ಬೆಂಗಳೂರು: ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಜ.2ರಂದು ಮನೆಗಳನ್ನು ವಿತರಿಸಲಾಗುತ್ತದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂತ್ರಸ್ತರಿಗೆ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ ಪರಿಶೀಲನೆ ಮುಂದುವರಿದಿದೆ. ಅರ್ಹರಿಗೆ ಮಾತ್ರ ವಸತಿ ವ್ಯವಸ್ಥೆ ಮಾಡಿಕೊಡುವುದು ಸರ್ಕಾರದ ಉದ್ದೇಶ. ತರಾತುರಿ ಮಾಡದೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಅರ್ಹರ ದಾಖಲೆಗಳನ್ನು ಪರಿಶೀಲಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ, ಜ.1ರಂದು ಉದ್ದೇಶಿಸಲಾಗಿದ್ದ ಮನೆಗಳ ವಿತರಣೆ ಕಾರ್ಯ ಜ.2ಕ್ಕೆ ಮುಂದೂಡಲಾಗಿದೆ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
11:29 PM (IST) Jan 01
scientific method for boiling eggs :ಸಾಂಪ್ರದಾಯಿಕವಾಗಿ ಮೊಟ್ಟೆ ಬೇಯಿಸುವುದರಿಂದ ಹಳದಿ ಲೋಳೆ ಗಟ್ಟಿಯಾಗಿ ಪೋಷಕಾಂಶಗಳು ಕಡಿಮೆಯಾಗುತ್ತವೆ. ಇಟಲಿಯ ವಿಜ್ಞಾನಿಗಳು 'ಆವರ್ತಕ ಅಡುಗೆ' ಎಂಬ ಹೊಸ ವಿಧಾನವನ್ನು ಕಂಡುಹಿಡಿದಿದೆ. ಅದೇನು ಎಂಬುದು ಇಲ್ಲಿ ತಿಳಿಯೋಣ.
10:22 PM (IST) Jan 01
09:32 PM (IST) Jan 01
ಗಲಾಟೆ ಪ್ರಕರಣದಲ್ಲಿ ಗುಂಡಿನ ದಾಳಿ? ತನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ, ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಇದೀಗ ಗುಂಡಿನ ದಾಳಿ ಆರೋಪ ಕೇಳಿಬಂದಿದೆ. ಜನಾರ್ಧನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
09:05 PM (IST) Jan 01
ಸತ್ತಿದ್ದಾನೆಂದು ಕುಟುಂಬ ಭಾವಿಸಿದ್ದ 79 ವರ್ಷದ ವ್ಯಕ್ತಿ 29 ವರ್ಷಗಳ ನಂತರ ಪಶ್ಚಿಮ ಬಂಗಾಳದಿಂದ ತನ್ನ ಹುಟ್ಟೂರಾದ ಮುಜಫರ್ನಗರಕ್ಕೆ ಮರಳಿದ್ದಾರೆ. ಎಸ್ಐಆರ್ ಪ್ರಕ್ರಿಯೆಗಾಗಿ ದಾಖಲೆಗಳನ್ನು ಸಂಗ್ರಹಿಸಲು ಷರೀಫ್ ಅಹ್ಮದ್ ಬಂದಿದ್ದರು.
08:55 PM (IST) Jan 01
ಬ್ಯಾನರ್ ವಿಚಾರದಲ್ಲಿ ಕಲ್ಲುತೂರಾಟ, ಜನಾರ್ಧನ ರೆಡ್ಡಿ ಮನೆ ಮುಂದೆ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇತ್ತ ಘಟನಾ ಸ್ಥಳಕ್ಕೆ ಶ್ರೀರಾಮಲು ಭೇಟಿ ನೀಡಿದ್ದಾರೆ.
07:41 PM (IST) Jan 01
ನಟ ಮನು ವರ್ಮಾ ಅವರು ತಾವೇ ಪ್ರೀತಿಸಿ ಮದುವೆಯಾದ ಪತ್ನಿ, ನಟಿ ಸಿಂಧು ಅವರಿಂದ ಬೇರೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಪರಸ್ಪರ ಹೊಂದಾಣಿಕೆ ಇಲ್ಲದ ಕಾರಣ ಬೇರೆಯಾಗುತ್ತಿದ್ದು, ಮತ್ತೆ ಒಂದಾಗುವ ಸಾಧ್ಯತೆ ಕಡಿಮೆ ಎಂದಿರುವ ಅವರು, ವಿಚ್ಛೇದನ ಈಗ ಫ್ಯಾಷನ್ ಆಗಿದೆ ಎಂದು ಹೇಳಿದ್ದಾರೆ.
