ಬೆಳಗಾವಿ: ಮಾಜಿ ಸಚಿವ ಲಕ್ಷ್ಮಣ ಸವದಿಗೂ ನಮಗೂ ಮುಸುಕಿನ ಗುದ್ದಾಟವಿಲ್ಲ, ಓಪನ್ ಗುದ್ದಾಟ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿದರು. ಬೆಳಗಾವಿಯ ಅಥಣಿ ತಾಲೂಕಿನ ಕೆಂಪವಾಡದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಲಕ್ಷ್ಮಣ ಸವದಿ ಅವರ ಬಗ್ಗೆ ಮಾತನಾಡಿದರೆ ಹೊರಗಿನವರು ಎಂದು ಹೇಳುತ್ತಾರೆ. ಆದ್ದರಿಂದ, ನನ್ನ ಹಿತೈಷಿಗಳು ನನಗೆ ಅಥಣಿಯಲ್ಲಿ ಮಾತನಾಡಬಾರದು ಎಂದು ಹೇಳಿದ್ದಾರೆ. ಇದರ ಬಗ್ಗೆ ಈಗ ಮಾತನಾಡದೇ ಚುನಾವಣೆ ಸಂದರ್ಭದಲ್ಲಿ ಎಳೆಎಳೆಯಾಗಿ ಮಾತನಾಡುತ್ತೇನೆ ಎಂದರು.
ಸವದಿ ಬಿಜೆಪಿಗೆ ಬರುತ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮಲ್ಲೇ ಘಟಾನುಘಟಿ ನಾಯಕರು ಇರುವಾಗ ಅಂಥವರ ಅವಶ್ಯಕತೆ ನಮಗಿಲ್ಲ. ನನಗಂತೂ ಮೊದಲೇ ಅವಶ್ಯಕತೆ ಇಲ್ಲ, ಹೈಕಮಾಂಡ್ಗೆ ಬೇಕಾದರೆ ನಾವೇನೂ ಹೇಳಕ್ಕಾಗಲ್ಲ ಎಂದರು.
11:13 PM (IST) Feb 01
ಬಿಗ್ ಬಾಸ್ ವಿನ್ನರ್ಗೆ ಸಿಜೆ ರಾಯ್ ದುರಂತ ಸಾವು ಕಾಡುತ್ತಿದೆ. ಏನೂ ಇಲ್ಲದವನಿಗೆ 50 ಲಕ್ಷ ಕೊಟ್ಟವರು ಈ ನಿರ್ಧಾರ ಮಾಡಿದ್ದೇಕೆ?, ಬದುಕಿನ ಸವಾಲುಗಳು ಗೆದ್ದ ಸಿಜೆ ರಾಯ್ ಈ ನಿರ್ಧಾರ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
11:11 PM (IST) Feb 01
ಕಾನ್ಫಿಡೆಂಟ್ ಗ್ರೂಪ್ನ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ ತನಿಖೆ ಚುರುಕುಗೊಂಡಿದೆ. ಐಟಿ ಅಧಿಕಾರಿಗಳ ಕಿರುಕುಳದ ಆರೋಪದ ಮೇಲೆ, ದಾಳಿ ನಡೆಸಿದ್ದ ತಂಡವನ್ನು ವಿಚಾರಣೆಗೊಳಪಡಿಸಲಾಗಿದ್ದು, ತನಿಖೆ ಮುಗಿಯುವವರೆಗೂ ಬೆಂಗಳೂರು ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ.
10:53 PM (IST) Feb 01
Actor Ram Charan Teja News: ನಟ ಚಿರಂಜೀವಿ ಮನೆಗೆ ಒಟ್ಟಿಗೆ ಡಬಲ್ ಖುಷಿ ಸಿಕ್ಕಿದೆ. ರಾಮ್ ಚರಣ್ ತೇಜ ಹಾಗೂ ಉಪಾಸನಾ ಅವರು ಅವಳಿ ಮಕ್ಕಳಿಗೆ ಪಾಲಕರಾಗಿ ಬಡ್ತಿ ಪಡೆದಿದ್ದಾರೆ. ಆದರೆ ವೇಣು ಸ್ವಾಮಿ ಹೇಳಿದ್ದ ಭವಿಷ್ಯ ಸುಳ್ಳಾಯ್ತು.
