LIVE NOW
Published : Aug 08, 2026, 06:49 AM ISTUpdated : Aug 08, 2026, 10:29 AM IST

Karnataka Latest News Live: ಕೂದಲು, ನಿಂಬೆ, ಮೇಕೆ ತಲೆ, ಚಿನ್ನದ ತಾಳಿ..! ತುಮಕೂರಿನ ಬನವಾಸಿ ಆಂಜನೇಯ ದೇಗುಲದ ಬಳಿ ವಾಮಾಚಾರಕ್ಕೆ ಬೆಚ್ಚಿಬಿದ್ದ ಸ್ಥಳೀಯರು

ಸಾರಾಂಶ

ಬೆಂಗಳೂರು: ರಾಜಕೀಯ ನಾಯಕರಿಗೆ ನಾಲಿಗೆ ಹಿಡಿತದಲ್ಲಿರಬೇಕು. ರಾಜಕಾರಣಿಗಳು ಜನಪರ ನೀತಿಗಳ ಮತ್ತು ಪ್ರಮುಖ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ರಾಜಕೀಯ ನಾಯಕರ ಪರಸ್ಪರ ಆರೋಪಗಳನ್ನು ಕೇಳುವುದಕ್ಕೆ ಜನ ಆಸಕ್ತರಾಗಿಲ್ಲ ಎಂದು ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ. ಕಲಬುರಗಿಯ ಜಿಲ್ಲಾಧಿಕಾರಿ ‘ಫೌಝಿಯಾ ತರನ್ನುಮ್‌ ಪಾಕಿಸ್ತಾನದವರೋ ಅಥವಾ ಭಾರತದವರೋ ಎಂಬ ಬಗ್ಗೆ ನನಗೆ ಖಚಿತವಿಲ್ಲ’ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು. 

ಜನ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಮಾತನಾಡದ ರಾಜಕಾರಣಿಗಳು, ಪರಸ್ಪರ ನಿಂದನೆ ಮತ್ತು ಕೀಳು ಮಾತು ಆಡಿ ಪ್ರಕರಣಗಳ ದಾಖಲೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಇದರಿಂದ ಅಧೀನ ನ್ಯಾಯಾಲಯಗಳಲ್ಲಿ 10 ವರ್ಷಗಳಿಂದ ಕೊಲೆ, ಸುಲಿಗೆಯಂಥ ಅಪರಾಧ ಪ್ರಕರಣಗಳ ವಿಚಾರಣೆ ಬಾಕಿ ಹೆಚ್ಚಾಗುತ್ತಿದೆ ನ್ಯಾಯಪೀಠ ತಿಳಿಸಿತು.

10:29 AM (IST) Aug 08

ಕೂದಲು, ನಿಂಬೆ, ಮೇಕೆ ತಲೆ, ಚಿನ್ನದ ತಾಳಿ..! ತುಮಕೂರಿನ ಬನವಾಸಿ ಆಂಜನೇಯ ದೇಗುಲದ ಬಳಿ ವಾಮಾಚಾರಕ್ಕೆ ಬೆಚ್ಚಿಬಿದ್ದ ಸ್ಥಳೀಯರು

ಬೆಟ್ಟದ ಬುಡದಲ್ಲಿರುವ ದೇವಸ್ಥಾನದ ಬಳಿ ದುಷ್ಕರ್ಮಿಗಳು ಮೇಕೆ ಬಲಿ ಕೊಟ್ಟು ವಾಮಾಚಾರ ಪೂಜೆ ಮಾಡಿರುವ ಘಟನೆ ಘಟನೆ ತುಮಕೂರು ತಾಲೂಕಿನ ವಡ್ಡರಹಳ್ಳಿಯಲ್ಲಿರುವ ಬನವಾಸಿ ಆಂಜನೇಯಸ್ವಾಮಿ ದೇವಾಲಯದ ಬಳಿ ನಡೆದಿದ್ದು, ಮುಂಜಾನೆ ದೇವಸ್ಥಾನಕ್ಕೆ ಹೋದ ಜನರು ಅಲ್ಲಿನ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.

