ಐಸಿಯು ಸೇರಿದವರ ಸಂಖ್ಯೆ 200ರ ಗಡಿಯತ್ತ!

Published : Jun 28, 2020, 08:09 AM ISTUpdated : Jun 28, 2020, 09:22 AM IST
ಐಸಿಯು ಸೇರಿದವರ ಸಂಖ್ಯೆ 200ರ ಗಡಿಯತ್ತ!

ಸಾರಾಂಶ

ಐಸಿಯು ಸೇರಿದವರ ಸಂಖ್ಯೆ 200ರ ಗಡಿಯತ್ತ| ನಿನ್ನೆ ಒಂದೇ ದಿನ 18 ಮಂದಿ ಕೊರೋನಾಪೀಡಿತರು ಐಸಿಯುಗೆ| ಒಟ್ಟಾರೆ ಸಂಖ್ಯೆ 197ಕ್ಕೆ ಏರಿಕೆ

 ಬೆಂಗಳೂರು(ಜೂ.28): ರಾಜ್ಯದಲ್ಲಿ ಕೊರೋನಾ ಸೋಂಕು ತಗುಲಿ ಗಂಭೀರ ಅಸ್ವಸ್ಥರಾಗುತ್ತಿರುವವರ ಸಂಖ್ಯೆ ದಿನೇ ದಿನೇ ತೀವ್ರವಾಗಿ ಹೆಚ್ಚುತ್ತಿದೆ. ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾದವರ ಸಂಖ್ಯೆ 200ರ ಗಡಿಯತ್ತ ಸಮೀಪಿಸಿದೆ.

ಸೋಂಕಿನ ಮೂಲ ಪತ್ತೆ ನಿಲ್ಲಿಸಿದ ರಾಜ್ಯ ಸರ್ಕಾರ?: ಸಮುದಾಯಕ್ಕೆ ಹರಡಿರುವ ಆತಂಕ!

ಶನಿವಾರ ಒಟ್ಟು 18 ಮಂದಿ ಕೊರೋನಾ ಬಾಧಿತರು ಐಸಿಯುಗೆ ದಾಖಲಾಗಿದ್ದು, ರಾಜ್ಯದಲ್ಲಿ ಚಿಂತಾಜನಕ ಸ್ಥಿತಿ ತಲುಪಿರುವ ಸೋಂಕಿತರ ಸಂಖ್ಯೆ ಇದೀಗ 197ಕ್ಕೇರಿದೆ. ಈ ಪೈಕಿ ಬೆಂಗಳೂರಲ್ಲೇ 125 ಜನರಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಸಾವಿನ ಪ್ರಮಾಣ ಮತ್ತಷ್ಟುಹೆಚ್ಚುವ ಆತಂಕ ಸೃಷ್ಟಿಯಾಗಿದೆ.

371 ಜನ ಬಿಡುಗಡೆ:

ಇದೇ ವೇಳೆ, ಸಾಕಷ್ಟುಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ. ಶನಿವಾರ ರಾಯಚೂರಿನಲ್ಲಿ 102 ಮಂದಿ, ಬೀದರ್‌, ಬಳ್ಳಾರಿ ತಲಾ 60, ರಾಯಚೂರು 41, ಕಲಬುರಗಿ 24 ಜನ ಸೇರಿದಂತೆ 21 ಜಿಲ್ಲೆಗಳಲ್ಲಿ ಸೋಂಕಿನಿಂದ ಗುಣಮುಖರಾದ 371 ಮಂದಿಯನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಇದರಿಂದ ಒಟ್ಟು ಗುಣಮುಖರಾದವರ ಸಂಖ್ಯೆ 7,287ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಂದೇ ದಿನ 918 ಕೇಸ್‌ ಮಹಾಸ್ಫೋಟ!

4441 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರು ಅನ್ಯ ಕಾರಣಗಳಿಂದ ಮೃತಪಟ್ಟಸೋಂಕಿತರು ಸೇರಿ 195 ಮಂದಿ ಸೋಂಕಿತರು ಈವರೆಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