LIVE NOW
Published : Jan 01, 2026, 06:15 AM ISTUpdated : Jan 01, 2026, 11:29 PM IST

Karnataka News Live: ಬರೀ ನೀರಲ್ಲಿ ಕುದಿಸಿದರೆ ಸಾಲದು, ಮೊಟ್ಟೆ ಬೇಯಿಸುವ ಹೊಸ ವೈಜ್ಞಾನಿಕ ವಿಧಾನ ತಿಳ್ಕೊಳ್ಳಿ!

ಸಾರಾಂಶ

 

ಬೆಂಗಳೂರು: ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಜ.2ರಂದು ಮನೆಗಳನ್ನು ವಿತರಿಸಲಾಗುತ್ತದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂತ್ರಸ್ತರಿಗೆ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ ಪರಿಶೀಲನೆ ಮುಂದುವರಿದಿದೆ. ಅರ್ಹರಿಗೆ ಮಾತ್ರ ವಸತಿ ವ್ಯವಸ್ಥೆ ಮಾಡಿಕೊಡುವುದು ಸರ್ಕಾರದ ಉದ್ದೇಶ. ತರಾತುರಿ ಮಾಡದೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಅರ್ಹರ ದಾಖಲೆಗಳನ್ನು ಪರಿಶೀಲಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ, ಜ.1ರಂದು ಉದ್ದೇಶಿಸಲಾಗಿದ್ದ ಮನೆಗಳ ವಿತರಣೆ ಕಾರ್ಯ ಜ.2ಕ್ಕೆ ಮುಂದೂಡಲಾಗಿದೆ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

11:29 PM (IST) Jan 01

ಬರೀ ನೀರಲ್ಲಿ ಕುದಿಸಿದರೆ ಸಾಲದು, ಮೊಟ್ಟೆ ಬೇಯಿಸುವ ಹೊಸ ವೈಜ್ಞಾನಿಕ ವಿಧಾನ ತಿಳ್ಕೊಳ್ಳಿ!

scientific method for boiling eggs :ಸಾಂಪ್ರದಾಯಿಕವಾಗಿ ಮೊಟ್ಟೆ ಬೇಯಿಸುವುದರಿಂದ ಹಳದಿ ಲೋಳೆ ಗಟ್ಟಿಯಾಗಿ ಪೋಷಕಾಂಶಗಳು ಕಡಿಮೆಯಾಗುತ್ತವೆ. ಇಟಲಿಯ ವಿಜ್ಞಾನಿಗಳು 'ಆವರ್ತಕ ಅಡುಗೆ' ಎಂಬ ಹೊಸ ವಿಧಾನವನ್ನು ಕಂಡುಹಿಡಿದಿದೆ. ಅದೇನು ಎಂಬುದು ಇಲ್ಲಿ ತಿಳಿಯೋಣ.

Read Full Story

10:22 PM (IST) Jan 01

ಈ ದೇಶಗಳಲ್ಲಿ ಜನೆವರಿ 1ರಂದು ಹೊಸವರ್ಷ ಆಚರಿಸಿದರೆ ಜೈಲು, ಕಠಿಣ ಶಿಕ್ಷೆ!

ಕೆಲವು ದೇಶಗಳಲ್ಲಿ ಜನವರಿ 1ರ ಹೊಸ ವರ್ಷಾಚರಣೆ ಶಿಕ್ಷಾರ್ಹ ಅಪರಾಧವಾಗಿದೆ. ಉತ್ತರ ಕೊರಿಯಾ, ಸೌದಿ ಅರೇಬಿಯಾ, ಮತ್ತು ಬ್ರೂನಿಯಂತಹ ರಾಷ್ಟ್ರಗಳು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವವನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ವಿಧಿಸುತ್ತವೆ.
Read Full Story

09:32 PM (IST) Jan 01

ಗಲಾಟೆ ಪ್ರಕರಣದಲ್ಲಿ ಗುಂಡಿನ ದಾಳಿ, ತನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ

ಗಲಾಟೆ ಪ್ರಕರಣದಲ್ಲಿ ಗುಂಡಿನ ದಾಳಿ? ತನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ, ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಇದೀಗ ಗುಂಡಿನ ದಾಳಿ ಆರೋಪ ಕೇಳಿಬಂದಿದೆ. ಜನಾರ್ಧನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

 

Read Full Story

09:05 PM (IST) Jan 01

ಸತ್ತಿದ್ದಾನೆಂದು ಕುಟುಂಬ ಭಾವಿಸಿತ್ತು, 29 ವರ್ಷಗಳ ನಂತರ SIR ದಾಖಲೆಗಾಗಿ ಮನೆಗೆ ಬಂದ!