10:45 PM (IST) Feb 01
10:27 PM (IST) Feb 01
10:11 PM (IST) Feb 01
ರಾಯ್ ಉತ್ತರಾಧಿಕಾರಿ ಯಾರು? ಕಾನ್ಫಿಡೆಂಟ್ ಗ್ರೂಪ್ನ ಹೊಸ ನಾಯಕತ್ವ ಘೋಷಿಸಿದ ಕುಟುಂಬ, ಸಾವಿರಾರು ಕೋಟಿ ವ್ಯವಹಾರದ ಉದ್ಯಮ ಮುನ್ನಡೆಸವವರು ಯಾರು, ಸಿಜೆ ರಾಯ್ ಸಾವಿನಿಂದ ಹುಟ್ಟಿಕೊಂಡ ಪ್ರಶ್ನೆಗೆ ಉತ್ತರ ನೀಡಿದ ಕುಟುಂಬ.
09:59 PM (IST) Feb 01
09:30 PM (IST) Feb 01
09:26 PM (IST) Feb 01
ಡಿಸಿಎಂ ಡಿಕೆಶಿ ಫೋಟೋವನ್ನು ಮೆಹಂದಿ ಹಾಕಿಸಿಕೊಂಡ ಮುಸ್ಲಿಂ ಮಹಿಳೆ, ಇದೀಗ ಈ ಫೋಟೋಗಳು ಭಾರಿ ಸದ್ದು ಮಾಡುತ್ತಿದೆ. ಖುದ್ದು ಡಿಕೆ ಶಿವಕುಮಾರ್ ಈ ಫೋಟೋ ಹಂಚಿಕೊಂಡಿದ್ದಾರೆ. ಏನಿದು ಕನಕೋತ್ಸವ ಸಂಭ್ರಮ?
09:03 PM (IST) Feb 01
ಕೇಂದ್ರ ಸರ್ಕಾರವು ನರೇಗಾ ಯೋಜನೆಯ ಹೆಸರು ಬದಲಾಯಿಸಿದ್ದನ್ನು ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ. ಸಚಿವ ಹೆಚ್.ಸಿ. ಮಹದೇವಪ್ಪ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಕೇಂದ್ರದ ಕ್ರಮವನ್ನು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.
08:33 PM (IST) Feb 01
ಬಿಗ್ ಬಾಸ್ನಿಂದ ಹೊರಬಂದ ನಂತರವೂ ಆ್ಯಂಕರ್ ಜಾಹ್ನವಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ತಮಗೆ ಇನ್ನೂ ಬಿಗ್ ಬಾಸ್ ಪೇಮೆಂಟ್ ಬಂದಿಲ್ಲ ಮತ್ತು ಸಾಲ ಮಾಡಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಹೀಗೆ ಹೇಳಿದ್ದು ಯಾಕೆ?
08:20 PM (IST) Feb 01
ಕಲ್ಯಾಣ ಮಂಟಪಕ್ಕೆ ಬರ್ತಿದ್ದ ವರನಿಗೆ ಚಾಕು ಇರಿದ ಪ್ರಕರಣದಲ್ಲಿ ವಧುವಿನ ಕೈವಾಡ ಬಹಿರಂಗ, ಮತ್ತೊಬ್ಬನ ಜೊತೆ ಲವ್ನಲ್ಲಿದ್ದ ವಧು, ಆಕೆಯ ಬಾಯ್ಫ್ರೆಂಡ್ ಜೊತೆ ಸೇರಿ ಮಾಡಿದ ಪ್ಲಾನ್ ಇದೀಗ ಬಟಾ ಬಯಲಾಗಿದೆ.
08:14 PM (IST) Feb 01
Alia Bhatt On Ranbir Kapoor: ಬಾಲಿವುಡ್ ಸೂಪರ್ಸ್ಟಾರ್ಗಳಾದ ರಣಬೀರ್ ಕಪೂರ್, ಆಲಿಯಾ ಭಟ್ ಅವರ ದಾಂಪತ್ಯ ಜೀವನದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಗಾಸಿಪ್ಗಳು ಹರಿದಾಡುತ್ತಿರುತ್ತವೆ. ಈ ಬಗ್ಗೆ ಆಲಿಯಾ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.
