ಧಾರವಾಡ: ನಾನು ಸಚಿವನಾಗಿದ್ದಾಗ ನನ್ನ ಮೇಲೆಯೂ ಆಪಾದನೆ ಬಂದಾಗ ಡಿ.ಕೆ.ಶಿವಕುಮಾರ್ ಅವರು ನನ್ನ ರಾಜೀನಾಮೆಗೆ ಪ್ರತಿಭಟಿಸಿದ್ದರು. ಈ ಹಿಂದೆ ಕೆ.ಜೆ.ಜಾರ್ಜ್ ಸಹ ರಾಜೀನಾಮೆ ನೀಡಿದ್ದು, ಸಚಿವ ನಾಗೇಂದ್ರ ವಿಷಯದಲ್ಲಿ ಏತಕ್ಕೆ ದ್ವಂದ್ವ ನೀತಿ ಅನುಸರಿಸಲಾಗುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲೆ ಆಪಾದನೆ ಬಂದಾಗ ಸ್ವತಃ ರಾಜೀನಾಮೆ ನೀಡಿದ್ದು, ನಂತರ ನಿಷ್ಕಳಂಕ ಎಂದು ಹೊರಗಡೆ ಬಂದಿದ್ದೇನೆ. ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಶಾಮೀಲಾಗಿರುವುದು ತನಿಖೆಯಲ್ಲಿ ಹೊರಬಂದಿದ್ದರೂ ಸಿಎಂ ಅವರ ರಾಜೀನಾಮೆ ಪಡೆಯುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

07:27 AM (IST) Aug 27
07:04 AM (IST) Aug 27
06:53 AM (IST) Aug 27
ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರು ಬೈಕ್ ರ್ಯಾಲಿಯಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದ್ದಕ್ಕಾಗಿ ಸಂಚಾರಿ ಪೊಲೀಸರು ₹500 ದಂಡ ವಿಧಿಸಿದ್ದಾರೆ. ತಮ್ಮ ತಪ್ಪನ್ನು ಒಪ್ಪಿಕೊಂಡ ಶಾಸಕರು, ದಂಡ ಪಾವತಿಸಿ, 'ಶಾಸಕ ಸೇವಕನೇ ಹೊರತು ರಾಜನಲ್ಲ' ಎಂದು ಹೇಳುವ ಮೂಲಕ ಪೊಲೀಸರ ಕರ್ತವ್ಯವನ್ನು ಶ್ಲಾಘಿಸಿದ್ದಾರೆ.
06:33 AM (IST) Aug 27
06:20 AM (IST) Aug 27
ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರ ಆತ್ಮ*ಹತ್ಯೆಗೆ ಪ್ರಮುಖ ಕಾರಣ ಏನೆಂದು ಎಸ್ಐಟಿ ತನಿಖೆಯಲ್ಲಿ ತಿಳಿದುಬಂದಿದೆ. ಈ ಕುರಿತು ತನಿಖಾ ತಂಡವು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ಗೆ ಅಂತಿಮ ವರದಿ ಸಲ್ಲಿಸಲಿದೆ. ಇನ್ನೆರಡು ದಿನದಲ್ಲಿ ಮ್ಯಾಜಿಸ್ಟ್ರೇಟ್ಗೆ ವರದಿ ಸಲ್ಲಿಕೆಯಾಗಲಿದೆ ಎಂದು ತಿಳಿದು ಬಂದಿದೆ.