ಸತ್ತಿದ್ದಾನೆಂದು ಕುಟುಂಬ ಭಾವಿಸಿದ್ದ 79 ವರ್ಷದ ವ್ಯಕ್ತಿ 29 ವರ್ಷಗಳ ನಂತರ ಪಶ್ಚಿಮ ಬಂಗಾಳದಿಂದ ತನ್ನ ಹುಟ್ಟೂರಾದ ಮುಜಫರ್‌ನಗರಕ್ಕೆ ಮರಳಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಗಾಗಿ ದಾಖಲೆಗಳನ್ನು ಸಂಗ್ರಹಿಸಲು ಷರೀಫ್ ಅಹ್ಮದ್ ಬಂದಿದ್ದರು. 

Read Full Story

08:55 PM (IST) Jan 01

ಬ್ಯಾನರ್ ವಿಚಾರದಲ್ಲಿ ಕಲ್ಲುತೂರಾಟ, ಜನಾರ್ಧನ ರೆಡ್ಡಿ ಮನೆ ಮುಂದೆ ಬಿಗುವಿನ ವಾತಾವರಣ

ಬ್ಯಾನರ್ ವಿಚಾರದಲ್ಲಿ ಕಲ್ಲುತೂರಾಟ, ಜನಾರ್ಧನ ರೆಡ್ಡಿ ಮನೆ ಮುಂದೆ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇತ್ತ ಘಟನಾ ಸ್ಥಳಕ್ಕೆ ಶ್ರೀರಾಮಲು ಭೇಟಿ ನೀಡಿದ್ದಾರೆ.

 

Read Full Story

07:41 PM (IST) Jan 01

ತಾರಾ ದಂಪತಿ ಡಿವೋರ್ಸ್ - 2026ರ ಮೊದಲ ವಿಚ್ಛೇದನಕ್ಕೆ ನಾಂದಿ ಹಾಡಿದ ಪ್ರೀತಿಸಿ ಮದುವೆಯಾದ ಕಿರುತೆರೆ ಜೋಡಿ!

ನಟ ಮನು ವರ್ಮಾ ಅವರು ತಾವೇ ಪ್ರೀತಿಸಿ ಮದುವೆಯಾದ ಪತ್ನಿ, ನಟಿ ಸಿಂಧು ಅವರಿಂದ ಬೇರೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಪರಸ್ಪರ ಹೊಂದಾಣಿಕೆ ಇಲ್ಲದ ಕಾರಣ ಬೇರೆಯಾಗುತ್ತಿದ್ದು, ಮತ್ತೆ ಒಂದಾಗುವ ಸಾಧ್ಯತೆ ಕಡಿಮೆ ಎಂದಿರುವ ಅವರು, ವಿಚ್ಛೇದನ ಈಗ ಫ್ಯಾಷನ್ ಆಗಿದೆ ಎಂದು ಹೇಳಿದ್ದಾರೆ.

Read Full Story

07:22 PM (IST) Jan 01

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ - ಈ ಬಾರಿ 'ತೇಜಸ್ವಿ' ಲೋಕದ ಅನಾವರಣ, ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

2026ರ ಲಾಲ್‌ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ಸಂಪೂರ್ಣ ಮಾಹಿತಿ. ಪೂರ್ಣಚಂದ್ರ ತೇಜಸ್ವಿ ಕುರಿತ ವಿಶೇಷ ಪ್ರದರ್ಶನದ ದಿನಾಂಕ, ಸ್ಪರ್ಧೆಯ ವಿವರಗಳನ್ನು ತಿಳಿಯಲು ಕ್ಲಿಕ್ ಮಾಡಿ.

Read Full Story

06:58 PM (IST) Jan 01

ವಿಂಜೋ ಕಚೇರಿಗಳಲ್ಲಿ ಇಡಿ ಶೋಧ, ₹190 ಕೋಟಿ ಮೌಲ್ಯದ ಬ್ಯಾಂಕ್ ಬ್ಯಾಲೆನ್ಸ್, ಎಫ್‌ಡಿಆರ್‌, ಮ್ಯೂಚುವಲ್ ಫಂಡ್‌ ಫ್ರೀಜ್!

ಆನ್‌ಲೈನ್ ಗೇಮಿಂಗ್ ಸಂಸ್ಥೆ ವಿಂಜೋ ಪ್ರೈವೇಟ್ ಲಿಮಿಟೆಡ್ ವಿರುದ್ಧ ಜಾರಿ ನಿರ್ದೇಶನಾಲಯ (ED) ₹190 ಕೋಟಿ ಮೌಲ್ಯದ ಆಸ್ತಿಯನ್ನು ಫ್ರೀಜ್ ಮಾಡಿದೆ. ಕೃತಕ ಬುದ್ಧಿಮತ್ತೆ ಬಳಸಿ 'ರೇಕ್ ಕಮಿಷನ್' ಮೂಲಕ ₹802 ಕೋಟಿ ಅಕ್ರಮ ಆದಾಯ ಗಳಿಸಿ, ವಿದೇಶಗಳಿಗೆ ಹಣ ವರ್ಗಾಯಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
Read Full Story