07:22 PM (IST) Jan 01
2026ರ ಲಾಲ್ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ಸಂಪೂರ್ಣ ಮಾಹಿತಿ. ಪೂರ್ಣಚಂದ್ರ ತೇಜಸ್ವಿ ಕುರಿತ ವಿಶೇಷ ಪ್ರದರ್ಶನದ ದಿನಾಂಕ, ಸ್ಪರ್ಧೆಯ ವಿವರಗಳನ್ನು ತಿಳಿಯಲು ಕ್ಲಿಕ್ ಮಾಡಿ.
06:58 PM (IST) Jan 01
06:55 PM (IST) Jan 01
ಬಿಗ್ಬಾಸ್ ಖ್ಯಾತಿಯ ಜಾಹ್ನವಿ ಇದೀಗ ರೆಟ್ರೋ ಶೈಲಿಯಲ್ಲಿ ರೇಡಿಯೋ ಜೊತೆ ಫೋಟೋಶೂಟ್ ಮಾಡಿಸಿಕೊಂಡು ಗಮನ ಸೆಳೆದಿದ್ದಾರೆ. ಬಿಗ್ಬಾಸ್ ಮನೆಯೊಳಗಿನ ಜಗಳ ಹಾಗೂ ವೈಯಕ್ತಿಕ ಜೀವನದ ಚರ್ಚೆಗಳ ನಂತರ, ಇದೀಗ ತಮ್ಮ ಡ್ರೆಸ್ ಸೆನ್ಸ್ ಹಾಗೂ ಹೊಸ ಫೋಟೋಶೂಟ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.
06:49 PM (IST) Jan 01
06:32 PM (IST) Jan 01
ಹಾವೇರಿಯ ಜಾಬಿನ್ ಕಾಲೇಜಿನಲ್ಲಿ ಹಾಲ್ ಟಿಕೆಟ್ಗೆ ₹1000 ಲಂಚ? ಹಾಜರಾತಿ ಕೊರತೆಯ ನೆಪದಲ್ಲಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್. ಪೂರ್ಣ ಸತ್ಯ ತಿಳಿಯಲು ಇಲ್ಲಿ ಓದಿ.
06:26 PM (IST) Jan 01
ಹುಬ್ಬಳ್ಳಿಯ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಸಂತ್ರಸ್ತ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ, ಸರ್ಕಾರಿ ಉದ್ಯೋಗ, ಮನೆ ಹಾಗೂ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.
06:21 PM (IST) Jan 01
ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್ನ 'ಅಡ್ವಾನ್ಸ್ ಅಕೌಂಟಿಂಗ್' ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣ.
06:04 PM (IST) Jan 01
ಸ್ವಿಟ್ಜರ್ಲ್ಯಾಂಡ್ನ ಕ್ರಾನ್ಸ್-ಮೊಂಟಾನಾ ಸ್ಕೀ ರೆಸಾರ್ಟ್ನಲ್ಲಿ ಹೊಸ ವರ್ಷದ ಸಂಭ್ರಮದ ವೇಳೆ 'ಲೆ ಕಾನ್ಸ್ಟೆಲೇಷನ್' ಬಾರ್ನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
05:57 PM (IST) Jan 01
ಬಿಗ್ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು ಸ್ಪಂದನಾ ಸೋಮಣ್ಣ ಇನ್ನೂ ಮನೆಯಲ್ಲಿರುವುದರ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಈ ನಡುವೆ, 'ಬಿಗ್ಬಾಸ್ ಮನೆ ನನ್ನದೇ' ಎಂದು ಸ್ಪಂದನಾ ತಮಾಷೆಯಾಗಿ ಹೇಳಿದ್ದು, ಇದು ವೀಕ್ಷಕರಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
05:48 PM (IST) Jan 01
ಬೆಂಗಳೂರಿನಲ್ಲಿ 17 ವರ್ಷದ ಲೇಖನಾ ಎಂಬ ಯುವತಿ, ಪೋಷಕರ ನಿರಂತರ ಜಗಳ ಮತ್ತು ಬೇರ್ಪಡುವಿಕೆಯಿಂದ ಉಂಟಾದ ಮಾನಸಿಕ ಯಾತನೆಯಿಂದ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ಬರೆದ ಡೆತ್ ನೋಟ್ನಲ್ಲಿ, ತನಗೆ ತಂದೆ-ತಾಯಿಯ ಪ್ರೀತಿ ಸಿಗುತ್ತಿಲ್ಲ ಎಂಬ ಬೇಸರ ಹೊರಹಾಕಿದ್ದಾಳೆ.
