ಬೆಂಗಳೂರು: ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಕೈಗೆ ಸಿಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಆಗಲಿ, ಸತೀಶ ಜಾರಕಿಹೊಳಿಯಾಗಲಿ ಮುಖ್ಯಮಂತ್ರಿ ಆಗುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಒಮ್ಮೆ ಸಿಎಂ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ. ಸಿಎಂ ಪುತ್ರ ಕೂಡ ಬೆಳಗಾವಿಗೆ ಬಂದು ಸತೀಶ್ ಜಾರಕಿಹೊಳಿ ಹೆಸರು ಹೇಳಿ ಹೋಗಿದ್ದಾರೆ. ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

11:11 PM (IST) Oct 30
CBSE Board Exam 2026 Class 10 & 12 Final Date Sheet Released Exams Begin Feb 17 ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026ರ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ.
10:44 PM (IST) Oct 30
Sensational Jemimah Century & Harmanpreet Fifty Power India to World Cup Final ಮಹಿಳಾ ವಿಶ್ವಕಪ್ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ನೀಡಿದ 339 ರನ್ಗಳ ಬೃಹತ್ ಗುರಿಯನ್ನು ಭಾರತ ಯಶಸ್ವಿಯಾಗಿ ಬೆನ್ನಟ್ಟಿ ಫೈನಲ್ಗೇರಿದೆ.
10:05 PM (IST) Oct 30
Bengaluru Metro Facilitates 3rd Organ Transport Lungs and Heart Travel 33 Kms in 61 Minutes ಬೆಂಗಳೂರಿನ ನಮ್ಮ ಮೆಟ್ರೋ, ಯಶವಂತಪುರದ ಸ್ಪರ್ಶ ಆಸ್ಪತ್ರೆಯಿಂದ ನಾರಾಯಣ ಹೆಲ್ತ್ ಸಿಟಿ ಮತ್ತು ಆಸ್ಟರ್ ಆರ್ವಿ ಆಸ್ಪತ್ರೆಗೆ ಹೃದಯ ಮತ್ತು ಶ್ವಾಸಕೋಶವನ್ನು ಸಾಗಿಸಲು ನೆರವಾಯಿತು.
09:22 PM (IST) Oct 30
ಚಾಮರಾಜನಗರದ ಅರಣ್ಯ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ತೀವ್ರಗೊಂಡಿದ್ದು, ಹುಲಿಗಳ ದಾಳಿಗೆ ಜಾನುವಾರುಗಳು ಬಲಿಯಾಗುತ್ತಿವೆ. ಇದಕ್ಕೆ ಪ್ರತೀಕಾರವಾಗಿ ಹುಲಿಗಳನ್ನು ಕೊಲ್ಲುವುದನ್ನು ತಡೆಯಲು, ಅರಣ್ಯ ಇಲಾಖೆಯು ಜಾನುವಾರುಗಳಿಗೆ ಕಿವಿಯೋಲೆ ಹಾಕಲು ಮುಂದಾಗಿದೆ.
08:57 PM (IST) Oct 30
08:53 PM (IST) Oct 30
Worker Dies in Mahadevapura as Building Renovation Centering Collapses ಬೆಂಗಳೂರಿನ ಮಹದೇವಪುರದಲ್ಲಿ ಕಟ್ಟಡ ನವೀಕರಣದ ವೇಳೆ ಸೆಂಟ್ರಿಂಗ್ ಕುಸಿದು ಯೂಸೂಫ್ ಶರೀಫ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ, ಸಮೀಪದಲ್ಲಿ ಚಹಾ ಕುಡಿಯುತ್ತಿದ್ದ ದಂಪತಿ ತೀವ್ರವಾಗಿ ಗಾಯಗೊಂಡಿದ್ದಾರೆ.
08:42 PM (IST) Oct 30
ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕೋರಿದ ಅರ್ಜಿ ವಿಚಾರಣೆ ಕಲಬುರಗಿ ಹೈಕೋರ್ಟ್ನಲ್ಲಿ ನಡೆದಿದೆ. ಶಾಂತಿ ಸಭೆ ವಿಫಲವಾದ ಹಿನ್ನೆಲೆಯಲ್ಲಿ, ನ್ಯಾಯಾಲಯವು ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.
07:32 PM (IST) Oct 30
High Court Stays Dharmasthala Burude Gang Case Probe Till Nov 12 ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ, ತಾವೇ ನೀಡಿದ ದೂರಿನ ತನಿಖೆ ರದ್ದು ಕೋರಿ 'ಬುರುಡೆ ಗ್ಯಾಂಗ್' ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನ.12ರವರೆಗೆ ತನಿಖೆಗೆ ಮಧ್ಯಂತರ ತಡೆ ನೀಡಿದೆ.