06:55 PM (IST) Jan 01

ರೇಡಿಯೋ ಹಿಡಿದು ರೆಟ್ರೋಸ್ಟೈಲ್​ನಲ್ಲಿ Bigg Boss ಜಾಹ್ನವಿ ಭರ್ಜರಿ ಫೋಟೋಶೂಟ್​

ಬಿಗ್​ಬಾಸ್​ ಖ್ಯಾತಿಯ ಜಾಹ್ನವಿ ಇದೀಗ  ರೆಟ್ರೋ ಶೈಲಿಯಲ್ಲಿ ರೇಡಿಯೋ ಜೊತೆ ಫೋಟೋಶೂಟ್​ ಮಾಡಿಸಿಕೊಂಡು ಗಮನ ಸೆಳೆದಿದ್ದಾರೆ. ಬಿಗ್​ಬಾಸ್​ ಮನೆಯೊಳಗಿನ ಜಗಳ ಹಾಗೂ ವೈಯಕ್ತಿಕ ಜೀವನದ ಚರ್ಚೆಗಳ ನಂತರ, ಇದೀಗ ತಮ್ಮ ಡ್ರೆಸ್​ ಸೆನ್ಸ್​ ಹಾಗೂ ಹೊಸ ಫೋಟೋಶೂಟ್​ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

Read Full Story

06:49 PM (IST) Jan 01

ಹೊಸ ವರ್ಷದ ದುರಂತ - ಕಲಕೇರಿ ವೀವ್ ಪಾಯಿಂಟ್‌ನಲ್ಲಿ ಫೋಟೋ ಶೂಟ್‌ಗೆ ಹೋದ ಯುವಕ ಜಾರಿಬಿದ್ದು ದುರ್ಮರಣ!

ಹೊಸ ವರ್ಷದ ದಿನದಂದು ಧಾರವಾಡದ ಯುವಕನೊಬ್ಬ ಸ್ನೇಹಿತರೊಂದಿಗೆ ಕಲಕೇರಿ ವೀವ್ ಪಾಯಿಂಟ್‌ಗೆ ಫೋಟೋಶೂಟ್‌ಗೆ ತೆರಳಿದ್ದ. ಹಿಂತಿರುಗುವಾಗ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾನೆ.
Read Full Story

06:32 PM (IST) Jan 01

ಪದವಿ ಪರೀಕ್ಷೆ ಹಾಲ್ ಟಿಕೆಟ್‌ ಕೊಡಲು ಹಣ ವಸೂಲಿ; ಕಾಲೇಜು ಅಕ್ರಮ ಬಯಲು ಮಾಡಿದ ವಿದ್ಯಾರ್ಥಿಗಳು!

ಹಾವೇರಿಯ ಜಾಬಿನ್ ಕಾಲೇಜಿನಲ್ಲಿ ಹಾಲ್ ಟಿಕೆಟ್‌ಗೆ ₹1000 ಲಂಚ? ಹಾಜರಾತಿ ಕೊರತೆಯ ನೆಪದಲ್ಲಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್. ಪೂರ್ಣ ಸತ್ಯ ತಿಳಿಯಲು ಇಲ್ಲಿ ಓದಿ.

Read Full Story

06:26 PM (IST) Jan 01

ಮರ್ಯಾದಾ ಹತ್ಯೆ ಪ್ರಕರಣಕ್ಕೆ ತ್ವರಿತ ನ್ಯಾಯಾಲಯ ರಚನೆಗೆ ಚಿಂತನೆ, ಕಾನೂನು ಲೋಪ-ದೋಷಗಳಿದ್ದರೆ ತಿದ್ದುಪಡಿ

ಹುಬ್ಬಳ್ಳಿಯ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಸಂತ್ರಸ್ತ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ, ಸರ್ಕಾರಿ ಉದ್ಯೋಗ, ಮನೆ ಹಾಗೂ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.

Read Full Story

06:21 PM (IST) Jan 01

ಬೆಂಗಳೂರು ನಗರ ವಿವಿಯಲ್ಲಿ ಬಿಕಾಂ ಪ್ರಶ್ನೆಪತ್ರಿಕೆ ಲೀಕ್; ಪರೀಕ್ಷೆಗೂ ಮೊದಲೇ ವಾಟ್ಸಾಪ್‌ನಲ್ಲಿ ಹರಿದಾಡಿತು ಉತ್ತರ!

ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ 'ಅಡ್ವಾನ್ಸ್ ಅಕೌಂಟಿಂಗ್' ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣ.

Read Full Story

06:04 PM (IST) Jan 01

ಸ್ವಿಟ್ಜರ್‌ಲ್ಯಾಂಡ್‌ ನಲ್ಲಿ ದುರಂತ - ನ್ಯೂ ಈಯರ್ ಸಂಭ್ರಮದ ವೇಳೆ ಅವಘಡ ಕನಿಷ್ಟ 40 ಮಂದಿ ಬಲಿ, 100ಕ್ಕೂ ಹೆಚ್ಚು ಗಾಯ!

ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಹೊಸ ವರ್ಷದ ಸಂಭ್ರಮದ ವೇಳೆ 'ಲೆ ಕಾನ್ಸ್ಟೆಲೇಷನ್' ಬಾರ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  

Read Full Story

05:57 PM (IST) Jan 01

BBK 12 - ಕೊನೆಗೂ ಸತ್ಯ ಒಪ್ಪಿಕೊಂಡ್ರಾ ಸ್ಪಂದನಾ ಸೋಮಣ್ಣ? ಜಾಲತಾಣದಲ್ಲಿ ಏನಿದು ಬಿಸಿಬಿಸಿ ಚರ್ಚೆ?

ಬಿಗ್‌ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು ಸ್ಪಂದನಾ ಸೋಮಣ್ಣ ಇನ್ನೂ ಮನೆಯಲ್ಲಿರುವುದರ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಈ ನಡುವೆ, 'ಬಿಗ್‌ಬಾಸ್ ಮನೆ ನನ್ನದೇ' ಎಂದು ಸ್ಪಂದನಾ ತಮಾಷೆಯಾಗಿ ಹೇಳಿದ್ದು, ಇದು ವೀಕ್ಷಕರಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

Read Full Story

05:48 PM (IST) Jan 01

ಹೆತ್ತವರ ಪ್ರೀತಿಗಾಗಿ ಹಪಹಪಿಸಿ ಕೊನೆಯುಸಿರೆಳೆದ ಮಗಳು - ತಂದೆ-ತಾಯಿ ಜಗಳ ಕೂಸು ಬಡವಾಯ್ತು!

ಬೆಂಗಳೂರಿನಲ್ಲಿ 17 ವರ್ಷದ ಲೇಖನಾ ಎಂಬ ಯುವತಿ, ಪೋಷಕರ ನಿರಂತರ ಜಗಳ ಮತ್ತು ಬೇರ್ಪಡುವಿಕೆಯಿಂದ ಉಂಟಾದ ಮಾನಸಿಕ ಯಾತನೆಯಿಂದ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ, ತನಗೆ ತಂದೆ-ತಾಯಿಯ ಪ್ರೀತಿ ಸಿಗುತ್ತಿಲ್ಲ ಎಂಬ ಬೇಸರ ಹೊರಹಾಕಿದ್ದಾಳೆ.

Read Full Story

05:03 PM (IST) Jan 01

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ Su From So ಭಾನು - ಬೇಬಿ ಬಂಪ್​ ಕ್ಯೂಟ್​ ಫೋಟೋಶೂಟ್​

'ಸು ಫ್ರಂ ಸೋ' ಸಿನಿಮಾದ ಭಾನು ಪಾತ್ರದ ಮೂಲಕ ಖ್ಯಾತಿ ಗಳಿಸಿದ ನಟಿ ಸಂಧ್ಯಾ ಅರಕೆರೆ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ತಮ್ಮ ಬೇಬಿ ಬಂಪ್ ಫೋಟೋಶೂಟ್ ಚಿತ್ರಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Read Full Story

04:38 PM (IST) Jan 01

ಕೊಡಗಿನಲ್ಲಿ ಹೊಸ ವರ್ಷದಂದೇ ಯುವಕನ ಕೊಲೆ, ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಭೇಟಿಗೆ ಬರುತ್ತಿದ್ದಾಗ ಹೊಂಚು ಹಾಕಿ ಕೃತ್ಯ!

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಹೊಸ ವರ್ಷದ ದಿನದಂದು ನವಾಜ್ ಎಂಬ 28 ವರ್ಷದ ಯುವಕನನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಗೋಣಿಕೊಪ್ಪ ಪೊಲೀಸರು ಮೂವರು ಆರೋಪಿಗಳಿಗಾಗಿ ತನಿಖೆ ನಡೆಸುತ್ತಿದ್ದಾರೆ.
Read Full Story

04:35 PM (IST) Jan 01

ವ್ಯವಹಾರಕ್ಕೆ ಕ್ಯಾಲೆಂಡರ್, ಬದುಕಿಗೆ ಸಂಸ್ಕೃತಿ ಮುಖ್ಯ - ಸಿದ್ಧಗಂಗಾ ಶ್ರೀಗಳಿಂದ ಹೊಸ ವರ್ಷದ ಸಂದೇಶವೇನು?

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು 2026ರ ಹೊಸ ವರ್ಷಕ್ಕೆ ನಾಡಿನ ಜನತೆಗೆ ಶುಭ ಕೋರಿದ್ದಾರೆ. ಹಳೆಯ ಕಹಿ ಮರೆತು, ಪ್ರಕೃತಿ ಹಾಗೂ ಮಾನವೀಯತೆಯನ್ನು ಬೆಸೆಯುವ ಸಮಾಜ ನಿರ್ಮಿಸಲು ಕರೆ ನೀಡಿದರು.

