ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಅಯತೋಲ್ಲ ಅಲಿ ಖಮೇನಿ ಸಾವನ್ನಪ್ಪಿರುವ ಸುದ್ದಿ ಕೇಳಿ ಜಿಲ್ಲೆಯ ಗೌರಿಬಿದನೂರು ತಾಲೂಕಿನ ‘ಬೇಬಿ ಇರಾನ್’ ಅಲೀಪುರ ಗ್ರಾಮದಲ್ಲಿ ಆಕ್ರೋಶ ಭುಗಿಲೆದ್ದಿದ್ದು, 10 ಸಾವಿರಕ್ಕೂ ಅಧಿಕ ಮಂದಿ ಮೆರವಣಿಗೆ ನಡೆಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

11:49 PM (IST) Mar 02
ಹೊಳೇನರಸೀಪುರದ ಲಕ್ಷ್ಮಿ ನರಸಿಂಹ ಸ್ವಾಮಿ ರಥೋತ್ಸವದ ಅಲಂಕಾರ ವಿಚಾರದಲ್ಲಿ ರಾಜಕೀಯ ನುಸುಳಿದೆ. ಸಂಸದ ಶ್ರೇಯಸ್ ಪಟೇಲ್ ನೀಡಿದ ಬಟ್ಟೆ ಬಳಸಿದ್ದಕ್ಕೆ ರೇವಣ್ಣ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
11:21 PM (IST) Mar 02
11:11 PM (IST) Mar 02
Rayabhaga woman's video goes viral: ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಎಂಬ ಹಾಡಿನಂತೆ ಇಲ್ಲೊಬ್ಬಳು ಮಹಿಳೆ ತಾನು ಯಾವ ಪುರುಷರಿಗೆ ಕಡಿಮೆ ಇಲ್ಲ ಎಂಬಂತೆ ಬಾರ್ ಮುಂದೆ ಕುಡಿದು ಬಿದ್ದಿದ್ದಾಳೆ.ಆಕೆಯ ವೀಡಿಯೋ ವೈರಲ್ ಆಗಿದೆ.
09:25 PM (IST) Mar 02
ಮಂಗಳೂರಿನ ಬೋಳೂರಿನಲ್ಲಿ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ನೂತನ ಕಟ್ಟಡ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಕೃಷಿ ಸಾಲ ಮರುಪಾವತಿಯಲ್ಲಿ ಅವಿಭಜಿತ ಕರಾವಳಿ ಜಿಲ್ಲೆ ದೇಶದಲ್ಲೇ ಅಗ್ರಸ್ಥಾನದಲ್ಲಿದೆ
08:55 PM (IST) Mar 02
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ನಟಿ ಸಂದೀಪಾ ವಿರ್ಕ್, ಅಲ್ಲಿನ ಕಠೋರ ಜೀವನ, ಅನೈರ್ಮಲ್ಯ ಮತ್ತು ಭ್ರಷ್ಟಾಚಾರದ ಬಗ್ಗೆ ತಮ್ಮ ನೋವಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಜೈಲಿನಲ್ಲಿದ್ದಾಗ ಸಾವನ್ನೇ ಬಯಸಿದ್ದೆ ಎಂದು ಹೇಳಿದ್ದಾರೆ.
08:31 PM (IST) Mar 02
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ 2026ನೇ ಸಾಲಿನಲ್ಲಿ 188 ಆಡಳಿತಾಧಿಕಾರಿ ಮತ್ತು ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಪದವಿ ಅಥವಾ ಬಿಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮಾರ್ಚ್ 29, 2026ರೊಳಗೆ ನಿಗದಿತ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
07:43 PM (IST) Mar 02
06:51 PM (IST) Mar 02
ಕೋಲಾರದ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ, ಕೌಟುಂಬಿಕ ಕಲಹದಿಂದ ನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಕುಂಟೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಸ್ಥಳೀಯರು ತಾಯಿಯನ್ನು ರಕ್ಷಿಸಿದ್ದಾರೆ.
