ಬಾಗಲಕೋಟೆ: ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಕಿಡಿಗೇಡಿಗಳು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಹಾನಿಯ ಅಂಕಿ-ಅಂಶ ಬಹಿರಂಗಗೊಂಡಿದೆ. ಸಕ್ಕರೆ ಕಾರ್ಖಾನೆ ಆವರಣದಲ್ಲಿ ಕಬ್ಬು ತುಂಬಿಕೊಂಡು 240 ಟ್ರ್ಯಾಕ್ಟರ್ಗಳು ನಿಂತಿದ್ದವು. ಇವುಗಳ ಪೈಕಿ 96 ಟ್ರ್ಯಾಕ್ಟರ್ ಗಳ ಟ್ರೇಲರ್ನಲ್ಲಿದ್ದ ಕಬ್ಬಿಗೆ ಬೆಂಕಿ ಹಾಕಲಾಗಿದೆ. ಇದರಿಂದ 17 ಟ್ರ್ಯಾಕ್ಟರ್ಗಳಿಗೆ ಹಾನಿಯಾಗಿದೆ. 12 ಟ್ರ್ಯಾಕ್ಟರ್ಗಳ ಎಂಜಿನ್ ಭಾಗಶಃ ಹಾನಿ ಆಗಿವೆ. 1 ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಹೋಗಿದೆ. 5 ಬೈಕ್ ಸಂಪೂರ್ಣ ಭಸ್ಮ ಆಗಿವೆ. 3 ಬೈಕ್ ಭಾಗಶಃ ಜಖಂ ಆಗಿವೆ. ಡಿಆರ್ವ್ಯಾನ್, 3 ಕಾರ್ಖಾನೆಯ ಫೈರ್ಎಂಜಿನ್ ವಾಹನ ಘಟನೆಯಲ್ಲಿ ಹಾನಿಯಾಗಿದೆ. 1033 ಟನ್ ಕಟ್ಟು ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ.
12:13 AM (IST) Nov 16
baby ear care tips: ಮಕ್ಕಳ ಕಿವಿಗೆ ಎಣ್ಣೆ ಹಾಕುವುದು ಹಳೆಯ ಸಂಪ್ರದಾಯವಾದರೂ, ಅದರ ಸುರಕ್ಷತೆಯ ಬಗ್ಗೆ ಅನೇಕರಿಗೆ ಗೊಂದಲವಿದೆ. ಚಿಕ್ಕ ಮಕ್ಕಳ ಕಿವಿಗೆ ಎಣ್ಣೆ ಹಾಕುವುದು ಸೂಕ್ತವೇ, ಯಾವ ವಯಸ್ಸಿನ ಮಕ್ಕಳಿಗೆ ಇದು ಅಪಾಯಕಾರಿ ಮತ್ತು ಎಣ್ಣೆ ಬಳಸುವಾಗ ಯಾವ ಮುನ್ನೆಚ್ಚರಿಕೆ ಬಗ್ಗೆ ಲೇಖನ ವಿವರಿಸುತ್ತದೆ.
10:57 PM (IST) Nov 15
ಸ್ಯಾಂಡಲ್ವುಡ್ ನಟಿಯೊಬ್ಬರು ನಿರ್ಮಾಪಕ ಅರವಿಂದ್ ರೆಡ್ಡಿ ವಿರುದ್ಧ ಕಿರುಕುಳದ ಆರೋಪ ಮಾಡಿದ್ದು, ತಾವು ಲಿವ್-ಇನ್ ಸಂಬಂಧದಲ್ಲಿದ್ದಾಗ ಹಿಂಸೆ ನೀಡಿದ್ದಾರೆಂದು ದೂರಿದ್ದಾರೆ. ಐಸಿಯುನಲ್ಲಿದ್ದಾಗ ತನ್ನ ಬಟ್ಟೆ ಹರಿದು ಅರೆಬೆತ್ತಲೆ ಮಾಡಿದ್ದರು ಎಂದು ನಟಿ ಆರೋಪಿಸಿದ್ದಾರೆ.
