Published : Aug 22, 2026, 07:31 AM ISTUpdated : Aug 22, 2026, 11:44 PM IST

State News Live: Toxic Pre Release Event - ‘ನಾರ್ತ್‌-ಸೌತ್‌’ ಅಂತ ಕಿತ್ತಾಡೋದು ಬೇಡ - ತೆಲುಗು ನೆಲದಲ್ಲಿ ಯಶ್ ಹವಾ!

ಸಾರಾಂಶ

ಬೆಂಗಳೂರು (ಆ.22): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಸಚಿವಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿ ಸಿದ್ದು, ಬರುವ ಸೋಮವಾರ ಅಥವಾ ಮಂಗಳವಾರದ ಹೊತ್ತಿಗೆ ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆಯಿದೆ. ಇನ್ನೊಂದೆಡೆ, ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಸಚಿವ ನಾಗೇಂದ್ರಗೆ ನೀಡಲಾಗಿರುವುದು ಮತ್ತೊಂದು ವಿವಾದಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

Yash Toxic Pre Release Event

11:44 PM (IST) Aug 22

Toxic Pre Release Event - ‘ನಾರ್ತ್‌-ಸೌತ್‌’ ಅಂತ ಕಿತ್ತಾಡೋದು ಬೇಡ - ತೆಲುಗು ನೆಲದಲ್ಲಿ ಯಶ್ ಹವಾ!

Toxic Pre Release Event: ಹೈದರಾಬಾದ್‌ನ ಮಲ್ಲಾರೆಡ್ಡಿ ಯೂನಿವರ್ಸಿಟಿಯಲ್ಲಿ ನಡೆದ ‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ ನೀಡಿದ ಭಾಷಣ ಇದೀಗ ಗಮನ ಸೆಳೆಯುತ್ತಿದೆ.

Read Full Story

11:39 PM (IST) Aug 22

ದೇಶದಲ್ಲಿ ಅತೀ ಹೆಚ್ಚು ಸಕ್ಕರೆ ತಯಾರಿಸುವ ರಾಜ್ಯ ಯಾವುದು? ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ದೇಶದಲ್ಲಿ ಸಕ್ಕರೆ ಬೆಲೆ ಪ್ರತಿ ಕೆಜಿಗೆ ಸುಮಾರು ₹17 ರಷ್ಟು ಏರಿಕೆಯಾಗಿದ್ದು, ಸಕ್ಕರೆ ಉತ್ಪಾದನೆಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಸಕ್ಕರೆ ಉತ್ಪಾದನೆಯಲ್ಲಿ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಹಾಗೂ ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ.

Read Full Story

11:16 PM (IST) Aug 22

ಆರ್. ಚಂದ್ರು-ಡಾರ್ಲಿಂಗ್ ಕೃಷ್ಣ ಜೋಡಿಯ 'ಫಾದರ್' ಟೀಸರ್‌ಗೆ ಭಾರೀ ನಿರೀಕ್ಷೆ; ಆಗಸ್ಟ್ 25ರಂದು ಸಂಜೆ ಎಷ್ಟು ಗಂಟೆಗೆ, ಎಲ್ಲಿ ಬಿಡುಗಡೆ?!

'ತಾಜ್ ಮಹಲ್' ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಆರ್. ಚಂದ್ರು ಹಾಗೂ ‘ಲವ್ ಮಾಕ್ಟೇಲ್’ ಸರಣಿಯ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್ ಈಗಾಗಲೇ ಸಿನಿಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರವನ್ನು ರಾಜಮೋಹನ್ ನಿರ್ದೇಶಿಸಿದ್ದಾರೆ.

Read Full Story

10:59 PM (IST) Aug 22

ರೈಲಿನಲ್ಲಿ ಟೂತ್‌ಬ್ರಷ್ ಮಾರುವ ಈ ವ್ಯಾಪಾರಿಗೆ ಎಷ್ಟು ಭಾಷೆ ಬರುತ್ತೆ? ಗೆಸ್‌ ಮಾಡಿ, ನಿಮ್ಮ ಪ್ರಕಾರ ಎಷ್ಟು?

ರೈಲಿನಲ್ಲಿ ಟೂತ್‌ಬ್ರಷ್ ಮತ್ತು ಸಾಬೂನು ಮಾರಾಟ ಮಾಡುವ ರಾಜಸ್ಥಾನ ಮೂಲದ ವ್ಯಾಪಾರಿಯೊಬ್ಬರು ಇಂಗ್ಲಿಷ್ ಸೇರಿದಂತೆ ಬರೋಬ್ಬರಿ 18-19 ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯಾವುದೇ ಕೋಚಿಂಗ್ ಪಡೆಯದೆ ಕೇವಲ ಪ್ರಯಾಣಿಕರ ಸಂಪರ್ಕ ಮತ್ತು ಕಲಿಯುವ ಹಂಬಲದಿಂದಲೇ ಸ್ವತಃ ಇಷ್ಟೊಂದು ಭಾಷೆಗಳನ್ನು ಕರಗತ ಮಾಡಿಕೊಂಡಿರುವ ಯುವಕನ ಪ್ರತಿಭೆಗೆ ನೆಟಿಜನ್ನರು ಮೆಚ್ಚುಗೆ ಸೂಚಿಸಿದ್ದಾರೆ.

Read Full Story

10:49 PM (IST) Aug 22

ಆ ಸ್ಟಾರ್ ಹೀರೋ ರೇಂಜ್ ನೋಡಿ ತುಂಬಾ ಭಯವಾಗಿತ್ತು - ವಜ್ರಕಾಯ ಬೆಡಗಿ ನಭಾ ನಟೇಶ್ ಮಾತು ವೈರಲ್

ಹೀರೋಯಿನ್ ಆಗಿ ಚಿತ್ರರಂಗದಲ್ಲಿ ಮತ್ತಷ್ಟು ಬ್ಯುಸಿಯಾಗಲು ಪ್ರಯತ್ನಿಸುತ್ತಿರುವ ನಟಿ ನಭಾ ನಟೇಶ್, ತಮ್ಮ ವೃತ್ತಿಜೀವನದ ಆರಂಭದ ದಿನಗಳಲ್ಲಿನ ವಿಶೇಷ ಅನುಭವವೊಂದನ್ನು ಹಂಚಿಕೊಂಡಿದ್ದಾರೆ.

