LIVE NOW
Published : Aug 06, 2026, 05:23 AM ISTUpdated : Aug 06, 2026, 07:33 AM IST

Karnataka Latest News Live: ರಾಜ್ಯದ 20%, ಬೆಂಗ್ಳೂರಿನ 48% ಮತದಾರರ ಹೆಸರು ಡಿಲೀಟ್‌! 1.10 ಕೋಟಿ ಹೆಸರು ಡಿಲೀಟ್

ಸಾರಾಂಶ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ರಾಜ್ಯ ಸರ್ಕಾರ ರೈತರಿಂದ ಖರೀದಿಸಿದ್ದ ರಾಗಿ, ಜೋಳದ ಬಾಕಿಯಲ್ಲಿ ₹357.39 ಕೋಟಿಯನ್ನು ಗುರುವಾರ ಬಿಡುಗಡೆಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ.

2025-26ನೇ ಸಾಲಿನಲ್ಲಿ ಎಂಎಸ್‌ಪಿ ಅಡಿ ರೈತರಿಂದ ಖರೀದಿಸಿದ್ದ ರಾಗಿ, ಜೋಳದ ಬಾಬ್ತು ₹1128.13 ಕೋಟಿ ಬಾಕಿ ಉಳಿಸಿಕೊಳ್ಳಲಾಗಿತ್ತು. ಇದರಲ್ಲಿ ₹357.39 ಕೋಟಿಯನ್ನು ಬಿಡುಗಡೆ ಮಾಡಲು ಆಹಾರ ಇಲಾಖೆಯು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ಬುಧವಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಹಿರಿತನದ ಆಧಾರದಲ್ಲಿ ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯವಾಗಲಿದೆ.

ಎಂಎಸ್‌ಪಿ ಅಡಿ ಪ್ರಸಕ್ತ ಸಾಲಿನಲ್ಲಿ ರಾಗಿ, ಜೋಳ, ಭತ್ತ ಖರೀದಿಸಿದ ರೈತರಿಗೆ ಈಗಾಗಲೇ ₹2487.69 ಕೋಟಿ ಪಾವತಿಸಲಾಗಿತ್ತು. ಭತ್ತ ಮಾರಾಟ ಮಾಡಿದ್ದ ರೈತರಿಗೆ ಪೂರ್ಣ ಪ್ರಮಾಣದಲ್ಲಿ ಹಣ ಸಂದಾಯವಾಗಿದ್ದು ರಾಗಿ ಮತ್ತು ಜೋಳ ಮಾರಾಟ ಮಾಡಿದ್ದವರಿಗೆ ₹1,128.13 ಕೋಟಿ ಪಾವತಿಸಬೇಕಿತ್ತು. ಅದರಲ್ಲಿ ಈಗ ₹357.39 ಕೋಟಿ ಪಾವತಿಸಲಿದ್ದರೂ ಇನ್ನೂ ಸಹಸ್ರಾರು ರೈತರಿಗೆ ₹770.74 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ರೈತರಿಗೆ ಎಂಎಸ್‌ಪಿ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆ ‘ಕನ್ನಡಪ್ರಭ’ ವಿಶೇಷ ವರದಿಗಳನ್ನು ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.

07:33 AM (IST) Aug 06

ರಾಜ್ಯದ 20%, ಬೆಂಗ್ಳೂರಿನ 48% ಮತದಾರರ ಹೆಸರು ಡಿಲೀಟ್‌! 1.10 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ, ಬೆಂಗಳೂರಿನ ಶೇ.47.75 ರಷ್ಟು ಸೇರಿದಂತೆ ರಾಜ್ಯದ 1.10 ಕೋಟಿ ಮತದಾರರ ಹೆಸರುಗಳನ್ನು ರದ್ದುಗೊಳಿಸಲಾಗುತ್ತಿದೆ. ಸ್ಥಳಾಂತರ, ಮರಣ ಮತ್ತು ಇತರೆ ಕಾರಣಗಳಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಮತದಾರರು ಫಾರ್ಮ್ 6 ಸಲ್ಲಿಸಿ ಮತ್ತೆ ನೋಂದಾಯಿಸಿಕೊಳ್ಳಲು ಅವಕಾಶವಿದೆ.
Read Full Story

07:12 AM (IST) Aug 06

ಕೇಂದ್ರ ಸರ್ಕಾರದ ವಿಬಿ ಜಿ ರಾಮ್‌ಜಿ ಸ್ಕೀಂ ಜಾರಿಗೆ ಮೊದಲ ತಿಂಗಳೇ ಭಾರಿ ಹಿನ್ನಡೆ; ಆರಂಭಿಕ ತೊಡಕು

ಕೇಂದ್ರ ಸರ್ಕಾರವು ಮ-ನರೇಗಾ ಬದಲಿಗೆ ಜಾರಿಗೆ ತಂದಿರುವ ವಿಬಿ ಜಿ ರಾಮ್‌ ಜಿ ಯೋಜನೆಯು, ರಾಜ್ಯದಲ್ಲಿ ಜಾರಿಯಾದ ಮೊದಲ ತಿಂಗಳಲ್ಲೇ ಮಾನವ ದಿನಗಳ ಸೃಜನೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದೆ. ಕಳೆದ ವರ್ಷದ ಜುಲೈಗೆ ಹೋಲಿಸಿದರೆ ಈ ಬಾರಿ ಶೇ.78.77ರಷ್ಟು ಕುಸಿತ ದಾಖಲಾಗಿದ್ದು, ಯೋಜನೆಯ ಆರಂಭಿಕ ಯಶಸ್ಸಿನ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Read Full Story

06:51 AM (IST) Aug 06

Shivamogga - ಕೋಟೆಗಂಗೂರು ಡಿಪೋ - ಶಿವಮೊಗ್ಗದಿಂದಲೇ ಎಕ್ಸ್‌ಪ್ರೆಸ್ ರೈಲು ನಿರ್ವಹಣೆ ಶೀಘ್ರ

ಶಿವಮೊಗ್ಗ ಜಿಲ್ಲೆಯ ಮಹತ್ವಾಕಾಂಕ್ಷೆಯ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಯು ಶೇ.77ಕ್ಕೂ ಹೆಚ್ಚು ಆರ್ಥಿಕ ಪ್ರಗತಿ ಸಾಧಿಸಿ ವೇಗವಾಗಿ ಪೂರ್ಣಗೊಳ್ಳುವತ್ತ ಸಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಬಾಕಿ ಯೋಜನೆಗಳ ತ್ವರಿತ ಜಾರಿಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

Read Full Story

06:40 AM (IST) Aug 06

Sakleshpur - ಹೊಸಳ್ಳಿ ಬೆಟ್ಟ- ಕಾಗಿನಹರೆಗೆ ಪ್ರವಾಸಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮಲೆನಾಡಿನ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ, ಸಕಲೇಶಪುರದ ಹೆತ್ತೂರು ಹೋಬಳಿಯ ಹೊಸಹಳ್ಳಿ ಬೆಟ್ಟ ಹಾಗೂ ಕಾಗಿಹರೆ ವೀಕ್ಷಣಾ ಸ್ಥಳಗಳಿಗೆ ಪ್ರವಾಸಿಗರ ವಾಹನಗಳ ಪ್ರವೇಶವನ್ನು ಅರಣ್ಯ ಇಲಾಖೆ ನಿರ್ಬಂಧಿಸಿದೆ. ವಾಹನಗಳ ಅಡ್ಡಾದಿಡ್ಡಿ ಸಂಚಾರದಿಂದ ಪರಿಸರಕ್ಕೆ ಹಾನಿಯಾಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರವಾಸಿಗರು ಕಾಲ್ನಡಿಗೆಯಲ್ಲಿ ಈ ಸ್ಥಳಗಳನ್ನು ವೀಕ್ಷಿಸಬಹುದು.
Read Full Story

06:33 AM (IST) Aug 06

Karnataka Rains - ಮಲೆನಾಡು, ಕರಾವಳಿಯಲ್ಲಿ ಮಳೆ - ಅಣೆಕಟ್ಟೆಗಳಿಗೆ ಹೆಚ್ಚಾದ ಒಳಹರಿವು

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ಎಸ್‌, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಗುಡ್ಡ ಕುಸಿತ ಹಾಗೂ ಮನೆ ಹಾನಿ ವರದಿಯಾಗಿದೆ.
Read Full Story

06:20 AM (IST) Aug 06

BRTS ಅವ್ಯವಸ್ಥೆ - ಧಾರವಾಡದಲ್ಲಿ ಮೊಳಗಿದ ಎಚ್ಚರಿಕೆ ಗಂಟೆ, ಜಾಣ ಕುರುಡರಂತೆ ವರ್ತನೆ!

ಧಾರವಾಡದ ವಿದ್ಯಾಗಿರಿ ಬಳಿ ಬಿಆರ್‌ಟಿಎಸ್‌ನಿಂದ ಉಂಟಾಗುತ್ತಿರುವ ನಿರಂತರ ಅಪಘಾತ ಮತ್ತು ಅವ್ಯವಸ್ಥೆಯನ್ನು ಖಂಡಿಸಿ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಜಂಕ್ಷನ್‌ ಅಭಿವೃದ್ಧಿ ಹಾಗೂ ರೋಡ್ ಬ್ರೇಕರ್‌ ಅಳವಡಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
Read Full Story

06:07 AM (IST) Aug 06

ಅಪ್ಪಾ ದುಡ್ಡು ಬೇಡ, ಬಡವರ ಸೇವೆ ಮಾಡು - ತಂದೆ ವಿಜಯಾನಂದ ಕಾಶಪ್ಪನವರಿಗೆ ಮಗಳ ಮಾತು

ನೂತನ ಸಚಿವ ವಿಜಯಾನಂದ ಕಾಶಪ್ಪನವರ ತವರಿಗೆ ಆಗಮಿಸಿದಾಗ, ಅವರ ಮಗಳು ಸಮಿಕ್ಷಾ 'ದುಡ್ಡು ಬೇಡ, ಬಡವರ ಸೇವೆ ಮಾಡು' ಎಂದು ಹೇಳಿ ಎಲ್ಲರ ಮನಗೆದ್ದಳು. ಇದೇ ವೇಳೆ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಸಂಬಂಧಿಸಿದಂತೆ ತಿಮ್ಮಾಪುರ ಮತ್ತು ನಂಜಯ್ಯನಮಠ ಅವರ ಆಡಿಯೋ ವಿವಾದದ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿದ್ದಾರೆ.
Read Full Story

05:55 AM (IST) Aug 06

Special voters list revision - ಮಂಡ್ಯ ಜಿಲ್ಲೆಯಲ್ಲಿ ಮತಪಟ್ಟಿಯಿಂದ 1.69 ಲಕ್ಷ ಮಂದಿ ಔಟ್

ಮಂಡ್ಯ ಜಿಲ್ಲೆಯಲ್ಲಿ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ, ಸುಮಾರು 1.69 ಲಕ್ಷ ಜನರನ್ನು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲಾಗಿದೆ. ಇದಲ್ಲದೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಆಗಸ್ಟ್ 6 ರಂದು ಎಸ್ಎಸ್ಎಲ್‌ಸಿ, ಪಿಯುಸಿ, ಮತ್ತು ಪದವೀಧರರಿಗಾಗಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಿದೆ.

Read Full Story

05:47 AM (IST) Aug 06

ಮೃತ ಕಾನ್‌ಸ್ಟೇಬಲ್ ಅರ್ಜುನ್ ಶಂಕರ್ ಕುಟುಂಬಕ್ಕೆ 1.45 ಕೋಟಿ ರೂಪಾಯಿ ವಿಮೆ ಹಸ್ತಾಂತರ

ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಉಡುಪಿ ಜಿಲ್ಲಾ ಪೊಲೀಸ್ ಸಿಬ್ಬಂದಿ ಅರ್ಜುನ ಶಂಕರ ನೆಲ್ಲೂರ ಅವರ ಕುಟುಂಬಕ್ಕೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1.45 ಕೋಟಿ ರೂಪಾಯಿ ವಿಮಾ ಚೆಕ್ ಹಸ್ತಾಂತರಿಸಲಾಯಿತು. ಪೊಲೀಸ್ ಇಲಾಖೆ ಮತ್ತು ಎಸ್.ಬಿ.ಐ. ನಡುವಿನ ಒಪ್ಪಂದದಂತೆ ಈ ಸೌಲಭ್ಯವನ್ನು ಒದಗಿಸಲಾಗಿದ್ದು, ಇದರ ಸದುಪಯೋಗ ಪಡೆಯಲು ಇತರೆ ಸಿಬ್ಬಂದಿಗೆ ಕರೆ ನೀಡಲಾಗಿದೆ.
Read Full Story

05:39 AM (IST) Aug 06

ಮಂತ್ರಿಗಿರಿ ಸಿಗದ್ದಕ್ಕೆ ನೋವಿಲ್ಲ, ಹೀಗ್ಯಾಕೆ ಮಾಡಿದರೆಂಬ ಬೇಸರ - ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ

ಸಚಿವ ಸ್ಥಾನದ ಭರವಸೆ ಹುಸಿಯಾದ ಕಾರಣ ರಾಜೀನಾಮೆ ನೀಡಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಪಕ್ಷದ ವರಿಷ್ಠರ ಮನವಿ ಹಾಗೂ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ. ತಮಗೆ ಮಾತುಕೊಟ್ಟು ತಪ್ಪಿದ ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಇನ್ನು ಮುಂದೆ ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡುವುದಿಲ್ಲ ಎಂದು ಹೇಳಿದ್ದಾರೆ.
Read Full Story

More Trending News