ಬೆಂಗಳೂರು (ಆ.7): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಜೆನ್ಝೀಗಳು ನಡೆಸಿದ ಪ್ರತಿಭಟನೆಯ ತೀವ್ರತೆ ಮನಗಂಡು ಎಚ್ಚೆತ್ತಿರುವ ರಾಜ್ಯ ಸರ್ಕಾರ, ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಕೃಷಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸಿದೆ. ಆಗಸ್ಟ್ 8 ಮತ್ತು 9 ರಂದು ನಿಗದಿಯಾಗಿದ್ದ 945 ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಕೃಷಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಗ್ಗೆ ಸಮಗ್ರ ಪರಿಶೀಲನೆಗಾಗಿ ವಿಶೇಷ ತಜ್ಞರ ಸಮಿತಿ ರಚಿಸಿ, 15 ದಿನಗಳೊಳಗೆ ವರದಿ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
11:29 PM (IST) Aug 07
ಕರ್ನಾಟಕ ಎಂದರೆ ಕೇವಲ ಪ್ರಸಿದ್ಧ ಪ್ರವಾಸಿ ತಾಣಗಳು ಮಾತ್ರವಲ್ಲ. ಮಳೆಗಾಲ ಆರಂಭವಾಗುತ್ತಿದ್ದಂತೆ ರಾಜ್ಯದ ಕಾಡು, ಬೆಟ್ಟ ಹಾಗೂ ಕಣಿವೆಗಳ ನಡುವೆ ಹಲವು ಅಪರೂಪದ ಜಲಪಾತಗಳು ಜೀವ ಪಡೆದುಕೊಳ್ಳುತ್ತವೆ.
09:14 PM (IST) Aug 07
ಹಾರ್ದಿಕ್ ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳಲು ರಾಜಸ್ಥಾನ್, ಚೆನ್ನೈ ಬಳಿಕ ಇದೀಗ ಕೆಕೆಆರ್ ಕೂಡ ಆಸಕ್ತಿ ತೋರಿದೆ. ಆದರೆ, ಪಾಂಡ್ಯರನ್ನು ಬಿಟ್ಟುಕೊಡಲು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ಮುಂದೆ ಆ ಇಬ್ಬರು ಆಟಗಾರರನ್ನು ನೀಡಬೇಕೆಂಬ ದೊಡ್ಡ ಷರತ್ತು ಇಟ್ಟಿದೆ ಎನ್ನಲಾಗಿದೆ.
09:03 PM (IST) Aug 07
‘ಜೋಶ್’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿ, ಬಳಿಕ ‘ಬಿಗ್ ಬಾಸ್’ ಮೂಲಕವೂ ಜನಪ್ರಿಯತೆ ಗಳಿಸಿದ ನಟ ರಾಕೇಶ್ ಅಡಿಗ ಇದೀಗ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.
08:33 PM (IST) Aug 07
Karnataka Handloom: ರಾಜ್ಯದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಜೀವನೋಪಾಯವನ್ನು ಬಲಪಡಿಸುವ ಜೊತೆಗೆ ಕರ್ನಾಟಕದ ಕೈಮಗ್ಗ ಉತ್ಪನ್ನಗಳಿಗೆ ರಾಷ್ಟ್ರೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ..
08:21 PM (IST) Aug 07
'ಬಾಸ್' ಸಿನಿಮಾ ಕೇವಲ ಮನರಂಜನೆಗಿಂತ ಹೆಚ್ಚಾಗಿ, ಸಮಾಜದಲ್ಲಿ ಸ್ಟಾರ್ಡಮ್ ಮತ್ತು ಕಾನೂನಿನ ನಡುವಿನ ಸಂಘರ್ಷವನ್ನು ಬಿಂಬಿಸುತ್ತದೆ. ದೊಡ್ಡ ಸೆಲೆಬ್ರಿಟಿಗಳ ಸುತ್ತ ಫ್ಯಾನ್ಸ್ ಮತ್ತು ವಿವಾದಗಳು ಹೇಗೆ ಸುತ್ತಿಕೊಳ್ಳುತ್ತವೆ ಎಂಬುದಕ್ಕೆ ಈ ಸಿನಿಮಾ ಒಂದು ಕೈಗನ್ನಡಿ. ನಿಜವಾಗಿಯೂ ಬಾಸ್ ಸಿನಿಮಾದಲ್ಲಿ ಏನಿದೆ?
