
ದಾವಣಗೆರೆ (ಅ.14): ಮದ್ಯದಂಗಡಿ ಪರವಾನಿಗೆ ನೀಡಲು ಲಂಚ ಪಡೆಯುತ್ತಿದ್ದ ವೇಳೆ ದಾವಣಗೆರೆ ಅಬಕಾರಿ ಡಿಸಿ ಸ್ವಪ್ನಾ, ಎಸ್ಪಿ ಸೇರಿ ಅಬಕಾರಿ ಇನ್ಸಪೆಕ್ಟರ್ ಶೀಲಾ, ಎಫ್ಡಿಎ ಶೈಲಾ ಮೂವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಸಿಎಲ್ 7 ಲೈಸನ್ಸ್ ಮಾಡಿಕೊಡಲು 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು. ಹರಿಹರ ಅಮರಾವತಿಯ ಕಾಲೋನಿಯ ಡಿಜಿಆರ್ ಅಮ್ಯೂಸ್ ಮೆಂಟ್ ಪಾರ್ಕ್ ಮಾಲೀಕ ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರು. ಅದರಂತೆ ಲಂಚ ಪಡೆಯುವಾಗ ರೆಡ್ಹ್ಯಾಂಡ್ಆಗಿ ಸಿಕ್ಕಿಬಿದ್ದ ಅಧಿಕಾರಿಗಳು.
ಚಿಕ್ಕಮಗಳೂರು: ಆರ್ಟಿಒ ಅಟೆಂಡರ್ ಲೋಕಾಯುಕ್ತ ಬಲೆಗೆ
ಸ್ಮಶಾನದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಶಿವಮೊಗ್ಗ: ಸ್ಮಶಾನದಲ್ಲಿ ಕಾಮಗಾರಿಗೆ ಹಣ ಬಿಡುಗಡೆಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ, ರಿಪೋರ್ಟ್ ಕೊಡಲು ₹15 ಸಾವಿರ ಹಣಕ್ಕೆ ಗೋಪಿನಾಥ್ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ ದೂರು ದಾಖಲಾಗಿತ್ತು. ಸ್ಮಶಾನದಲ್ಲಿ ₹15 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ. ದೂರಿನ ಅನ್ವಯ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಗೋಪಿನಾಥ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