಿನಲ್ಲಿ ದುರಸ್ತಿ ಮಾಡಿಕೊಂಡು ಮಾದರಿಯಾಗಿದ್ದಾರೆ.
Read Full Story

05:52 AM (IST) Jun 22

ಗ್ಯಾರಂಟಿ ಸಮಿತಿಯಲ್ಲಿ 55000 ಕಾಂಗ್ರೆಸ್ಸಿಗರಿಗೆ ಹುದ್ದೆ; ಡಿಕೆ ಮಾಸ್ಟರ್‌ಸ್ಟ್ರೋಕ್‌!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಈ ಸಮಿತಿಗಳು ಕಾರ್ಯಕರ್ತರಿಗೆ ಅಧಿಕಾರ ನೀಡುವುದಲ್ಲದೆ, ಗ್ಯಾರಂಟಿ ಫಲಾನುಭವಿಗಳ ದಾಖಲೆಗಳನ್ನು ಮರುಪರಿಶೀಲನೆ ಮಾಡುವ ಜವಾಬ್ದಾರಿ ಹೊರಲಿವೆ.
Read Full Story

05:42 AM (IST) Jun 22

ಬಿಕೆ ಪಟ್ಟಾಭಿಷೇಕದಲ್ಲಿ ಕಾಂಗ್ರೆಸ್‌ ನಾಯಕರಿಂದ ಶಪಥ; ಮಿಷನ್‌ ಎಲೆಕ್ಷನ್‌ 2028 & 2029

ಬಿ.ಕೆ.ಹರಿಪ್ರಸಾದ್‌ ಅವರು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು, ಈ ಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ನೂತನ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಲಹೆ ನೀಡಿದರು. 2028ರ ರಾಜ್ಯ ಹಾಗೂ 2029ರ ಕೇಂದ್ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಶಪಥವನ್ನು ನಾಯಕರು ಮಾಡಿದರು.
Read Full Story

05:33 AM (IST) Jun 22

Karnataka BJP - ಅಡ್ಡಮತದಾನದ ತಲ್ಲಣ - ಹೈಕಮಾಂಡ್ ಅಂಗಳಕ್ಕೆ ರಾಜ್ಯ ಬಿಜೆಪಿ ನಾಯಕರು

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಶಾಸಕರ ಅಡ್ಡಮತದಾನದ ಬಗ್ಗೆ ವರದಿ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಆರ್.ಅಶೋಕ್ ದೆಹಲಿಗೆ ತೆರಳಲಿದ್ದಾರೆ. ಈ ಗಂಭೀರ ಬೆಳವಣಿಗೆಯ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸೇರಿದಂತೆ ಹೈಕಮಾಂಡ್ ನಾಯಕರಿಗೆ ವಿವರಣೆ ನೀಡಲಿದ್ದಾರೆ.
Read Full Story

05:24 AM (IST) Jun 22

ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಬೇಡ - . ವಿಜಯೇಂದ್ರ ನಿರ್ಧಾರಕ್ಕೆ ಬಿಜೆಪಿಯಲ್ಲಿ ಅಪಸ್ವರ

ವಿಧಾನಪರಿಷತ್ ಚುನಾವಣೆಯ ಅಡ್ಡಮತದಾನದ ಹಿನ್ನೆಲೆಯಲ್ಲಿ, ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಆಣೆ-ಪ್ರಮಾಣ ಮಾಡಲು ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿರ್ಧಾರಕ್ಕೆ ಪಕ್ಷದ ಹಿರಿಯ ನಾಯಕರಾದ ಪ್ರಹ್ಲಾದ್ ಜೋಶಿ ಮತ್ತು ಎಸ್. ಸುರೇಶ್‌ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.

Read Full Story

More Trending News