07:22 PM (IST) Oct 30
ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ನೇಮಿಸಲಾಗಿದೆ. ಪ್ರಸ್ತುತ ಸಿಜೆಐ ಭೂಷಣ್ ಆರ್. ಗವಾಯಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಈ ಆದೇಶ ಹೊರಡಿಸಿದ್ದು, ಅವರು ನವೆಂಬರ್ 24, 2025 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
06:19 PM (IST) Oct 30
Veteran Actress Umashree Conferred Dr. Rajkumar Award 2019ರ ಸಾಲಿನ ಡಾ. ರಾಜ್ಕುಮಾರ್, ಡಾ. ವಿಷ್ಣುವರ್ಧನ್ ಹಾಗೂ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
06:18 PM (IST) Oct 30
ರಾಜ್ಯದ ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸಲು, ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ಅಗತ್ಯ ಭೂಮಿ ಮತ್ತು ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಘೋಷಿಸಿದ್ದಾರೆ.
06:17 PM (IST) Oct 30
Vijayapura toll gate assault: ವಿಜಯಪುರದ ಟೋಲ್ ಗೇಟ್ನಲ್ಲಿ, ಟೋಲ್ ಕೇಳಿದ ಸಿಬ್ಬಂದಿ ಮೇಲೆ ಬಿಜೆಪಿ ನಾಯಕ ವಿಜು ಗೌಡ ಪಾಟೀಲ್ ಅವರ ಪುತ್ರ ಸಮರ್ಥ್ಗೌಡ ಪಾಟೀಲ್ ಹಲ್ಲೆ ನಡೆಸಿದ್ದಾರೆ. ಈ ಘಟನೆಯು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
06:08 PM (IST) Oct 30
05:34 PM (IST) Oct 30
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಗಂಗಾ ಕಲ್ಯಾಣ ಯೋಜನೆ ಕುರಿತು ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಎಚ್.ಸಿ. ಮಹದೇವಪ್ಪ ನಡುವೆ ತೀವ್ರ ವಾಗ್ವಾದ ನಡೆಯಿತು. ಎಸ್ಸಿಪಿ-ಟಿಎಸ್ಪಿ ಅನುದಾನ ಬಳಕೆ ಮತ್ತು ಯೋಜನೆ ವಿಳಂಬದ ಬಗ್ಗೆ ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದರು
05:32 PM (IST) Oct 30
Karnataka Rajyotsava Awards 2025 Announced ಸಿದ್ದರಾಮಯ್ಯ ಸರ್ಕಾರವು 70 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದೆ. ಈ ಬಾರಿ ಹಿರಿಯ ನಟ ಪ್ರಕಾಶ್ ರಾಜ್, ಕೋಣಂದೂರು ಲಿಂಗಪ್ಪ ಮತ್ತು ಪೌರ ಕಾರ್ಮಿಕರಾದ ಫಕೀರವ್ವ ಸೇರಿದಂತೆ ಹಲವು ಸಾಧಕರಿಗೆ ಈ ಗೌರವ ಸಂದಿದೆ.
05:15 PM (IST) Oct 30
ಬಿಗ್ ಬಾಸ್ ಮನೆಗೆ 'ಭಾಗ್ಯಲಕ್ಷ್ಮಿ' ಸೀರಿಯಲ್ ಸುಷ್ಮಾ ಕೆ. ರಾವ್ ಮತ್ತು ಪ್ರಿಯಾ ಜೆ. ಆಚಾರ್ ಆಗಮಿಸಿದ್ದಾರೆ. ಈ ಫೆಸ್ಟಿವಲ್ ಸಂಚಿಕೆಯಲ್ಲಿ, ಸೂರಜ್ ಸಿಂಗ್ ಕಾವ್ಯಾಳನ್ನು ಎತ್ತಿಕೊಂಡು ನೃತ್ಯ ಮಾಡಿದ್ದು ರಾಶಿಕಾ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಗಿಲ್ಲಿ ನಟ ಅಶ್ವಿನಿಯನ್ನು ಎತ್ತಲು ಹೋಗಿ ಬೀಳಿಸಿದ್ದಾರೆ!
