ಚಿಕ್ಕಮಗಳೂರು: ಬಿಡದಿ ಟೌನ್ಶಿಪ್ಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸುತ್ತೇವೆಯೇ ವಿನಃ ಮೈತ್ರಿ ಮುರಿದುಬಿದ್ದಿಲ್ಲ ಎಂದು ಸಂಸದ ಡಾ। ಮಂಜುನಾಥ್ ಹೇಳಿದರು. ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಪ್ರಾಯಶ್ಚಿತ್ತ ಪಾದಯಾತ್ರೆ ಎಂದು ಶಾಸಕ ಬಾಲಕೃಷ್ಣ ಅವರು ಕರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಒತ್ತಾಯ ಮಾಡಿ ನಾವು ಸ್ವಾಧೀನಕ್ಕೆ ಮುಂದಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕ ಪಾದಯಾತ್ರೆಗೆ ಸಿದ್ಧರಾಗಿದ್ದಾರೆ. ಫಲವತ್ತಾದ ರೈತರ ಭೂಮಿಯನ್ನು ಪಡೆಯಬಾರದು. ಹಿಂದೆ ಹಾರೋಹಳ್ಳಿ ಪ್ರಕರಣದಲ್ಲೂ ರೈತರು ಪ್ರತಿಭಟಿಸಿದ್ದರು. ಶೇ.80ರಷ್ಟು ರೈತರ ವಿರೋಧವಿದೆ. ಪ್ರಜಾಪ್ರಭುತ್ವದಲ್ಲಿ ರೈತರ ಒಟ್ಟಾರೆ ಅಭಿಪ್ರಾಯ ಪಡೆದು, ನಿರ್ಧಾರ ಕೈಗೊಳ್ಳಬೇಕು ಎಂದರು.
09:05 AM (IST) Aug 09
ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಇಲ್ಲೊಬ್ಬ ಪಾಪಿ ಪತಿ ಪತ್ನಿಯನ್ನ ಬರ್ಬರವಾಗಿ ಸಾಯಿಸಿ ಮೋರಿಗೆ ಎಸೆದಿದ್ದಾನೆ. ಅಷ್ಟಕ್ಕೂ ಇಬ್ಬರ ಮಧ್ಯೆ ಆಗಿದ್ದೇನು? ಈ ಸ್ಟೋರಿ ಓದಿ..
09:00 AM (IST) Aug 09
08:51 AM (IST) Aug 09
08:06 AM (IST) Aug 09
ಹೋರಾಟಗಾರ ಅಹಿಂಸಾ ಚೇತನ್ ಅವರು ಕರ್ನಾಟಕದಲ್ಲಿ ಸಮ ಸಮಾಜ ನಿರ್ಮಾಣಕ್ಕಾಗಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಪಕ್ಷವನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದ ಅವರು, ಬಿಡದಿ ಟೌನ್ಶಿಪ್ ಮತ್ತು ನೀಟ್ ವ್ಯವಸ್ಥೆ ಬಗ್ಗೆ ಹೇಳಿದ್ದೇನು?
07:35 AM (IST) Aug 09
ವಾಲ್ಮೀಕಿ ನಿಗಮ ಹಗರಣದಲ್ಲಿ ಜಾಮೀನು ಪಡೆದಿರುವ ಸಚಿವ ನಾಗೇಂದ್ರ, ಕೋರ್ಟ್ ಅನುಮತಿ ಇಲ್ಲದೆ ದೆಹಲಿಗೆ ಪ್ರವಾಸ ಕೈಗೊಂಡ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿದ್ದು, ಷರತ್ತು ಉಲ್ಲಂಘನೆ ಸಾಬೀತಾದರೆ ಅವರ ಜಾಮೀನು ರದ್ದಾಗುವ, ಸಚಿವ ಸ್ಥಾನಕ್ಕೆ ಕುತ್ತು?
07:33 AM (IST) Aug 09
07:06 AM (IST) Aug 09