Read Full Story

10:20 PM (IST) Aug 22

Tragic Incident - ಐಫೋನ್ ದುರಂತಕ್ಕೆ ಬಿಗ್ ಟ್ವಿಸ್ಟ್ - ತನಿಖೆಯಲ್ಲಿ ವಿಡಿಯೋ ಬಹಿರಂಗ! ಕರಳು ಹಿಂಡುವಂತಿದೆ ಆ ತಾಯಿಯ ಅಂತಿಮ ಮಾತು!

ಹೊಸ ಐಫೋನ್‌ಗಾಗಿ ಬೆಟ್ಟದ ತುದಿಯಿಂದ ಜಿಗಿಯುವುದಾಗಿ ಬೆದರಿಸಿದ ಯುವಕನ ಹಠವು ಮಹಾ ದುರಂತಕ್ಕೆ ಕಾರಣವಾಗಿದೆ. ಮಗನನ್ನು ರಕ್ಷಿಸಲು ಹೋದ ಪೋಷಕರು ಆಕಸ್ಮಿಕವಾಗಿ ಕಂದಕಕ್ಕೆ ಬಿದ್ದು, ಮಗನೊಂದಿಗೆ ಪ್ರಾಣ ಕಳೆದುಕೊಂಡರು. ಈ ಆಘಾತಕಾರಿ ಘಟನೆಯು ಇಡೀ ಕುಟುಂಬವನ್ನೇ ಬಲಿ ತೆಗೆದುಕೊಂಡಿದೆ.
Read Full Story

09:44 PM (IST) Aug 22

'ಮುಗಿಲ್‌ಪೇಟೆ' ಬ್ಯೂಟಿ ಕಯಾದು ಯಶಸ್ಸಿನ ಸೀಕ್ರೆಟ್ ಇದೇನಾ? ಪ್ರತಿಪಾತ್ರಕ್ಕೂ ಮಾಡ್ತಾರಂತೆ ಈ ತಯಾರಿ!

ವಿಭಿನ್ನ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಬಂದಿರುವ ನಟಿ ಕಯಾದು ಲೋಹರ್, ಪ್ರತಿಯೊಂದು ಪಾತ್ರಕ್ಕೂ ಸಾಕಷ್ಟು ತಯಾರಿ ನಡೆಸಿಕೊಂಡೇ ಕ್ಯಾಮೆರಾ ಎದುರಿಸುವ ನಟಿಯರಲ್ಲಿ ಒಬ್ಬರು. ಹಾಗಾದರೆ ಅವರ ಬಗ್ಗೆ ನಿಮಗೆ ಗೊತ್ತಿರದ ಕೆಲವು ಆಸಕ್ತಿಕರ ಸಂಗತಿಗಳು ಇಲ್ಲಿವೆ.

Read Full Story

09:32 PM (IST) Aug 22

Niti Ayoga - ದೇಶದ 8.7 ಕೋಟಿ ಯುವಕರು ಏನು ಮಾಡುತ್ತಿದ್ದಾರೆ? ನೀತಿ ಆಯೋಗದ ವರದಿ ಬಿಚ್ಚಿಟ್ಟ ಶಾಕಿಂಗ್ ಸತ್ಯ!

ನೀತಿ ಆಯೋಗದ ಇತ್ತೀಚಿನ ವರದಿಯ ಪ್ರಕಾರ, ದೇಶದ 8.7 ಕೋಟಿ ಯುವಕರು ಶಿಕ್ಷಣ, ಉದ್ಯೋಗ ಅಥವಾ ಯಾವುದೇ ಕೌಶಲ್ಯ ತರಬೇತಿಯಿಂದ ಹೊರಗುಳಿದಿದ್ದಾರೆ. ಹೆಚ್ಚುತ್ತಿರುವ ಶಿಕ್ಷಣದ ವೆಚ್ಚ ಮತ್ತು ಪ್ರಾಯೋಗಿಕ ಕೌಶಲ್ಯಗಳ ಕೊರತೆಯೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಆರ್ಥಿಕ ನೆರವು ಹಾಗೂ 'ಗಳಿಸುತ್ತಲೇ ಕಲಿಯಿರಿ' ಯೋಜನೆಗಳಂತಹ ಪರಿಹಾರಗಳನ್ನು ವರದಿ ಶಿಫಾರಸು ಮಾಡಿದೆ.

Read Full Story

09:01 PM (IST) Aug 22

ಉದ್ಯೋಗ ತೊರೆಯಬೇಕು ಎಂದು ಯೋಚಿಸುತ್ತಿದ್ದೀರಾ? ಹಾಗಾದ್ರೆ ಮೊದಲು ಈ ವಿಡಿಯೋ ಒಮ್ಮೆ ನೋಡಿ!

ಉದ್ಯೋಗದ ಬಗ್ಗೆ ಅಸಮಾಧಾನ, ಒತ್ತಡ, ಬೇಸರ ಕಾಡುವುದು ಸಹಜ. ಆದರೆ ಕೆಲಸಕ್ಕೆ ರಾಜೀನಾಮೆ ನೀಡುವ ಮುನ್ನ ಈಗಿನ ಉದ್ಯೋಗ ಮಾರುಕಟ್ಟೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಒಮ್ಮೆ ಅರ್ಥಮಾಡಿಕೊಳ್ಳುವುದು ಅಗತ್ಯ.

Read Full Story

08:13 PM (IST) Aug 22

ಗೋಲ್ಡನ್ ಸ್ಟಾರ್ ಗಣೇಶ್ ಸುಖಾಗಮನ ಬಯಸ್ತಾರಂತೆ ಸಲಗ ಬೆಡಗಿ - ಏನಿದು ಹೊಸ ವಿಷ್ಯ?