06:02 PM (IST) Mar 02
ಅಡುಗೆ ಎಣ್ಣೆಯನ್ನು ಪದೇಪದೇ ಬಿಸಿ ಮಾಡಿ ಮರುಬಳಕೆ ಮಾಡುವುದು ಸಾಮಾನ್ಯವಾದರೂ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಅಭ್ಯಾಸವು ಕ್ಯಾನ್ಸರ್ ಮತ್ತು ಹೃದಯ ರಕ್ತನಾಳದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ, ಎಣ್ಣೆಯನ್ನು ಮತ್ತೆ ಬಿಸಿ ಮಾಡಿದಾಗ ರಾಸಾಯನಿಕಗಳು ಬಿಡುಗಡೆಯಾಗುತ್ತವೆ.
05:43 PM (IST) Mar 02
ಕರ್ಣ ಸೀರಿಯಲ್ನಲ್ಲಿ, ರಮೇಶ್ನ ಸಂಚಿನಿಂದ ಕರ್ಣ ಜೈಲಿನಲ್ಲಿದ್ದಾನೆ. ಸರಿಯಾದ ಸಮಯಕ್ಕೆ ಲಾಯರ್ ಕೈಕೊಟ್ಟಾಗ, ಲಾಯರ್ ಆಗಿ ಕೋರ್ಟ್ಗೆ ಪ್ರವೇಶಿಸಿ ಎಲ್ಲರಿಗೂ ಆಘಾತ ನೀಡಿದ್ದಾಳೆ. ಕಾನೂನು ಪದವಿ ಇಲ್ಲದೆ ವಾದಿಸಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಈ ಲೇಖನ ಚರ್ಚಿಸುತ್ತದೆ.
05:34 PM (IST) Mar 02
05:12 PM (IST) Mar 02
Actress Amulya Husband: ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರ ಅವರು ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅವರಿಗೆ ಬಿಜೆಪಿ ಪಕ್ಷವು ಒಳ್ಳೆಯ ಹುದ್ದೆಯನ್ನು ನೀಡಿದೆ. ಅನೇಕರು ಜಗದೀಶ್ಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
04:45 PM (IST) Mar 02
ನಟ ದಳಪತಿ ವಿಜಯ್ ಪತ್ನಿ ಸಂಗೀತಾ ಅವರು ಡಿವೋರ್ಸ್ಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಂದಹಾಗೆ ಸಂಗೀತಾ ಅವರು ಮೊದಲು ವಿಜಯ್ ಅಭಿಮಾನಿಯಾಗಿ, ಪ್ರೀತಿಸಿ ಮದುವೆಯಾಗಿದ್ದರು. ವಿಜಯ್ ಅವರಿಗೆ ಬೇರೆ ನಟಿಯ ಜೊತೆ ಅನೈತಿಕ ಸಂಬಂಧವಿದೆ ಎಂದು ಸಂಗೀತಾ ಹೇಳಿದ್ದರು.
04:30 PM (IST) Mar 02
04:13 PM (IST) Mar 02
Actress Kavya Gowda Home: ಹದಿನೈದು ದಿನಗಳ ಹಿಂದೆ ರಾಧಾ ರಮಣ ಧಾರಾವಾಹಿ ನಟಿ ಕಾವ್ಯಾ ಗೌಡ ಅವರ 150 ಕೋಟಿ ರೂಪಾಯಿ ಮನೆ ದೊಡ್ಡ ಚರ್ಚೆಯಾಗಿತ್ತು. ಈಗ ಕಾವ್ಯಾ ಗೌಡ ಅವರು ಪತಿ ಸೋಮಶೇಖರ್ ಜೊತೆ ಫೋಟೋಶೂಟ್ ಮಾಡಿಸಿರೋದು ಸಿಕ್ಕಾಪಟ್ಟೆ ಮೆಚ್ಚುಗೆ ಗಳಿಸುತ್ತಿದೆ.