Read Full Story

09:18 AM (IST) Aug 08

ಮಳೆಯಿಲ್ಲದಿದ್ದರೂ ತುಂಬಿ ಹರಿಯುತ್ತಿರುವ ನದಿಗಳು; ಕೋಡಿ ಬಿದ್ದ ಮದಗ–ಮಾಸೂರು ಕೆರೆ

ಹಾವೇರಿ ಜಿಲ್ಲೆಯಲ್ಲಿ ಸ್ಥಳೀಯವಾಗಿ ಮಳೆ ಕೊರತೆ ಇದ್ದರೂ, ಮೇಲ್ಭಾಗದ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳು ತುಂಬಿ ಹರಿಯುತ್ತಿವೆ. ಈ ಬೆಳವಣಿಗೆಯು ರೈತರಲ್ಲಿ ಹೊಸ ಭರವಸೆ ಮೂಡಿಸಿದ್ದು, ರಟ್ಟಿಹಳ್ಳಿ ತಾಲೂಕಿನ ಮದಗ-ಮಾಸೂರು ಕೆರೆಯೂ ಕೋಡಿ ಬಿದ್ದಿದೆ.
Read Full Story

08:57 AM (IST) Aug 08

Bengaluru - ಹೆಸರಘಟ್ಟದಲ್ಲಿ ಭಾರತದ ಮೊದಲ ಕ್ವಾಂಟಮ್ ಸಿಟಿ ನಿರ್ಮಾಣ - ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಸ್ಥಾಪನೆಗೆ ಮನವಿ ಮಾಡಿದ್ದಾರೆ. ಹೆಸರಘಟ್ಟದಲ್ಲಿ ಭಾರತದ ಮೊದಲ 'ಕ್ವಾಂಟಮ್ ಸಿಟಿ' ನಿರ್ಮಾಣವಾಗುತ್ತಿದ್ದು, ಈ ಮೂಲಕ ಕರ್ನಾಟಕವು ಕ್ವಾಂಟಮ್ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರಲು ಸಜ್ಜಾಗಿದೆ ಎಂದು ಅವರು 'ಕ್ವಾಂಟಮ್' ಪ್ರದರ್ಶನ ಉದ್ಘಾಟಿಸಿ ತಿಳಿಸಿದರು.
Read Full Story

08:48 AM (IST) Aug 08

ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಭೀಕರ ಅಪಘಾತ - ಶೈನಿಂಗ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ!

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೇರಳಕ್ಕೆ ಸೇರಿದ ಸಾರಿಗೆ ಬಸ್ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಪ್ರಯಾಣಿಕ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಅವರಗೆರೆ ಬ್ರಿಡ್ಜ್ ಬಳಿ ಸಂಭವಿಸಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

Read Full Story

08:42 AM (IST) Aug 08

ಕಂಠೀರವ ಸ್ಟುಡಿಯೋ To ಬಿಇಎಲ್ ವೃತ್ತದವರೆಗಿನ 4.5 km ಉದ್ದದ 6 ಲೇನ್‌ ಸುರಂಗ ಮಾರ್ಗ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕಂಠೀರವ ಸ್ಟುಡಿಯೋ ಅಂಡರ್‌ಪಾಸ್‌ನಿಂದ ಗೊರಗುಂಟೆಪಾಳ್ಯ ಮೂಲಕ ಬಿಇಎಲ್ ವೃತ್ತದವರೆಗೆ 4.5 ಕಿ.ಮೀ ಉದ್ದದ 6 ಲೇನ್‌ಗಳ ಸುರಂಗ ಮಾರ್ಗ ನಿರ್ಮಿಸಲು ಪ್ರಸ್ತಾಪಿಸಿದೆ. ಈ ಯೋಜನೆಗಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು ಬಿಡಿಎ ಅರ್ಹ ಗುತ್ತಿಗೆದಾರರಿಂದ ಟೆಂಡರ್ ಆಹ್ವಾನಿಸಿದೆ.
Read Full Story

08:27 AM (IST) Aug 08

ಗಜೇಂದ್ರಗಡದ 23 ವಾರ್ಡ್‌ಗಳಿಂದ ಪ್ರತಿದಿನ 11 ಟನ್ ಕಸ ಉತ್ಪಾದನೆ; ಸ್ವಚ್ಛತೆಗೆ ಸಿಗದ ಆದ್ಯತೆ

ಗಜೇಂದ್ರಗಡ ಪಟ್ಟಣದಲ್ಲಿ ಪುರಸಭೆಯು ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದೇವೆ ಎಂದರೂ, ಹಲವೆಡೆ ಹೂಳು ತುಂಬಿದ ಚರಂಡಿಗಳು ಮತ್ತು ಕಸದ ರಾಶಿಗಳು ಗಬ್ಬೆದ್ದು ನಾರುತ್ತಿವೆ. ಪೌರಕಾರ್ಮಿಕರ ಕೊರತೆ ಮತ್ತು ಸಮರ್ಪಕ ತ್ಯಾಜ್ಯ ವಿಲೇವಾರಿಯ ಅಭಾವದಿಂದಾಗಿ ಪಟ್ಟಣದ ಸ್ವಚ್ಛತೆ ಪೂರ್ಣ ಪ್ರಮಾಣದಲ್ಲಿ ಸಾಧ್ಯವಾಗುತ್ತಿಲ್ಲ.
Read Full Story

