Karnataka Lokayukta Raid: ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ನಡುಕ! ಲಕ್ಷ ಲಕ್ಷ ನಗದು, ಚಿನ್ನಾಭರಣ ಪತ್ತೆ!

Published : Jun 24, 2025, 10:11 AM ISTUpdated : Jun 24, 2025, 10:43 AM IST
Lokayukta raid

ಸಾರಾಂಶ

ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಹಲವಾರು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಗಳು ಭ್ರಷ್ಟಾಚಾರದ ಆರೋಪಗಳ ತನಿಖೆಯ ಭಾಗವಾಗಿದ್ದು, ಸರ್ಕಾರಿ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ.

ಬೆಂಗಳೂರು (ಜೂ.24) ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. 

ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ಸಂಶೋಧನಾ ನಿರ್ದೇಶಕ ಡಾ. ಎಸ್. ಪ್ರದೀಪ್, ಚಿಕ್ಕಮಗಳೂರು ನಗರಸಭೆಯ ಖಾತೆ ಅಧಿಕಾರಿ ಲತಾಮಣಿ, ಆನೇಕಲ್ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಜಿ. ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡದ ಮಲಪ್ರಭಾ ಯೋಜನೆಯ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಭಾಗದ ಮಾಜಿ ಇಂಜಿನಿಯರ್ ಮಲ್ಲಿಕಾರ್ಜುನ ಅಲಿಪುರ, ಹಾಗೂ ಸಣ್ಣೂರು ಗ್ರಾಮ ಪಂಚಾಯಿತಿಯ ಪಿಡಿಒ ರಾಮಚಂದ್ರ ಅವರ ನಿವಾಸಗಳ ಮೇಲೆ ದಾಳಿ ನಡೆದಿದೆ. ಈ ದಾಳಿಗಳ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿಯ ಸಹಾಯಕ ಇಂಜಿನಿಯರ್ ಪ್ರಕಾಶ್ ಅವರ ಮೇಲೂ ದಾಳಿ ನಡೆದಿದ್ದು, ರಾಜ್ಯದ ರಾಜಧಾನಿಯಲ್ಲಿಯೂ ಲೋಕಾಯುಕ್ತದ ಕಾರ್ಯಾಚರಣೆ ಗಮನ ಸೆಳೆದಿದೆ.

ಗದಗದಲ್ಲಿ ಲೋಕಾಯುಕ್ತದಿಂದ ಭರ್ಜರಿ ಕಾರ್ಯಾಚರಣೆ: ಗದಗ ಶಹರ ಠಾಣೆಯ ಸಿಪಿಐ ಡಿಬಿ ಪಾಟೀಲ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ತೀವ್ರ ಆಘಾತ ನೀಡಿದ್ದಾರೆ. ಪಾಟೀಲ್ ಅವರ ಗದಗದ ಶಿವಾನಂದ ನಗರದ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಇದರ ಜೊತೆಗೆ, ಅವರ ಬಾಗಲಕೋಟೆ ಮತ್ತು ಮಖಂಡಿಯಲ್ಲಿರುವ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಅಲ್ಲದೆ, ಕೆರೂರಿನಲ್ಲಿರುವ ಅವರ ಮತ್ತೊಂದು ನಿವಾಸದ ಮೇಲೂ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಈ ಕಾರ್ಯಾಚರಣೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ಭ್ರಷ್ಟಾಚಾರದ ಆರೋಪಗಳ ಮೇಲೆ ನಡೆಯುತ್ತಿರುವ ತನಿಖೆಯ ಭಾಗವಾಗಿದ್ದು, ಲೋಕಾಯುಕ್ತದ ಈ ಕ್ರಮಗಳು ಸರ್ಕಾರಿ ಅಧಿಕಾರಿಗಳಲ್ಲಿ ನುಡುಕು ಹುಟ್ಟಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!