04:55 PM (IST) Oct 30
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ ಅರಣ್ಯ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಮಹತ್ವದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
04:33 PM (IST) Oct 30
ಬಿಗ್ ಬಾಸ್ ಕನ್ನಡ 12 ಶೋನಲ್ಲಿ ಬಿಗ್ ಬಾಸ್ ಕಾಲೇಜ್ ಎಂದು ಟಾಸ್ಕ್ ನಡೆಯುತ್ತಿದೆ. ಫಿಸಿಕಲ್ ಟಾಸ್ಕ್ನಲ್ಲಿ ರಾಶಿಕಾ ಚೆನ್ನಾಗಿ ಟಾಸ್ಕ್ ಆಡಿದ್ದರು. ಅಶ್ವಿನಿ ಗೌಡ ಇದ್ದ ಟೀಂನವರು ರಾಶಿಕಾಗೆ ಸ್ಟುಡೆಂಟ್ ಆಫ್ ದಿ ವೀಕ್ ಪಟ್ಟ ಕೊಡಬೇಕು ಎಂದುಕೊಂಡಿದ್ದರು. ಅದಕ್ಕೆ ಗಿಲ್ಲಿ ನಟ ಒಪ್ಪಲಿಲ್ಲ.
03:54 PM (IST) Oct 30
BBK 12 Updates: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಕಾಲೇಜು ಟಾಸ್ಕ್ನಲ್ಲಿ ಅಶ್ವಿನಿ ಗೌಡ ಅವರು ಒಂದಿಷ್ಟು ಮಾತನಾಡಿದ್ದರು. ಈ ಮಾತು ಕೇಳಿ ಗಿಲ್ಲಿ ನಟ ಅವರು ಸೆಲ್ಫ್ ಎಲಿಮಿನೇಶನ್ ಮಾಡ್ಕೋತಿನಿ ಎಂದು ಹೇಳಿದ್ದಾರೆ. ಗಿಲ್ಲಿ ನಟನ ಮಾತುಗಳು ಎಲ್ಲರ ಮುಖದಲ್ಲೂ ನಗು ತಂದಿದೆ.
03:28 PM (IST) Oct 30
Karna Serial: ರಮೇಶ್ನ ಕುತಂತ್ರವನ್ನು ಆತನ ಹೆಂಡತಿ ಮಾಲತಿಯೇ ಕರ್ಣನ ಮುಂದೆ ಬಯಲು ಮಾಡುತ್ತಾಳೆ. ಕಾಣೆಯಾಗಿದ್ದ ತೇಜಸ್ ಚಿಕ್ಕಮಗಳೂರಿನಲ್ಲಿರುವ ವಿಷಯ ತಿಳಿದು, ಕರ್ಣ ಮತ್ತು ನಿತ್ಯಾ ಆತನನ್ನು ಹುಡುಕಲು ಹನಿಮೂನ್ ನೆಪದಲ್ಲಿ ಹೊರಡುತ್ತಾರೆ.
03:17 PM (IST) Oct 30
Bigg Boss And Tv Actress Engagement Photos: ಇಲ್ಲೋರ್ವ ನಟಿ ಒಬ್ಬರಾದ ಒಬ್ಬರನ್ನು ಬ್ಯಾಕ್ ಟು ಬ್ಯಾಕ್ ಲವ್ ಮಾಡಿ ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆದರೆ ಈ ಬಾರಿ ಬಾಯ್ಫ್ರೆಂಡ್ ಯಾರು ಎಂದು ಹೇಳಿಕೊಂಡಿಲ್ಲ. ಹಾಗಾದರೆ ಅವರು ಯಾರು?
03:07 PM (IST) Oct 30
02:45 PM (IST) Oct 30
Karna Kannada Serial Actress Bhavya Gowda: ಕರ್ಣ ಧಾರಾವಾಹಿಯಲ್ಲಿ ನಿತ್ಯಾ, ಕರ್ಣ ತಾವು ಮದುವೆ ಆಗಿರೋದಾಗಿ ನಾಟಕ ಮಾಡಿದ್ದಾರೆ. ಇದು ಮಾಲತಿ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಇನ್ನೊಂದು ಕಡೆ ತೇಜಸ್ ಚಿಕ್ಕಮಗಳೂರಿನಲ್ಲಿರೋದು ವೀಕ್ಷಕರಿಗೆ ಗೊತ್ತಾಗಿದೆ. ಮುಂದೆ ಏನಾಗುವುದು?
02:02 PM (IST) Oct 30
01:57 PM (IST) Oct 30
2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ಭವಿಷ್ಯ ನುಡಿದರು.
