ಬೆಂಗಳೂರು : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಉಪ ಜಾತಿಗಳನ್ನು ಮೂರು ಪ್ರವರ್ಗಗಳಾಗಿ ವರ್ಗಿಕರಿಸಿ ಒಳಮೀಸಲಾತಿ ಕಲ್ಪಿಸುವ ಕರ್ನಾಟಕ ಅನುಸೂಚಿತ ಜಾತಿಗಳ (ಉಪ ವರ್ಗೀಕರಣ) ಮಸೂದೆ-2025ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಕೊನೆಗೂ ಅಂಕಿತ ಹಾಕಿದ್ದಾರೆ.
11:36 PM (IST) Feb 27
11:06 PM (IST) Feb 27
ಆನೇಕಲ್ ತಾಲೂಕಿನಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 2500 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೆಐಎಡಿಬಿ ಅಧಿಕಾರಿಗಳಿಗೆ ರೈತರು ಘೇರಾವ್ ಹಾಕಿ ಪ್ರತಿಭಟಿಸಿದ್ದಾರೆ. ತಮ್ಮ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದರು.
09:42 PM (IST) Feb 27
ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ, ಜಿಲ್ಲೆಯಾದ್ಯಂತ ಒತ್ತುವರಿಯಾಗಿದ್ದ ಸರ್ಕಾರಿ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ. ಈ ತೆರವು ಕಾರ್ಯಾಚರಣೆಯಲ್ಲಿ, ಸುಮಾರು 8.20 ಕೋಟಿ ರೂಪಾಯಿ ಮೌಲ್ಯದ 6 ಎಕರೆಗೂ ಅಧಿಕ ಜಮೀನನ್ನು ಸರ್ಕಾರಿ ಸ್ವತ್ತೆಂದು ಘೋಷಿಸಲಾಗಿದೆ.
09:00 PM (IST) Feb 27
ಸಾಗರದ ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನವರಿ 31ರಂದು ಮೋಳ್ಕೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು 'ಬ್ರಾಹ್ಮಣ ಮುಂಡೆಮಕ್ಕಳು' ಎಂದು ನಿಂದಿಸಿದ್ದರು.
08:36 PM (IST) Feb 27
ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ 9ನೇ ಶತಮಾನಕ್ಕೆ ಸೇರಿದ ಶಾಸನ ಸಹಿತ ವಿಶಿಷ್ಟ ವೀರಗಲ್ಲೊಂದು ಪತ್ತೆಯಾಗಿದೆ. ಮೂರು ಹಂತಗಳ ಈ ಶಿಲ್ಪವು, ಊರಿಗಾಗಿ ಹೋರಾಡಿ ಮಡಿದ ವೀರನೊಬ್ಬನ ಶೌರ್ಯವನ್ನು ಮತ್ತು ಸ್ವರ್ಗ ಪ್ರಾಪ್ತಿಯನ್ನು ಚಿತ್ರಿಸುತ್ತದೆ.
08:15 PM (IST) Feb 27
ಕೇಂದ್ರ ಸರ್ಕಾರದ HLL ಲೈಫ್ಕೇರ್ ಲಿಮಿಟೆಡ್, 2026ನೇ ಸಾಲಿನ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಬೃಹತ್ ನೇಮಕಾತಿ ಪ್ರಕಟಿಸಿದೆ. ಅರ್ಹ ಪದವೀಧರರು ಈ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ₹1,40,000 ವರೆಗೆ ವೇತನ ದೊರೆಯಲಿದೆ.
08:04 PM (IST) Feb 27
ಕೊಡಗಿನ ನಾಪೋಕ್ಲುವಿನಲ್ಲಿ 'ಹಿಂದೂ ಸಂಗಮ'ದ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
07:50 PM (IST) Feb 27
'ಮುದ್ದುಸೊಸೆ' ಧಾರಾವಾಹಿಯ ಮದುವೆ ದೃಶ್ಯದ ಶೂಟಿಂಗ್ ವೇಳೆ, ನಾಯಕ ನಟ ತ್ರಿವಿಕ್ರಮ್, ನಾಯಕಿ ಪ್ರತಿಮಾ ಠಾಕೂರ್ ಅವರಿಗೆ ತಮಾಷೆಗಾಗಿ ನಿಜವಾಗಿಯೂ ಮೂರು ಗಂಟು ಹಾಕಲು ಮುಂದಾದರು. ಈ ಅನಿರೀಕ್ಷಿತ ಘಟನೆಯಿಂದ ಗಾಬರಿಗೊಂಡ ನಟಿ ತಕ್ಷಣವೇ ಅವರ ಕೈಯನ್ನು ತಳ್ಳಿರುವ ವಿಡಿಯೋ ವೈರಲ್ ಆಗಿದೆ.
07:44 PM (IST) Feb 27
ಬಿಗ್ಬಾಸ್ 12ರ ಸ್ಪರ್ಧಿ ಮ್ಯೂಟಂಟ್ ರಘು ಅವರು ಸಹ ಸ್ಪರ್ಧಿ ಗಿಲ್ಲಿ ನಟ ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗಿಲ್ಲಿ ನಟ, ತಮಗೆ ಇದರ ಅರಿವಿಲ್ಲವೆಂದೂ, ತಮ್ಮಿಬ್ಬರ ನಡುವೆ ಯಾವುದೇ ವೈಮನಸ್ಸು ಇಲ್ಲ ಎಂದಿದ್ದು ಹೇಳಿದ್ದೇನು?
