LIVE NOW
Published : Jan 01, 2026, 06:15 AM ISTUpdated : Jan 01, 2026, 11:30 AM IST

Karnataka News Live: ಯುವತಿಗೆ ಸೋಷಿಯಲ್ ಮೀಡಿಯಾದಲ್ಲಿ ವಿಶ್‌ ಮಾಡಿದ್ದಕ್ಕೆ ಯುವಕನ ಹತ್ಯೆ, ಬೆಚ್ಚಿಬಿದ್ದ ಚಿಕ್ಕಮಗಳೂರು!

ಸಾರಾಂಶ

 

ಬೆಂಗಳೂರು: ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಜ.2ರಂದು ಮನೆಗಳನ್ನು ವಿತರಿಸಲಾಗುತ್ತದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂತ್ರಸ್ತರಿಗೆ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ ಪರಿಶೀಲನೆ ಮುಂದುವರಿದಿದೆ. ಅರ್ಹರಿಗೆ ಮಾತ್ರ ವಸತಿ ವ್ಯವಸ್ಥೆ ಮಾಡಿಕೊಡುವುದು ಸರ್ಕಾರದ ಉದ್ದೇಶ. ತರಾತುರಿ ಮಾಡದೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಅರ್ಹರ ದಾಖಲೆಗಳನ್ನು ಪರಿಶೀಲಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ, ಜ.1ರಂದು ಉದ್ದೇಶಿಸಲಾಗಿದ್ದ ಮನೆಗಳ ವಿತರಣೆ ಕಾರ್ಯ ಜ.2ಕ್ಕೆ ಮುಂದೂಡಲಾಗಿದೆ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

11:30 AM (IST) Jan 01

ಯುವತಿಗೆ ಸೋಷಿಯಲ್ ಮೀಡಿಯಾದಲ್ಲಿ ವಿಶ್‌ ಮಾಡಿದ್ದಕ್ಕೆ ಯುವಕನ ಹತ್ಯೆ, ಬೆಚ್ಚಿಬಿದ್ದ ಚಿಕ್ಕಮಗಳೂರು!

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಮಂಜುನಾಥ್ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೇಣು ಮತ್ತು ಆತನ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ.  

Read Full Story

11:28 AM (IST) Jan 01

Zee Kannada Serial ತಾರೆಯರ ಹೊಸ ವರ್ಷದ ಸಂಭ್ರಮ - ಫೋಟೋಗಳಲ್ಲಿ ನೋಡಿ

ಜೀ ಕನ್ನಡ ವಾಹಿನಿಯು ತನ್ನ ಜನಪ್ರಿಯ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ತಾರೆಯರ ಹೊಸ ವರ್ಷದ ಸಂಭ್ರಮವನ್ನು ವಿಶಿಷ್ಟವಾಗಿ ಆಚರಿಸಿದೆ. ಅಮೃತಧಾರೆ, ಅಣ್ಣಯ್ಯ, ಲಕ್ಷ್ಮೀ ನಿವಾಸ ಸೇರಿದಂತೆ ಹಲವು ಸೀರಿಯಲ್ ಜೋಡಿಗಳ AI-ರಚಿತ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳಿಗೆ ಅಚ್ಚರಿ ನೀಡಿದೆ.
Read Full Story

10:21 AM (IST) Jan 01

BBK 12 - ಯಾಕಿಂಗೆ ಆದೆ ಗಿಲ್ಲಿ? ಅಭಿಮಾನಿಗಳಿಂದಲೇ ಬೇಸರ; ಇತ್ತ ಗಿಲ್ಲಿಯಾಗಿ ಬದಲಾದ್ರಂತೆ ರಘು!

ಬುಧವಾರದ ಸಂಚಿಕೆಯಲ್ಲಿ ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧ್ರುವಂತ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಗಿಲ್ಲಿ ನಟನ ಕಾಮಿಡಿಗೆ ತಿರುಗೇಟು ನೀಡಲು ಹೋದಾಗ, ಅವರು 'ಮುದುಕಿ', 'ಅಜ್ಜಿ', 'ವಿಗ್' ಎಂಬಂತಹ ಪದಗಳನ್ನು ಬಳಸಿ ವೈಯಕ್ತಿಕ ನಿಂದನೆ ನಡೆಸಿದರು. 