Read Full Story

03:49 PM (IST) Jan 01

ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭ ದಿನಾಂಕ, ಮಾರ್ಗ ವಿವರ ಘೋಷಿಸಿದ ಸಚಿವ

ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭ ದಿನಾಂಕ, ಮಾರ್ಗ ವಿವರ ಘೋಷಿಸಿದ ಸಚಿವ ಅಶ್ವಿನಿ ವೈಷ್ಣವ್. ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಯಾವ ಮಾರ್ಗದಲ್ಲಿ ಸ್ಲೀಪರ್ ವಂದೇ ಭಾರತ್ ಸೇವೆ ನೀಡಲಿದೆ?

 

Read Full Story

03:30 PM (IST) Jan 01

PSI ಹಗರಣದ ಕಿಂಗ್‌ ಆರ್.ಡಿ.ಪಾಟೀಲ್‌ಗೆ ಜೈಲಿಗೋದ್ರೂ ಬುದ್ಧಿ ಬಂದಿಲ್ಲ, ಪೊಲೀಸರ ಮೇಲೆ ಹಲ್ಲೆ, ವಿಡಿಯೋ ರಿಲೀಸ್!

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾನೆ. ಜೈಲಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಬೇರೆಡೆಗೆ ವರ್ಗಾಯಿಸಲು ಅಧೀಕ್ಷಕರು ಪತ್ರ ಬರೆದಿದ್ದಾರೆ.

Read Full Story

02:41 PM (IST) Jan 01

BBK 12 - ಟ್ರಿಗರ್ ಮಾಡಿದ್ರೆ ಉಗುರಲ್ಲೇ ಹೊಡೆದು ಸಾಯಿಸ್ತೀನಿ - ಧ್ರುವಂತ್‌ಗೆ ಗಿಲ್ಲಿ ವಾರ್ನಿಂಗ್

ಬಿಗ್‌ಬಾಸ್ ಮನೆಯಲ್ಲಿ ಹೊಸ ವರ್ಷದ ಹಾಡು ರಚನೆ ವೇಳೆ ಗಿಲ್ಲಿ ನಟ ಮತ್ತು ಧ್ರುವಂತ್ ನಡುವೆ ತೀವ್ರ ವಾಕ್ಸಮರ ನಡೆದಿದೆ. ತನ್ನ ಹೆಸರು ಬಳಸದಂತೆ ಧ್ರುವಂತ್ ಹೇಳಿದ್ದಕ್ಕೆ ಕೋಪಗೊಂಡ ಗಿಲ್ಲಿ ನಟ, 'ಟ್ರಿಗರ್ ಮಾಡಿದ್ರೆ ಉಗುರಲ್ಲೇ ಹೊಡೆದು ಸಾಯಿಸ್ತೀನಿ' ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. 

Read Full Story

02:06 PM (IST) Jan 01

Dharmasthala Case - ನೂರಾರು ಶವ ಹೂತಿರುವ ಆರೋಪ ಧರ್ಮಸ್ಥಳ ಪ್ರಕರಣದಲ್ಲಿ ಸ್ಪೋಟಕ ತಿರುವು

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತ 'ಬುರುಡೆ ಟೀಂ' ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೇ ಮೊದಲ ಬಾರಿಗೆ ಧರ್ಮಸ್ಥಳ ಕ್ಷೇತ್ರವು ಬೆಳ್ತಂಗಡಿ ನ್ಯಾಯಾಲಯದಲ್ಲಿ ವಕಾಲತ್ತು ಸಲ್ಲಿಸಿದೆ. ತಮ್ಮನ್ನು ಸಂತ್ರಸ್ತರು ಎಂದು ಪರಿಗಣಿಸುವಂತೆ ಕೋರಲಾಗಿದೆ.

Read Full Story

01:29 PM (IST) Jan 01

Bengaluru - 75 ಕೋಟಿ ರು. ವೆಚ್ಚದಲ್ಲಿ ಹೊಸ ಹೈ ಪರ್ಫಾರ್ಮೆನ್ಸ್‌ ಸೆಂಟರ್; NIPER ಸ್ಥಾಪನೆಗೆ ಕೇಂದ್ರಕ್ಕೆ ಮನವಿ

ಬೆಂಗಳೂರಿನ ಸಾಯ್ ಕೇಂದ್ರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೊಸ ಹೈ ಪರ್ಫಾರ್ಮೆನ್ಸ್‌ ಸೆಂಟರ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. NIPER ಸ್ಥಾಪನೆಗೆ ಕೇಂದ್ರಕ್ಕೆ ಮನವಿ 

Read Full Story

01:28 PM (IST) Jan 01

ಮನೆಗೆ ಅರ್ಜಿ ಹಾಕಿ 2 ವರ್ಷ ಕಾದರೂ ಸಿಗಲಿಲ್ಲ; ಆದ್ರೆ ಕೋಗಿಲು ಲೇಔಟ್ ಅಕ್ರಮ ನಿವಾಸಿಗಳಿಗೆ 2 ವಾರದಲ್ಲೇ ಮನೆ ಭಾಗ್ಯ!

