LIVE NOW
Published : Jul 25, 2026, 06:49 AM ISTUpdated : Jul 25, 2026, 11:42 AM IST

Karnataka Latest News Live: ಕೋಲಾರದಲ್ಲಿ ಹೃದಯ ವಿದ್ರಾವಕ ಘಟನೆ.. ತಾಯಿ, ಮಗಳು, ಮಗ ದುರಂತ ಅಂತ್ಯ.. ಅಸಲಿಗೆ ಆಗಿದ್ದೇನು?

ಸಾರಾಂಶ

ಬೆಂಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (ಪಿಯುಸಿವರೆಗೆ) ಶನಿವಾರ ರಜೆ ಘೋಷಿಸಲಾಗಿದೆ.

ಶೃಂಗೇರಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ, ನಂದಿನಿ, ನಳಿನಿ ನದಿಗಳು ತುಂಬಿ ಹರಿಯುತ್ತಿವೆ. ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾರಂಗಿ ಜಲಾಶಯ ಭರ್ತಿಯಾಗಿದ್ದು, ಶನಿವಾರ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುವುದು. ಈ ಹಿನ್ನೆಲೆಯಲ್ಲಿ ಅಣೆಕಟ್ಟಿನ ಕೆಳ ಭಾಗದ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಹಾರಂಗಿ ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.

11:42 AM (IST) Jul 25

ಕೋಲಾರದಲ್ಲಿ ಹೃದಯ ವಿದ್ರಾವಕ ಘಟನೆ.. ತಾಯಿ, ಮಗಳು, ಮಗ ದುರಂತ ಅಂತ್ಯ.. ಅಸಲಿಗೆ ಆಗಿದ್ದೇನು?

ಕೋಲಾರ ತಾಲ್ಲೂಕಿನ ಛತ್ರಕೋಡಿಹಳ್ಳಿ ಬಳಿ ತಾಯಿಯೊಬ್ಬಳು ತನ್ನಿಬ್ಬರು ಯುವ ಮಕ್ಕಳೊಂದಿಗೆ ಕೃಷಿಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರಕ್ಕೆ ನಡೆದ ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story

09:49 AM (IST) Jul 25

ಹೂವಿನಹಡಗಲಿ ತಹಸೀಲ್ದಾರ್ ಕಚೇರಿ ಸಿಬ್ಬಂದಿ ನಾಪತ್ತೆ, ಸಾಮೂಹಿಕ ರಜೆ ಹಾಕಿ ಎಲ್ಲಿಗೆ ಹೋದ್ರು?

ಹೂವಿನಹಡಗಲಿ ತಹಸೀಲ್ದಾರ ಕಚೇರಿಯಲ್ಲಿ ತೀವ್ರ ಸಿಬ್ಬಂದಿ ಕೊರತೆಯಿಂದಾಗಿ ಕೆಲಸದ ಒತ್ತಡ ಹೆಚ್ಚಾಗಿದೆ. ಇದರಿಂದ ಬೇಸತ್ತ ಸಿಬ್ಬಂದಿ, ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಾಮೂಹಿಕ ರಜೆ ಹಾಕಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದಾರೆ.
Read Full Story

09:35 AM (IST) Jul 25

356 ಎಕರೆಯ ಪಿಲಿಕುಳ ಅಭಿವೃದ್ಧಿಗೆ ಮಾಸ್ಟರ್‌ ಪ್ಲ್ಯಾನ್‌, ತಾರಾಲಯಕ್ಕೆ 10 ಕೋಟಿ ರೂ. ವೆಚ್ಚದ ಲೇಸರ್ ತಂತ್ರಜ್ಞಾನ!

ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲು ಕರ್ನಾಟಕ ರಾಜ್ಯ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿ ನಿರ್ದೇಶನ ನೀಡಿದೆ. ಪಿಲಿಕುಳ ಉತ್ಸವ ಆಯೋಜನೆ, ತಾರಾಲಯದ ಉನ್ನತೀಕರಣ ಮತ್ತು ಮೃಗಾಲಯವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತಹ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
Read Full Story

08:45 AM (IST) Jul 25

Tumakuru - ಏಕಕಾಲದಲ್ಲಿ 11 ಇಲಾಖೆಗಳ ಸಚಿವರಾಗಿದ್ದ ಹಿರಿಯ ನಾಯಕ ಸಿ. ವೀರಪ್ಪ ನಿಧನ

ಕಾಂಗ್ರೆಸ್ ನಾಯಕ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ಮಾವ ಮಾಜಿ ಸಚಿವರಾಗಿದ್ದ ವೀರಪ್ಪ ನಿಧನರಾಗಿದ್ದಾರೆ. ತುಮಕೂರು ಜಲ್ಲೆಯ ಕೊರಟಗೆರೆಯ ತೋಟದ ಮನೆಯಲ್ಲಿ ರಾತ್ರಿ ನಿಧನರಾಗಿರುವ ಮಾಹಿತಿ ಲಭ್ಯವಾಗಿ