08:19 PM (IST) Aug 07
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈಗಾಗಲೇ ಭಾರೀ ಕುತೂಹಲ ಮೂಡಿಸಿದೆ. ಇದೀಗ ಬಿಡುಗಡೆಯಾಗಿರುವ ಚಿತ್ರದ ಇಂಗ್ಲಿಷ್ ಟ್ರೇಲರ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.
08:01 PM (IST) Aug 07
ಸಾಲ ಮರುಪಾವತಿ ಮಾಡದ ಗ್ರಾಹಕರ ಫೋನ್ಗಳನ್ನು ಬ್ಯಾಂಕ್ಗಳು ರಿಮೋಟ್ ಆಗಿ ಲಾಕ್ ಮಾಡುವಂತಿಲ್ಲ ಎಂದು ಆರ್ಬಿಐ ಸ್ಪಷ್ಟಪಡಿಸಿದೆ. ಆದರೆ, ನಿರ್ದಿಷ್ಟವಾಗಿ 'ಡಿವೈಸ್ ಲೋನ್' ಪಡೆದು ಅದನ್ನು ಮರುಪಾವತಿಸದಿದ್ದಲ್ಲಿ ಮಾತ್ರ, ಮುಂಚಿತ ಮಾಹಿತಿ ನೀಡಿ ಆ ಸಾಧನವನ್ನು ಸ್ಥಗಿತಗೊಳಿಸಲು ಅವಕಾಶವಿದೆ.
07:03 PM (IST) Aug 07
06:43 PM (IST) Aug 07
Gangavathi News: ನಗರದ ಪಬ್ಲಿಕ್ ಕ್ಲಬ್ ನಗರಸಭೆ ಆಸ್ತಿಯಾಗಿದ್ದು, ಇದರ ಮುಂಭಾಗದಲ್ಲಿ ನಿರ್ಮಿಸಲಾಗಿರುವ 11 ಮಳಿಗೆಗಳು ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದರಿಂದ ಕೂಡಲೆ ನೋಟಿಸ್ ನೀಡಿದ 7 ದಿನಗಳ ಒಳಗಾಗಿ..
06:37 PM (IST) Aug 07
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಅಜಿಂಕ್ಯ ರಹಾನೆ, ಸಂದರ್ಶನವೊಂದರಲ್ಲಿ ಭಾರತದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ಯಾರು ಎಂಬ ಕಠಿಣ ಪ್ರಶ್ನೆಗೆ ಉತ್ತರಿಸಿದ್ದಾರೆ. ಸುನಿಲ್ ಗಾವಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ನಡುವೆ, ಅವರು ಈ ಹೆಸರನ್ನು ಆಯ್ಕೆ ಮಾಡಿ, ತಮ್ಮ ಆಯ್ಕೆಗೆ ಕಾರಣವನ್ನು ವಿವರಿಸಿದ್ದಾರೆ.
06:32 PM (IST) Aug 07
‘ಅಯೋಗ್ಯ’ ಸಿನಿಮಾ ಹಾಸ್ಯ, ಹಳ್ಳಿ ಸೊಗಡು, ಹಾಡುಗಳು ಹಾಗೂ ಸಿದ್ದೇಗೌಡನ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸಿನಿಮಾ ಇದೀಗ ಎಂಟು ವರ್ಷಗಳ ಬಳಿಕ ‘ಅಯೋಗ್ಯ 2’ ರೂಪದಲ್ಲಿ ತೆರೆಗೆ ಬಂದಿದೆ.