ಕರ್ನಾಟಕದ ಸರ್ಕಾರಿ ವಸತಿ ಯೋಜನೆಗೆ ಕಾನೂನುಬದ್ಧವಾಗಿ ಅರ್ಜಿ ಸಲ್ಲಿಸಿದ ಸಾವಿರಾರು ಮಂದಿ ವರ್ಷಗಳಿಂದ ಮನೆಗಾಗಿ ಕಾಯುತ್ತಿದ್ದರೆ, ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿದವರಿಗೆ ಕೇವಲ 2 ವಾರಗಳಲ್ಲಿ ರಿಯಾಯಿತಿ ದರದಲ್ಲಿ ಫ್ಲ್ಯಾಟ್‌ಗಳನ್ನು ಹಂಚಿಕೆ ಮಾಡಲಾಗುತ್ತಿದೆ.

Read Full Story

01:25 PM (IST) Jan 01

ಮದ್ಯದ ವಾಸನೆ - ವ್ಯಾಂಕೋವರ್‌ನಿಂದ ದೆಹಲಿಗೆ ವಿಮಾನ ಹಾರಿಸುವ ಮೊದಲು ಏರ್ ಇಂಡಿಯಾ ಪೈಲಟ್‌ನ ಬಂಧನ

ಕೆನಡಾದ ವ್ಯಾಂಕೋವರ್‌ನಿಂದ ವಿಯೆನ್ನಾ ಮೂಲಕ ದೆಹಲಿಗೆ ಬರಬೇಕಿದ್ದ ವಿಮಾನವನ್ನು ಹಾರಿಸಬೇಕಿದ್ದ ಏರ್ ಇಂಡಿಯಾ ಪೈಲಟ್‌ ಒಬ್ಬರನ್ನು ವಿಮಾನ ಹಾರಾಟಕ್ಕೆ ಸ್ವಲ್ಪ ಸಮಯದ ಮೊಲದು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

Read Full Story

12:59 PM (IST) Jan 01

ಬೆಂಗಳೂರು - ತಂದೆ ತಾಯಿ ಬದುಕಿದ್ದರೂ ಪ್ರೀತಿ ಸಿಗದೆ ಆತ್ಮ*ಹತ್ಯೆ, ನಾನು ಒಂಟಿಯೆಂದು ಪತ್ರ ಬರೆದಿಟ್ಟ ಬಾಲಕಿ

ಬೆಂಗಳೂರಿನಲ್ಲಿ, ಕೌಟುಂಬಿಕ ಕಲಹ, ಪ್ರೀತಿಯ ಕೊರತೆ ಮತ್ತು ಶೈಕ್ಷಣಿಕ ಹಿನ್ನಡೆಯಿಂದ ಮನನೊಂದು 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾವಿಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ, ತನ್ನ ಸಾವಿಗೆ ತಾನೇ ಕಾರಣ ಮತ್ತು ತನಗೆ ಪೋಷಕರ ಪ್ರೀತಿ ಸಿಗುತ್ತಿಲ್ಲ ಎಂದು ಉಲ್ಲೇಖಿಸಿದ್ದಾಳೆ.

Read Full Story

12:57 PM (IST) Jan 01

Breaking - ಹೆಂಡತಿಯರನ್ನು ಬಲಿಕೊಟ್ಟು 2026ರ ಹೊಸ ವರ್ಷ ಸ್ವಾಗತಿಸಿದ ಕಿರಾತಕ ಗಂಡಂದಿರು!

ಹೊಸ ವರ್ಷದ ಸಂಭ್ರಮದ ನಡುವೆ, ವಿಜಯನಗರ ಮತ್ತು ಹುಬ್ಬಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಇಬ್ಬರು ಗೃಹಿಣಿಯರು ತಮ್ಮ ಪತಿಯರಿಂದಲೇ ಹತ್ಯೆಯಾಗಿದ್ದಾರೆ. ವಿಜಯನಗರದಲ್ಲಿ ಜಾನ್ಸಿ ಎಂಬುವವರನ್ನು ಪತಿ ಸೆಲ್ವಕುಮಾರ್ ಮತ್ತು ಹುಬ್ಬಳ್ಳಿಯಲ್ಲಿ ಅಂಜುಮ್ ಎಂಬುವವರನ್ನು ಪತಿ ಮೆಹಬೂಬ್ ಕೊಲೆ ಮಾಡಿದ್ದಾರೆ.

Read Full Story

12:26 PM (IST) Jan 01

ಅಪ್ಪನ ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದ ಮಗನ ಬಲಿ - ಕುಡಿತದ ನಶೆಯಲ್ಲಿ ಗೆಳೆಯನಿಂದಲೇ ಕಲ್ಲಿನಿಂದ ಜಜ್ಜಿ ಕೊಲೆ!