10:32 PM (IST) Nov 15
ನಂಜನಗೂಡಿನಲ್ಲಿ ದರೋಡೆ ನಾಟಕವಾಡಿ ಗಂಡನ ಕೊಲೆಗೆ ಯತ್ನಿಸಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಅಂದು ತೀವ್ರವಾಗಿ ಗಾಯಗೊಂಡಿದ್ದ ಪತಿ ರಾಜೇಂದ್ರ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಸಂಗೀತಾ ಸೇರಿದಂತೆ ನಾಲ್ವರನ್ನ ಬಂಧಿಸಲಾಗಿದೆ.
10:26 PM (IST) Nov 15
ನಟಿ ಕೃಷಿ ತಾಪಂಡ ಅವರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಅವರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ, ತಾವು ಲಿವ್-ಇನ್ ಸಂಬಂಧದಲ್ಲಿದ್ದೆವು ಎಂದು ಅವರು ಆರೋಪಿಸಿದ್ದಾರೆ.
09:21 PM (IST) Nov 15
09:15 PM (IST) Nov 15
08:19 PM (IST) Nov 15
ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹನುಮಾಪುರ ಗ್ರಾಮದಲ್ಲಿ, ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಫಕ್ಕೀರವ್ವ ರಾಮಣ್ಣ ಆಲೂರು ಎಂಬ ವೃದ್ಧೆ ಮನೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಸಜೀವ ದಹನಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವು
07:48 PM (IST) Nov 15
ಕೊಡಗು-ಮೈಸೂರು ಗಡಿಯಲ್ಲಿ ಮಧ್ಯರಾತ್ರಿ ಅನುಮಾನಾಸ್ಪದ ಓಡಾಡುತ್ತಿದ್ದ ಕಾರನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಕಾರಿನೊಳಗೆ ಇಬ್ಬರು ಯುವಕರ ನಡುವೆ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು,zಮೂವರು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಇದು ಆತ್ಮ೧ಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
06:37 PM (IST) Nov 15
ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿ ಸ್ಪಂದನಾ ಸೋಮಣ್ಣ ಅವರನ್ನು ವಾಹಿನಿಯೇ ಉಳಿಸುತ್ತಿದೆ ಎಂದು ಜಾಹ್ನವಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪದ ಬಗ್ಗೆ ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಅವರು ಜಾಹ್ನವಿಯನ್ನು ನೇರವಾಗಿ ಪ್ರಶ್ನಿಸಿ, ಶೋ ನಿಯಮಗಳ ಬಗ್ಗೆ ಪಾಠ ಮಾಡಿದ್ದಾರೆ.
06:31 PM (IST) Nov 15
06:02 PM (IST) Nov 15
06:02 PM (IST) Nov 15
05:55 PM (IST) Nov 15
ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹತ್ವದ ಬದಲಾವಣೆ ಮಾಡಿದೆ. ತಂಡವು ಇಬ್ಬರು ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಮತ್ತು ಮನೋಜ್ ಭಾಂಡಗೆ ಸೇರಿದಂತೆ ಒಟ್ಟು 8 ಆಟಗಾರರನ್ನು ಕೈಬಿಟ್ಟಿದೆ.
05:32 PM (IST) Nov 15
ಕೋಲ್ಕತಾದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ನಲ್ಲಿ, ಭಾರತ 30 ರನ್ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿತು. ಎರಡನೇ ದಿನದಾಟದಂತ್ಯಕ್ಕೆ, ರವೀಂದ್ರ ಜಡೇಜಾ ಅವರ 4 ವಿಕೆಟ್ಗಳ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವನ್ನು 93 ರನ್ಗಳಿಗೆ 7 ವಿಕೆಟ್ಗೆ ಕಟ್ಟಿಹಾಕಿದೆ.