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಮತ್ತೊಂದು ಕುತೂಹಲಕಾರಿ ಸುದ್ದಿ. ಬಹುನಿರೀಕ್ಷಿತ ‘ತಮ್ಮ ಸುಖಾಗಮನ ಬಯಸುವ’ ಸಿನಿಮಾಗೆ ನಾಯಕಿಯಾಗಿ ನಟಿ ಸಂಜನಾ ಆನಂದ್ ಆಯ್ಕೆಯಾಗಿದ್ದಾರೆ.

Read Full Story

07:58 PM (IST) Aug 22

'Gen Z' ಮನಸ್ಸಿನಲ್ಲಿ ಯಾರಿಗೆ ಜಾಗ ; ಬಿಜೆಪಿಗೋ, ಕಾಂಗ್ರೆಸ್‌ಗೋ? ಇಲ್ಲಿದೆ ಅಸಲಿ ಲೆಕ್ಕಾಚಾರ!

ನೀಟ್ ಪತ್ರಿಕೆ ಸೋರಿಕೆ ಪ್ರತಿಭಟನೆಗಳು 'Gen Z' ಪೀಳಿಗೆಯ ರಾಜಕೀಯ ಜಾಗೃತಿಯನ್ನು ಅನಾವರಣಗೊಳಿಸಿವೆ. ಈ ಯುವ ಮತದಾರರನ್ನು ಸೆಳೆಯಲು, ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಸಾಂಪ್ರದಾಯಿಕ ಪ್ರಚಾರಗಳನ್ನು ಬದಿಗಿಟ್ಟು, ಡಿಜಿಟಲ್ ಮಾಧ್ಯಮ ಮತ್ತು ಕ್ಯಾಂಪಸ್ ಸಂವಾದಗಳಂತಹ ಹೊಸ ಕಾರ್ಯತಂತ್ರಗಳನ್ನು ರೂಪಿಸುತ್ತಿವೆ. ಆದರೆ ಅವರ ಒಲುವು ಯಾವುದರ ಕಡೆ ಎನ್ನುವುದರ ವಿವರ ಇಲ್ಲಿದೆ.

Read Full Story

07:50 PM (IST) Aug 22

ಗಂಟೆಗಟ್ಟಲೆ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡ್ತೀರಾ? ಕುತ್ತಿಗೆ, ಬೆನ್ನು ನೋವು ತಪ್ಪಿಸಲು ಈ ಟಿಪ್ಸ್ ಪಾಲಿಸಿ

Laptop Work: ದೀರ್ಘಕಾಲ ಲ್ಯಾಪ್‌ಟಾಪ್‌ನಲ್ಲಿ ಕೆಳಗೆ ನೋಡುತ್ತಾ ಕೆಲಸ ಮಾಡುವುದರಿಂದ ಕುತ್ತಿಗೆ, ಭುಜ ಮತ್ತು ಬೆನ್ನಿನ ಮೇಲ್ಭಾಗದಲ್ಲಿ ಒತ್ತಡ ಉಂಟಾಗಬಹುದು. ಸ್ಕ್ರೀನ್‌ ಅನ್ನು ಸರಿಯಾದ ಎತ್ತರದಲ್ಲಿ ಇಡುವುದು.

Read Full Story

06:16 PM (IST) Aug 22

ಆಕಾಶಪ್ಪಾ, ಟೈಂ ಇದ್ರೆ ನಮ್ಮೂರಿಗೆ ಬಂದು ಹೋಗ್ತೀಯೇನಪ್ಪಾ.. - ಕುಡಿವ ನೀರಿಗಾಗಿ ಮಹಿಳೆಯರ ಆರ್ತನಾದ!

Kolahalu Village: ರೊಚ್ಚಿಗೆದ್ದ ಜನರ ಮನ ತಣಿಸಲು ಎರಡು ಕೊಳವೆಬಾವಿ ಕೊರೆಯಿಸಿ ನೀರು ಪೂರೈಕೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೆ ಕುಡಿವ ನೀರಿನ ಅಭಾವದಿಂದ ಗ್ರಾಮ ಬಾಧಿತಗೊಂಡಿದೆ.

Read Full Story

05:45 PM (IST) Aug 22

ಒಂದೆಡೆ 4 ಲಕ್ಷದ ಚಿನ್ನ ಕಳೆದುಕೊಂಡ ಆತಂಕ, ಮತ್ತೊಂದೆಡೆ ಶಿಕ್ಷಕನ ಪ್ರಾಮಾಣಿಕತೆ - ಕೊನೆಗೆ ಸಿಕ್ಕಿತು ಸಂತಸದ ಸುದ್ದಿ

ತಿರುಮಲ ಬಂಗಾರದ ಅಂಗಡಿ ಮಾಲೀಕರಾದ ಸುಮಾ ವೆಂಕಟೇಶ್ ಅವರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆರ್ಡರ್ ಮಾಡಿದ್ದ ಗ್ರಾಹಕರಿಗೆ ಆಭರಣ ಕೊಡಲು ಪರ್ಸ್ ನಲ್ಲಿ ಇಟ್ಟುಕೊಂಡು ಸ್ಕೂಟಿಯಲ್ಲಿ ಹೊರಟಿದ್ದರು.

Read Full Story

05:34 PM (IST) Aug 22

ಬೆಂಗಳೂರು ಐಐಎಂಬಿ ಹೊಸ ಹೆಜ್ಜೆ - ಶಿಕ್ಷಣ ಲೋಕದಲ್ಲಿ ಟಾಟಾ ಸಂಸ್ಥೆ ಜೊತೆಗೆ ಮೈತ್ರಿ, ಜಿಗಣಿ ಹೊಸ ಕಾಲೇಜು!

ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು (IIMB) ತನ್ನ ಪದವಿಪೂರ್ವ ಶಿಕ್ಷಣ ಕ್ಷೇತ್ರಕ್ಕೆ ಯಶಸ್ವಿಯಾಗಿ ಪಾದಾರ್ಪಣೆ ಮಾಡಿದ್ದು, ಮೊದಲ ಬ್ಯಾಚ್‌ಗೆ ಅಭೂತಪೂರ್ವ ಬೇಡಿಕೆ ವ್ಯಕ್ತವಾಗಿದೆ. ಈ ಯಶಸ್ಸಿನ ಬೆನ್ನಲ್ಲೇ, ಟಾಟಾ ಟ್ರಸ್ಟ್ಸ್ ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, ಈ ನೂತನ ಶಾಲೆಯನ್ನು 'ಐಐಎಂ ಬೆಂಗಳೂರು - ದೋರಾಬ್ಜಿ ಟಾಟಾ ಸ್ಕೂಲ್ ಆಫ್ ಅಂಡರ್‌ಗ್ರಾಜುಯೇಟ್ ಸ್ಟಡೀಸ್' ಎಂದು ಹೆಸರಿಸಲಾಗಿದೆ.

Read Full Story

05:06 PM (IST) Aug 22

ಗುರುವಾರ-ಶುಕ್ರವಾರದ ಬದಲು 'ಬುಧವಾರ' ರಿಲೀಸ್ ಆಗ್ತಿರೋದ್ಯಾಕೆ? ಯಶ್‌ 'ಟಾಕ್ಸಿಕ್' ಸೀಕ್ರೆಟ್ ಇರೋದೇ ಇದ್ರಲ್ಲಿ!

ಸಾಮಾನ್ಯವಾಗಿ ಸಿನಿಮಾಗಳು ಶುಕ್ರವಾರ ತೆರೆಕಾಣುತ್ತವೆ. ದೊಡ್ಡ ಸಿನಿಮಾಗಳಾದರೆ ಗುರುವಾರ ಪ್ರೀಮಿಯರ್ ಆಗುತ್ತವೆ. 'ಕೆಜಿಎಫ್-1' ಬಂದಿದ್ದು ಶುಕ್ರವಾರ, 'ಕೆಜಿಎಫ್-2' ಬಂದಿದ್ದು ಗುರುವಾರ. ಆದರೆ 'ಟಾಕ್ಸಿಕ್' ಸಿನಿಮಾ ಆಗಸ್ಟ್ 26, ಬುಧವಾರದಂದು ರಿಲೀಸ್ ಆಗುತ್ತಿದೆ. ಇದರ ಹಿಂದೆ ಇದೆ ಈ ಬಿಗ್ ಸೀಕ್ರೆಟ್!

Read Full Story

05:01 PM (IST) Aug 22

ಮಹಾಪ್ರಭು ಮೋದಿ ಸ್ವಶಕ್ತಿ ಮೇಲೆ ನಿಂತಿಲ್ಲ, ಪವನ್-ನಿತೀಶ್ ಆಸರೆ ಬೇಕು -ಪ್ರಕಾಶ್ ರಾಜ್ ಮತ್ತೆ ತೀವ್ರ ವಾಗ್ದಾಳಿ

ಕಲಬುರಗಿಯಲ್ಲಿ ನಡೆದ ಮಲ್ಲಿಕಾರ್ಜುನ ಖರ್ಗೆ ಅವರ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಮಹಾಪ್ರಭು ಮೋದಿ ಇಂದು ತಮ್ಮ ಸ್ವಂತ ಶಕ್ತಿಯ ಮೇಲೆ ನಿಂತಿಲ್ಲ, ಅವರು ಪವನ್ ಕಲ್ಯಾಣ್ ಮತ್ತು ನಿತೀಶ್ ಕುಮಾರ್ ಅವರ ಆಸರೆಯ ಮೇಲೆ ನಿಂತಿದ್ದಾರೆ" ಎಂದು ಲೇವಡಿ ಮಾಡಿದರು.

Read Full Story

04:35 PM (IST) Aug 22

ಮಾವನ ಸಾವಿನ ಸುದ್ದಿ ಕೇಳಿಯೂ ಹೋಗಲಿಲ್ಲ - ವೈಯಕ್ತಿಕ ದುಃಖ ಬದಿಗಿಟ್ಟು ಕರ್ತವ್ಯದಲ್ಲಿ ಭಾಗಿಯಾದ ಕಮಿಷನರ್

ಖಾಕಿ ಎಂದರೆ ಕೇವಲ ಅಧಿಕಾರವಲ್ಲ, ಅದೊಂದು ಜವಾಬ್ದಾರಿ ಎಂಬುದನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮನೆಯಲ್ಲಿ ಸಾವಿನ ಸೂತಕವಿದ್ದರೂ, ವೈಯಕ್ತಿಕ ದುಃಖವನ್ನು ಬದಿಗಿಟ್ಟು ಸಾರ್ವಜನಿಕ ಶಾಂತಿ ಕಾಪಾಡಲು ಅವರು ರಸ್ತೆಗೆ ಇಳಿದಿರುವ ಘಟನೆ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Read Full Story

03:00 PM (IST) Aug 22

ಕೋಟಿ ಹಣ ವಂಚನೆ ಆರೋಪಕ್ಕೆ ಓಂ ಪ್ರಕಾಶ್ ರಾವ್ ಮೊದಲ ಪ್ರತಿಕ್ರಿಯೆ- 'ಹೌದು, ಹಣ ತೆಗೆದುಕೊಂಡಿರೋದು ನಿಜ'

ಅವರ ಜೊತೆ ಮಾತಿಗೆ ಮಾತು ಬೆಳೆದು ಚಿಕ್ಕ ಪುಟ್ಟ ವೈಮನಸ್ಯ ಆಗಿದೆ. ಅದಕ್ಕೆ ಅವರು ಈ ರೀತಿ ಆರೋಪ ಮಾಡುತ್ತಿದ್ದಾರೆ. ಸಿನಿಮಾ ನಿಧಾನ ಆಗಿದ್ದಕ್ಕೆ‌ ಈ ರೀತಿ ಜಗಳ ಆಗಿದೆ. ಧಮ್ಕಿ ಹಾಕೋಕೆ ನಾನೇನು ರೌಡಿನಾ..? ಇದು ಜಗಳ ಮಾಡಿ ಮಾತುಕತೆ ಮಾಡುವಂತದ್ದಲ್ಲ…

