
ಬೆಂಗಳೂರು (ಜ.09): ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದರಲ್ಲಿ ಸುವರ್ಣ ನ್ಯೂಸ್ ಆನೇಕಲ್ ವರದಿಗಾರರಾದ ಮಂಜುನಾಥ್ ಟಿ. ಹಾಗೂ ಕನ್ನಡ ಪ್ರಭ ಪತ್ರಿಕೆ ತರೀಕೆರೆ ವರದಿಗಾರ ಅನಂತ ನಾಡಿಗ್ ಸೇರಿದಂತೆ 30 ಜನರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜನವರಿ 8, 2026 ರಂದು ನಡೆದ ಅಕಾಡೆಮಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆಯನ್ನು ಸರ್ವಾನುಮತದಿಂದ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕೋದ್ಯಮದಲ್ಲಿನ ಸುದೀರ್ಘ ಸೇವೆಯನ್ನು ಪರಿಗಣಿಸಿ ಹಿರಿಯ ಪತ್ರಕರ್ತೆ ಶ್ರೀಮತಿ ಸರಿತಾ ರೈ ಅವರಿಗೆ 2025ನೇ ಸಾಲಿನ 'ವಿಶೇಷ ಪ್ರಶಸ್ತಿ'ಯನ್ನು ಘೋಷಿಸಲಾಗಿದೆ. ಈ ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 30 ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಗೌರವವು ತಲಾ 50,000 ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಾಗಿ ದತ್ತಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅದರ ವಿವರ ಇಂತಿದೆ:
ಆಂದೋಲನ ದತ್ತಿ ಪ್ರಶಸ್ತಿ: ಸುವರ್ಣ ಗಿರಿ ಪತ್ರಿಕೆ, ಕೊಪ್ಪಳ.
ಅಭಿಮಾನಿ ದತ್ತಿ ಪ್ರಶಸ್ತಿ: ಶಿವು ಹುಣಸೂರು (ವಿಜಯವಾಣಿ).
ಮೈಸೂರು ದಿಗಂತ ದತ್ತಿ ಪ್ರಶಸ್ತಿ: ಸಂತೋಷ ಈ. ಚಿನಗುಡಿ (ಪ್ರಜಾವಾಣಿ).
ಅಭಿಮನ್ಯ ದತ್ತಿ ಪ್ರಶಸ್ತಿ: ಚಂದ್ರಶೇಖರ ಬೆನ್ನೂರು (ವಿಜಯ ಕರ್ನಾಟಕ).
ಪ್ರಜಾ ಸಂದೇಶ ದತ್ತಿ ಪ್ರಶಸ್ತಿ: ನಾಗರಾಜು ವೈ. ಕೊಪ್ಪಳ (ಟಿವಿ-5 ವರದಿಗಾರ)
ಡಾ. ಬಿ.ಆರ್. ಅಂಬೇಡ್ಕರ್ ಮೂಕನಾಯಕ ದತ್ತಿ ಪ್ರಶಸ್ತಿ: ಡಾ. ಎ. ನಾರಾಯಣ.
ಅರಗಿಣಿ ದತ್ತಿ ಪ್ರಶಸ್ತಿ: ಚೇತನ್ ನಾಡಿಗೇರ.
ಸಿ.ವಿ. ರಾಜಗೋಪಾಲ್ ದತ್ತಿ ಪ್ರಶಸ್ತಿ: ಪ್ರಹ್ಲಾದ್ ಕುಳಲಿ.
ಕೆ.ಯು.ಡಬ್ಲ್ಯು.ಜೆ. ದತ್ತಿ ಪ್ರಶಸ್ತಿ: ಕೆ.ಆನಂದ ಶೆಟ್ಟಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