LIVE NOW
Published : Aug 09, 2026, 06:45 AM ISTUpdated : Aug 09, 2026, 09:05 AM IST

Karnataka Latest News Live: ಬೆಂಗಳೂರಲ್ಲಿ ಪಾಪಿ ಪತಿಯಿಂದ ಪೈಶಾಚಿಕ ಕೃತ್ಯ.. ಪತ್ನಿಯ ಜೀವ ತೆಗೆದು ಮೋರಿಗೆ ಎಸೆದ! ಕಾರಣ?

ಸಾರಾಂಶ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸುತ್ತೇವೆಯೇ ವಿನಃ ಮೈತ್ರಿ ಮುರಿದುಬಿದ್ದಿಲ್ಲ ಎಂದು ಸಂಸದ ಡಾ। ಮಂಜುನಾಥ್ ಹೇಳಿದರು. ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಪ್ರಾಯಶ್ಚಿತ್ತ ಪಾದಯಾತ್ರೆ ಎಂದು ಶಾಸಕ ಬಾಲಕೃಷ್ಣ ಅವರು ಕರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಒತ್ತಾಯ ಮಾಡಿ ನಾವು ಸ್ವಾಧೀನಕ್ಕೆ ಮುಂದಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕ ಪಾದಯಾತ್ರೆಗೆ ಸಿದ್ಧರಾಗಿದ್ದಾರೆ. ಫಲವತ್ತಾದ ರೈತರ ಭೂಮಿಯನ್ನು ಪಡೆಯಬಾರದು. ಹಿಂದೆ ಹಾರೋಹಳ್ಳಿ ಪ್ರಕರಣದಲ್ಲೂ ರೈತರು ಪ್ರತಿಭಟಿಸಿದ್ದರು. ಶೇ.80ರಷ್ಟು ರೈತರ ವಿರೋಧವಿದೆ. ಪ್ರಜಾಪ್ರಭುತ್ವದಲ್ಲಿ ರೈತರ ಒಟ್ಟಾರೆ ಅಭಿಪ್ರಾಯ ಪಡೆದು, ನಿರ್ಧಾರ ಕೈಗೊಳ್ಳಬೇಕು ಎಂದರು.

09:05 AM (IST) Aug 09

ಬೆಂಗಳೂರಲ್ಲಿ ಪಾಪಿ ಪತಿಯಿಂದ ಪೈಶಾಚಿಕ ಕೃತ್ಯ.. ಪತ್ನಿಯ ಜೀವ ತೆಗೆದು ಮೋರಿಗೆ ಎಸೆದ! ಕಾರಣ?

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಇಲ್ಲೊಬ್ಬ ಪಾಪಿ ಪತಿ ಪತ್ನಿಯನ್ನ ಬರ್ಬರವಾಗಿ ಸಾಯಿಸಿ ಮೋರಿಗೆ ಎಸೆದಿದ್ದಾನೆ. ಅಷ್ಟಕ್ಕೂ ಇಬ್ಬರ ಮಧ್ಯೆ ಆಗಿದ್ದೇನು? ಈ ಸ್ಟೋರಿ ಓದಿ..

Read Full Story

09:00 AM (IST) Aug 09

ಕೆಐಒಸಿಎಲ್‌-ಎನ್‌ಎಂಡಿಸಿ ವಿಲೀನಕ್ಕೆ ಕಾರ್ಮಿಕ ನಿಯೋಗ ಕೇಂದ್ರಕ್ಕೆ ಮನವಿ

ಕುದುರೆಮುಖ ಶ್ರಮಶಕ್ತಿ ಸಂಘಟನೆಯ ಕಾರ್ಮಿಕರ ನಿಯೋಗವು ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ, ಕೆಐಒಸಿಎಲ್ ಅನ್ನು ಎನ್‌ಎಂಡಿಸಿ ಜೊತೆ ವಿಲೀನಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಮನವಿ ಸಲ್ಲಿಸಿತು. ಕಾರ್ಮಿಕರ ಬೇಡಿಕೆಗಳನ್ನು ಆಲಿಸಿದ ಸಚಿವರು, ಕಂಪನಿಯ ಉಳಿವಿಗಾಗಿ ಅಗತ್ಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
Read Full Story