Read Full Story

08:42 AM (IST) Jul 25

‘ವಿಸ್ಕಿ, ಬಿಯರ್ ಹಾಗೂ ರಮ್.. ಸ್ವಾಮಿ.. ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟ, ಸರ್ಕಾರದ ವಿರುದ್ಧ ಕೋರ್ಟ್ ಗರಂ

‘ಕೃಷಿ ಕೆಲಸ ಮಾಡಿ ದಣಿದು ಬಂದ ಕಾರ್ಮಿಕರಿಗೆ ನೀಡಲು ಪ್ರಾವಿಷನ್ ಸ್ಟೋರ್‌ ನಲ್ಲಿ ಬಿಯರ್-ಲಿಕ್ಕರ್ ಇರಿಸಲಾಗಿತ್ತು...’ ಎಂಬ ವಾದ ಕೇಳಿ ಅಚ್ಚರಿಗೊಂಡ ಹೈಕೋರ್ಟ್, ಇಂಥ ಕೆಲಸವನ್ನು ಸ್ಕಾಟ್ ಲ್ಯಾಂಡ್ ನಲ್ಲಿ ವಿಸ್ಕಿ ಕಂಡುಹಿಡಿದಾಗ ಮಾಡಲಾಗುತ್ತಿತ್ತು. ಆ ಪದ್ಧತಿ ಭಾರತದಲ್ಲಿ ಮಾಡಬೇಕಿಲ್ಲ ಎಂದು ನುಡಿಯಿತು.

Read Full Story

08:16 AM (IST) Jul 25

BPL ಕಾರ್ಡ್‌ ಆದಾಯ ಮಿತಿ 3 ಲಕ್ಷಕ್ಕೆ ಏರಿಸಲು ಸರ್ಕಾರದ ಚಿಂತನೆ; 2 ತಿಂಗಳಲ್ಲಿ ಇಂದಿರಾ ಕಿಟ್‌

ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಇದರೊಂದಿಗೆ, 'ಅನ್ನಭಾಗ್ಯ' ಯೋಜನೆಯಡಿ 'ಇಂದಿರಾ ಕಿಟ್' ವಿತರಣೆ ಮತ್ತು ಪಡಿತರ ಕಾಳಸಂತೆ ತಡೆಯಲು ಕಮಾಂಡ್ ಕಂಟ್ರೋಲ್ ರೂಂ ಸ್ಥಾಪಿಸುವ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.
Read Full Story

08:13 AM (IST) Jul 25

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಇತ್ತ ಟಿಬಿ ಡ್ಯಾಂನಲ್ಲಿ ಕೇವಲ 29 ಟಿಎಂಸಿ ನೀರು! ಇಂದಿನ ಜಲಾಶಯಗಳ ನೀರಿನ ಪ್ರಮಾಣ ಎಷ್ಟು?

ಪ್ರಸಕ್ತ ಸಾಲಿನಲ್ಲಿ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೇವಲ 29 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯೇ ಇದಕ್ಕೆ ಕಾರಣವಾಗಿದ್ದು, ಸದ್ಯ, ಜಲಾಶಯದ ನೀರು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ!

Read Full Story

08:05 AM (IST) Jul 25

16 ಸಾವಿರ ಗರ್ಭ ನಾಪತ್ತೆಗೆ ‘ಗರ್ಭಪಾತ’ದ ಕತೆ! ಸರ್ಕಾರಕ್ಕೆ ಸುಳ್ಳು ಮಾಹಿತಿಯ ಆರೋಪ

‘ಕನ್ನಡಪ್ರಭ’ ವರದಿಯ ಆಧಾರದ ಮೇಲೆ, ಯಾದಗಿರಿ ಜಿಲ್ಲೆಯಲ್ಲಿ 16,116 ಗರ್ಭಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಗ್ಯ ಇಲಾಖೆಯು ಮುಖ್ಯಮಂತ್ರಿ ಕಚೇರಿಗೆ ಗರ್ಭಪಾತದ ಸುಳ್ಳು ಮಾಹಿತಿ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣವನ್ನು ರಾಜ್ಯ ಮಾನವ ಹಕ್ಕುಗಳ ಆಯೋಗವು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದೆ.
Read Full Story

