ಸಂವಿಧಾನ, ಕಾನೂನಿಗೆ ತಲೆಬಾಗಿದ ಮುಸ್ಲಿಂ ಸಮುದಾಯ: ಇನ್ಮುಂದೆ ಕೇಳಿಸಲ್ಲ ಆಜಾನ್ ಕೂಗು

Published : May 14, 2022, 10:07 PM ISTUpdated : May 14, 2022, 11:48 PM IST
ಸಂವಿಧಾನ, ಕಾನೂನಿಗೆ ತಲೆಬಾಗಿದ ಮುಸ್ಲಿಂ ಸಮುದಾಯ: ಇನ್ಮುಂದೆ ಕೇಳಿಸಲ್ಲ ಆಜಾನ್ ಕೂಗು

ಸಾರಾಂಶ

* ಸಂವಿಧಾನ, ಕಾನೂನಿಗೆ ತಲೆಬಾಗಿದ ಮುಸ್ಲಿಂ ಸಮುದಾಯ * ಇನ್ಮುಂದೆ ನಿಮಗೆ ಕೇಳಿಸಲ್ಲ ಆಜಾನ್ ಕೂಗು  * ಆಜಾನ್ ಕೂಗಿನ ವಿಚಾರ ಕೊನೆಗೂ ಒಂದು ತಾರ್ಕಿಕ ಅಂತ್ಯ

ವರದಿ: ವಿಕ್ರಮ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್ ಬೆಂಗಳೂರು 

ಬೆಂಗಳೂರು, (ಮೇ.14): ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿದ್ದ ಆಜಾನ್ ಕೂಗಿನ ವಿಚಾರ ಕೊನೆಗೂ ಒಂದು ತಾರ್ಕಿಕ ಅಂತ್ಯ ತಲುಪಿದೆ. ಕೋರ್ಟ್ ಹಾಗೂ ಸರ್ಕಾರದ ಆದೇಶದನ್ವಯ ಇನ್ಮುಂದೆ ಮೈಕ್ ನಲ್ಲಿ ಬೆಳಗಿನಜಾವ ಅಜಾನ್ ಕೂಗದಿರಲು ಮುಸ್ಲಿಂ ಸಂಘಟನೆ ನಿರ್ಧರಿಸಿದೆ.

ಸರ್ಕಾರದ ನಿರ್ಧಾರಕ್ಕೆ ತಲೆಬಾಗಿರುವ ಮುಸ್ಲಿಂ ಸಂಘಟನೆಗಳು ನಿನ್ನೆ ರಾತ್ರಿ ಶರೀಯತ್ ಎ ಹಿಂದ್ ಎಂಬ ಸಂಘಟನೆಯ ಕಚೇರಿಯಲ್ಲಿ ಮುಸ್ಲಿಂ ಮುಖಂಡರು ಸಭೆ ಸೇರಿದ್ದು, ಸಭೆಯಲ್ಲಿ  ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ನಿರ್ಧಾರದ ಅನ್ವಯ ಸರ್ಕಾರದ ಆದೇಶದಂತೆ ಡೆಸಿಬಲ್ ಕಂಟ್ರೋಲ್ ಮಾಡಿಕೊಳ್ಳುವಂತೆ ಮತ್ತು ಬೆಳಗ್ಗೆ ಐದು ಗಂಟೆಗೆ ಕೂಗುವ ಆಜಾನ್ ಅನ್ನು ಮೈಕ್ ಮೂಲಕ ಕೂಗದೇ ಇರಲು ನಿರ್ಧಾರ ಮಾಡಲಾಗಿದೆ. 

ಧರ್ಮ ದಂಗಲ್‌ಗೆ ಬ್ರೇಕ್: ಮಸೀದಿಗಳಲ್ಲಿ ಬೆಳಗ್ಗೆ ಆಜಾನ್ ಕೂಗದಿರಲು ನಿರ್ಧಾರ

ಇನ್ನು ಈ ಬಗ್ಗೆ ಸಭೆಯಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಮುಖಂಡ ಉಮರ್ ಶರೀಫ್ ಮಾತನಾಡಿದ್ದು, ಇನ್ನು ಮುಂದೆ ಬೆಳಗಿನ ಜಾವ ಮೈಕ್ ಮೂಲಕ ಅಜಾನ್ ಕೂಗದಂತೆ ನಾವು ನಿರ್ಧಾರ ಕೈಗೊಂಡಿದ್ದೇವೆ. ಸರ್ಕಾರ, ಕೋರ್ಟ್ ಆದೇಶವನ್ನ ಪಾಲನೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿದ್ದೇವೆ. ಇದೊಂದು ಇತಿಹಾಸಿಕ ನಿರ್ಧಾರವನ್ನ ನಮ್ಮ ಮುಸ್ಲಿಂ ಸಮುದಾಯ ತೆಗೆದುಕೊಂಡಿದೆ.‌