07:52 PM (IST) Feb 01
Gold And Silver Rate Update: ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಲ್ಲಿ ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ ₹1.35 ಲಕ್ಷದಷ್ಟು ಕುಸಿತ ಕಂಡಿದೆ. ಇದು ಶೇಕಡಾ 33 ರಷ್ಟು ಇಳಿಕೆಯಾದರೆ, ಚಿನ್ನದ ಬೆಲೆಯೂ ಶೇಕಡಾ 18 ರಷ್ಟು ಇಳಿಕೆ ಕಂಡಿದೆ.
07:50 PM (IST) Feb 01
ಉದ್ಯಮಿ ಸಿಜೆ ರಾಯ್ ಅವರ ದುರಂತ ಅಂತ್ಯದ ನಂತರ, ಖ್ಯಾತ ಉದ್ಯಮಿ ಟಿ.ವಿ. ಮೋಹನ್ದಾಸ್ ಪೈ ಅವರು ತೆರಿಗೆ ಅಧಿಕಾರಿಗಳ ಕಿರುಕುಳ ಮತ್ತು ವ್ಯವಸ್ಥೆಯಲ್ಲಿನ ಲೋಪದೋಷಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ದಾಖಲೆಯ ತೆರಿಗೆ ಸಂಗ್ರಹದ ನಡುವೆಯೂ ಈ ರೀತಿಯ ಕ್ರೂರ ದಾಳಿಗಳ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.
07:12 PM (IST) Feb 01
Bhagyalakshmi Serial Episode: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಈಗ ತಾಂಡವ್ ಮನೆ ಬಿಟ್ಟು ಬಂದಿದ್ದಾನೆ. ಬೀದಿ ಪಾಲಾಗಿರುವ ತಾಂಡವ್ ಅವರು ಭಾಗ್ಯ ಬಳಿ ಕ್ಷಮೆ ಕೇಳುತ್ತಾರೆ. ಈ ಧಾರಾವಾಹಿ ಕಥೆಯ ಬಗ್ಗೆ ಸುದರ್ಶನ್ ರಂಗಪ್ರಸಾದ್ ಅವರು ಮಾತನಾಡಿದ್ದಾರೆ.
07:10 PM (IST) Feb 01
ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ಮತ್ತು ದಕ್ಷಿಣ ಭಾರತವನ್ನು ಕಡೆಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ 'ಚೊಂಬು' ನೀಡಲಾಗಿದೆ ಎಂದ ಅವರು, ತೆರಿಗೆ ಪಾಲು ಹಂಚಿಕೆಯಲ್ಲಿನ ತಾರತಮ್ಯ ನಿರ್ಲಕ್ಷ್ಯದ ಬಗ್ಗೆ ಅಂಕಿ-ಅಂಶ ಸಮೇತ ತರಾಟೆಗೆ ತೆಗೆದುಕೊಂಡರು.
06:55 PM (IST) Feb 01
Beef Served Instead of Mutton to Actor Sayak Chakraborty; Waiter Arrested ಪ್ರಖ್ಯಾತ ನಟ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಆದ ಘಟನೆಯನ್ನು ವಿವರಿಸಿದ್ದಾನೆ. ರೆಸ್ಟೋರೆಂಟ್ನವರು ತಮಗೆ ಮಟನ್ ಎಂದು ಗೋಮಾಂಸ ಬಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
06:25 PM (IST) Feb 01
ಐಟಿ ದಾಳಿಯ ನಂತರ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ. ರಾಯ್ ಆತ್ಮ*ತ್ಯೆ ಮಾಡಿಕೊಂಡಿದ್ದು, ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆತ್ಮಹತ್ಯೆಗೂ ಮುನ್ನ ಅವರು 9 ಪುಟಗಳ ಡೆತ್ನೋಟ್ ಬರೆದಿದ್ದು, ಇದರಲ್ಲಿ ಐಟಿ ದಾಳಿ ಮತ್ತು ಮಾನಸಿಕ ಒತ್ತಡದ ಬಗ್ಗೆ ಉಲ್ಲೇಖಿಸಿರುವ ಶಂಕೆ ಇದೆ.