07:52 AM (IST) Jul 25

Havri - SSLCಯಲ್ಲಿ 98%, PUCಯಲ್ಲಿ 95% - ಬಿಂದುಶ್ರೀಗೆ ನೀಟ್‌ನಲ್ಲಿ ಬಂದಿದ್ದು 11 ಅಂಕ

ಹಾನಗಲ್ಲದ ಪ್ರತಿಭಾವಂತ ವಿದ್ಯಾರ್ಥಿನಿ ಬಿಂದು ಶ್ರೀ ಪವಾರ ಅವರು ನೀಟ್‌ ಪರೀಕ್ಷೆಯಲ್ಲಿ 668 ಅಂಕ ನಿರೀಕ್ಷಿಸಿದ್ದರು, ಆದರೆ ಅವರಿಗೆ -11 ಅಂಕ ಬಂದಿದೆ. ತಮ್ಮ ಓಎಂಆರ್‌ ಶೀಟ್ ಬದಲಾಗಿದೆ ಮತ್ತು ಹೆಬ್ಬೆಟ್ಟಿನ ಗುರುತು ಹೊಂದಿಕೆಯಾಗುತ್ತಿಲ್ಲ ಎಂದು ಆರೋಪಿಸಿ, ಅವರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ದೂರು ನೀಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
Read Full Story

07:42 AM (IST) Jul 25

ಸಚಿವ ಸಂಪುಟ ವಿಸ್ತರಣೆ ಬಿಗ್ ಅಪ್ಡೇಟ್; ನೀಟ್ ಪ್ರತಿಭಟನೆ ಮುಗಿಯುತ್ತಿದ್ದಂತೆ ಇತ್ತ ವಿಸ್ತರಣೆಗೆ ತಯಾರಿ!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಿಂದ ಮುಂದೂಲ್ಪಟ್ಟಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವ ಸಂದರ್ಭದಲ್ಲಾದರೂ ಆಗಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ತಿಳಿಸಿದರು.

Read Full Story

07:34 AM (IST) Jul 25

BMTC ಪ್ರಯಾಣಿಕರೇ, ವಾಂತಿ ಬರ್ತಿದೆ, ಕಿಟಕಿ ಸೀಟ್ ಬಿಟ್ಕೊಡಿ ಅಂತ ಜನರು ಬಂದ್ರೆ ಹುಷಾರ್!

ಬಿಎಂಟಿಸಿ ಬಸ್‌ಗಳಲ್ಲಿ ವಾಂತಿ ಬರುವ ನೆಪವೊಡ್ಡಿ, ಕಿಟಕಿ ಸೀಟಿನಲ್ಲಿ ಕುಳಿತ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಪಿಕ್‌ಪಾಕೆಟ್‌ ಮಾಡುತ್ತಿದ್ದ ಐವರ ಗ್ಯಾಂಗ್ ಪೈಕಿ ಇಬ್ಬರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ನೌಕರರೊಬ್ಬರಿಂದ 35 ಸಾವಿರ ರು. ಕಳವು ಮಾಡಿದ ಪ್ರಕರಣದ ಬೆನ್ನತ್ತಿದ ಪೊಲೀಸರು, ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹಿಡಿದಿದ್ದಾರೆ.
Read Full Story

07:24 AM (IST) Jul 25

ಕುಡಿದು ಅಮಲಿನಲ್ಲಿ ಇದ್ದಾಗ ವಾಹನ ಚಲಿಸಿ ಮೃತಪಟ್ಟರೆ ಪರಿಹಾರವಿಲ್ಲ - ಹೈಕೋರ್ಟ್ ಕೋರ್ಟ್‌

ಮದ್ಯ ಸೇವಿಸಿ ವಾಹನ ಚಲಾಯಿಸಿದ ವೇಳೆ ಸ್ವಯಂ ಅಫಘಾತಕ್ಕೀಡಾಗಿ ಮೃತಪಟ್ಟ ಸವಾರನ ಅವಲಂಬಿತರು ಪೂರ್ಣ ಪ್ರಮಾಣದ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

Read Full Story

07:23 AM (IST) Jul 25

ಇಂದು, ನಾಳೆ ಬೆಂಗಳೂರಿನ ಪ್ರಮುಖ ಏರಿಯಾಗಳಲ್ಲೇ ವಿದ್ಯುತ್ ಕಟ್; ಬೆಸ್ಕಾಂನಿಂದ ಪ್ರಕಟಣೆ

ಬೆಸ್ಕಾಂ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜು.25 ಮತ್ತು 26 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೆ.ಎಸ್‌.ಟಿ, ವಿಕ್ಟೋರಿಯಾ, ಬ್ಯಾಡರಹಳ್ಳಿ ಮತ್ತು ತಾವರೆಕೆರೆ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.
Read Full Story

More Trending News