ಬೆಂಗಳೂರು (ಆ.22): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಸಚಿವಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿ ಸಿದ್ದು, ಬರುವ ಸೋಮವಾರ ಅಥವಾ ಮಂಗಳವಾರದ ಹೊತ್ತಿಗೆ ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆಯಿದೆ. ಇನ್ನೊಂದೆಡೆ, ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಸಚಿವ ನಾಗೇಂದ್ರಗೆ ನೀಡಲಾಗಿರುವುದು ಮತ್ತೊಂದು ವಿವಾದಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.

10:17 AM (IST) Aug 22
10:07 AM (IST) Aug 22
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರು 'ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2026'ಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಶಾಲೆಯ ಅಭಿವೃದ್ಧಿ ಮತ್ತು ಮಕ್ಕಳ ಶಿಕ್ಷಣಕ್ಕೆ ನೀಡಿದ ಕೊಡುಗೆಗಾಗಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
09:56 AM (IST) Aug 22
09:48 AM (IST) Aug 22
ಸಿಂಧೂ ಜಲ ಒಪ್ಪಂದದಡಿ ಪಾಕಿಸ್ತಾನಕ್ಕೆ ವ್ಯರ್ಥವಾಗಿ ಹರಿಯುತ್ತಿದ್ದ ಹಿಮನದಿ ನೀರನ್ನು ಲಡಾಖ್ ಆಡಳಿತ ಯಶಸ್ವಿಯಾಗಿ ಸದ್ಬಳಕೆ ಮಾಡಿಕೊಂಡಿದೆ. ಈ ಯೋಜನೆಯಿಂದಾಗಿ 'ಇಗೂ-ಫೇ' ಕಾಲುವೆಗೆ ಜೀವಕಳೆ ಬಂದಿದ್ದು, ಸಾವಿರಾರು ಎಕರೆ ಬಂಜರು ಭೂಮಿ ಹಸಿರಾಗುವ ನಿರೀಕ್ಷೆಯಲ್ಲಿದೆ.
09:06 AM (IST) Aug 22
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಕೋಟೆಯ ಬಳಿ ನೆಲ ಅಗೆಯುವಾಗ ಒಂದಲ್ಲ ಎರಡಲ್ಲ ಮುನ್ನೂರಕ್ಕೂ ಹೆಚ್ಚು ಪುರಾತನ ಕಾಲದ ನಾಣ್ಯಗಳು ಪತ್ತೆಯಾಗಿವೆ. ಯಾವ ಕಾಲದ್ದು? ನಾಣ್ಯಗಳ ಮೇಲಿನ ಲಿಪಿ ಯಾವ ಭಾಷೆಯಲ್ಲಿದೆ ಹೆಚ್ಚಿನ ವಿವರ ತಿಳಿಯಿರಿ
08:38 AM (IST) Aug 22
ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕಾಮಗಾರಿಯು ನವೆಂಬರ್ ಅಥವಾ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
08:18 AM (IST) Aug 22
08:08 AM (IST) Aug 22
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುತ್ತಿರುವ ನಡುವೆಯೇ, ರಾಜ್ಯ ಸರ್ಕಾರ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಿದೆ. ಸರ್ಕಾರದ ಈ ನಿರ್ಧಾರವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಸದಸ್ಯರು ತೀವ್ರ ಅಸಮಾಧಾನ.
07:34 AM (IST) Aug 22
ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ, ಸಚಿವ ಬಿ.ನಾಗೇಂದ್ರ ಅವರು ರಾಮಾಯಣ ಕೃತಿಯ ಮೇಲೆ ಕೈ ಇಟ್ಟು ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಸವಾಲು ಹಾಕಿದ್ದಾರೆ. ನಾಗೇಂದ್ರ ರಾಜೀನಾಮೆ ನೀಡುವವರೆಗೂ ತಮ್ಮ ಹೋರಾಟ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.
07:34 AM (IST) Aug 22
ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಅನುವಂಶಿಕ ಅರ್ಚಕರಿಗೆ ಬಿಳಿಮಚ್ಚೆ ಕಾರಣಕ್ಕೆ ಪೂಜೆಗೆ ಅಡ್ಡಿಪಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹೈಕೋರ್ಟ್, ಅರ್ಚಕರಿಗೆ ಪೂಜೆಗೆ ಅಡ್ಡಿ ಉಂಟಾಗಿದೆಯೇ ಎಂದು ಪರಿಶೀಲಿಸಲು ಇಬ್ಬರು ವಕೀಲರನ್ನು ಕೋರ್ಟ್ ಕಮಿಷನರ್ಗಳಾಗಿ ನೇಮಿಸಿ ಆದೇಶಿಸಿದೆ.
07:34 AM (IST) Aug 22
ಬೆಂಗಳೂರಿನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋದ ಬ್ಲೂ ಲೇನ್ ಮಾರ್ಗದ ಕಾಮಗಾರಿಯು ಶೇ.75ರಷ್ಟು ಪೂರ್ಣಗೊಂಡಿದೆ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಂಡರೆ, ಮುಂದಿನ ವರ್ಷದಿಂದ ಮೆಟ್ರೋ ಸಂಚಾರ ಆರಂಭವಾಗಲಿದ್ದು, ಎಂಜಿ ರಸ್ತೆಯಿಂದ ಕೇವಲ 45 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದಾಗಿದೆ.
07:33 AM (IST) Aug 22
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಪರಿಶಿಷ್ಟ ಪಂಗಡದ ನಾಯಕರ ನೇತೃತ್ವದಲ್ಲಿ ನಡೆಯಲಿರುವ ಈ ಪಾದಯಾತ್ರೆಯು, ನಾಗೇಂದ್ರ ಅವರ ಕ್ಷೇತ್ರವಾದ ಬಳ್ಳಾರಿಯಲ್ಲಿ ಅಂತ್ಯಗೊಳ್ಳುವಂತೆ ಪ್ಲಾನ್!
07:33 AM (IST) Aug 22
ಕುಂದಾಪುರ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ 'ಕನ್ನಡಪ್ರಭ' ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದಾರೆ. ಘಟನೆ ಹಿನ್ನೆಲೆ ವೈದ್ಯರ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
07:32 AM (IST) Aug 22
ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಿಂದ ರೈತರ ಕೃಷಿ ಚಟುವಟಿಕೆಗಳಿಗೆ ನೀರು ಒದಗಿಸುವ ಬದಲು, ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ನೀರು ನೇರವಾಗಿ ತಮಿಳುನಾಡಿಗೆ ಸೇರುತ್ತಿದ್ದು, ಕಳೆದ ಒಂಬತ್ತು ದಿನಗಳಲ್ಲಿ ಜಲಾಶಯದಿಂದ 4 ಟಿಎಂಸಿ ನೀರು ಖಾಲಿ!