06:16 PM (IST) Aug 07
Ayogya 2: ಸೀಕ್ವೆಲ್ ಬಗ್ಗೆ ಯೋಚನೆ ಮೊದಲ ಸಿನಿಮಾದ ಯಶಸ್ಸಿನ ನಂತರವೇ ಬಂದಿತ್ತು ಎನ್ನುವ ಮಹೇಶ್ ಕುಮಾರ್, ಉದ್ದೇಶಪೂರ್ವಕವಾಗಿಯೇ ‘ಅಯೋಗ್ಯ 2’ ಅನ್ನು ತಡ ಮಾಡಿದ್ದಾಗಿ ಹೇಳಿದ್ದಾರೆ.
05:57 PM (IST) Aug 07
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ಅಸಮಾಧಾನ ಭುಗಿಲೆದ್ದಿದ್ದು, ಮಹಿಳಾ ಕೋಟಾ ಭರ್ತಿ ಹಾಗೂ ಅತೃಪ್ತ ಶಾಸಕರನ್ನು ಸಮಾಧಾನಪಡಿಸಲು ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯಾರು ಸಚಿವರಾಗುತ್ತಾರೆ ಮತ್ತು ಯಾರು ಸ್ಥಾನ ಕಳೆದುಕೊಳ್ಳುತ್ತಾರೆ? ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ.
05:17 PM (IST) Aug 07
05:02 PM (IST) Aug 07
ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ: ಭಾಗ 1' ಸಿನಿಮಾ ವಿಶ್ವದಾದ್ಯಂತ ಬರೋಬ್ಬರಿ 59,000 ಸ್ಕ್ರೀನ್ಗಳಲ್ಲಿ ಬಿಡುಗಡೆಯಾಗುವ ಮೂಲಕ ಹೊಸ ದಾಖಲೆ ಬರೆಯಲು ಸಜ್ಜಾಗಿದೆ ಎಂದು ವರದಿಯಾಗಿದೆ.
04:55 PM (IST) Aug 07
04:52 PM (IST) Aug 07
ನಗರದ ಹಸಿರು ಸಿರಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಮಹತ್ತರ ಯೋಜನೆ ರೂಪಿಸಿದೆ. ಲಾಲ್ ಬಾಗ್ ಮಾದರಿಯಲ್ಲಿ ನಗರದ ಮೂರು ಕಡೆ ಬೃಹತ್ ಉದ್ಯಾನವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಮಾದರಿಯನ್ನೇ ಅನುಸರಿಸಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿಇದೆ.
04:40 PM (IST) Aug 07
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಬಿಡುಗಡೆಯ ಮುನ್ನವೇ ಸದ್ದು ಮಾಡುತ್ತಿದೆ. ಸಿನಿಮಾ ಯಾವ ಮಟ್ಟಿಗೆ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಲಿದೆ.
04:26 PM (IST) Aug 07
8 ತಿಂಗಳ ಹಿಂದೆ ನಟ ಹಾಗೂ ಪ್ರಸ್ತುತ ತಮಿಳನಾಡಿನ ಸಿಎಂ ಆಗಿರುವ ‘ದಳಪತಿ’ ಖ್ಯಾತಿಯ ನಟ ವಿಜಯ್ ಜೋಸೆಫ್ ಅವರೊಂದಿಗೆ ದಾಂಪತ್ಯ ವಿರಸ ಹೊಂದಿದ್ದ ಪತ್ನಿ ಸಂಗೀತಾ ಅವರು ಚೆನ್ನೈ ಕೋರ್ಟ್ಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಎರಡು ಬಾರಿ ಕೋರ್ಟ್ ವಿಚಾರಣೆಗೆ ಈ ಜೋಡಿ ಹಾಜರಾಗಿರಲಿಲ್ಲ.