03:34 PM (IST) Mar 02
Bhagyalakshmi Serial Episode Update: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಭಾಗ್ಯ ಯಾರ ಜೊತೆ ಬದುಕುತ್ತಾಳೆ ಎನ್ನೋದು ದೊಡ್ಡ ಪ್ರಶ್ನೆ ಆಗಿದೆ. ಹೀಗಿರುವಾಗ ಅವಳ ಪ್ರಾಣಕ್ಕೆ ಅಪಾಯ ಬಂದಿದೆ. ಹೌದು, ತಾಂಡವ್ ತನ್ನ ಜೊತೆಗಿಲ್ಲ ಎಂದು ಶ್ರೇಷ್ಠ ಅವಳನ್ನು ಕೊಲ್ಲಲು ನೋಡುತ್ತಿದ್ದಾಳೆ.
03:27 PM (IST) Mar 02
ಬೆಂಗಳೂರಿನಲ್ಲಿ ವೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಯುವಕನೊಬ್ಬ ಯುವತಿಯೊಂದಿಗೆ ಅತ್ಯಂತ ಅಪಾಯಕಾರಿ ಬೈಕ್ ಸ್ಟಂಟ್ ಮಾಡಿದ್ದಾನೆ. ಹೆಲ್ಮೆಟ್ ಇಲ್ಲದೆ, ಸಂಚಾರ ನಿಯಮಗಳನ್ನು ಉಲ್ಲಂಘಿಸಿ ನಡೆಸಿದ ಈ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
03:07 PM (IST) Mar 02
03:04 PM (IST) Mar 02
02:58 PM (IST) Mar 02
ಮದ್ದೂರು ತಾಲ್ಲೂಕಿನ 4 ಗ್ರಾಮ ಪಂಚಾಯಿತಿಗಳನ್ನು ನಗರಸಭೆಗೆ ಸೇರಿಸುವ ಸರ್ಕಾರದ ನಿರ್ಧಾರವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರೋಧಿಸಿದ್ದಾರೆ. ಈ 'ಜನವಿರೋಧಿ' ಕ್ರಮ ಹಿಂಪಡೆಯುವಂತೆ ಸಿದ್ದರಾಮಯ್ಯನವರಿಗೆ ಪತ್ರ ಬರೆದು, 70 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ
02:58 PM (IST) Mar 02
Bhagyalakshmi Serial Episode Update: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ತಾಂಡವ್ ಹಾಗೂ ಆದಿ ಮಧ್ಯೆ ಭಾಗ್ಯ ಆಯ್ಕೆ ಯಾವುದು ಎಂಬ ಪ್ರಶ್ನೆ ಎದ್ದಿದೆ. ಈ ವೇಳೆ ಜ್ಯೋತಿಷಿ ಭವಿಷ್ಯ ಕೂಡ ಸಾಕಷ್ಟು ಕುತೂಹಲ ಮೂಡಿಸಿದೆ.
02:45 PM (IST) Mar 02
ಬೆಂಗಳೂರು ಮೂಲದ ಆಲ್ಫಾ-ಎಲ್ಸೆಕ್ ಸಂಸ್ಥೆಯು ಭಾರತೀಯ ಸೇನೆಯ 96 ಟಿ-72 ಯುದ್ಧ ಟ್ಯಾಂಕ್ಗಳಿಗೆ 'ಥರ್ಮಲ್ ಇಮೇಜಿಂಗ್ ಫೈರ್ ಕಂಟ್ರೋಲ್ ಸಿಸ್ಟಮ್' ಅನ್ನು ಯಶಸ್ವಿಯಾಗಿ ಅಳವಡಿಸಿದೆ. ಈ ತಂತ್ರಜ್ಞಾನವು, ರಾತ್ರಿಯ ಸಮಯದಲ್ಲಿಯೂ ಚಲಿಸುವ ಗುರಿಗಳನ್ನು ಪತ್ತೆಹಚ್ಚಿ ನಿಖರವಾಗಿ ದಾಳಿ ಮಾಡುವ ಸಾಮರ್ಥ್ಯ ನೀಡುತ್ತದೆ.