05:13 PM (IST) Nov 15
ಬಿಗ್ಬಾಸ್ ಮನೆಯಲ್ಲಿ ತನ್ನದೇ ತಂಡದ ವಿರುದ್ಧ ಆಡಿದ ಆರೋಪ ರಕ್ಷಿತಾ ಶೆಟ್ಟಿ ಮೇಲಿದೆ. ಈ ವಾರದ ವೀಕೆಂಡ್ನಲ್ಲಿ ನಿರೂಪಕ ಕಿಚ್ಚ ಸುದೀಪ್ ಈ ಬಗ್ಗೆ ಪ್ರಶ್ನಿಸಿದಾಗ, ರಕ್ಷಿತಾ ಮರುಪ್ರಶ್ನೆ ಹಾಕಿ ಸುದೀಪ್ ಅವರ ಕೋಪಕ್ಕೆ ಗುರಿಯಾಗಿದ್ದಾರೆ.
05:06 PM (IST) Nov 15
Bihar Poll Results Disappoint KN Rajanna: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು, ಉಚಿತ ಯೋಜನೆಗಳ ಲಾಭ ಪಡೆದ ಮಹಿಳೆಯರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಮಹಿಳೆಯರಿಗೆ ಹಣ ನೀಡಿ ಮನಗೆದ್ದು ಯಶಸ್ವಿಯಾಗಿದೆ ಎಂದರು.
05:03 PM (IST) Nov 15
Sanjay Kapur property dispute: ಕೈಗಾರಿಕೋದ್ಯಮಿ ಸಂಜಯ್ ಕಪೂರ್ ಅವರ ಸಾವಿನ ನಂತರ, ಅವರ ₹30,000 ಕೋಟಿ ಆಸ್ತಿಗಾಗಿ ಹಾಲಿ ಪತ್ನಿ ಪ್ರಿಯಾ ಸಚ್ದೇವ್ ಮತ್ತು ಮಾಜಿ ಪತ್ನಿ ಕರೀಷ್ಮಾ ಕಪೂರ್ ಮಕ್ಕಳ ನಡುವೆ ಕಾನೂನು ಹೋರಾಟ ದೆಹಲಿ ಹೈಕೋರ್ಟ್ನಲ್ಲಿ ನಡೆಯುತ್ತಿದೆ.
04:45 PM (IST) Nov 15
04:41 PM (IST) Nov 15
2020ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಿಳಿ ಸೀರೆಯ ದೆವ್ವ ಕಾಣಿಸಿಕೊಂಡಿದೆ ಎಂಬ ಸುದ್ದಿ ಭಾರೀ ಸದ್ದು ಮಾಡಿತ್ತು. ಪೈಲಟ್ ಮತ್ತು ಸಿಬ್ಬಂದಿ ರನ್ವೇ ಹಾಗೂ ಕಾರ್ಗೋ ಬಳಿ ಈ ಆಕೃತಿಯನ್ನು ನೋಡಿ ಭಯಭೀತರಾಗಿದ್ದರು. ಇದೀಗ ಈ ಘಟನೆ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
04:31 PM (IST) Nov 15
03:33 PM (IST) Nov 15
ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದ ಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ವೃಕ್ಷಮಾತೆ ಅಂತ ಕರೆಸಿಕೊಂಡವರು ತಿಮ್ಮಕ್ಕ. ದೇಶ, ವಿದೇಶದ ಅತ್ಯುತ್ತನ ಗೌರವಗಳನ್ನ ಪಡೆದ ತಿಮ್ಮಕ್ಕ ಜಗತ್ತಿಗೆ ಆದರ್ಶಪ್ರಾಯವಾದವರು. ಇದರಲ್ಲಿ ರಶ್ಮಿಕಾ ಕಥೆ ನೋಡಿ..