04:25 PM (IST) Aug 07
ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ದಟ್ಟಣೆಯನ್ನು ಹತೋಟಿಗೆ ತರಲು ರಾಜ್ಯ ಸರ್ಕಾರವು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಇಲಾಖೆಯನ್ನು ಐದು ಸ್ವತಂತ್ರ ಕಮಿಷನರೇಟ್ಗಳಾಗಿ ವಿಭಜಿಸುವ ಪ್ರಸ್ತಾವನೆಗೆ ತಾತ್ವಿಕ ಒಪ್ಪಿಗೆ ನೀಡಿದೆ.
04:23 PM (IST) Aug 07
ಟಾಲಿವುಡ್ ಹಾಗೂ ಕಾಲಿವುಡ್ನಲ್ಲಿ ಸತತವಾಗಿ ಬ್ಯುಸಿಯಾಗಿರುವ ನಟಿ ಶ್ರೀಲೀಲಾ ಇದೀಗ ಮತ್ತೊಂದು ಬಹುದೊಡ್ಡ ಅವಕಾಶದ ಮೂಲಕ ಸುದ್ದಿಯಲ್ಲಿದ್ದಾರೆ. ಸೂಪರ್ಸ್ಟಾರ್ ರಜನಿಕಾಂತ್ ಅಭಿನಯಿಸಲಿರುವ..
04:09 PM (IST) Aug 07
02:54 PM (IST) Aug 07
ನಯನತಾರಾ, ಕಿಯಾರ ಅಡ್ವಾಣಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಷಿ ಸೇರಿದಂತೆ ಅತೀ ದೊಡ್ಡ ನಟಿಯರ ಬಳಗ ಈ ಟಾಕ್ಸಿಕ್ ಚಿತ್ರದಲ್ಲಿದೆ. ಈಗಾಗಲೇ ಯಶ್-ಕಿಯಾರಾ ಅಡ್ವಾಣಿಯ 'ತಬಾಹಿ' ಹಾಡು ಹಾಗೂ ಯಶ್-ತಾರಾ ಸುತಾರಿಯಾ 'ಮನಮೋಹಕ' ಹಾಡು ಜಗತ್ತಿನಾದ್ಯಂತ ಭಾರಿ ಮೆಚ್ಚುಗೆ ಗಳಿಸಿದೆ. ನಾಳೆ ಟ್ರೇಲರ್ ರಿಲೀಸ್..
02:43 PM (IST) Aug 07
02:27 PM (IST) Aug 07
ರಾಜ್ಯ ರಾಜಕಾರಣದಲ್ಲಿ ಇವತ್ತು ಮತ್ತೊಂದು ಬೆಳವಣಿಗೆ ನಡೆದಿದೆ. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆನ್ನಲ್ಲೇ ಭಾವುಕರಾಗಿ ಮಾತನ್ನಾಡಿದ್ದಾರೆ.
01:59 PM (IST) Aug 07
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ, ಹೆಡ್ ಕೋಚ್ ಗೌತಮ್ ಗಂಭೀರ್ ಟೀಂ ಇಂಡಿಯಾಗೆ ಕಠಿಣ ಅಭ್ಯಾಸ ನಡೆಸಲು ಸೂಚಿಸಿದ್ದಾರೆ. ಸ್ಪಿನ್ ಬೌಲಿಂಗ್ ಎದುರಿಸಲು ವಿಶೇಷ ತರಬೇತಿ ನಡೆಯುತ್ತಿದ್ದು, ಕೊಲಂಬೊದಲ್ಲಿ ಆರಂಭವಾದ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ಇಲೆವನ್ ಉತ್ತಮ ಆರಂಭ ಪಡೆದಿದೆ.
01:05 PM (IST) Aug 07
12:30 PM (IST) Aug 07
ಮುಟ್ಟು ಅಥವಾ ಸೂತಕದ ಸಮಯದಲ್ಲಿ ದೇವರ ಪ್ರಸಾದ ಸೇವಿಸಬಹುದೇ ಎಂಬ ಗೊಂದಲ ಹಲವರನ್ನು ಕಾಡುತ್ತಿದೆ. ಈ ಕುರಿತಂತೆ ಸಾಮಾಜಿಕ ಪಂಡಿತರನ್ನು ಹಲವರು ಪ್ರಶ್ನೆ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಈ ಗೊಂದಲಕ್ಕೆ ಪಂಡಿತರು ಸ್ಪಷ್ಟನೆ ನೀಡಿದ್ದಾರೆ. ನಿಮ್ಮಲ್ಲಿರುವ ಗೊಂದಲಗಳಿಗೆ ಇಲ್ಲಿದೆ ನೋಡಿ ಉತ್ತರ.
