ಮಾಡಲು ಕೆಲಸ ಇಲ್ಲದ್ದಕ್ಕೆ ಮೈಸೂರಿಗೆ ಪಾದಯಾತ್ರೆ: ಬಿಜೆಪಿ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

Published : Jul 27, 2024, 02:40 PM ISTUpdated : Jul 29, 2024, 01:37 PM IST
ಮಾಡಲು ಕೆಲಸ ಇಲ್ಲದ್ದಕ್ಕೆ ಮೈಸೂರಿಗೆ ಪಾದಯಾತ್ರೆ: ಬಿಜೆಪಿ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಸಾರಾಂಶ

ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದೆ. ನೀರಾವರಿ, ಮೂಲಸೌಕರ್ಯ ಯೋಜನೆಗೂ ಹಣ ನೀಡಿಲ್ಲ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ವಾಗ್ದಾಳಿ ನಡೆಸಿದರು.

ಚಿತ್ರದುರ್ಗ (ಜು.27): ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದೆ. ನೀರಾವರಿ, ಮೂಲಸೌಕರ್ಯ ಯೋಜನೆಗೂ ಹಣ ನೀಡಿಲ್ಲ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ವಾಗ್ದಾಳಿ ನಡೆಸಿದರು.

ಇಂದು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಕೇಂದ್ರದ ಇಂತಹ ಮಲತಾಯಿ ಧೋರಣೆಗೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸುಳ್ಳು ಪ್ರಚಾರ ಮಾಡಿಕೊಂಡು ಬಂದಿದೆ. ಹತ್ತು ವರ್ಷಹಳಿಂದ ಬಿಜೆಪಿಯಿಂದ ಸುಳ್ಳು ಹೇಳಿಯೇ ಅಧಿಕಾರ ನಡೆಸಿದೆ. ಜನರನ್ನು ಮರುಳು ಮಾಡಿ ಮೂರನೇ ಬಾರಿಗೆ ಅಧಿಕಾರಕ್ಕೂ ಬಂದಿದೆ. ಮಾಡಲು ಕೆಲಸ ಇಲ್ಲದ್ದಕ್ಕೆ ಬಿಜೆಪಿಯಿಂದ ಮೈಸೂರು ಪಾದಾಯತ್ರೆ ಮಾಡುತ್ತಿದ್ದಾರೆ ಮುಡಾ ಹಗರಣ(MUDA Scam), ವಾಲ್ಮೀಕಿ ಹಗರಣ(Valmiki corporation scam) ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಹೀಗಿರುವಾಗ ಯಾವ ಕಾರಣಕ್ಕೆ ಬಿಜೆಪಿ(Karnataka BJP)ಯವರು ಪ್ರತಿಭಟನೆ ಮಾಡಬೇಕು? ಎಂದು ಪ್ರಶ್ನಿಸಿದರು.

ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ: ಮಾಜಿ ಸಂಸದ ಉಗ್ರಪ್ಪ ವಾಗ್ದಾಳಿ

ಇನ್ನು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಪಟ್ಟುಹಿಡಿದಿದ್ದಾರೆ. ಕೆಲ ರಾಜ್ಯಗಳಲ್ಲೂ ಪ್ರಧಾನಿ ಮೋದಿ ರಾಜೀನಾಮೆ ನೀಡುವಂತೆ ಕೇಳಲಾಗಿದೆ. ಸಾವಿರಾರು ಜನ ರೈತರು ಸಾವಿಗೀಡಾಗಿದ್ದಾರೆ ಹಾಗಾದರೆ ಪ್ರಧಾನಿ ರಾಜೀನಾಮೆ ಕೊಟ್ಟಿದ್ದಾರಾ? ಎಂದು ತಿರುಗೇಟು ನೀಡಿದರು. ಇದೇ ವೇಳೆ ರಾಮನಗರ ಹೆಸರು ಬದಲಾವಣೆ ವಿಚಾರ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ.2028ಕ್ಕೆ ಮತ್ತೆ ರಾಮನಗರ ಎಂದೇ ಮರುನಾಮಕರಣ ಮಾಡುತ್ತೇವೆ ಎಂದು ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೊದಲು ಅವರು ಅಧಿಕಾರಕ್ಕೆ ಬರಲಿ ಎಂದರು.

ಶಾಲೆಗೆ ಬರುವಾಗ ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು!

ಗೃಹಲಕ್ಷ್ಮೀ ಯೋಜನೆ ಸೇರಿ ಯಾವ ಯೋಜನೆಯೂ ನಿಂತಿಲ್ಲ. ಹಣ ಡೆಬಿಟ್ ಆಗಬೇಕು, ಕೆಲವೊಮ್ಮೆ ಹೆಚ್ಚು ಕಡಿಮೆ ಆಗುತ್ತದೆ ಎಂದರು. ಇದೇ ವೇಳೆ ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!