01:57 PM (IST) Oct 30
Kannada Serial TRP 2025: ವಾರದಿಂದ ವಾರಕ್ಕೆ ಟಿಆರ್ಪಿ ಏರಿಳಿತ ಆಗುವುದು. ಈ ಬಾರಿ ಕೂಡ ಸೀರಿಯಲ್ನಲ್ಲಿ ಬಹಳ ವ್ಯತ್ಯಾಸ ಕಂಡು ಬಂದಿದೆ. ಟ್ವಿಸ್ಟ್ಗಳಿಂದಲೇ ಈ ಬಾರಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಹಾಗಾದರೆ ಆ ಸೀರಿಯಲ್ ಯಾವುದು?
01:40 PM (IST) Oct 30
ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್, ತಮ್ಮ ವಿರುದ್ಧ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ರಿಪೋರ್ಟರ್ ಟಿವಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
01:40 PM (IST) Oct 30
ಕೇಸ್ ಕೊಟ್ಟವರ ಒಂದೊಂದೇ ಬಣ್ಣ ಈಗ ಬಯಲಾಗುತ್ತಿದೆ. ಧರ್ಮಸ್ಥಳದ ಹೆಸರಿಗೆ ಕಪ್ಪು ಮಸಿ ಬಳಿಯಲು ಷಡ್ಯಂತ್ರ ನಡೆದಿತ್ತು ಎಂಬುದು ಮೊದಲಿನಿಂದಲೂ ಗೊತ್ತು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.
01:36 PM (IST) Oct 30
ಕನ್ನಡ ಚಿತ್ರರಂಗದ ನಾಯಕ, ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ಚಿತ್ರ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಬಿಡುಗಡೆ ದಿನಾಂಕದ ಬಗ್ಗೆ ಹಬ್ಬಿದ್ದ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಿದೆ!ಈ ಸಿನಿಮಾ ಬಿಡುಗಡೆ ಬಗ್ಗೆ ಅಪ್ಡೇಟ್ ಇಲ್ಲಿದೆ ನೋಡಿ..
01:24 PM (IST) Oct 30
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್, ಇದೀಗ ಆಸ್ಪತ್ರೆಯಿಂದಲೇ ತಮ್ಮ ಆರೋಗ್ಯದ ಅಪ್ಡೇಟ್ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
12:59 PM (IST) Oct 30
ಒಂದು ಕಾಲದಲ್ಲಿ ಕಿಂಗ್ ನಾಗಾರ್ಜುನ, ನಟಸಿಂಹ ಬಾಲಯ್ಯ ಜೊತೆ ರೊಮ್ಯಾನ್ಸ್ ಮಾಡಿದ್ದ ಸ್ಟಾರ್ ನಟಿ.. ದೊಡ್ಡ ಗ್ಯಾಪ್ ನಂತರ ಮತ್ತೆ ಟಾಲಿವುಡ್ಗೆ ಕಾಲಿಡುತ್ತಿದ್ದಾರೆ. ಸೂರ್ಯ ಸಿನಿಮಾ ಮೂಲಕ ಕಮ್ಬ್ಯಾಕ್ ಮಾಡಲಿರುವ ಆ ಹಿರಿಯ ನಟಿ ಯಾರು ಗೊತ್ತಾ?
12:57 PM (IST) Oct 30
ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ, ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಮದುವೆ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
12:55 PM (IST) Oct 30
ಬೆಂಗಳೂರಿನ ಪ್ರಸಿದ್ಧ ಬಡಾವಣೆ ಮಲ್ಲೇಶ್ವರದ ಬಗ್ಗೆ ಹಾಸ್ಯನಟಿ ಸೌಮ್ಯಾ ವೇಣುಗೋಪಾಲ್ ಅವರ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ಮಲ್ಲೇಶ್ವರದ ಜನರ ಶಿಕ್ಷಣ, ಆಹಾರ ಪದ್ಧತಿ ಮತ್ತು ಜೀವನಶೈಲಿಯನ್ನು ತಮಾಷೆಯಾಗಿ ವಿವರಿಸಲಾಗಿದೆ.
12:27 PM (IST) Oct 30
ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಗೊಳಿಸುವ ಸಂಬಂಧ ನೂತನ ಕಾಯ್ದೆ ಜಾರಿಗೆ ಸರ್ಕಾರದ ಮುಂದಾಗಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ.
