ಸಿಬಿಐ, ಐಟಿ, ಇಡಿ ಕತ್ತೆ ಕಾಯ್ತಿದವಾ? ಕರ್ನಾಟಕದಿಂದ ಬ್ಲಾಕ್ ಮನಿ ಹೋಗ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಖರ್ಗೆ ಕಿಡಿ 

Published : Apr 15, 2024, 11:50 AM IST
ಸಿಬಿಐ, ಐಟಿ, ಇಡಿ ಕತ್ತೆ ಕಾಯ್ತಿದವಾ? ಕರ್ನಾಟಕದಿಂದ ಬ್ಲಾಕ್ ಮನಿ ಹೋಗ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಖರ್ಗೆ ಕಿಡಿ 

ಸಾರಾಂಶ

ಕರ್ನಾಟಕದಿಂದ ಬ್ಲಾಕ್ ಮನಿ ಹೋಗ್ತಿದ್ರೆ ಸಿಬಿಐ, ಐಟಿ, ಇಡಿ ಏನು ಕತ್ತೆ ಕಾಯ್ತಿದೆಯಾ? ಯಾಕೆ ತಡೆಯೋಕೆ ಆಗ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಕಲಬುರಗಿ (ಏ.15): ಕರ್ನಾಟಕದಿಂದ ಬ್ಲಾಕ್ ಮನಿ ಹೋಗ್ತಿದ್ರೆ ಸಿಬಿಐ, ಐಟಿ, ಇಡಿ ಏನು ಕತ್ತೆ ಕಾಯ್ತಿದೆಯಾ? ಯಾಕೆ ತಡೆಯೋಕೆ ಆಗ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಕರ್ನಾಟಕ, ಕಾಂಗ್ರೆಸ್‌ಗೆ ಎಟಿಎಂ ಆಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಪ್ರಿಯಾಂಕ್‌ ಖರ್ಗೆ, ಕರ್ನಾಟಕದಿಂದ ಬ್ಲಾಕ್ ಮನಿ ಹೋಗ್ತಿದೆ ಅಂತಾ ಆರೋಪ ಮಾಡ್ತೀರಿ ಗೃಹಮಂತ್ರಿ ಅಮಿತ್ ಶಾ ಏನು ಮಾಡ್ತಿದ್ದಾರೆ? ಚುನಾವಣಾ ಆಯೋಗ ಏನಪ್ಪಾ ಮಾಡ್ತಿದೆ ಇವರೆಲ್ಲ ಬಿಡಿ ಮೋದಿಯವರೇ ನೀವು ಪ್ರಧಾನಿಯಾಗಿ ಏನು ಮಾಡ್ತಿದ್ದೀರಿ? ರಾಜ್ಯದಿಂದ ಬ್ಲಾಕ್ ಮನಿ ಹೋಗ್ತಿದ್ರೆ ತಡೆಯಬಹುದಲ್ಲ? ಎಂದು ಪ್ರಶ್ನಿಸಿದರು.

ಈ ಚುನಾವಣೇಲಿ 2047ರವರೆಗಿನ ಭವಿಷ್ಯ: ಮೋದಿ

ಬಿಜೆಪಿಯವರಿಗೆ ಈ ಬಗ್ಗೆ ಖಚಿತ ಮಾಹಿತಿ ಇದ್ರೆ ದೂರು ಕೊಡಲಿ. ಯಾಕೆ ಕೊಡ್ತಿಲ್ಲ? ಮೋದಿ ಒಬ್ಬ ಪ್ರಧಾನಿಯಾಗಿ  ಗಾಳಿಯಲ್ಲಿ ಗುಂಡು ಹಾರಿಸುವುದು ಬಿಟ್ಟು ನಿರ್ದಿಷ್ಟ ಕ್ರಮ ಕೈಗೊಳ್ಳಲಿ. ವಿಜಯೇಂದ್ರ, ಅಶೋಕಣ್ಣ ಈ ರೀತಿ ಹೇಳಿದ್ರೆ ಪರವಾ ಇಲ್ಲ, ಅವರಿಗೆ ಮಾಹಿತಿ ಇಲ್ಲ ಅಂದುಕೊಳ್ತಿವಿ. ಆದರೆ ಪ್ರಧಾನಿಯಾಗಿ ಈ ರೀತಿ ಹೇಳಿರೋದು ಸರಿಯಲ್ಲ. ರಾಜ್ಯದಿಂದ ಬ್ಲಾಕ್ ಮನಿ ಹೋಗಿದ್ರೆ ಅದರ ಬಗ್ಗೆ ಸಾಕ್ಷ್ಯ ಸಮೇತ ದಾಖಲೆ ಬಿಡುಗಡೆ ಮಾಡಲಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ಮುಂದಿನ 7 ದಿನ ಗುಡುಗು ಸಹಿತ ಮಳೆ ಅಬ್ಬರ: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ 'ಭಾರಿ ಮಳೆ' ಮುನ್ಸೂಚನೆ!
Yapaladinni minor girl kidnapping: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಅಪಹರಣ, ತಡೆಯಲು ಬಂದವನ ಭೀಕರ ಹ*ತ್ಯೆ!