Read Full Story

09:16 AM (IST) Jan 01

ನಿಟ್ಟೆ ಶಿಕ್ಷಣೆ ಸಂಸ್ಥೆಯ ಸ್ಥಾಪಕ, ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಮತ್ತು ಶಿಕ್ಷಣ ತಜ್ಞ ಎನ್. ವಿನಯ್ ಹೆಗ್ಡೆ (86) ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಗ್ರಾಮೀಣ ಪ್ರದೇಶ ನಿಟ್ಟೆಯನ್ನು ಅಂತರಾಷ್ಟ್ರೀಯ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಅವರು, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸೋದರರಾಗಿದ್ದರು.

Read Full Story

08:21 AM (IST) Jan 01

25 ವರ್ಷಗಳಲ್ಲಿ ಏನೇನ್‌ ಆಯ್ತು ಗೊತ್ತಾ? 21ನೇ ಶತಮಾನದ ಕಾಲು ಶತಮಾನಕ್ಕೆ ತೆರೆ, ಶರವೇಗದಲ್ಲಿ ಬದಲಾಗಿದೆ ಕಾಲ

ಕಳೆದ ಕಾಲು ಶತಮಾನದಲ್ಲಿ ಭಾರತವು ತಂತ್ರಜ್ಞಾನ, ಆರ್ಥಿಕತೆ, ಮತ್ತು ಮೂಲಸೌಕರ್ಯದಲ್ಲಿ ಅದ್ಭುತ ಬದಲಾವಣೆಗಳನ್ನು ಕಂಡಿದೆ. ಸ್ಮಾರ್ಟ್‌ಫೋನ್‌ ಕ್ರಾಂತಿಯಿಂದ ಹಿಡಿದು ಇಸ್ರೋದ ಬಾನಂಗಳದ ಸಾಧನೆಗಳವರೆಗೆ, ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ಆದ ಮಹತ್ವದ ಪರಿವರ್ತನೆಗಳನ್ನು ಈ ಲೇಖನ ವಿವರಿಸುತ್ತದೆ.
Read Full Story

08:11 AM (IST) Jan 01

ಜೈಲಿನಿಂದ ಹೊರಬಂದ ಶಾಸಕ ಪಪ್ಪಿ - ನಟ ದರ್ಶನ್‌ ಭೇಟಿ, ಡಿಕೆ ಶಿವಕುಮಾರ್ ಬಗ್ಗೆ ಹೇಳಿದ್ದೇನು?

ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನ್ಯಾಯದ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿ ನಟ ದರ್ಶನ್‌ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ.

Read Full Story

08:04 AM (IST) Jan 01

BBK 12 - ಫಿನಾಲೆ ಟಿಕೆಟ್‌ಗಾಗಿ ಮನೆಯಲ್ಲಿ ಹೆಚ್ಚಿದ ಕಿಚ್ಚು; ರಣರೋಚಕ ಆಟದಲ್ಲಿ ಗೆದ್ದೋರು ಯಾರು?

ಬಿಗ್‌ಬಾಸ್ ಮನೆಯಲ್ಲಿ ಗ್ರ್ಯಾಂಡ್ ಫಿನಾಲೆ ಟಿಕೆಟ್‌ಗಾಗಿ ಹೊಸ ಕ್ಯಾಪ್ಟನ್ಸಿ ಟಾಸ್ಕ್ ನೀಡಲಾಗಿದ್ದು, ಸ್ಪರ್ಧಿಗಳು ಜೋಡಿಯಾಗಿ ಆಡಿದ್ದಾರೆ. ಸುರಂಗ ಮಾರ್ಗದ ಈ ಆಟದ ವೇಳೆ, ಉಸ್ತುವಾರಿ ವಹಿಸಿದ್ದ ಕಾವ್ಯಾ ಮತ್ತು ಆಟಗಾರ ಧ್ರುವಂತ್ ನಡುವೆ ಮಾತಿನ ಚಕಮಕಿ ನಡೆದಿದೆ.
Read Full Story