03:02 PM (IST) Nov 15
ಕ್ಯಾಪ್ಟನ್ ಮಾಳು ಆಯ್ಕೆಯ ನಾಮಿನೇಷನ್ ಪ್ರಕ್ರಿಯೆಯಲ್ಲಿ ರಕ್ಷಿತಾ ಶೆಟ್ಟಿ ತೆಗೆದುಕೊಂಡ ನಿರ್ಧಾರವು ಚರ್ಚೆಗೆ ಕಾರಣವಾಗಿದೆ. ಈ ವಾರದ ವೀಕೆಂಡ್ ಸಂಚಿಕೆಯಲ್ಲಿ ಸುದೀಪ್ ಈ ವಿಷಯವನ್ನು ಪ್ರಸ್ತಾಪಿಸುವ ನಿರೀಕ್ಷೆಯಿದ್ದು, ಜಾನ್ವಿ ಮತ್ತು ಧ್ರುವಂತ್ ಅವರ ಹೇಳಿಕೆಗಳು ಕೂಡ ಕುತೂಹಲ ಮೂಡಿಸಿವೆ.
02:35 PM (IST) Nov 15
Bengaluru GKVK Krishi Mela: ಬಗೆ ಬಗೆಯ ಸಸ್ಯಗಳ ತೋಟ, ಕಲರ್ ಫುಲ್ ಮೀನುಗಳು, ಕೀಟಗಳನ್ನ ಕಣ್ತುಂಬಿಕೊಳ್ತಿರೋ ಜನ, ಇತ್ತ ವಿವಿಧ ತಳಿಯ ಹಸು, ಕುರಿಗಳ ಸಾಲು, ಜಿಕೆವಿಕೆ ಕ್ಯಾಂಪಸ್ ನಲ್ಲಿ ಆರಂಭವಾಗಿರೋ 2025ನೇ ಸಾಲಿನ ಕೃಷಿಮೇಳದ ಝಲಕ್ ಇದು. ಡಿಟೇಲ್ ಸ್ಟೋರಿ ಇಲ್ಲಿದೆ
02:15 PM (IST) Nov 15
ಬಿಗ್ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ, ಮನೆಯ ಮುಖ್ಯದ್ವಾರದ ಬಳಿ ನಿಂತು ತಮಾಷೆಯಾಗಿ ವಿದಾಯದ ಮಾತುಗಳನ್ನಾಡಿದ್ದಾರೆ. ಸಹ ಸ್ಪರ್ಧಿಗಳಾದ ಕಾವ್ಯಾ, ಸ್ಪಂದನಾ ಮತ್ತು ಧನುಷ್ ಅವರೊಂದಿಗಿನ ಈ ತಮಾಷೆಯ ಕ್ಷಣದ ವಿಡಿಯೋ ವೈರಲ್ ಆಗಿದ್ದು, ಫಿನಾಲೆ ತಲುಪುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
01:51 PM (IST) Nov 15
ಇಷ್ಟು ದಿನ ತೆಲುಗು ಚಿತ್ರರಂಗವನ್ನು ಕಾಡುತ್ತಿದ್ದ ಐಬೊಮ್ಮದ ಅಸಲಿ ಕಳ್ಳ ಸಿಕ್ಕಿಬಿದ್ದಿದ್ದಾನೆ. ಹೊಸ ಸಿನಿಮಾಗಳನ್ನು ಪೈರಸಿ ಮಾಡಿ ಇಂಡಸ್ಟ್ರಿಗೆ ತಲೆನೋವಾಗಿದ್ದ ಐಬೊಮ್ಮ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
01:33 PM (IST) Nov 15
ವಾಸ್ತುಶಾಸ್ತ್ರದ ಪ್ರಕಾರ, ಮನೆಯ ಯಜಮಾನನ ಕೋಣೆಯಾದ ನೈರುತ್ಯ ದಿಕ್ಕಿನಲ್ಲಿರುವ ಕಪಾಟು ಅಭಿವೃದ್ಧಿಯ ಸಂಕೇತವಾಗಿದೆ. ಇದರಲ್ಲಿ ಹಣ, ಬಟ್ಟೆ ಇಟ್ಟರೆ ವೃದ್ಧಿಯಾದರೆ, ಆಸ್ಪತ್ರೆಯ ಬಿಲ್ಗಳು ಮತ್ತು ಔಷಧಿ ಅನಾರೋಗ್ಯ ಮತ್ತು ಆರ್ಥಿಕ ಖರ್ಚುಗಳು ಹೆಚ್ಚಾಗುತ್ತವೆ ಎಂದು ವಾಸ್ತು ತಜ್ಞರು ಎಚ್ಚರಿಸಿದ್ದಾರೆ.