11:49 AM (IST) Aug 07
ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸ್ನೇಹಿತರಿದ್ದ ಕಾರು ಶಿವಮೊಗ್ಗ ತಾಲೂಕಿನ ಚೋರಡಿ ಬ್ರಿಡ್ಜ್ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಆರೂ ಮಂದಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
11:42 AM (IST) Aug 07
11:21 AM (IST) Aug 07
11:04 AM (IST) Aug 07
ಕರ್ನಾಟಕ ಸರ್ಕಾರವು ದೇಶದ ಮೊದಲ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದೆ. ಈ ಯೋಜನೆಯು ಎಐ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಕರ್ನಾಟಕವನ್ನು ಜಾಗತಿಕ ಹಬ್ ಆಗಿ ರೂಪಿಸುವ ಗುರಿ ಹೊಂದಿದೆ.
10:27 AM (IST) Aug 07
10:07 AM (IST) Aug 07
ಯುನೆಸ್ಕೋ ಪಾರಂಪರಿಕ ತಾಣವಾದ ಹಂಪಿಯ ಸಂರಕ್ಷಿತ ವಲಯಗಳಲ್ಲಿ ನಡೆಯುತ್ತಿರುವ ಅಕ್ರಮ ವಾಣಿಜ್ಯ ಚಟುವಟಿಕೆಗಳು ಮತ್ತು 250ಕ್ಕೂ ಹೆಚ್ಚು ಅನಧಿಕೃತ ಹೋಮ್ಸ್ಟೇಗಳ ವಿರುದ್ಧ ಉಪಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
09:44 AM (IST) Aug 07
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರನ್ನು, ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಸಂಪುಟದಿಂದ ವಜಾಗೊಳಿಸಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷ ಆಗ್ರಹಿಸಿದೆ.
09:11 AM (IST) Aug 07
08:06 AM (IST) Aug 07
ಫ್ಲಿಪ್ಕಾರ್ಟ್ ಫೌಂಡೇಶನ್ ಮತ್ತು ದಿ ಅಕ್ಷಯ ಪಾತ್ರ ಫೌಂಡೇಶನ್ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಸರ್ಕಾರಿ ಶಾಲೆಗಳ 1 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬೆಳಗಿನ ಉಪಾಹಾರವನ್ನು ವಿತರಿಸಲಾಗಿದೆ.
07:29 AM (IST) Aug 07
ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಜಾರ್ಖಂಡ್ನಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಎಂ ಹೇಮಂತ್ ಸೊರೇನ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಪ್ರತಿಭಟನಾಕಾರರೊಂದಿಗೆ ಸರ್ಕಾರ ಮಾತುಕತೆಗೆ ಮುಂದಾಗಿದೆ.
07:28 AM (IST) Aug 07
ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆಯನ್ನು ನಿಷೇಧಿಸಿರುವುದಾಗಿ ಘೋಷಿಸಿದ್ದಾರೆ.
07:28 AM (IST) Aug 07
‘ವಿಬಿ ಜಿ ರಾಮ್ ಜಿ’ ಯೋಜನೆ ಅಡಿ ಮಾನವ ದಿನ ಸೃಜನೆ ಮಾಡಲು ನಿರ್ಲಕ್ಷ್ಯ ವಹಿಸಿದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಮನರೇಗಾ ಬದಲಿಗೆ ಜಾರಿಗೆ ಬಂದಿರುವ ಈ ಯೋಜನೆಯ ಮೊದಲ ತಿಂಗಳಲ್ಲೇ ಹಿನ್ನಡೆ?