ಬೆಂಗಳೂರು: ರಾಜಕೀಯ ನಾಯಕರಿಗೆ ನಾಲಿಗೆ ಹಿಡಿತದಲ್ಲಿರಬೇಕು. ರಾಜಕಾರಣಿಗಳು ಜನಪರ ನೀತಿಗಳ ಮತ್ತು ಪ್ರಮುಖ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ರಾಜಕೀಯ ನಾಯಕರ ಪರಸ್ಪರ ಆರೋಪಗಳನ್ನು ಕೇಳುವುದಕ್ಕೆ ಜನ ಆಸಕ್ತರಾಗಿಲ್ಲ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಕಲಬುರಗಿಯ ಜಿಲ್ಲಾಧಿಕಾರಿ ‘ಫೌಝಿಯಾ ತರನ್ನುಮ್ ಪಾಕಿಸ್ತಾನದವರೋ ಅಥವಾ ಭಾರತದವರೋ ಎಂಬ ಬಗ್ಗೆ ನನಗೆ ಖಚಿತವಿಲ್ಲ’ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.
ಜನ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಮಾತನಾಡದ ರಾಜಕಾರಣಿಗಳು, ಪರಸ್ಪರ ನಿಂದನೆ ಮತ್ತು ಕೀಳು ಮಾತು ಆಡಿ ಪ್ರಕರಣಗಳ ದಾಖಲೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಇದರಿಂದ ಅಧೀನ ನ್ಯಾಯಾಲಯಗಳಲ್ಲಿ 10 ವರ್ಷಗಳಿಂದ ಕೊಲೆ, ಸುಲಿಗೆಯಂಥ ಅಪರಾಧ ಪ್ರಕರಣಗಳ ವಿಚಾರಣೆ ಬಾಕಿ ಹೆಚ್ಚಾಗುತ್ತಿದೆ ನ್ಯಾಯಪೀಠ ತಿಳಿಸಿತು.
10:29 AM (IST) Aug 08
ಬೆಟ್ಟದ ಬುಡದಲ್ಲಿರುವ ದೇವಸ್ಥಾನದ ಬಳಿ ದುಷ್ಕರ್ಮಿಗಳು ಮೇಕೆ ಬಲಿ ಕೊಟ್ಟು ವಾಮಾಚಾರ ಪೂಜೆ ಮಾಡಿರುವ ಘಟನೆ ಘಟನೆ ತುಮಕೂರು ತಾಲೂಕಿನ ವಡ್ಡರಹಳ್ಳಿಯಲ್ಲಿರುವ ಬನವಾಸಿ ಆಂಜನೇಯಸ್ವಾಮಿ ದೇವಾಲಯದ ಬಳಿ ನಡೆದಿದ್ದು, ಮುಂಜಾನೆ ದೇವಸ್ಥಾನಕ್ಕೆ ಹೋದ ಜನರು ಅಲ್ಲಿನ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.
09:18 AM (IST) Aug 08
08:57 AM (IST) Aug 08
08:48 AM (IST) Aug 08
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೇರಳಕ್ಕೆ ಸೇರಿದ ಸಾರಿಗೆ ಬಸ್ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಪ್ರಯಾಣಿಕ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಅವರಗೆರೆ ಬ್ರಿಡ್ಜ್ ಬಳಿ ಸಂಭವಿಸಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
08:42 AM (IST) Aug 08
08:27 AM (IST) Aug 08
08:16 AM (IST) Aug 08
08:08 AM (IST) Aug 08
07:56 AM (IST) Aug 08
07:11 AM (IST) Aug 08