ಮುಡಾ ನಿವೇಶನ ಹಂಚಿಕೆ ಪ್ರಕರಣ: ಲೋಕಾಯುಕ್ತ ಪೊಲೀಸರು ನನ್ನ ವಿಚಾರಣೆಗೆ ಕರೆದಿದ್ದು ನಿಜ: ಸಂಸದ ಜಿ ಕುಮಾರ್ ನಾಯಕ

Published : Oct 24, 2024, 01:40 PM IST
ಮುಡಾ ನಿವೇಶನ ಹಂಚಿಕೆ ಪ್ರಕರಣ: ಲೋಕಾಯುಕ್ತ ಪೊಲೀಸರು ನನ್ನ ವಿಚಾರಣೆಗೆ ಕರೆದಿದ್ದು ನಿಜ: ಸಂಸದ ಜಿ ಕುಮಾರ್ ನಾಯಕ

ಸಾರಾಂಶ

ಮುಡಾ ನಿವೇಶನ ಹಂಚಿಕೆ ವಿಚಾರ ಸಂಬಂಧ ನನಗೆ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಕರೆದಿದ್ರು. ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು ನಿಜ ಎಂದು ರಾಯಚೂರು ಸಂಸದ ಜಿ. ಕುಮಾರ್ ನಾಯಕ ತಿಳಿಸಿದರು.

 

ರಾಯಚೂರು (ಅ.24): ಮುಡಾ ನಿವೇಶನ ಹಂಚಿಕೆ ವಿಚಾರ ಸಂಬಂಧ ನನಗೆ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಕರೆದಿದ್ರು. ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು ನಿಜ ಎಂದು ರಾಯಚೂರು ಸಂಸದ ಜಿ. ಕುಮಾರ್ ನಾಯಕ ತಿಳಿಸಿದರು.

ಮುಡಾ ನಿವೇಶನ ಹಂಚಿಕೆ ವಿಚಾರ ಸಂಬಂಧ ಇಂದು ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಂಸದರು, ನಾನು 2002ರಿಂದ 2005 ಮೂರು ವರ್ಷಗಳ ಕಾಲ ಮೈಸೂರು ಜಿಲ್ಲಾಧಿಕಾರಿಯಾಗಿ ಸೇವೆ ಮಾಡಿದ್ದೇನೆ. 2005ರ ಕೊನೆಯಲ್ಲಿ ಭೂಮಿ ಪರಿವರ್ತನೆ ಆಗಿದೆ. ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ತಪ್ಪು ಮಾಡಿದ್ದಾರೆಂದು ಬಿಂಬಿಸುವಂತೆ ದೂರು ಕೊಡಲಾಗಿದೆ.  ಆದರೆ ದೂರು ಕೊಟ್ಟವರಿಗೆ ಕಾನೂನಿನ ಎಲ್ಲ ಆಯಾಮದ ಅರಿವು ಇದೆಯೋ ಇಲ್ವೊ ನನಗೆ ಗೊತ್ತಿಲ್ಲ. ವಿಚಾರಣೆ ವೇಳೆ ಎಲ್ಲ ಸವಿಸ್ತಾರವಾಗಿ ತಿಳಿಸಿದ್ದೇನೆ  ಎಂದರು.

'ನೀವೇಷ್ಟೇ ಸತ್ಯಹರಿಶ್ಚಂದ್ರ ಎಂದು ಹೇಳಿಕೊಂಡ್ರೂ ಜನ ನಂಬಲು ದಡ್ಡರಲ್ಲ': ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್ ವಿಶ್ವನಾಥ್ ವಾಗ್ದಾಳಿ

ಭೂ ಪರಿವರ್ತನೆಯಲ್ಲಿ ಯಾವುದೇ ತಪ್ಪು ಆಗಿಲ್ಲ. 1997-98ರಲ್ಲಿ ಆ ಭೂಮಿ ಸ್ವಾಧೀನವಾಗಿರುತ್ತದೆ. ಆ ಬಳಿಕ ಹಂತವಾಗಿ ಭೂಮಿ ನೋಟಿಫಿಕೇಷನ್ ಆಗುತ್ತೆ. ಅನಂತರ ಭೂಮಿ ಕಳೆದುಕೊಂಡವರಿಗೆ ಅವಾರ್ಡ್ ಕೂಡ ಘೋಷಣೆ ಆಗುತ್ತೆ. ಭೂಮಿ ನೀಡುವವರು ಭೂಮಿ ವಾಪಸ್ ಪಡೆಯಲು 45 ದಿನಗಳ ಒಳಗಾಗಿ ಮನವಿ ಸಲ್ಲಿಕೆ ಮಾಡಿ ಡಿನೋಟಿಫಿಕೇಷನ್ ಮಾಡಿಸಿಕೊಳ್ಳತಾರೆ. ಆಗ ಭೂ ಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕೈಬಿಡಲಾಗುತ್ತದೆ. ಆದರೆ ಭೂಮಿ ಪರಿವರ್ತನೆ ವೇಳೆ ನಮ್ಮ ‌ಮೇಲೆ ಯಾವುದೇ ಒತ್ತಡ ಇರಲಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!