06:23 PM (IST) Feb 01
ರಾಯಚೂರಿನ ತಿಂಥಣಿ ಕಾಗಿನೆಲೆ ಪೀಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ದಿವಂಗತ ಸಿದ್ದರಾಮಾನಂದಪುರಿ ಶ್ರೀಗಳ ಗದ್ದುಗೆಗೆ ನಮನ ಸಲ್ಲಿಸಿದರು. ಬೀರ ದೇವರ ದರ್ಶನ ಪಡೆದ ಅವರು, ಹಣೆಗೆ ಬಂಡಾರ ಹಚ್ಚಿಸಿಕೊಳ್ಳುವ ವೇಳೆ ನಡೆದ ಘಟನೆಯು ಕುತೂಹಲ ಮೂಡಿಸಿತು.
05:59 PM (IST) Feb 01
ಕೊಟ್ಟೂರಿನಲ್ಲಿ ನಡೆದ ಒಂದೇ ಕುಟುಂಬದ ಮೂವರ ಹತ್ಯೆಯು ಮರ್ಯಾದೆಗೇಡಿನ ಕೃತ್ಯವಲ್ಲ, ಬದಲಿಗೆ 1.20 ಕೋಟಿ ರೂಪಾಯಿ ಹಣದಾಸೆಗಾಗಿ ನಡೆದಿದೆ ಎಂದು ತನಿಖೆಯಿಂದ ಬಯಲಾಗಿದೆ. ಮಗನೇ ತನ್ನ ಮಾವನ ಜೊತೆ ಸೇರಿ ಹೆತ್ತ ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿದ್ದನು.,
05:21 PM (IST) Feb 01
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ, ಅತ್ತೆಯ ಕಿರುಕುಳದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಮೂವರು ಮುಗ್ಧ ಮಕ್ಕಳನ್ನು ನೇಣು ಬಿಗಿದು ಕೊಲೆ ಮಾಡಿದ್ದಾಳೆ. ನಂತರ ತಾನೂ ಡೀಸೆಲ್ ಕುಡಿದು ಆತ್ಮ*ಹತ್ಯೆಗೆ ಯತ್ನಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
05:19 PM (IST) Feb 01
ತಂಬಾಕು ಆರೋಗ್ಯಕ್ಕೆ ಹಾನಿಕರ, ಕ್ಯಾನ್ಸರ್ಗೆ ಕಾರಣವಾಗುತ್ತೆ ಅಂತ ಗೊತ್ತಿದ್ರೂ, ಧೂಮಪಾನಿಗಳು ಈ ಅಭ್ಯಾಸವನ್ನು ಬಿಡುವುದಿಲ್ಲ. ಆದ್ರೆ ಮನುಷ್ಯ ಧೂಮಪಾನಕ್ಕೆ ಯಾಕೆ ದಾಸನಾಗುತ್ತಾನೆ ಅಂತ ಎಂದಾದರೂ ಯೋಚಿಸಿದ್ದೀರಾ?
05:12 PM (IST) Feb 01
ರಾಯಚೂರಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ನಡೆದ ಸಿದ್ದರಾಮಾನಂದಪುರಿ ಶ್ರೀಗಳ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ, ಒಂದು ಅಥವಾ ಎರಡು ತಿಂಗಳೊಳಗೆ ಜಾತಿ ಗಣತಿ ವರದಿ ಬಿಡುಗಡೆ ಮಾಡುವುದಾಗಿ ಘೋಷಿಸಿದ ಅವರು, ಪೀಠದ ಅಭಿವೃದ್ಧಿಗೆ ಹಣಕಾಸಿನ ನೆರವು ನೀಡುವುದಾಗಿ ಭರವಸೆ.
05:00 PM (IST) Feb 01
04:41 PM (IST) Feb 01
ದಾವಣಗೆರೆಯಲ್ಲಿ, ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಮಹಿಳಾ ಸಿಪಿಐ ಗಾಯತ್ರಿ ಸೇರಿದಂತೆ ಪೊಲೀಸ್ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಪುತ್ರರು ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು, ಓರ್ವ ಆರೋಪಿ ಬಂಧನ.
04:24 PM (IST) Feb 01
ಗೃಹಲಕ್ಷ್ಮಿ ಯೋಜನೆ ಕುರಿತು ಟೀಕಿಸಿದ್ದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರನ್ನು 'ಬಲೂನ್'ಗೆ ಹೋಲಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈವರೆಗೆ 26 ಕಂತುಗಳಲ್ಲಿ ಹಣ ಜಮೆ ಮಾಡಿದ್ದು, ಬಾಕಿ ಹಣವನ್ನೂ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.