12:25 PM (IST) Oct 30
ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಜೊತೆಗಿನ ಗಿಲ್ಲಿ ನಟನ ಸ್ನೇಹ ಚರ್ಚೆಯಾಗುತ್ತಿರುವಾಗಲೇ, ಗಗನಾ ಜೊತೆಗಿನ ಅವರ ರೊಮ್ಯಾಂಟಿಕ್ ವಿಡಿಯೋ ವೈರಲ್ ಆಗಿದೆ. ಈ ಹಿಂದೆ ಮಹಾನಟಿ ಶೋನಿಂದಲೂ ಫೇಮಸ್ ಆಗಿದ್ದ ಈ ಜೋಡಿಯ ವಿಡಿಯೋ ನೋಡಿ, ನೆಟ್ಟಿಗರು ಗಗನಾಗೆ ಮೋಸ ಮಾಡುತ್ತಿದ್ದೀರಾ ಎಂದು ಕಾಲೆಳೆಯುತ್ತಿದ್ದಾರೆ.
12:02 PM (IST) Oct 30
BBK 12 Updates: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಸೂರಜ್ ಸಿಂಗ್ ವೈಲ್ಡ್ಕಾರ್ಡ್ ಎಂಟ್ರಿ ಕೊಟ್ಟಾಕ್ಷಣ ವೀಕ್ಷಕರು ಖುಷಿಪಟ್ಟಿದ್ದರು. ತನಗೆ ಕ್ಯಾಪ್ಟನ್ಸಿ ಟಾಸ್ಕ್ ಆಡುವ ಅರ್ಹತೆ ಸಿಕ್ಕಿದ್ದರೂ ಕೂಡ, ಅದನ್ನು ಟೀಂಗೆ ಕೊಟ್ಟಿದ್ದ ಸೂರಜ್ ಈಗ ವೀಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
12:00 PM (IST) Oct 30
Female DSP steals Money: ಭೋಪಾಲ್ನಲ್ಲಿ, ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತೆಯ ಮನೆಯಿಂದಲೇ ₹2 ಲಕ್ಷ ನಗದು ಮತ್ತು ಮೊಬೈಲ್ ಫೋನ್ ಕದ್ದ ಪರಾರಿಯಾಗಿದ್ದಾರೆ. ಅವರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪ್ರಕರಣ ದಾಖಲಾಗಿದೆ.
11:58 AM (IST) Oct 30
ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ವಿಎಫ್ಎಕ್ಸ್ ಕೆಲಸ ನಡೆಯುತ್ತಿದ್ದು, ಸದ್ಯದಲ್ಲೇ ಈ ಕೆಲಸ ಕೂಡ ಪೂರ್ಣಗೊಳ್ಳಲಿದೆ ಎನ್ನುವ ಮಾಹಿತಿ ಬಂದಿದೆ. ಟಾಕ್ಸಿಕ್ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆಗಳಿವೆ.
11:54 AM (IST) Oct 30
Rakshitha Shetty Vs Ashwini Gowda: ಬಿಗ್ಬಾಸ್ ಮನೆಯ ಬಿಬಿ ಕಾಲೇಜು ಟಾಸ್ಕ್ನಲ್ಲಿ, ಕ್ಯಾಪ್ಟನ್ಸಿ ಸ್ಪರ್ಧಿಯನ್ನು ಆಯ್ಕೆ ಮಾಡಲು ನೀಲಿ ತಂಡ ವಿಫಲವಾಯಿತು. ಇದನ್ನು ಸಂಭ್ರಮಿಸಿದ ಕೆಂಪು ತಂಡದ ರಕ್ಷಿತಾ ಶೆಟ್ಟಿ, ತನ್ನನ್ನು ಪ್ರಶ್ನಿಸಿದ ಅಶ್ವಿನಿ ಗೌಡರಿಗೆ ಖಡಕ್ ಉತ್ತರ ನೀಡಿ ಬಾಯಿ ಮುಚ್ಚಿಸಿದರು.
11:36 AM (IST) Oct 30
ಬಿಗ್ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಸ್ಪರ್ಧಿ ಅಶ್ವಿನಿ S.N, ಸೀಸನ್ 12ರ ಸಂಭಾವ್ಯ ವಿಜೇತರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಗಿಲ್ಲಿ ನಟ ಅವರಿಗೆ ಗೆಲ್ಲುವ ಅರ್ಹತೆ ಇದ್ದು, ಜೊತೆಗೆ ಸಹ ಸ್ಪರ್ಧಿಗಳಾದ ರಕ್ಷಿತಾ ಮತ್ತು ಮಲ್ಲಮ್ಮ ಅವರ ಆಟದ ವೈಖರಿಯ ಬಗ್ಗೆಯೂ ಮಾತನಾಡಿದ್ದಾರೆ.