
ಬೆಂಗಳೂರು, (ಮೇ.07): ಕರ್ನಾಟದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಹೆಚ್ಚಾಗಿರುವ ಕಾರಣ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ಡೌನ್ ಮೊರೆ ಹೋಗಿದೆ.
ಲಾಕ್ಡೌನ್ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಶುಕ್ರವಾರ) ಸಂಜೆ ಅಧಿಕೃತ ಘೋಷಣೆ ಮಾಡಿದರು. ಮೇ. 10ರ ಬೆಳಗ್ಗೆ 6ರಿಂದ ಮೇ. 24ರ ವರೆಗೆ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಅಗತ್ಯ ಸೇವೆಗಳನ್ನ ಹೊರತುಪಡಿಸಿ ಇನ್ನುಳಿದ ಚಟುವಟಿಕೆಗಳು ಅನುಮತಿ ಇಲ್ಲ. ಇದು ತಾತ್ಕಾಲಿಕ ಕ್ರಮವಾಗಿದೆ ಎಂದರು.
ನಮ್ಮ ಅನುದಾನ ಬೇಕಿದ್ರೆ ವಾಪಸ್ ತಗೊಂಡು ಬಡವರಿಗೆ ಅಕ್ಕಿ, ಹಣ ಕೊಡಿ: ಬಿಜೆಪಿ ಶಾಸಕ ಮನವಿ
ಆಹಾರ, ಹಾಲು, ತರಕಾರಿ ಮಾರಾಟಕ್ಕೆ ಅನುಕೂಲುವಾಗುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅನುಮತಿ ನೀಡಲಾಗಿದೆ. ಹಾಲಿನ ಅಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ. ತಳ್ಳೋ ಗಾಡಿಯಲ್ಲಿ ಕೂಡ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆಸ್ಪತ್ರೆಗೆ ಹೋಗದೋದಕ್ಕೆ ಅವಕಾಶ ನೀಡಲಾಗಿದೆ ಎಂದರು.
ಈ ಅವಧಿಯಲ್ಲಿ ಅಂಗಡಿ, ಬಾರ್, ಹೋಟೆಲ್, ಪಬ್ ನಿರ್ಬಂಧಿಸಲಾಗಿದೆ. ನಿಗಧಿತ ಕಟ್ಟಡದೊಳಗೆ ಜನರನ್ನು ಬಳಸಿಕೊಂಡು ಕೆಲಸ ಮಾಡೋದಕ್ಕೆ ಅವಕಾಶ. ವಿವಾಹದಲ್ಲಿ 50 ಜನರಿಗೆ ಮಾತ್ರ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿದೆ. ಹೆಚ್ಚು ಜನರು ಭಾಗವಹಿಸಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.
ಕಾರ್ಮಿಕರಲ್ಲಿ ವಿಶೇಷ ಮನವಿ
ಈ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೂಲಿ ಕಾರ್ಮಿಕರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದು, ಕಟ್ಟಡ ಕಾಮಗಾರಿ ನಡೆಯುತ್ತವೆ. ಅದಕ್ಕಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಕಾರ್ಮಿಕರು ಯಾವುದೇ ಕಾರಣಕ್ಕೂ ನಗರಬಿಟ್ಟು ಹೋಗಬೇಡಿ ಎಂದು ಮನವಿ ಮಾಡಿದರು.
ಕರ್ನಾಟಕ ಲಾಕ್ಡೌನ್: ಏನಿರತ್ತೆ? ಏನಿರಲ್ಲ? ಇಲ್ಲಿದೆ ಹೊಸ ಗೈಡ್ಲೈನ್ಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