05:03 PM (IST) Jan 01
'ಸು ಫ್ರಂ ಸೋ' ಸಿನಿಮಾದ ಭಾನು ಪಾತ್ರದ ಮೂಲಕ ಖ್ಯಾತಿ ಗಳಿಸಿದ ನಟಿ ಸಂಧ್ಯಾ ಅರಕೆರೆ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ತಮ್ಮ ಬೇಬಿ ಬಂಪ್ ಫೋಟೋಶೂಟ್ ಚಿತ್ರಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
04:38 PM (IST) Jan 01
04:35 PM (IST) Jan 01
ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು 2026ರ ಹೊಸ ವರ್ಷಕ್ಕೆ ನಾಡಿನ ಜನತೆಗೆ ಶುಭ ಕೋರಿದ್ದಾರೆ. ಹಳೆಯ ಕಹಿ ಮರೆತು, ಪ್ರಕೃತಿ ಹಾಗೂ ಮಾನವೀಯತೆಯನ್ನು ಬೆಸೆಯುವ ಸಮಾಜ ನಿರ್ಮಿಸಲು ಕರೆ ನೀಡಿದರು.
03:49 PM (IST) Jan 01
ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭ ದಿನಾಂಕ, ಮಾರ್ಗ ವಿವರ ಘೋಷಿಸಿದ ಸಚಿವ ಅಶ್ವಿನಿ ವೈಷ್ಣವ್. ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಯಾವ ಮಾರ್ಗದಲ್ಲಿ ಸ್ಲೀಪರ್ ವಂದೇ ಭಾರತ್ ಸೇವೆ ನೀಡಲಿದೆ?
03:30 PM (IST) Jan 01
ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾನೆ. ಜೈಲಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಬೇರೆಡೆಗೆ ವರ್ಗಾಯಿಸಲು ಅಧೀಕ್ಷಕರು ಪತ್ರ ಬರೆದಿದ್ದಾರೆ.
02:41 PM (IST) Jan 01
ಬಿಗ್ಬಾಸ್ ಮನೆಯಲ್ಲಿ ಹೊಸ ವರ್ಷದ ಹಾಡು ರಚನೆ ವೇಳೆ ಗಿಲ್ಲಿ ನಟ ಮತ್ತು ಧ್ರುವಂತ್ ನಡುವೆ ತೀವ್ರ ವಾಕ್ಸಮರ ನಡೆದಿದೆ. ತನ್ನ ಹೆಸರು ಬಳಸದಂತೆ ಧ್ರುವಂತ್ ಹೇಳಿದ್ದಕ್ಕೆ ಕೋಪಗೊಂಡ ಗಿಲ್ಲಿ ನಟ, 'ಟ್ರಿಗರ್ ಮಾಡಿದ್ರೆ ಉಗುರಲ್ಲೇ ಹೊಡೆದು ಸಾಯಿಸ್ತೀನಿ' ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
02:06 PM (IST) Jan 01
ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತ 'ಬುರುಡೆ ಟೀಂ' ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೇ ಮೊದಲ ಬಾರಿಗೆ ಧರ್ಮಸ್ಥಳ ಕ್ಷೇತ್ರವು ಬೆಳ್ತಂಗಡಿ ನ್ಯಾಯಾಲಯದಲ್ಲಿ ವಕಾಲತ್ತು ಸಲ್ಲಿಸಿದೆ. ತಮ್ಮನ್ನು ಸಂತ್ರಸ್ತರು ಎಂದು ಪರಿಗಣಿಸುವಂತೆ ಕೋರಲಾಗಿದೆ.
