
ಬೆಂಗಳೂರು(ಜೂ. 17) ಎರಡನೇ ಹಂತದ ಅನ್ ಲಾಕ್ ಮಾಡುವ ಬಗ್ಗೆ ಶನಿವಾರ ಸಚಿವರ ಮತ್ತು ಅಧಿಕಾರಿಗಳ ಜೊತೆ ಸಭೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ಶನಿವಾರ ಸಂಜೆ ಕೋವಿಡ್ ಉಸ್ತುವಾರಿ ಹೊತ್ತಿರುವ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಿಎಂ ಚರ್ಚೆ ನಡೆಸಲಿದ್ದಾರೆ. ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡಲು ಸರ್ಕಾರದ ನಿರ್ಧಾರ ಮಾಡಿಕೊಂಡಿದೆ.
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಯಾವಾಗ ಸಿಗುತ್ತದೆ?
ಪಾಸಿಟಿವಿಟಿ ರೇಟ್ 5 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆಗೆ ಸರ್ಕಾರ ಚಿಂತನೆ ಮಾಡಿಕೊಂಡಿದೆ. ಜೊತೆಗೆ 11 ಜಿಲ್ಲೆಗಳಿಗೆ ವಿಧಿಸಿರುವ ನಿರ್ಬಂಧ ಮುಂದುವರೆಸಬೇಕಾ ಬೇಡ್ವಾ ಎಂಬುದರ ಬಗ್ಗೆ ಚರ್ಚೆಯಾಗಲಿದೆ.
11 ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಕಡಿಮೆಯಾದ್ರೂ ಪಾಸಿಟಿವಿಟಿ ರೇಟ್ 5 ಕ್ಕಿಂತ ಇನ್ನೂ ಕಡಿಮೆಯಾಗಿಲ್ಲ. ಹೀಗಾಗಿ ಈಗಿರುವ ನಿಯಮಗಳನ್ನು ಮುಂದುವರಿಸ ಬೇಕಾ? ಎಂಬುದರ ಬಗ್ಗೆ ಚರ್ಚೆಯಾಗಲಿದೆ. ಎರಡನೇ ಹಂತದ ಅನ್ ಲಾಕ್ ನಲ್ಲಿ ಯಾವುದೆಲ್ಲ ಸೆಕ್ಟರ್ ಗಳಿಗೆ ವಿನಾಯ್ತಿ ನೀಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುತ್ತಿದೆ.
ಸದ್ಯ ಎರಡು ಗಂಟೆಯತನಕ ವಿರುವ ವಿನಾಯಿತಿ ಸಮಯವನ್ನ ಸಂಜೆತನಕವೂ ವಿಸ್ತರಿಸುವ ಸಾಧ್ಯತೆ ಇದೆ. ಒಂದು ವೇಳೆ ಶನಿವಾರ ಯಾವುದೇ ತೀರ್ಮಾನ ಕೈಗೊಳ್ಳದಿದ್ದಲ್ಲಿ.. ಸೋಮವಾರ ನಡೆಯುವ ಸಚಿವ ಸಂಪುಟದಲ್ಲಿ ಅನ್ ಲಾಕ್ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