Read Full Story

02:57 PM (IST) Aug 22

ಐಫೋನ್ 18 ಪ್ರೊ ಮ್ಯಾಕ್ಸ್ ಬಿಡುಗಡೆಗೆ ಕೌಂಟ್‌ಡೌನ್ - ಬೆಲೆ, ಫೀಚರ್ಸ್ ಮತ್ತು ಅಪ್‌ಡೇಟ್‌ಗಳ ಕಂಪ್ಲೀಟ್ ವಿವರ!

ಆಪಲ್ ತನ್ನ ವಾರ್ಷಿಕ ಸೆಪ್ಟೆಂಬರ್ ಇವೆಂಟ್‌ನಲ್ಲಿ ಐಫೋನ್ 18 ಪ್ರೊ ಮ್ಯಾಕ್ಸ್ ಅನ್ನು ಅನಾವರಣಗೊಳಿಸಲು ಸಜ್ಜಾಗಿದೆ. ಈ ಹೊಸ ಮಾದರಿಯು ಅತ್ಯಾಧುನಿಕ A20 ಪ್ರೊ ಚಿಪ್, 12GB RAM ಮತ್ತು ಸ್ಮಾರ್ಟ್‌ಫೋನ್ ಇತಿಹಾಸದಲ್ಲೇ ಮೊದಲ ಬಾರಿಗೆ 'ವೇರಿಯಬಲ್ ಅಪರ್ಚರ್' ಕ್ಯಾಮೆರಾ ತಂತ್ರಜ್ಞಾನವನ್ನು ಹೊಂದಿರಲಿದೆ. ಭಾರತದಲ್ಲಿ ಇದರ ಬೆಲೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ.
Read Full Story

02:50 PM (IST) Aug 22

ಅಜ್ಜನ ತೊಡೆ ಮೇಲೆ ಕುಳಿತಿರೋದು ನಾನೇ; ಬಾಲ್ಯದ ಫೋಟೋ ಹಂಚಿಕೊಂಡ ಬಿಗ್‌ಬಾಸ್ ಸ್ಪರ್ಧಿ

ಕನ್ನಡ ಬಿಗ್‌ಬಾಸ್ ಸೀಸನ್ ಸ್ಪರ್ಧಿ ತಮ್ಮ ಅಜ್ಜನ ತೊಡೆಯ ಮೇಲೆ ಕುಳಿತಿರುವ ಬಾಲ್ಯದ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಂದಿನ ಮತ್ತು ಇಂದಿನ ಫೋಟೋ ತೆಗೆಯುವ ನಡುವಿನ ವ್ಯತ್ಯಾಸವನ್ನು ಅವರು ವಿವರಿಸಿದ್ದಾರೆ.

Read Full Story

02:47 PM (IST) Aug 22

2 ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಲೋಕಾರ್ಪಣೆ - ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ ಎಲ್‌.ಕೆ.ಜಿ ಯಿಂದ 12ನೇ ತರಗತಿಯವರೆಗೆ ಒಂದೇ ಪ್ರಾಂಗಣದಲ್ಲಿ ದ್ವಿಭಾಷಾ ಶಿಕ್ಷಣ ನೀಡುವ 1000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಆರಂಭಿಸಲು ಸರ್ಕಾರ ಯೋಜಿಸಿದೆ. ಸಚಿವ ಮಧು ಬಂಗಾರಪ್ಪ ಅವರ ಪ್ರಕಾರ, ಈ ಅತ್ಯಾಧುನಿಕ ಶಾಲೆಗಳನ್ನು ಹಂತಹಂತವಾಗಿ ನಿರ್ಮಿಸಲಾಗುವುದು ಮತ್ತು 15,000 ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ.
Read Full Story

02:16 PM (IST) Aug 22

ನಟ-ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ಧ 3.85 ಕೋಟಿ ವಂಚಿಸಿದ ಆರೋಪ – ಕೇಸ್ ದಾಖಲು

ಬೆಳ್ಳಿತೆರೆಯ ಮೇಲೆ ನಾಯಕರನ್ನು ಅಜೇಯರಾಗಿ ತೋರಿಸುವ ನಿರ್ದೇಶಕರು, ನಿಜ ಜೀವನದಲ್ಲಿ ಇಂತಹ ಆರೋಪ ಎದುರಿಸುತ್ತಿರುವುದು ಗಾಂಧಿನಗರದಲ್ಲಿ ಈಗ ಬಿಸಿ ಬಿಸಿ ಚರ್ಚೆಯ ವಿಷಯವಾಗಿದೆ. ಈ 'ಫೀನಿಕ್ಸ್' ಸಿನಿಮಾ ಕಥೆ ಎಲ್ಲಿಗೆ ಬಂದು ಮುಟ್ಟುತ್ತೆ? ಈ ಸ್ಟೋರಿ ನೋಡಿ..

Read Full Story

01:04 PM (IST) Aug 22

"ನನಗೂ ಇಂಥದ್ದೇ ಕಷ್ಟ ಬರಲಿ ದೇವ್ರೇ!" ₹92 ಲಕ್ಷ ಆಫರ್‌ನಿಂದ ಗೊಂದಲಕ್ಕೀಡಾದ ಬೆಂಗಳೂರು ಟೆಕ್ಕಿಯ ಕಥೆ!