08:16 AM (IST) Aug 08

ಕೈಕೊಟ್ಟ ಮುಂಗಾರು ಮಳೆ; 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕಜೋಳ ಬೆಳೆ ನಾಶಪಡಿಸಿದ ರೈತ

ಕುರುಗೋಡು ತಾಲೂಕಿನಲ್ಲಿ ಮುಂಗಾರು ಮಳೆ ಸಂಪೂರ್ಣ ವಿಫಲವಾದ ಕಾರಣ, ಎಚ್.ವೀರಾಪುರ ಗ್ರಾಮದ ರೈತರೊಬ್ಬರು ತಮ್ಮ ಐದು ಎಕರೆ ಮೆಕ್ಕೆಜೋಳ ಬೆಳೆಯನ್ನು ಟ್ರ್ಯಾಕ್ಟರ್ ಬಳಸಿ ನಾಶಪಡಿಸಿದ್ದಾರೆ. ಕೊಳವೆಬಾವಿ ಇದ್ದರೂ, ಅನಿಯಮಿತ ವಿದ್ಯುತ್ ಕಡಿತ ಮತ್ತು ಅಂತರ್ಜಲ ಕುಸಿತದಿಂದ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗದೆ, ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.
Read Full Story

08:08 AM (IST) Aug 08

ಬರಗಾಲದ ನಡುವೆಯೂ ಕೂಡ್ಲಿಗಿ ತಾಲೂಕಿನ 80 ಕೆರೆಗಳಿಗೆ ಹರಿದು ಬಂದಳು ಗಂಗೆ; ಶಾಸಕರ ಪ್ರಯತ್ನ

ಬರಗಾಲದ ನಡುವೆಯೂ, ಕೂಡ್ಲಿಗಿ ತಾಲೂಕಿನ 80 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಯಶಸ್ವಿಯಾಗಿದೆ. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಪ್ರಯತ್ನದಿಂದ ತಾಂತ್ರಿಕ ಅಡಚಣೆಗಳನ್ನು ನಿವಾರಿಸಿ, ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.
Read Full Story

07:56 AM (IST) Aug 08

Bengaluru Namma Metro ನಿರ್ಲಕ್ಷ್ಯ - ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ!

ಮಾರತಹಳ್ಳಿ-ಸರ್ಜಾಪುರ ಮೆಟ್ರೋ ಕಾಮಗಾರಿಯ ಕಬ್ಬಿಣದ ಶೀಟ್ ಬಸ್ ಮೇಲೆ ಬಿದ್ದು ಭಾರೀ ಅನಾಹುತ ತಪ್ಪಿದೆ. ಈ ಘಟನೆಯು ಮೆಟ್ರೋ ಸಿಬ್ಬಂದಿಯ ನಿರ್ಲಕ್ಷ್ಯವನ್ನು ತೋರಿಸಿದ್ದು, 2023ರಲ್ಲಿ ಪಿಲ್ಲರ್ ಕುಸಿದು ತಾಯಿ-ಮಗು ಮೃತಪಟ್ಟಿದ್ದ ದುರಂತವನ್ನು ನೆನಪಿಸಿದೆ.
Read Full Story

07:11 AM (IST) Aug 08

HAL - ದೇಶದಲ್ಲೇ ಮೊದಲು, ಎಚ್‌ಎಎಲ್‌ನಲ್ಲಿ ಉಪಗ್ರಹ ಬಳಸಿ ಹೆಲಿಕಾಪ್ಟರ್‌ ಲ್ಯಾಂಡ್‌

ಬೆಂಗಳೂರಿನ ಎಚ್‌ಎಎಲ್ ಏರ್ಪೋರ್ಟ್, ಹೆಲಿಕಾಪ್ಟರ್‌ಗಳಿಗಾಗಿ ಉಪಗ್ರಹ ಆಧಾರಿತ ಲ್ಯಾಂಡಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಂಡ ದೇಶದ ಮೊದಲ ವಿಮಾನ ನಿಲ್ದಾಣವಾಗಿದೆ. ಈ ನೂತನ ತಂತ್ರಜ್ಞಾನವು ಲ್ಯಾಂಡಿಂಗ್ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದಲ್ಲದೆ, ಪ್ರತಿಕೂಲ ಹವಾಮಾನದಲ್ಲೂ ಸುರಕ್ಷಿತ ಲ್ಯಾಂಡಿಂಗ್‌ಗೆ ಸಹಕರಿಸುತ್ತದೆ.
Read Full Story

More Trending News