01:27 PM (IST) Nov 15
ಅನೀಶ್ ಒಂದು ಸಂಕೀರ್ಣ ಸಮಸ್ಯೆಯನ್ನು ಇಲ್ಲಿ ಬಹಳ ಲವಲವಿಕೆಯಿಂದ, ಘನತೆಯಿಂದ ನಿರ್ವಹಿಸಿದ್ದಾರೆ. ಅಷ್ಟರ ಮಟ್ಟಿಗೆ ಅವರ ಪ್ರಯತ್ನ ಮೆಚ್ಚುಗೆಗೆ ಅರ್ಹ. ಅಕ್ಷಯ್ ಎಂಬ ತರುಣ ಆಕಸ್ಮಿವಾಗಿ ಪ್ರೀತಿಯಲ್ಲಿ ಬೀಳುವಲ್ಲಿಂದ ಕತೆ ಆರಂಭವಾಗುತ್ತದೆ.
12:56 PM (IST) Nov 15
ಸುನೀಲ್ ಶೆಟ್ಟಿಯವರನ್ನು ಸಮರ್ಥವಾಗಿ ನಿರ್ದೇಶಕರು ಬಳಸಿಕೊಂಡಿದ್ದಾರೆ. ಅವರು ಕಡಿಮೆ ಸಮಯ ಕಾಣಿಸಿಕೊಂಡರೂ ಕತೆಗೊಂದು ಘನತೆ ತಂದುಕೊಟ್ಟಿದ್ದಾರೆ. ನವೀನ್ ಡಿ. ಪಡೀಲ್ ಇಲ್ಲಿ ಗಂಭೀರ ಪಾತ್ರವನ್ನು ನಿರ್ವಹಿಸಿ ಕಾಡುವಂತೆ ನಟಿಸಿದ್ದಾರೆ.
12:52 PM (IST) Nov 15
ಸ್ಯಾಂಡಲ್ವುಡ್ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎವಿಆರ್ ಗ್ರೂಪ್ ಸ್ಥಾಪಕ ಮತ್ತು ಬಳ್ಳಾರಿ ಟಸ್ಕರ್ ತಂಡದ ಮಾಲೀಕ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಬಂಧಿಸಲಾಗಿದೆ.
12:48 PM (IST) Nov 15
12:37 PM (IST) Nov 15
ತನ್ನ ಸಿಗ್ನೇಚರ್ ಸ್ಟೈಲಲ್ಲೇ ಸುನಿ ಕಥೆ ಹೆಣೆದಿದ್ದಾರೆ. ಮುಂದೇನಾಗಬಹುದು ಅನ್ನುವ ಹಿಂಟ್ ಅನ್ನು ಆರಂಭದಲ್ಲೆ ಕೊಟ್ಟು ಪ್ರೇಕ್ಷಕನನ್ನು ಸರಣಿ ಆಘಾತಗಳ ಹೊಡೆತದಿಂದ ಪಾರು ಮಾಡುತ್ತಾರೆ. ಅಲ್ಲಲ್ಲಿ ನೋವು ನಿವಾರಕ ಗುಳಿಗೆಗಳಂಥಾ ಫನ್ ಇದೆ.
12:09 PM (IST) Nov 15
12:06 PM (IST) Nov 15
ಯಂಗ್ ಟೈಗರ್ ಎನ್ಟಿಆರ್ ಮತ್ತು ಸಂಚಲನಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ.. ಇವರಿಬ್ಬರ ಕಾಂಬಿನೇಷನ್ನಲ್ಲಿ ಸಿನಿಮಾ ಬಂದರೆ ಹೇಗಿರುತ್ತೆ? ಊಹೆಗೂ ಸಿಕ್ತಿಲ್ವಾ? ಇವರ ಕಾಂಬೋದಲ್ಲಿ ಒಂದು ಸಿನಿಮಾ ಬರಬೇಕಿತ್ತು.. ಆದರೆ ಅದು ಹೇಗೆ ಮಿಸ್ ಆಯ್ತು ಗೊತ್ತಾ?
