
ಬೆಂಗಳೂರು, (ಜುಲೈ.08): ಕರ್ನಾಟಕದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಹ ಹಗಲು ರಾತ್ರಿ ಎನ್ನದೇ ಕಾರ್ಯನಿರ್ವಹಿಸುತ್ತಿದ್ದಾರೆ.
ಕೆಲಸ ವೇಳೆ ವೈದ್ಯರಿಗೂ ಸಹ ಕೊರೋನಾ ಸೋಂಕು ತಗುಲಿತ್ತಿದೆ. ಇದರಿಂದ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಆರ್ಎಂಪಿ ವೈದ್ಯರು ಕೈ ಜೋಡಿಸುವಂತೆ ಮನವಿ ಮಾಡಿದೆ.
ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ
ಈಗ ಜಗತ್ತು ಅಭೂತಪೂರ್ವ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿದೆ. ನಮ್ಮ ರಾಜ್ಯವು ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ಸಮಯದಲ್ಲಿ ನಿಮ್ಮ ಸೇವೆಗಳು ತುರ್ತಾಗಿ ಅಗತ್ಯವಿದೆ.
ಇದನ್ನು ಸಾಂಕ್ರಾಮಿಕ ರೋಗವೆಂದು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿದೆ. ಈ ಕಾರಣಕ್ಕೆ ಆರ್ಎಂಪಿಗಳು ತಮ್ಮ ಸೇವೆಯನ್ನು ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಸಲ್ಲಿಸಲು ಕೋರಿದೆ. ಮತ್ತು ರಾಜ್ಯದ ವಿವಿಧ ಸ್ಥಳಗಳಲ್ಲಿ ನಿಮ್ಮ ಸೇವೆ ಅಗತ್ಯವಿರುವಲ್ಲೆಲ್ಲಾ ಕಡೆ ಸೇವೆ ಅವಶ್ಯವಿದ್ದು, ನಿಮ್ಮಲ್ಲಿ ಸ್ವಯಂಪ್ರೇರಣೆಯಿಂದ ಸೇವೆ ಸಲ್ಲಿಸಲು ಸಿದ್ಧರಿರುವವರು, ಈ rguhscovid 19 vol@gmail.com ಲಿಂಕ್ಗೆ ನಿಮ್ಮ ಹೆಸರನ್ನು ನೀಡಿ ಎಂದು ಕರ್ನಾಟಕ ಮೆಡಿಕಲ್ ಕೌನ್ಸಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