07:31 AM (IST) Jan 01

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ

ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ಹೊಸ ವರ್ಷವನ್ನು ಪಾರ್ಟಿ, ಪಟಾಕಿ ಹಾಗೂ ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಜನಸಾಗರವೇ ಸೇರಿದ್ದು, ಹೋಟೆಲ್, ಪಬ್‌ಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

Read Full Story

07:24 AM (IST) Jan 01

Kogilu Layout - ಶೆಡ್‌ ಧ್ವಂಸ ಕುರಿತು ಪಾಕ್‌ಗೆ ಉಗ್ರರಿಂದ ಮಾಹಿತಿ, ಇದು ಸ್ಲೀಪರ್‌ಸೆಲ್‌ಗಳ ಕೆಲಸ - ಆರ್ ಅಶೋಕ್

ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಜಕೀಯ ಸ್ವರೂಪ ಪಡೆದಿದೆ. ಈ ಪ್ರದೇಶವು ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. 

Read Full Story

06:48 AM (IST) Jan 01

ಆಕೆ ದೂರಿಗೆ ತಕ್ಷಣ ಸ್ಪಂದನೆ, ನನ್ನ ಬಗ್ಗೆ ಏಕಾಗಿ ಈ ನಿರ್ಲಕ್ಷ್ಯ? ದರ್ಶನ್ ಪತ್ನಿ ದೂರು

ಸಾಮಾಜಿಕ ಜಾಲತಾಣದಲ್ಲಿನ ಅಶ್ಲೀಲ ಕಾಮೆಂಟ್‌ಗಳ ವಿರುದ್ಧ ನೀಡಿದ ದೂರು ನಿರ್ಲಕ್ಷಿಸಲಾಗಿದೆ ಎಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Read Full Story

06:42 AM (IST) Jan 01

ಬೆಂಗ್ಳೂರಲ್ಲಿ ಮತ್ತೆ ಭಾರಿ ಡ್ರಗ್ಸ್‌ ಬೇಟೆ, ಮಹಾರಾಷ್ಟ್ರ ಬಳಿಕ NCB ಆಪರೇಷನ್‌; 8 ಕೋಟಿ ರು. ಮೌಲ್ಯದ ಖಾಟ್‌ ಎಲೆ ಜಪ್ತಿ - ಆಫ್ರಿಕಾದಿಂದ ಬರುತ್ತಿತ್ತು ಭರ್ಜರಿ ಮಾಲು

ಬೆಂಗಳೂರಿನಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‌ಸಿಬಿ) ಅಧಿಕಾರಿಗಳು ಸುಮಾರು 8 ಕೋಟಿ ರೂಪಾಯಿ ಮೌಲ್ಯದ 160 ಕೆಜಿ ‘ಖಾಟ್‌ ಎಲೆಗಳನ್ನು’ ವಶಪಡಿಸಿಕೊಂಡಿದ್ದಾರೆ. ಇಥಿಯೋಪಿಯಾದಿಂದ ಭಾರತದ ಮೂಲಕ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲ

Read Full Story

06:25 AM (IST) Jan 01

167 ಕೋಟಿಯ ಕರೋನಾ ಅಕ್ರಮ ಆರೋಪ - ನ್ಯಾ. ಮೈಕಲ್‌ ಡಿ ಕುನ್ಹಾ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ

ಕೋವಿಡ್ ಅವಧಿಯ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ತನಿಖೆ ನಡೆಸಿದ ನ್ಯಾ. ಮೈಕಲ್‌ ಡಿ ಕುನ್ಹಾ ಆಯೋಗವು ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಮತ್ತು ಬೆಂಗಳೂರು ಜಿಲ್ಲೆಗಳ ತನಿಖಾ ಕಡತಗಳನ್ನು ಹಸ್ತಾಂತರಿಸಲಾಗಿದೆ.

Read Full Story

More Trending News