08:51 AM (IST) Aug 09

ದಶಕದಿಂದ ಉದ್ಘಾಟೆನೆಗೆ ಕಾಯುತ್ತಿರುವ ರೈಲ್ವೆ ನಿಲ್ದಾಣ; ಬೆಂಗಳೂರಿಗೆ ಪ್ರಯಾಣಿಸುವ ಅನಾನೂಕೂಲ

ಬಂಗಾರಪೇಟೆ ಬಳಿಯ ಹುದುಕುಳ ರೈಲ್ವೆ ನಿಲ್ದಾಣವು ದಶಕ ಕಳೆದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಬೆಂಗಳೂರಿಗೆ ಪ್ರಯಾಣಿಸುವ ಸಾವಿರಾರು ಜನರಿಗೆ ಅನುಕೂಲವಾಗಬೇಕಿದ್ದ ಈ ನಿಲ್ದಾಣ, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಇಂದು ಪಾಳುಬಿದ್ದು ಅನಾಥವಾಗಿದೆ.
Read Full Story

08:06 AM (IST) Aug 09

ರಾಜ್ಯ ರಾಜಕೀಯಕ್ಕೆ ಅಹಿಂಸಾ ಚೇತನ್ ಎಂಟ್ರಿ; ಸಮ-ಸಮಾಜ ನಿರ್ಮಾಣಕ್ಕೆ ಹೊಸ ರಾಜಕೀಯ ಪಕ್ಷದ ಘೋಷಣೆ!

ಹೋರಾಟಗಾರ ಅಹಿಂಸಾ ಚೇತನ್‌ ಅವರು ಕರ್ನಾಟಕದಲ್ಲಿ ಸಮ ಸಮಾಜ ನಿರ್ಮಾಣಕ್ಕಾಗಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಪಕ್ಷವನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದ ಅವರು, ಬಿಡದಿ ಟೌನ್‌ಶಿಪ್‌ ಮತ್ತು ನೀಟ್‌ ವ್ಯವಸ್ಥೆ ಬಗ್ಗೆ ಹೇಳಿದ್ದೇನು?

Read Full Story

07:35 AM (IST) Aug 09

B Nagendra - ಕೋರ್ಟ್‌ ಷರತ್ತು ಮೀರಿ ನಾಗೇಂದ್ರ ದಿಲ್ಲಿ ಭೇಟಿ - ಇಡಿ ತನಿಖೆ, ಸಾಕ್ಷ್ಯ ಸಿಕ್ಕರೆ ಏನಾಗುತ್ತೆ?

ವಾಲ್ಮೀಕಿ ನಿಗಮ ಹಗರಣದಲ್ಲಿ ಜಾಮೀನು ಪಡೆದಿರುವ ಸಚಿವ ನಾಗೇಂದ್ರ, ಕೋರ್ಟ್ ಅನುಮತಿ ಇಲ್ಲದೆ ದೆಹಲಿಗೆ ಪ್ರವಾಸ ಕೈಗೊಂಡ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿದ್ದು, ಷರತ್ತು ಉಲ್ಲಂಘನೆ ಸಾಬೀತಾದರೆ ಅವರ ಜಾಮೀನು ರದ್ದಾಗುವ, ಸಚಿವ ಸ್ಥಾನಕ್ಕೆ ಕುತ್ತು?

Read Full Story

07:33 AM (IST) Aug 09

ಒತ್ತುವರಿದಾರರಿಗೆ ಬಿಗ್ ಶಾಕ್ - 165 ಎಕರೆ ಭೂಮಿಯನ್ನು ವಶಕ್ಕೆ ಪಡೆದುಕೊಂಡ ಬಿಎಂಟಿಸಿ

ಕಳೆದ ಎರಡು ವರ್ಷಗಳಲ್ಲಿ, ಬಿಎಂಟಿಸಿ ವಿಶೇಷ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ 165 ಎಕರೆ ಭೂಮಿಯನ್ನು ಮರುವಶಕ್ಕೆ ಪಡೆದಿದೆ. ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಸಹಕಾರದೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಮುಂದೆಯೂ ಈ ಕ್ರಮ ಮುಂದುವರಿಯಲಿದೆ.
Read Full Story

07:06 AM (IST) Aug 09

ಬೆಂಗಳೂರು - ಹಿಂದಿ ಬರಲ್ಲವೆಂದ ಕನ್ನಡಿಗನ ಮೇಲೆ ಹಿಂದಿವಾಲಾಗಳಿಂದಲೇ ಹಲ್ಲೆ!

ಬೆಂಗಳೂರಿನ ಯಲಹಂಕದಲ್ಲಿ ಹಿಂದಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಡೆಲಿವರಿ ಬಾಯ್ ಬಸವರಾಜ್ ಮೇಲೆ ಪರಭಾಷಿಕರು ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Read Full Story

More Trending News