ಆಸ್ಪತ್ರೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ ನಾರಾಯಣ ಮೂರ್ತಿ!

Published : Apr 26, 2024, 04:45 PM ISTUpdated : Apr 26, 2024, 04:51 PM IST
ಆಸ್ಪತ್ರೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ ನಾರಾಯಣ ಮೂರ್ತಿ!

ಸಾರಾಂಶ

ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ.

ಬೆಂಗಳೂರು(ಏ.26) ಕರ್ನಾಟಕ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನಡೆಯಲಿದೆ. ಈ ಪೈಕಿ ಮೊದಲ ಹಂತದ ಚುನಾವಣೆ ಅಂತಿಮ ಘಟ್ಟದಲ್ಲಿದೆ. ಕೆಲವೇ ಗಂಟೆಗಳಲ್ಲಿ ಮತದಾನ ಅಂತ್ಯವಾಗಲಿದೆ. ಬಿರುಬಿಸಿನಲ್ಲಿ ಜನರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಪೈಕಿ ಬೆಂಗಳೂರು ಕ್ಷೇತ್ರಗಳಲ್ಲಿ ಇದುವರೆಗೆ ದಾಖಲಾಗಿರುವ ಅಂಕಿ ಅಂಶ ಪ್ರಕಾರ ಕಡಿಮೆ ಪ್ರಮಾಣದ ಮತದಾನವಾಗಿದೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಜನರಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಪತ್ನಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಮಾದರಿಯಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದ ನಾರಾಯಣಮೂರ್ತಿ ಡಿಸ್‌ಚಾರ್ಜ್ ಆಗಿ ನೇರವಾಗಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸುಧಾ ಮೂರ್ತಿ ಜೊತೆಗೆ ಆಗಮಿಸಿದ ನಾರಾಯಣ ಮೂರ್ತಿ ಹಕ್ಕುಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ನಾರಾಯಣ ಮೂರ್ತಿ ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದರು. ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ಆದರೆ ಇಂದೇ ಡಿಸ್‌ಚಾರ್ಜ್ ಆಗಿ ನೇರವಾಗಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಆಸ್ಪತ್ರೆಯಿಂದ ಮತಗಟ್ಟೆಗೆ ಆಗಮಿಸಿದ್ದಾರೆ. ಇಲ್ಲಿಂದ ಮನೆಗೆ ಕರೆದುಕೊಂಡು ಹೋಗಬೇಕು. ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎಂದು ಸುಧಾಮೂರ್ತಿ ಹೇಳಿದ್ದಾರೆ.

ಕರ್ನಾಟಕ ಲೋಕಸಭಾ ಚುನಾವಣೆ 2024, ದಕ್ಷಿಣ ಕನ್ನಡದಲ್ಲಿ ಗರಿಷ್ಠ, ಎಲ್ಲಿ ಕನಿಷ್ಠ ಮತದಾನ?

ಮತದಾನ ಶ್ರೇಷ್ಠ ದಾನ. ಮನೆಯಲ್ಲಿ ಕುಳಿತು ಮಾತನಾಡುತ್ತಾ ಸಮಯ ಕಳೆಯು ಬದಲು ಹೊರಬನ್ನಿ ನಿಮ್ಮ ಹಕ್ಕು ಚಲಾಯಿಸಿ ಎಂದು ಸುಧಾ ಮೂರ್ತಿ ಹೇಳಿದ್ದಾರೆ. ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಾವು ಹಿರಿಯ ನಾಗರೀಕರು. ಆದರೆ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದೇವೆ. ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಅನಾರೋಗ್ಯದ ನಡುವೆ ಮಾಧ್ಯಮದ ಜೊತೆ ಮಾತನಾಡಿದ ನಾರಾಯಣಮೂರ್ತಿ, ಪ್ರತಿ 5 ವರ್ಷಕ್ಕೊಮ್ಮೆ ನಮಗೆ ಮತದಾನದ ಹಕ್ಕು ಸಿಗಲಿದೆ.ಯೋಚಿಸಿ, ಸೂಕ್ತ ವ್ಯಕ್ತಿಗೆ ಮತದಾನ ಮಾಡಿ. ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟ್ಗೆ ಆಗಮಿಸಿ ಮತದಾನ ಮಾಡಿ ಎಂದು ನಾರಾಯಣಮೂರ್ತಿ ಮನವಿ ಮಾಡಿದ್ದಾರೆ. 

 

 

ರಾಜ್ಯದಲ್ಲಿ ಮೊದಲ ಹಂತದಲ್ಲಿ ಉಡುಪಿ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮೀಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಕುಮಾರಸ್ವಾಮಿ, ಪಜ್ವಲ್ ಸೋಲಿಸಲು ಕಾಂಗ್ರೆಸ್‌ ಕಾರ್ಡ್ ಹಂಚಿದೆ : ದೇವೇಗೌಡ ಗಂಭೀರ ಆರೋಪ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