04:16 PM (IST) Feb 01
Anchor Anushree: ನಿರೂಪಕಿ ಅನುಶ್ರೀ ಅವರು ನಿರೂಪಣೆ ಶುರು ಮಾಡಿ 20 ವರ್ಷಗಳಾಗಿವೆ. ಜೀ ಕನ್ನಡ ವಾಹಿನಿಯು ಈ ಖುಷಿಯನ್ನು ಸಂಭ್ರಮಿಸಿದೆ. ಈ ವೇಳೆ ಎಲ್ಲೂ ಹೇಳಿರದ ವಿಷಯವನ್ನು ಅವರು ಮಾತನಾಡಿದ್ದಾರೆ.
03:56 PM (IST) Feb 01
ರೋಲ್ಸ್ ರಾಯ್ಸ್ ಸೇರಿ ನೆಚ್ಚಿನ ಕಾರುಗಳೊಂದಿಗೆ ಸಿಜೆ ರಾಯ್ ಅಂತಿಮ ಯಾತ್ರೆ ಮಾಡಲಾಗಿದೆ. ಸಿಜೆ ರಾಯ್ಗೆ ಐಷಾರಾಮಿ ಕಾರುಗಳೆಂದರೆ ಪಂಚಪ್ರಾಣ. ರಾಯ್ ನೆಚ್ಚಿನ ಕಾರುಗಳಲ್ಲಿ ಅಂತಿಮಯಾತ್ರೆ ನಡೆದಿದೆ.
03:43 PM (IST) Feb 01
ಸಿಜೆ ರಾಯ್ ದುರಂತಕ್ಕೂ ಉದ್ಯಮಿಯ ಕಾರುಗಳ ನಂಬರ್ಗೂ ಇದೆ ಲಿಂಕ್, ಸಿಜೆ ರಾಯ್ ಕೆಲ ಕಾರುಗಳ ನಂಬರ್ 0003. ಈ ನಂಬರ್ಗಾಗಿ ಲಕ್ಷ ಲಕ್ಷ ರೂಪಾಯಿ ನೀಡುತ್ತಿದ್ದರು. ಇದೀಗ ಸಾವಿನಲ್ಲೂ ಪ್ರೀತಿಯ ನಂಬರ್ ಜೊತೆ ಅಂತಿಮ ಪಯಣ ಮಾಡಿದ್ದಾರೆ.
03:34 PM (IST) Feb 01
ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ದೇವರಾಜ್ ನಡುವಿನ ವಿದ್ಯಾನಗರದ ಸೈಟ್ ವಿವಾದ ಮತ್ತೆ ಭುಗಿಲೆದ್ದಿದೆ. ವಿವಾದಿತ ಜಾಗದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ದೇವರಾಜ್ ಮುಂದಾದಾಗ, ಪುಷ್ಪಾ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.
02:53 PM (IST) Feb 01
ಅನ್ನದಾನೀಶ್ವರ ಯಾತ್ರಾ ಮಹೋತ್ಸವವು ಅದ್ಧೂರಿಯಾಗಿ ಜರುಗಿತು. ಈ ವರ್ಷದ ವಿಶೇಷವಾಗಿ, ಭಕ್ತರಿಗೆ ಲಕ್ಷಾಂತರ ಮಸಾಲಾ ಮಿರ್ಚಿಗಳನ್ನು ಪ್ರಸಾದವಾಗಿ ನೀಡಲಾಯಿತು. ಇದರೊಂದಿಗೆ ವಿವಿಧ ಊರುಗಳಿಂದ ಭಕ್ತರು ತಂದ ಜೋಳದ ರೊಟ್ಟಿ, ಹೋಳಿಗೆ ಸೇರಿದಂತೆ ಬಗೆಬಗೆಯ ಭಕ್ಷ್ಯಗಳು ಮಹಾಪ್ರಸಾದದ ವೈಭವವನ್ನು ಹೆಚ್ಚಿಸಿದವು.