ಹಾವೇರಿ ಜಿಲ್ಲೆಯ ಹೊಂಬರಡಿ ಗ್ರಾಮದಲ್ಲಿ ಒಂದೇ ದಿನದಲ್ಲಿ ತಂದೆ ಮತ್ತು ಮಗ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ವಯೋಸಹಜ ಕಾಯಿಲೆಯಿಂದ ತಂದೆ ಮೃತಪಟ್ಟರೆ, ಅವರ ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದ ಮಗನನ್ನು ಕುಡಿದ ಮತ್ತಿನಲ್ಲಿದ್ದ ಸ್ನೇಹಿತನೇ ಕ್ಷುಲ್ಲಕ ಕಾರಣಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.
Read Full Story

11:30 AM (IST) Jan 01

ಯುವತಿಗೆ ಸೋಷಿಯಲ್ ಮೀಡಿಯಾದಲ್ಲಿ ವಿಶ್‌ ಮಾಡಿದ್ದಕ್ಕೆ ಯುವಕನ ಹತ್ಯೆ, ಬೆಚ್ಚಿಬಿದ್ದ ಚಿಕ್ಕಮಗಳೂರು!

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಮಂಜುನಾಥ್ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೇಣು ಮತ್ತು ಆತನ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ.  

Read Full Story

11:28 AM (IST) Jan 01

Zee Kannada Serial ತಾರೆಯರ ಹೊಸ ವರ್ಷದ ಸಂಭ್ರಮ - ಫೋಟೋಗಳಲ್ಲಿ ನೋಡಿ

ಜೀ ಕನ್ನಡ ವಾಹಿನಿಯು ತನ್ನ ಜನಪ್ರಿಯ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ತಾರೆಯರ ಹೊಸ ವರ್ಷದ ಸಂಭ್ರಮವನ್ನು ವಿಶಿಷ್ಟವಾಗಿ ಆಚರಿಸಿದೆ. ಅಮೃತಧಾರೆ, ಅಣ್ಣಯ್ಯ, ಲಕ್ಷ್ಮೀ ನಿವಾಸ ಸೇರಿದಂತೆ ಹಲವು ಸೀರಿಯಲ್ ಜೋಡಿಗಳ AI-ರಚಿತ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳಿಗೆ ಅಚ್ಚರಿ ನೀಡಿದೆ.
Read Full Story

10:21 AM (IST) Jan 01

BBK 12 - ಯಾಕಿಂಗೆ ಆದೆ ಗಿಲ್ಲಿ? ಅಭಿಮಾನಿಗಳಿಂದಲೇ ಬೇಸರ; ಇತ್ತ ಗಿಲ್ಲಿಯಾಗಿ ಬದಲಾದ್ರಂತೆ ರಘು!

ಬುಧವಾರದ ಸಂಚಿಕೆಯಲ್ಲಿ ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧ್ರುವಂತ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಗಿಲ್ಲಿ ನಟನ ಕಾಮಿಡಿಗೆ ತಿರುಗೇಟು ನೀಡಲು ಹೋದಾಗ, ಅವರು 'ಮುದುಕಿ', 'ಅಜ್ಜಿ', 'ವಿಗ್' ಎಂಬಂತಹ ಪದಗಳನ್ನು ಬಳಸಿ ವೈಯಕ್ತಿಕ ನಿಂದನೆ ನಡೆಸಿದರು. 

Read Full Story

09:16 AM (IST) Jan 01

ನಿಟ್ಟೆ ಶಿಕ್ಷಣೆ ಸಂಸ್ಥೆಯ ಸ್ಥಾಪಕ, ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಮತ್ತು ಶಿಕ್ಷಣ ತಜ್ಞ ಎನ್. ವಿನಯ್ ಹೆಗ್ಡೆ (86) ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಗ್ರಾಮೀಣ ಪ್ರದೇಶ ನಿಟ್ಟೆಯನ್ನು ಅಂತರಾಷ್ಟ್ರೀಯ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಅವರು, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸೋದರರಾಗಿದ್ದರು.

Read Full Story

08:21 AM (IST) Jan 01

25 ವರ್ಷಗಳಲ್ಲಿ ಏನೇನ್‌ ಆಯ್ತು ಗೊತ್ತಾ? 21ನೇ ಶತಮಾನದ ಕಾಲು ಶತಮಾನಕ್ಕೆ ತೆರೆ, ಶರವೇಗದಲ್ಲಿ ಬದಲಾಗಿದೆ ಕಾಲ

ಕಳೆದ ಕಾಲು ಶತಮಾನದಲ್ಲಿ ಭಾರತವು ತಂತ್ರಜ್ಞಾನ, ಆರ್ಥಿಕತೆ, ಮತ್ತು ಮೂಲಸೌಕರ್ಯದಲ್ಲಿ ಅದ್ಭುತ ಬದಲಾವಣೆಗಳನ್ನು ಕಂಡಿದೆ. ಸ್ಮಾರ್ಟ್‌ಫೋನ್‌ ಕ್ರಾಂತಿಯಿಂದ ಹಿಡಿದು ಇಸ್ರೋದ ಬಾನಂಗಳದ ಸಾಧನೆಗಳವರೆಗೆ, ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ಆದ ಮಹತ್ವದ ಪರಿವರ್ತನೆಗಳನ್ನು ಈ ಲೇಖನ ವಿವರಿಸುತ್ತದೆ.
Read Full Story

08:11 AM (IST) Jan 01

ಜೈಲಿನಿಂದ ಹೊರಬಂದ ಶಾಸಕ ಪಪ್ಪಿ - ನಟ ದರ್ಶನ್‌ ಭೇಟಿ, ಡಿಕೆ ಶಿವಕುಮಾರ್ ಬಗ್ಗೆ ಹೇಳಿದ್ದೇನು?

ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನ್ಯಾಯದ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿ ನಟ ದರ್ಶನ್‌ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ.

Read Full Story

08:04 AM (IST) Jan 01

BBK 12 - ಫಿನಾಲೆ ಟಿಕೆಟ್‌ಗಾಗಿ ಮನೆಯಲ್ಲಿ ಹೆಚ್ಚಿದ ಕಿಚ್ಚು; ರಣರೋಚಕ ಆಟದಲ್ಲಿ ಗೆದ್ದೋರು ಯಾರು?

ಬಿಗ್‌ಬಾಸ್ ಮನೆಯಲ್ಲಿ ಗ್ರ್ಯಾಂಡ್ ಫಿನಾಲೆ ಟಿಕೆಟ್‌ಗಾಗಿ ಹೊಸ ಕ್ಯಾಪ್ಟನ್ಸಿ ಟಾಸ್ಕ್ ನೀಡಲಾಗಿದ್ದು, ಸ್ಪರ್ಧಿಗಳು ಜೋಡಿಯಾಗಿ ಆಡಿದ್ದಾರೆ. ಸುರಂಗ ಮಾರ್ಗದ ಈ ಆಟದ ವೇಳೆ, ಉಸ್ತುವಾರಿ ವಹಿಸಿದ್ದ ಕಾವ್ಯಾ ಮತ್ತು ಆಟಗಾರ ಧ್ರುವಂತ್ ನಡುವೆ ಮಾತಿನ ಚಕಮಕಿ ನಡೆದಿದೆ.
Read Full Story

07:31 AM (IST) Jan 01

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ

ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ಹೊಸ ವರ್ಷವನ್ನು ಪಾರ್ಟಿ, ಪಟಾಕಿ ಹಾಗೂ ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಜನಸಾಗರವೇ ಸೇರಿದ್ದು, ಹೋಟೆಲ್, ಪಬ್‌ಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

Read Full Story

07:24 AM (IST) Jan 01

Kogilu Layout - ಶೆಡ್‌ ಧ್ವಂಸ ಕುರಿತು ಪಾಕ್‌ಗೆ ಉಗ್ರರಿಂದ ಮಾಹಿತಿ, ಇದು ಸ್ಲೀಪರ್‌ಸೆಲ್‌ಗಳ ಕೆಲಸ - ಆರ್ ಅಶೋಕ್

ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಜಕೀಯ ಸ್ವರೂಪ ಪಡೆದಿದೆ. ಈ ಪ್ರದೇಶವು ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. 

Read Full Story

06:48 AM (IST) Jan 01

ಆಕೆ ದೂರಿಗೆ ತಕ್ಷಣ ಸ್ಪಂದನೆ, ನನ್ನ ಬಗ್ಗೆ ಏಕಾಗಿ ಈ ನಿರ್ಲಕ್ಷ್ಯ? ದರ್ಶನ್ ಪತ್ನಿ ದೂರು

ಸಾಮಾಜಿಕ ಜಾಲತಾಣದಲ್ಲಿನ ಅಶ್ಲೀಲ ಕಾಮೆಂಟ್‌ಗಳ ವಿರುದ್ಧ ನೀಡಿದ ದೂರು ನಿರ್ಲಕ್ಷಿಸಲಾಗಿದೆ ಎಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Read Full Story

06:42 AM (IST) Jan 01

ಬೆಂಗ್ಳೂರಲ್ಲಿ ಮತ್ತೆ ಭಾರಿ ಡ್ರಗ್ಸ್‌ ಬೇಟೆ, ಮಹಾರಾಷ್ಟ್ರ ಬಳಿಕ NCB ಆಪರೇಷನ್‌; 8 ಕೋಟಿ ರು. ಮೌಲ್ಯದ ಖಾಟ್‌ ಎಲೆ ಜಪ್ತಿ - ಆಫ್ರಿಕಾದಿಂದ ಬರುತ್ತಿತ್ತು ಭರ್ಜರಿ ಮಾಲು

ಬೆಂಗಳೂರಿನಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‌ಸಿಬಿ) ಅಧಿಕಾರಿಗಳು ಸುಮಾರು 8 ಕೋಟಿ ರೂಪಾಯಿ ಮೌಲ್ಯದ 160 ಕೆಜಿ ‘ಖಾಟ್‌ ಎಲೆಗಳನ್ನು’ ವಶಪಡಿಸಿಕೊಂಡಿದ್ದಾರೆ. ಇಥಿಯೋಪಿಯಾದಿಂದ ಭಾರತದ ಮೂಲಕ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲ

Read Full Story

More Trending News