02:26 PM (IST) Mar 02
02:22 PM (IST) Mar 02
ಬೆಂಗಳೂರಿನ ಪಾಸ್ಪೋರ್ಟ್ ಪ್ರಾದೇಶಿಕ ಕಚೇರಿಗೆ ತಮಿಳು ಭಾಷೆಯಲ್ಲಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಕೆಲಕಾಲ ಆತಂಕ ಸೃಷ್ಟಿಸಿತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳವು ತಪಾಸಣೆ ನಡೆಸಿ, ಇದೊಂದು ಹುಸಿ ಬೆದರಿಕೆ ಎಂದು ದೃಢಪಡಿಸಿದ್ದಾರೆ.
01:37 PM (IST) Mar 02
ಮಾ.3ರಂದು ರಾಜ್ಯಾದ್ಯಂತ ಕೇತುಗ್ರಸ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ, ಬೆಂಗಳೂರು, ಮೈಸೂರು, ಉಡುಪಿ ಸೇರಿದಂತೆ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಗ್ರಹಣದ ವೇಳೆ ಗರ್ಭಗುಡಿಗಳನ್ನು ಮುಚ್ಚಲಾಗುತ್ತಿದ್ದು, ನಂತರ ಶುದ್ಧೀಕರಣ ಕಾರ್ಯ ನಡೆಸಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ.
01:12 PM (IST) Mar 02
ಉದಯಪುರದಲ್ಲಿ ಖಾಸಗಿಯಾಗಿ ಮದುವೆಯಾದ ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಆ ಬಳಿಕ ತಿರುಪತಿ ತಿರುಮಲ ದೇವಸ್ಥಾನದ ದರ್ಶನ ಪಡೆದಿದ್ದಾರೆ. ಈಗ ವಿಜಯ್ ದೇವರಕೊಂಡ ಅವರ ಹಳ್ಳಿಗೆ ಬಂದು, ಅಲ್ಲಿ ಸತ್ಯನಾರಾಯಣ ಪೂಜೆಯನ್ನು ಮಾಡಿದ್ದಾರೆ.
01:10 PM (IST) Mar 02
'ನಂದಗೋಕುಲ' ಧಾರಾವಾಹಿಯಲ್ಲಿ ಜಗ್ಗೇಶ್ ಅಭಿನಯದ 'ಬೊಂಬಾಟ್ ಹುಡುಗ' ಚಿತ್ರದ ದೃಶ್ಯವನ್ನು ಮರುಸೃಷ್ಟಿಸಲಾಗಿದೆ. ಗಿರಿಜಾ ತನ್ನ ತಾಯಿಯೊಂದಿಗೆ ರಹಸ್ಯವಾಗಿ ಮಾತನಾಡುವ ಈ ದೃಶ್ಯವನ್ನು ಚಿತ್ರೀಕರಿಸುವಾಗ ಸೀರಿಯಲ್ ತಂಡ ಎಡವಟ್ಟು ಮಾಡಿಕೊಂಡಿದೆ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ.
12:57 PM (IST) Mar 02
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಪೊಲೀಸ್ ಸಮವಸ್ತ್ರ ಧರಿಸಿ ರಿಯಲ್ ಎಸ್ಟೇಟ್ ಏಜೆಂಟ್ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಈ ಕೃತ್ಯದ ಸಂಚನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಯೊಬ್ಬ ಪೆರೋಲ್ ಮೇಲೆ ಹೊರಬಂದಾಗ ರೂಪಿಸಿದ್ದಾರೆ.
12:25 PM (IST) Mar 02
2007ರಲ್ಲಿ ಬಿಡುಗಡೆಯಾದ ಸಿನಿಮಾ ಪ್ರೀತಿಗೆ ಹೊಸ ಭಾಷ್ಯ ಬರೆದಿತ್ತು. ಎಸ್. ನಾರಾಯಣ್ ನಿರ್ದೇಶನದ ಈ ಚಿತ್ರವು ಕೇವಲ 24 ದಿನಗಳಲ್ಲಿ ಚಿತ್ರೀಕರಣಗೊಂಡಿತ್ತು ಎಂಬ ಸ್ವಾರಸ್ಯಕರ ವಿಷಯವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಈ ಚಿತ್ರದ ಹಾಡುಗಳು ಇಂದಿಗೂ ಜನಪ್ರಿಯವಾಗಿವೆ.
12:03 PM (IST) Mar 02
ಜರ್ಮನ್ ಯೂಟ್ಯೂಬರ್ ಲಿಜ್ ಅವರು ಬೆಂಗಳೂರಿನ ಟ್ರಾಫಿಕ್ ಬಗ್ಗೆ ಮಾಡಿದ ವ್ಯಂಗ್ಯಾತ್ಮಕ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ಯಾಬ್ನಲ್ಲಿ ಪ್ರಯಾಣಿಸುವಾಗ ಊಟ-ತಿಂಡಿ, ಲ್ಯಾಪ್ಟಾಪ್ ಇಟ್ಟುಕೊಂಡು ಕೆಲಸ ಮುಗಿಸಿಕೊಳ್ಳಿ ಎಂಬ ಆಕೆಯ ಸಲಹೆ ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ.
11:44 AM (IST) Mar 02
ಆಯತೊಲ್ಲಾ ಅಲಿ ಖಮೇನಿ ಸಾವಿನೊಂದಿಗೆ, ಪ್ರಗತಿಪರ ಚಿಂತನೆಯ ದೇಶವನ್ನು ಧಾರ್ಮಿಕ ಮೂಲಭೂತವಾದ ತೆಕ್ಕೆಗೆ ತಳ್ಳಿದ್ದ ವ್ಯಕ್ತಿತ್ವವೊಂದು ಇರಾನ್ನ ಇತಿಹಾಸದ ಪುಟ ಸೇರಿದಂತಾಗಿದೆ. ಧಾರ್ಮಿಕ ನೆಲೆಗಟ್ಟಿನಲ್ಲಿ ದೇಶದ ಒಳಗೂ, ಹೊರಗೂ ದ್ವೇಷಕಟ್ಟಿಕೊಂಡ ಖಮೇನಿಯ ಜೀವನವೇ ಒಂದು ರೋಚಕ ಅಧ್ಯಾಯ.
11:27 AM (IST) Mar 02
ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಹ*ತ್ಯೆಯಾಗಿದ್ದು, ಇದಕ್ಕೆ ಕರ್ನಾಟಕದ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಬಗ್ಗೆ ನಟ ಪ್ರಥಮ್, ನಮ್ಮ ಯೋಧರು ಸತ್ತಾಗ ಈ ಕಾಳಜಿ ಎಲ್ಲಿರುತ್ತದೆ ಎಂದು ಪ್ರಶ್ನಿಸಿದ್ದಾರೆ.
10:55 AM (IST) Mar 02
ಬೆಂಗಳೂರಿನ ಅಮೃತಹಳ್ಳಿ ಗ್ಯಾಂಗ್ರೇ*ಪ್ ಪ್ರಕರಣದಲ್ಲಿ ಆರೋಪಿ ನಿಖಿಲ್ನನ್ನು ಬಂಧಿಸಲಾಗಿದೆ. 'ಶುಗರ್ ಡ್ಯಾಡಿ' ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಈತನಿಂದ ಯುವತಿಯರಿಗೆ ಬ್ಲ್ಯಾಕ್ಮೇಲ್ ನಡೆಯುತ್ತಿತ್ತು. ಇದೀಗ ಪೊಲೀಸರು ಪಾರ್ಟಿಯಲ್ಲಿ ಭಾಗವಹಿಸಿದ ಪ್ರಭಾವಿಗಳ ಪಟ್ಟಿಯನ್ನು ತನಿಖೆ ಮಾಡುತ್ತಿದ್ದಾರೆ.
10:04 AM (IST) Mar 02
ಸಾಮಾನ್ಯವಾಗಿ ಮನೆಯಲ್ಲಿ ಬಳಕೆ ಮಾಡುವ ಕುಕ್ಕರ್, ಟೀ-ಕಾಫಿ ಮಾಡಿದ ಪಾತ್ರೆ ಕತ್ತು ಹೋಗಿದ್ಯಾ? ತಳ ಸೀದು ಹೋಗಿದ್ಯಾ? ಜಿಡ್ಡು ಹೋಗ್ತಿಲ್ವಾ? ಇದಕ್ಕೆ ಸಿಂಪಲ್ ವಿಧಾನ ಇದೆ. ಹಾಗಾದರೆ ಏನು? ಏನೇನು ಹಾಕಬೇಕು? ಉಜ್ಜದೆ, ತಿಕ್ಕದೆ ಹೇಗೆ ತೊಳೆಯಬಹುದು?