02:38 PM (IST) Feb 01
02:13 PM (IST) Feb 01
02:03 PM (IST) Feb 01
ಕೇಂದ್ರ ಬಜೆಟ್ ಕುರಿತು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದ್ದು, ಬಜೆಟ್ನಿಂದಾಗಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಬರೋಬ್ಬರಿ 30 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದಿದ್ದಾರೆ. ಕರ್ನಾಟಕದ ಪ್ರಮುಖ ಬೇಡಿಕೆಗಳಾದ ಮಹದಾಯಿ, ಏಮ್ಸ್ ಯೋಜನೆಗಳ ಕಡೆಗಣಿಸಲಾಗಿದೆ ಎಂದರು.
01:34 PM (IST) Feb 01
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ, ಗಾಂಜಾ ನೀಡಲು ನಿರಾಕರಿಸಿದ್ದಕ್ಕೆ ಸ್ನೇಹಿತರೇ ಯುವಕನ ಮೇಲೆ ಕಿಮ್ಸ್ ಆಸ್ಪತ್ರೆಯ ಆವರಣದಲ್ಲೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಈ ಹಿಂದೆ ಗಾಂಜಾ ದಂಧೆ ಬಿಟ್ಟು ಸರಿ ದಾರಿಗೆ ಬಂದಿದ್ದ ಯುವಕನ ಮೇಲೆ ನಡೆದ ಈ ದಾಳಿಯು, ನಗರದಲ್ಲಿನ ಗಾಂಜಾ ಹಾವಳಿ ಬಯಲು ಮಾಡಿದೆ.
01:26 PM (IST) Feb 01
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಇಶಾನ್ ಕಿಶನ್ ಶತಕ ಸಿಡಿಸಿ ಮಿಂಚಿದರೆ, ಸಂಜು ಸ್ಯಾಮ್ಸನ್ ವಿಫಲರಾದರು. ಅಂತಿಮ ಪಂದ್ಯದಲ್ಲಿ ಕೀಪಿಂಗ್ ಮಾಡಲು ಸಜ್ಜಾಗಿದ್ದ ಸಂಜುಗೆ ಕೋಚ್ ಗಂಭೀರ್ ಶಾಕ್ ನೀಡಿ, ಇಶಾನ್ಗೆ ಜವಾಬ್ದಾರಿ ವಹಿಸಿದ್ದು ತೀವ್ರ ಚರ್ಚೆ ಹುಟ್ಟುಹಾಕಿದೆ.
01:19 PM (IST) Feb 01
ಬಿಬಿಎಂಪಿ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ಗುರಿ ತಲುಪದ ಹಿನ್ನೆಲೆಯಲ್ಲಿ, ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳ ಸಭೆ ನಡೆಸಿದರು. ರಸ್ತೆ ಅಗಲೀಕರಣಕ್ಕೆ ಜಾಗ ವಶ ಅನಾಥ ವಾಹನಗಳ ತೆರವಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.
01:04 PM (IST) Feb 01
ಹಾಸನದ ವಿದ್ಯಾನಗರದಲ್ಲಿ ನಿರ್ಮಾಪಕಿ ಪುಷ್ಪ ಮತ್ತು ಜಿಪಿಎ ಹೋಲ್ಡರ್ ದೇವರಾಜ್ ನಡುವಿನ ನಿವೇಶನ ವಿವಾದ ಮತ್ತೆ ಭುಗಿಲೆದ್ದಿದೆ. ಪುಷ್ಪ ಅವರು ಕಾಂಪೌಂಡ್ ನಿರ್ಮಾಣಕ್ಕೆ ಮುಂದಾದಾಗ ದೇವರಾಜ್ ಆಕ್ಷೇಪ ವ್ಯಕ್ತಪಡಿಸಿದ್ದು, ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.
12:53 PM (IST) Feb 01
ಸಾಂಗ್ಲಿ ಮೂಲದ ಕೃಷಿ ಸಾಧಕ ಡಾ.ಸಂಜೀವ ಮಾನೆ ಅವರು ವಿಜಯಪುರದಲ್ಲಿ ನಡೆದ ಸಮಾವೇಶದಲ್ಲಿ ಎ-1 ಕೃಷಿ ಪದ್ಧತಿಯನ್ನು ಪರಿಚಯಿಸಿದರು. ಪ್ರತಿ ಎಕರೆಗೆ 160 ರಿಂದ 170 ಟನ್ವರೆಗೆ ಕಬ್ಬು ಬೆಳೆದು, ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ ಗಳಿಸುವ ವಿಧಾನವನ್ನು ಅವರು ವಿವರಿಸಿದರು.