11:49 AM (IST) Nov 15
Gold And Silver Price: ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಖರೀದಿದಾರರಿಗೆ ಸುವರ್ಣಾವಕಾಶ ಒದಗಿಸಿದೆ. 22 ಮತ್ತು 24 ಕ್ಯಾರಟ್ ಚಿನ್ನದ ದರಗಳು ಇಳಿಕೆಯಾಗಿದ್ದು, ಜೊತೆಗೆ ಬೆಳ್ಳಿ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ.
11:38 AM (IST) Nov 15
ಮೊದಲನೆಯದು ಮಕ್ಕಳ ಮಾತು. ಪ್ರಣೀಲ್ ಮತ್ತು ಸಮರ್ಥ ಎಂಬ ಪುಟಾಣಿಗಳಿಬ್ಬರೂ ಅಚ್ಚ ಉತ್ತರ ಕರ್ನಾಟಕ ಭಾಷೆಯಲ್ಲಿ ಸೊಗಸಾಗಿ ಮಾತನಾಡುತ್ತಾರೆ. ಅವರ ನಟನೆ, ಡೈಲಾಗ್ಗಳು ಒಪ್ಪಿಸಿದಂತಿರದೇ ಬಲು ಸಹಜವಾಗಿದೆ.
11:17 AM (IST) Nov 15
ಬಿಹಾರ ಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್ ಸರ್ಕಾರದ ‘ನವೆಂಬರ್ ಕ್ರಾಂತಿ’ಗೆ ಇಂಬು ನೀಡುತ್ತದೆ ಎಂಬ ನಿರೀಕ್ಷೆ ಸಂಪೂರ್ಣ ಹುಸಿಹೋಗಿದ್ದು, ತೀವ್ರ ಬೆಳವಣಿಗೆ ಬಯಸುತ್ತಿದ್ದವರ ಉತ್ಸಾಹಕ್ಕೆ ಭಂಗ ಬಂದಿದೆ.
10:53 AM (IST) Nov 15
ಬಿಹಾರ ವಿಧಾನಸಭೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಂದುವರೆಯಬೇಕೇ ಅಥವಾ ಬೇಡವೇ ಎಂಬ ಪರ-ವಿರೋಧದ ಚರ್ಚೆಗೆ ಮತ್ತೆ ಚಾಲನೆ ಸಿಗುವ ನಿರೀಕ್ಷೆಯಿದೆ.
10:45 AM (IST) Nov 15
ಬಾಲಕೃಷ್ಣ ಶೀಘ್ರದಲ್ಲೇ 'ಅಖಂಡ 2 ತಾಂಡವಂ' ಚಿತ್ರದೊಂದಿಗೆ ಬರಲಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಬಾಲಯ್ಯ ಪೋಷಕರಿಗೆ ಒಂದು ಮನವಿ ಮಾಡಿದ್ದಾರೆ.
10:43 AM (IST) Nov 15
Bigg Boss Kannada viral clips ಬಿಗ್ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಮತ್ತು ಸ್ಪಂದನಾ ಸೋಮಣ್ಣ ಅವರ ಸಂಭಾಷಣೆಯ ವಿಡಿಯೋ ವೈರಲ್ ಆಗಿದೆ. ತಮ್ಮ ಧಾರಾವಾಹಿಯಲ್ಲಿ ಅಳುವ ಪಾತ್ರದ ಬಗ್ಗೆ ಸ್ಪಂದನಾ ಹೇಳಿದಾಗ, 'ಒಂಚೂರು ಅತ್ತು ತೋರಿಸಿ' ಎಂದು ರಕ್ಷಿತಾ ಕೇಳಿದ್ದು ನೆಟ್ಟಿಗರ ಗಮನ ಸೆಳೆದಿದೆ.
10:34 AM (IST) Nov 15
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ನಲ್ಲೂ ಉತ್ಸಾಹ ಇಮ್ಮಡಿಯಾಗಿದೆ. ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿಮಾಡಿಕೊಂಡು,