ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರಾಜ್ಯ ಸರ್ಕಾರ ರೈತರಿಂದ ಖರೀದಿಸಿದ್ದ ರಾಗಿ, ಜೋಳದ ಬಾಕಿಯಲ್ಲಿ ₹357.39 ಕೋಟಿಯನ್ನು ಗುರುವಾರ ಬಿಡುಗಡೆಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ.
2025-26ನೇ ಸಾಲಿನಲ್ಲಿ ಎಂಎಸ್ಪಿ ಅಡಿ ರೈತರಿಂದ ಖರೀದಿಸಿದ್ದ ರಾಗಿ, ಜೋಳದ ಬಾಬ್ತು ₹1128.13 ಕೋಟಿ ಬಾಕಿ ಉಳಿಸಿಕೊಳ್ಳಲಾಗಿತ್ತು. ಇದರಲ್ಲಿ ₹357.39 ಕೋಟಿಯನ್ನು ಬಿಡುಗಡೆ ಮಾಡಲು ಆಹಾರ ಇಲಾಖೆಯು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ಬುಧವಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಹಿರಿತನದ ಆಧಾರದಲ್ಲಿ ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯವಾಗಲಿದೆ.
ಎಂಎಸ್ಪಿ ಅಡಿ ಪ್ರಸಕ್ತ ಸಾಲಿನಲ್ಲಿ ರಾಗಿ, ಜೋಳ, ಭತ್ತ ಖರೀದಿಸಿದ ರೈತರಿಗೆ ಈಗಾಗಲೇ ₹2487.69 ಕೋಟಿ ಪಾವತಿಸಲಾಗಿತ್ತು. ಭತ್ತ ಮಾರಾಟ ಮಾಡಿದ್ದ ರೈತರಿಗೆ ಪೂರ್ಣ ಪ್ರಮಾಣದಲ್ಲಿ ಹಣ ಸಂದಾಯವಾಗಿದ್ದು ರಾಗಿ ಮತ್ತು ಜೋಳ ಮಾರಾಟ ಮಾಡಿದ್ದವರಿಗೆ ₹1,128.13 ಕೋಟಿ ಪಾವತಿಸಬೇಕಿತ್ತು. ಅದರಲ್ಲಿ ಈಗ ₹357.39 ಕೋಟಿ ಪಾವತಿಸಲಿದ್ದರೂ ಇನ್ನೂ ಸಹಸ್ರಾರು ರೈತರಿಗೆ ₹770.74 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ರೈತರಿಗೆ ಎಂಎಸ್ಪಿ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆ ‘ಕನ್ನಡಪ್ರಭ’ ವಿಶೇಷ ವರದಿಗಳನ್ನು ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.
07:33 AM (IST) Aug 06
07:12 AM (IST) Aug 06
06:51 AM (IST) Aug 06
ಶಿವಮೊಗ್ಗ ಜಿಲ್ಲೆಯ ಮಹತ್ವಾಕಾಂಕ್ಷೆಯ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಯು ಶೇ.77ಕ್ಕೂ ಹೆಚ್ಚು ಆರ್ಥಿಕ ಪ್ರಗತಿ ಸಾಧಿಸಿ ವೇಗವಾಗಿ ಪೂರ್ಣಗೊಳ್ಳುವತ್ತ ಸಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಬಾಕಿ ಯೋಜನೆಗಳ ತ್ವರಿತ ಜಾರಿಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
06:40 AM (IST) Aug 06
06:33 AM (IST) Aug 06
06:20 AM (IST) Aug 06
06:07 AM (IST) Aug 06
05:55 AM (IST) Aug 06
ಮಂಡ್ಯ ಜಿಲ್ಲೆಯಲ್ಲಿ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ, ಸುಮಾರು 1.69 ಲಕ್ಷ ಜನರನ್ನು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲಾಗಿದೆ. ಇದಲ್ಲದೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಆಗಸ್ಟ್ 6 ರಂದು ಎಸ್ಎಸ್ಎಲ್ಸಿ, ಪಿಯುಸಿ, ಮತ್ತು ಪದವೀಧರರಿಗಾಗಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಿದೆ.
05:47 AM (IST) Aug 06
05:39 AM (IST) Aug 06