07:43 PM (IST) Feb 27
07:25 PM (IST) Feb 27
ವಿಧಾನಸೌಧದೊಳಗೆ ಮಾಧ್ಯಮ ಪ್ರವೇಶ ನಿರ್ಬಂಧಿಸುವ ಸರ್ಕಾರದ ನಿರ್ಧಾರವನ್ನು ವಾಟಾಳ್ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಈ ಆದೇಶವನ್ನು 15 ದಿನಗಳಲ್ಲಿ ಹಿಂಪಡೆಯದಿದ್ದರೆ ವಿಧಾನಸೌಧದ ಬಾಗಿಲಲ್ಲೇ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
06:44 PM (IST) Feb 27
ಇತಿಹಾಸ ಪ್ರಸಿದ್ಧ ಹಟ್ಟಿ ಚಿನ್ನದ ಗಣಿ ಕಂಪನಿಯ ಮುಂಭಾಗದಲ್ಲಿ ಇಂದು ಬೆಳ್ಳಂಬೆಳಗ್ಗೆ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ಹಟ್ಟಿ, ಸ್ಫೋಟಕಗಳು ತಂದಿದ್ದು ಎಲ್ಲಿಂದ? ಯಾರು? ಪತ್ತೆಗೆ ಮುಂದಾಗಿರುವ ರಾಯಚೂರು ಪೊಲೀಸರು, ಇಲ್ಲಿದೆ ಸಂಪೂರ್ಣ ವರದಿ
06:32 PM (IST) Feb 27
Why Sandalwood Stars Ignored Rashmika Mandanna's Wedding ರಾಷ್ಟ್ರಮಟ್ಟದ ತಾರೆ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆ ರಾಜಸ್ಥಾನದಲ್ಲಿ ವಿವಾಹವಾಗಿದ್ದಾರೆ. ಆದರೆ, ಈ ಮದುವೆಗೆ ಕನ್ನಡ ಚಿತ್ರರಂಗದಿಂದ ಯಾವುದೇ ಶುಭಾಶಯಗಳು ವ್ಯಕ್ತವಾಗಿಲ್ಲ, ಬದಲಾಗಿ ಮೌನ ಆವರಿಸಿದೆ.
05:56 PM (IST) Feb 27
ಸಂವಿಧಾನ ಬದಲಾವಣೆ ಕುರಿತ ವಿವಾದಾತ್ಮಕ ಹೇಳಿಕೆಯಿಂದಾಗಿ ಕಳೆದ ಚುನಾವಣೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಅನಂತಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದಾರೆ. ಈ ಬೆಳವಣಿಗೆಯು ಹಾಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯೆ ಕುತೂಹಲ ಮೂಡಿಸಿದೆ.
03:14 PM (IST) Feb 27
01:40 PM (IST) Feb 27
01:18 PM (IST) Feb 27
12:54 PM (IST) Feb 27
ಬೆಂಗಳೂರಿನ ಬಿಡದಿಯಲ್ಲಿ, ತನ್ನಿಂದ ದೂರವಾಗುತ್ತಿದ್ದಾನೆ ಎಂಬ ಕೋಪದಲ್ಲಿ ಪ್ರೇಯಸಿಯೊಬ್ಬಳು ತನ್ನ ಜಿಮ್ ಟ್ರೈನರ್ ಪ್ರಿಯಕರನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾಳೆ. ಐದಾರು ವರ್ಷಗಳ ಪ್ರೀತಿಗೆ ಮನಸ್ತಾಪವೇ ಮುಳುವಾಗಿದೆ. ಪ್ರೇಯಸಿ ಇದೀಗ ಪೊಲೀಸರಿಗೆ ಶರಣಾಗಿದ್ದಾಳೆ.
12:39 PM (IST) Feb 27
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಾಮೀನು ಮಂಜೂರಾಗಿದೆ.
08:19 AM (IST) Feb 27
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 84ನೇ ಹುಟ್ಟುಹಬ್ಬವನ್ನು ಈ ಬಾರಿ ಅವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳು, 'ಗೌರವ ಸಮರ್ಪಣಾ' ಸಮಾರಂಭ ಮತ್ತು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
07:55 AM (IST) Feb 27
ಫೆ.28ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು ಸೇರಿದಂತೆ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
07:25 AM (IST) Feb 27
ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲದಿದ್ದರೂ, ಪೊಲೀಸರು ಬಂಧಿಸುತ್ತಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಬೆಳವಣಿಗೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
06:30 AM (IST) Feb 27
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯು, ಜಲ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳ ಸಭೆ ನಡೆಸಿದರು. ದೆಹಲಿಯಂತೆ ಬೆಂಗಳೂರು ಗ್ಯಾಸ್ ಚೇಂಬರ್ ಆಗುವುದನ್ನು ತಡೆಯುವುದಾಗಿ ಅರಣ್ಯ ಸಚಿವರು ಹೇಳಿದ್ದಾರೆ.