ಬೆಂಗಳೂರಿನ 40 ವರ್ಷದ ಟೆಕ್ ಮ್ಯಾನೇಜರ್ ಒಬ್ಬರು 15 ವರ್ಷಗಳಿಂದ ದುಡಿಯುತ್ತಿರುವ ಕಂಪನಿಯಲ್ಲಿನ ₹75 ಲಕ್ಷ ಸಂಬಳದ ನೆಮ್ಮದಿಯ ಕೆಲಸ ಮತ್ತು ಮತ್ತೊಂದು ಕಂಪನಿಯಿಂದ ಬಂದಿರುವ ₹92 ಲಕ್ಷದ ಬೃಹತ್ ಆಫರ್ ನಡುವೆ ಗೊಂದಲಕ್ಕೀಡಾಗಿದ್ದಾರೆ. ಈ ವೃತ್ತಿಪರ ಸಂದಿಗ್ಧತೆಯ ಬಗ್ಗೆ ಸಲಹೆ ಕೋರಿ ಅವರು ರೆಡ್ಡಿಟ್ ಮೊರೆ ಹೋಗಿದ್ದಾರೆ.
Read Full Story

12:41 PM (IST) Aug 22

ಪೆಲ್ಲೆಟ್ ಗನ್ ಪ್ರಕರಣ; ಎಫ್‌ಐಆರ್‌ಗಾಗಿ ರಾಹುಲ್ ಗಾಂಧಿ 8 ಗಂಟೆ ಧರಣಿ - ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಪ್ರತಿಭಟನಾಕಾರರ ಮೇಲೆ ಪೆಲ್ಲೆT ಗನ್ ಬಳಸಿದ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ರಾಹುಲ್ ಗಾಂಧಿ ಧರಣಿ ನಡೆಸಬೇಕಾದ ಸ್ಥಿತಿ ಖಂಡಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಂದೇ ಮಾತರಂ ವಿವಾದವನ್ನು ಗಮನ ಬೇರೆಡೆ ಸೆಳೆಯುವ ತಂತ್ರ ಎಂದು ಬಣ್ಣಿಸಿದರು.

Read Full Story

12:31 PM (IST) Aug 22

ಅಂದು ಮನೆಗಾಗಿ 1 ಹಸು ಖರೀದಿ, ಇಂದು 100 ಎಮ್ಮೆಗಳ ಒಡತಿ ಕಲಬುರಗಿ ಮಹಿಳೆ; Dairy Farming

ಕಲಬುರಗಿ ಜಿಲ್ಲೆಯ ಜ್ಯೋತಿ ಅವಿನಾಶ್ ಉಪ್ಲಾವ್ಕರ್ ಅವರು ಒಂದು ಹಸುವಿನಿಂದ ಹೈನುಗಾರಿಕೆ ಆರಂಭಿಸಿ, ಇದೀಗ 100 ಹರಿಯಾಣ ತಳಿಯ ಎಮ್ಮೆಗಳ ಒಡತಿಯಾಗಿದ್ದಾರೆ. ಪ್ರತಿನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಇವರ ಡೈರಿ ಫಾರ್ಮ್, 15ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿ ಯಶಸ್ವಿ ಉದ್ಯಮವಾಗಿ ಬೆಳೆದಿದೆ.
Read Full Story

12:04 PM (IST) Aug 22

ಶಾಲೆ ಆರಂಭವಾಗಿ 2 ತಿಂಗಳಾದ್ರೂ ಸಿಗದ ಪಠ್ಯಪುಸ್ತಕ, ಜೆರಾಕ್ಸ್‌ ಕಾಪಿ ಇಟ್ಕೊಂಡು ಕ್ಲಾಸ್‌ನಲ್ಲಿ ವಿದ್ಯಾರ್ಥಿಗಳ ಕಲಿಕೆ!

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ, ಮುಂಗಡ ಹಣ ಪಾವತಿಸಿದ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಪೂರ್ಣ ಪ್ರಮಾಣದ ಪಠ್ಯಪುಸ್ತಕಗಳು ಪೂರೈಕೆಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ಜೆರಾಕ್ಸ್ ಪ್ರತಿಗಳನ್ನು ಅವಲಂಬಿಸಿದೆ.

Read Full Story

12:03 PM (IST) Aug 22

Toxic Countdown Day 04 - ಟಾಕ್ಸಿಕ್ ಕೌಂಟ್‌ಡೌನ್ 04.. ವಿಶ್ವ & ಕರ್ನಾಟಕದಲ್ಲಿ ಹೊಸ ದಾಖಲೆ ಬರೆದ ಯಶ್ 'ಟಾಕ್ಸಿಕ್'.. ಈ ಸ್ಪೆಷಲ್‌ ಸ್ಟೋರಿ ನೋಡಿ!

ಗೀತು ಮೋಹನ್‌ದಾಸ್ ನಿರ್ದೇಶನದ ಟಾಕ್ಸಿಕ್ ಸಿನಿಮಾದಲ್ಲಿ ಭಾರೀ ದೊಡ್ಡ ತಾರಾಬಳಗವಿಗೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಹೀಗೆ ನಟಿಯರ ಬಳಗವಿದೆ, ಜೊತೆಗೆ, ವಿವೇಕ್ ಒಬೆರಾಯ್, ಸುದೇವ್ ನಾಯರ್ ಸೇರಿದಂತೆ ಹಾಲಿವುಡ್ ನಟರುಗಳೂ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಹೊಸ ದಾಖಲೆ ಏನು ಅಂತ ನೋಡಿ..

Read Full Story

11:59 AM (IST) Aug 22

ಬೈಕ್ ರೈಡ್ ಆಸೆ ತೋರಿಸಿದ ಯುವಕನ ಕೈ ಕಚ್ಚಿದ ಮುಸಿಯ, ಸೋಶಿಯಲ್ ಮೀಡಿಯಾ ರೀಲ್ಸ್ ಕ್ರೇಜ್ ತಂದಿಟ್ಟ ದುರಂತ!

ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ರೀಲ್ಸ್ ಮಾಡುವ ಹುಚ್ಚಿನಿಂದ ಯುವಕನೊಬ್ಬ ಮಂಗನೊಂದಿಗೆ ವೀಡಿಯೋ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಹೆದರಿದ ಮಂಗವು ಆತನ ಕೈಗೆ ತೀವ್ರವಾಗಿ ಕಚ್ಚಿ ಗಾಯಗೊಳಿಸಿದ್ದು, ವನ್ಯಜೀವಿಗಳೊಂದಿಗೆ ಸಾಹಸ ಮಾಡುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಈ ಘಟನೆ ಎಚ್ಚರಿಕೆಯಾಗಿದೆ.
Read Full Story

11:49 AM (IST) Aug 22

ಚಿಕ್ಕಮಗಳೂರಲ್ಲಿ ಲೋಕಾಯುಕ್ತ ಖೆಡ್ಡಾ; ಲಕ್ಷ ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆ ಅಧಿಕಾರಿಗಳು

ಚಿಕ್ಕಮಗಳೂರಿನಲ್ಲಿ ಕೃಷಿ ಜಮೀನು ಸರ್ವೆಗೆ ಲಕ್ಷಗಟ್ಟಲೆ ಲಂಚ ಕೇಳಿದ ಇಬ್ಬರು ಸರ್ವೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮತ್ತೊಂದೆಡೆ, ರಸ್ತೆ ಗುಂಡಿಗಳನ್ನು ವಿರೋಧಿಸಿ ಬಿಜೆಪಿ ನಾಯಕರು ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
Read Full Story

11:27 AM (IST) Aug 22

ಶಾಲೆಗಳ ಅಭಿವೃದ್ಧಿಗೆ ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ನಿಂದ ರಾಜ್ಯ ಸರ್ಕಾರಕ್ಕೆ 1750 ಕೋಟಿ ಸಾಲ

ಕರ್ನಾಟಕ ಸರ್ಕಾರವು 500 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆ'ಗಳಾಗಿ ಮೇಲ್ದರ್ಜೆಗೇರಿಸಲು ಏಷ್ಯನ್ ಅಭಿವೃದ್ಧಿ ಬ್ಯಾಂಕ್‌ನೊಂದಿಗೆ 1,750 ಕೋಟಿ ರೂ. ಸಾಲ ಒಪ್ಪಂದಕ್ಕೆ ಸಹಿ ಹಾಕಿದೆ. ಒಟ್ಟು 2,500 ಕೋಟಿ ರೂ. ವೆಚ್ಚದ ಈ ಯೋಜನೆ ಇದಾಗಿದೆ.

Read Full Story

11:21 AM (IST) Aug 22

Bengaluru South - 54 ಕೋಟಿ ವೆಚ್ಚ, 6 ಎಕರೆ ಜಾಗದಲ್ಲಿ 888 ಮನೆಗಳ ನಿರ್ಮಾಣಕ್ಕೆ ಮೂಹರ್ತ

5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 888 ಮನೆಗಳ ನಿರ್ಮಾಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಜಮೀನು ವಿವಾದಗಳಿಂದ ಸ್ಥಗಿತಗೊಂಡಿದ್ದ ಈ ಯೋಜನೆಯು, ಶಾಸಕ ಇಕ್ಬಾಲ್ ಹುಸೇನ್ ಅವರ ಪ್ರಯತ್ನದಿಂದಾಗಿ ಶಿಡ್ಲುಕಲ್ಲು ಗ್ರಾಮದಲ್ಲಿ ₹54 ಕೋಟಿ ವೆಚ್ಚದಲ್ಲಿ ಕಾರ್ಯಗತಗೊಳ್ಳಲಿದೆ.

Read Full Story

11:16 AM (IST) Aug 22

ತಂದೆ ಇಲ್ಲದ ಮನೆಗೆ ಆಧಾರವಾಗಿದ್ದ ಯುವಕನ ಭೀಕರ ಅಂತ್ಯ; ಕೊಡಗಿನಲ್ಲಿ ಮಿತಿ ಮೀರಿದ ಬಾಡಿಗೆ ಬೈಕ್‌ಗಳ ಹಾವಳಿ

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಮುಂಜಾನೆ ಬಾಡಿಗೆಗಾಗಿ ಕಾಯುತ್ತಿದ್ದ 26 ವರ್ಷದ ಕಾರು ಚಾಲಕನ ಮೇಲೆ ಗ್ಯಾಸ್ ಲಾರಿ ಹರಿದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇತ್ತೀಚೆಗಷ್ಟೇ ಸಾಲ ಮಾಡಿ ಕಾರು ಖರೀದಿಸಿದ್ದ ಈತ, ಕುಟುಂಬಕ್ಕೆ ಏಕೈಕ ಆಧಾರವಾಗಿದ್ದನು.
Read Full Story

10:41 AM (IST) Aug 22

ಪುರಾಣ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ರದ್ದು

ಪುರಾಣ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 23 ಮತ್ತು 24 ರಂದು ಏಕಾದಶಿ ಪ್ರಯುಕ್ತ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಮತ್ತು ನಾಗಪ್ರತಿಷ್ಠೆ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಆದರೆ, ಭಕ್ತರು ಶ್ರೀ ದೇವರ ದರ್ಶನ ಪಡೆಯಬಹುದು ಮತ್ತು ಇತರೆ ನಿತ್ಯ ಪೂಜೆಗಳು ಎಂದಿನಂತೆ ನಡೆಯಲಿವೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
Read Full Story

10:36 AM (IST) Aug 22

ಸಕ್ಕರೆ ನಾಡಲ್ಲಿ ಬೆಲ್ಲ 'ಬಂಗಾರ' - ಮಂಡ್ಯ ಮಾರುಕಟ್ಟೆ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಬೆಲ್ಲದ ದರ!