09:38 AM (IST) Mar 02
ನಟ ಸುದೀಪ್ ಅವರು ತಮ್ಮ ಮಾಸ್ ಇಮೇಜ್ನಿಂದ ಹೊರಬಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸಹಾಯಕ ನಿರ್ದೇಶಕರೊಬ್ಬರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಲಿದ್ದು, 'ಬಿಲ್ಲ ರಂಗ ಬಾಷ' ಚಿತ್ರಕ್ಕೂ ಮುನ್ನವೇ ಈ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ.
09:27 AM (IST) Mar 02
ಇತ್ತೀಚಿನ ಉದ್ವಿಗ್ನತೆಯ ನಂತರ ಬಾಗಲಕೋಟೆಯಲ್ಲಿ ಆರ್ಎಸ್ಎಸ್ ಬೃಹತ್ ಕೇಸರಿ ಶಕ್ತಿ ಪ್ರದರ್ಶನ ನಡೆಸಿತು. ಪಂಕಾ ಮಸೀದಿ ಮುಂದೆ ಬೃಹತ್ ಪರದೆ ಹಾಕಿ, ಬಿಗಿ ಪೊಲೀಸ್ ಭದ್ರತೆಯೊಂದಿಗೆ ನಡೆದ ಶೋಭಾಯಾತ್ರೆಯು ಯಾವುದೇ ಅಹಿತಕರ ಘಟನೆಯಿಲ್ಲದೆ ಯಶಸ್ವಿಯಾಗಿ ಜರುಗಿತು.
09:09 AM (IST) Mar 02
Red Chutney For Masala Dosa: ಮಸಾಲದೋಸೆ ಮೇಲೆ ಸವರುವ ಚಟ್ನಿ ತುಂಬ ಚೆನ್ನಾಗಿ ಇರುವುದು. ನಾರ್ಮಲ್ ಚಟ್ನಿ ಮಾಡೋ ಥರ ಇದನ್ನು ಮಾಡೋದೆಲ್ಲ. ಇಲ್ಲೊಂದು ಸಿಂಪಲ್ ಟ್ರಿಕ್ ಇದೆ. ಹಾಗಾದರೆ ಏನೇನು ಹಾಕಬೇಕು? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
08:40 AM (IST) Mar 02
Cooker rice recipes indian style: ಕುಕ್ಕರ್ನಲ್ಲಿ ಅನ್ನ ಮಾಡೋದು ಸಹಜ. ಇದು ಬಹಳ ಬೇಗ ಕೂಡ ಆಗುವುದು. ಆದರೆ ಕುಕ್ಕರ್ ಅನ್ನ ಮುದ್ದೆ ಮುದ್ದೆ ಆಗುತ್ತೆ ಎಂದು ಅನೇಕರು ಬೇಸರ ಮಾಡಿಕೊಳ್ಳೋದುಂಟು. ಇದಕ್ಕೂ ಪರಿಹಾರ ಇದೆ.
08:38 AM (IST) Mar 02
ಜೀ ಕನ್ನಡದ 'ಲಕ್ಷ್ಮೀ ನಿವಾಸ' ಧಾರಾವಾಹಿಯಲ್ಲಿ ನೀಲು ಪಾತ್ರಕ್ಕೆ ಬದಲಾವಣೆಯಾಗಿದೆ. ಗರ್ಭಿಣಿ ಮಾನಸ ಮನೋಹರ್ ಪಾತ್ರದಿಂದ ಹೊರನಡೆದಿದ್ದು, ಅವರ ಜಾಗಕ್ಕೆ 'ಲಕ್ಷ್ಮೀ ಬಾರಮ್ಮ' ಖ್ಯಾತಿಯ ನಟಿ ಬಂದಿದ್ದಾರೆ.
08:00 AM (IST) Mar 02