 ಮುಸ್ಲಿಮರು ಕಾನೂನಿಗೆ ಬೆಲೆ ಕೊಡ್ತಿಲ್ಲ ಅಂತ ಎಲ್ಲಾ ಕಡೆ ಹಬ್ಬಿತ್ತು, ಆದ್ರೆ ಇದೀಗ ಇವೆಲ್ಲ ಸುಳ್ಳಾಗಿದೆ.‌ ನಾವು ಕೂಡ ಕಾನೂನನ್ನ ಪಾಲನೆ ಮಾಡ್ತೇವೆ ಅಂತ ತೋರಿಸಿಕೊಟ್ಟಿದ್ದೇವೆ.‌ ಸರ್ಕಾರದ ನಿರ್ಧಾರಕ್ಕೆ ನಾವು ಬೆಂಬಲ ನೀಡ್ತೇವೆ ಅನ್ನೋದು ಸಾಬೀತಾಗಿದೆ. ನಮ್ಮ ಈ ನಿರ್ಧಾರ ರಾಜ್ಯದ ಎಲ್ಲಾ ಭಾಗಗಳಿಗೂ ಅನ್ವಯ ಆಗುತ್ತೆ. ಈ ಬಗ್ಗೆ ಎಲ್ಲರು ಕೂಡ ಸಮ್ಮತಿ ನೀಡಿದ್ದಾರೆ ಎಂದಿದ್ದಾರೆ.

ಹಿಜಾಬ್, ಹಲಾಲ್ ಸೇರಿದಂತೆ ಒಂದರ ಹಿಂದೆ ಒಂದು ವಿವಾದ ಉದ್ಭವವಾಗಿ ಕೊನೆಗೆ ಬಂದು ನಿಂತಿದ್ದು ಅಝಾನ್ ಮೇಲೆ. ಹಿಂದೂ ಪರ ಸಂಘಟನೆಗಳು ಮುಸ್ಲಿಮರು ಕೂಗು ಅಝಾನ್ ನಿಂದ ಸಮಸ್ಯೆಯಾಗುತ್ತಿದೆ ಎಂದು ಮೈಕ್ ಮೂಲಕ ಆಜಾನ್ ಕೂಗುವುದಕ್ಕೆ ನಿಷೇಧ ಹೇರುವಂತೆ ಪಟ್ಟು ಹಿಡಿಡಿದ್ರು. ಈ ಸಂಬಂಧ ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಜಾನ್ ನಿಷೇಧಿಸದಿದ್ದರೆ ದೇವಸ್ಥಾನಗಳಲ್ಲಿ ಮಂತ್ರಾಘೋಷಾ, ಹನುಮಾನ್ ಚಾಲೀಸ ಹಾಕುವ ಸವಾಲು ಹಾಕಿದ್ದರು. 

ಮೇ 9ರ ವರೆಗೆ ಗಡುವುಕೊಟ್ಟ ಅವರು, ನಂತರ ಹಿಂದೂ ದೇವಾಲಯಗಲ್ಲಿ ವೇದಘೋಷಾ, ಭಜನೆಗಳನ್ನ ಮೊಳಗಿಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದಂತೆ ಇಂತಿಷ್ಟೇ ಡೆಸಿಬಲ್ ಶಬ್ದ ನಿಗದಿ ಮಾಡಿ ಅಝಾನ್ ಮೈಕ್ ವಿವಾದಕ್ಕೆ ಇತಿಶ್ರೀ ಹಾಡಿತ್ತು. ಇದೀಗ ಮುಸ್ಲಿಂ ಮುಖಂಡರು, ರಾಜಕೀಯ ನಾಯಕರು ಜೊತೆ ಸೇರಿ ಬೆಳಗ್ಗಿನ ಆಜಾನ್ ಕೂಗುವುದಕ್ಕೆ  ಮೈಕ್ ಬಳಸಿದಿರಲು ನಿರ್ಧಾರ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಅವಾಚ್ಯ ಪದಗಳ ನಿಂದನೆ, ಯುವಕನ ರೀಲ್ಸ್ ಹುಟ್ಟಿಸಿತು ವಿವಾದ, ವೈರಲ್ ಆದ ರೀಲ್ಸ್
US-Iran peace talks in Pakistan: ಕದನ ನಿಲ್ಲಿಸುವ ದಲ್ಲಾಳಿತನಕ್ಕೆ ಪಾಕ್‌ ಇಳಿದಿದ್ದೇಕೆ!?