ಮಂಡ್ಯದಲ್ಲಿ ತೀವ್ರ ಬರಗಾಲದಿಂದಾಗಿ ಕಬ್ಬಿನ ಇಳುವರಿ ಕುಸಿದಿದ್ದು, ಬೆಲ್ಲದ ಉತ್ಪಾದನೆಗೆ ಹೊಡೆತ ಬಿದ್ದಿದೆ. ಈ ಕಾರಣದಿಂದ ಮಾರುಕಟ್ಟೆಯಲ್ಲಿ ಬೆಲ್ಲದ ಕೊರತೆ ಉಂಟಾಗಿ, ಅದರ ದರವು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ.
Read Full Story

10:17 AM (IST) Aug 22

ಹೋಟೆಲ್ ಪನ್ನೀರ್ ತಿನ್ನೋ ಮುನ್ನ ಎಚ್ಚರ, ನಕಲಿ ಪನ್ನೀರ್ ಬ್ಯಾನ್ ಮಾಡಿದ ಕರ್ನಾಟಕ ಸರ್ಕಾರ!

ಕರ್ನಾಟಕ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ, ಪಾಮ್ ಆಯಿಲ್ ಮತ್ತು ರಾಸಾಯನಿಕಗಳಿಂದ ತಯಾರಿಸಲಾಗುವ 'ಅನಲಾಗ್ ಪನ್ನೀರ್' ಮಾರಾಟ ಮತ್ತು ಬಳಕೆಯನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ನಿಷೇಧಿಸಿದೆ. ಹೋಟೆಲ್‌ಗಳಲ್ಲಿ ಅಸಲಿ ಪನ್ನೀರ್ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದ ಈ ನಕಲಿ ಪನ್ನೀರ್ ಸೇವನೆಯು ಹೃದಯಾಘಾತ ಮತ್ತು ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
Read Full Story

10:07 AM (IST) Aug 22

ಶಿವಮೊಗ್ಗ ಜಿಲ್ಲೆಗೆ ಒಲಿದ ರಾಷ್ಟ್ರೀಯ ಹೆಮ್ಮೆ - ಹೊಸನಗರದ ಸರ್ಕಾರಿ ಶಾಲಾ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರು 'ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2026'ಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಶಾಲೆಯ ಅಭಿವೃದ್ಧಿ ಮತ್ತು ಮಕ್ಕಳ ಶಿಕ್ಷಣಕ್ಕೆ ನೀಡಿದ ಕೊಡುಗೆಗಾಗಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

Read Full Story

09:56 AM (IST) Aug 22

ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಶೀಘ್ರ ಆರಂಭ, ಕಬಕ ಪುತ್ತೂರು ನಿಲುಗಡೆಗೆ ಡಿಜಿಟಲ್ ಸಮರ

ಬೆಂಗಳೂರು-ಮಂಗಳೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಬಕ-ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ ನೀಡುವಂತೆ ಒತ್ತಾಯಿಸಿ ರೈಲು ಬಳಕೆದಾರರ ಸಮಿತಿಗಳು ಆನ್‌ಲೈನ್ ಸಹಿ ಸಂಗ್ರಹ ಅಭಿಯಾನವನ್ನು ಆರಂಭಿಸಿವೆ. ಪ್ರಸ್ತಾವಿತ ತಾತ್ಕಾಲಿಕ ನಿಲುಗಡೆ ಪಟ್ಟಿಯಲ್ಲಿ ಪುತ್ತೂರನ್ನು ಸೇರಿಸದಿರುವುದು ಈ ಅಭಿಯಾನಕ್ಕೆ ಕಾರಣವಾಗಿದೆ.
Read Full Story

09:48 AM (IST) Aug 22

ಪಾಕ್‌ಗೆ ಪೋಲಾಗುತ್ತಿದ್ದ ಸಿಂಧೂ ನದಿ ನೀರನ್ನು ಲಡಾಕ್‌ಗೆ ಬಳಸಿಕೊಂಡ ಮೋದಿ ಸರ್ಕಾರ, ಕೃಷಿ ಕ್ರಾಂತಿಗೆ ಸಾಕ್ಷಿಯಾಯ್ತು ಭಾರತ

ಸಿಂಧೂ ಜಲ ಒಪ್ಪಂದದಡಿ ಪಾಕಿಸ್ತಾನಕ್ಕೆ ವ್ಯರ್ಥವಾಗಿ ಹರಿಯುತ್ತಿದ್ದ ಹಿಮನದಿ ನೀರನ್ನು ಲಡಾಖ್ ಆಡಳಿತ ಯಶಸ್ವಿಯಾಗಿ ಸದ್ಬಳಕೆ ಮಾಡಿಕೊಂಡಿದೆ. ಈ ಯೋಜನೆಯಿಂದಾಗಿ 'ಇಗೂ-ಫೇ' ಕಾಲುವೆಗೆ ಜೀವಕಳೆ ಬಂದಿದ್ದು, ಸಾವಿರಾರು ಎಕರೆ ಬಂಜರು ಭೂಮಿ ಹಸಿರಾಗುವ ನಿರೀಕ್ಷೆಯಲ್ಲಿದೆ.

Read Full Story

09:06 AM (IST) Aug 22

Ancient coins - ರಾಯಚೂರು ಜಿಲ್ಲೆಯಲ್ಲಿ ಕೋಟೆಯ ಮಣ್ಣು ಅಗೆಯುವಾಗ ಪುರಾತನ ಕಾಲದ 360 ನಾಣ್ಯಗಳು ಪತ್ತೆ!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಕೋಟೆಯ ಬಳಿ ನೆಲ ಅಗೆಯುವಾಗ ಒಂದಲ್ಲ ಎರಡಲ್ಲ ಮುನ್ನೂರಕ್ಕೂ ಹೆಚ್ಚು ಪುರಾತನ ಕಾಲದ ನಾಣ್ಯಗಳು ಪತ್ತೆಯಾಗಿವೆ. ಯಾವ ಕಾಲದ್ದು? ನಾಣ್ಯಗಳ ಮೇಲಿನ ಲಿಪಿ ಯಾವ ಭಾಷೆಯಲ್ಲಿದೆ ಹೆಚ್ಚಿನ ವಿವರ ತಿಳಿಯಿರಿ

Read Full Story

More Trending News