01:29 PM (IST) Jan 01
ಬೆಂಗಳೂರಿನ ಸಾಯ್ ಕೇಂದ್ರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೊಸ ಹೈ ಪರ್ಫಾರ್ಮೆನ್ಸ್ ಸೆಂಟರ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. NIPER ಸ್ಥಾಪನೆಗೆ ಕೇಂದ್ರಕ್ಕೆ ಮನವಿ
01:28 PM (IST) Jan 01
ಕರ್ನಾಟಕದ ಸರ್ಕಾರಿ ವಸತಿ ಯೋಜನೆಗೆ ಕಾನೂನುಬದ್ಧವಾಗಿ ಅರ್ಜಿ ಸಲ್ಲಿಸಿದ ಸಾವಿರಾರು ಮಂದಿ ವರ್ಷಗಳಿಂದ ಮನೆಗಾಗಿ ಕಾಯುತ್ತಿದ್ದರೆ, ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿದವರಿಗೆ ಕೇವಲ 2 ವಾರಗಳಲ್ಲಿ ರಿಯಾಯಿತಿ ದರದಲ್ಲಿ ಫ್ಲ್ಯಾಟ್ಗಳನ್ನು ಹಂಚಿಕೆ ಮಾಡಲಾಗುತ್ತಿದೆ.
01:25 PM (IST) Jan 01
ಕೆನಡಾದ ವ್ಯಾಂಕೋವರ್ನಿಂದ ವಿಯೆನ್ನಾ ಮೂಲಕ ದೆಹಲಿಗೆ ಬರಬೇಕಿದ್ದ ವಿಮಾನವನ್ನು ಹಾರಿಸಬೇಕಿದ್ದ ಏರ್ ಇಂಡಿಯಾ ಪೈಲಟ್ ಒಬ್ಬರನ್ನು ವಿಮಾನ ಹಾರಾಟಕ್ಕೆ ಸ್ವಲ್ಪ ಸಮಯದ ಮೊಲದು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
12:59 PM (IST) Jan 01
ಬೆಂಗಳೂರಿನಲ್ಲಿ, ಕೌಟುಂಬಿಕ ಕಲಹ, ಪ್ರೀತಿಯ ಕೊರತೆ ಮತ್ತು ಶೈಕ್ಷಣಿಕ ಹಿನ್ನಡೆಯಿಂದ ಮನನೊಂದು 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾವಿಗೂ ಮುನ್ನ ಬರೆದ ಡೆತ್ ನೋಟ್ನಲ್ಲಿ, ತನ್ನ ಸಾವಿಗೆ ತಾನೇ ಕಾರಣ ಮತ್ತು ತನಗೆ ಪೋಷಕರ ಪ್ರೀತಿ ಸಿಗುತ್ತಿಲ್ಲ ಎಂದು ಉಲ್ಲೇಖಿಸಿದ್ದಾಳೆ.
12:57 PM (IST) Jan 01
ಹೊಸ ವರ್ಷದ ಸಂಭ್ರಮದ ನಡುವೆ, ವಿಜಯನಗರ ಮತ್ತು ಹುಬ್ಬಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಇಬ್ಬರು ಗೃಹಿಣಿಯರು ತಮ್ಮ ಪತಿಯರಿಂದಲೇ ಹತ್ಯೆಯಾಗಿದ್ದಾರೆ. ವಿಜಯನಗರದಲ್ಲಿ ಜಾನ್ಸಿ ಎಂಬುವವರನ್ನು ಪತಿ ಸೆಲ್ವಕುಮಾರ್ ಮತ್ತು ಹುಬ್ಬಳ್ಳಿಯಲ್ಲಿ ಅಂಜುಮ್ ಎಂಬುವವರನ್ನು ಪತಿ ಮೆಹಬೂಬ್ ಕೊಲೆ ಮಾಡಿದ್ದಾರೆ.
12:26 PM (IST) Jan 01
11:30 AM (IST) Jan 01
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಮಂಜುನಾಥ್ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೇಣು ಮತ್ತು ಆತನ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ.
11:28 AM (IST) Jan 01
10:21 AM (IST) Jan 01
ಬುಧವಾರದ ಸಂಚಿಕೆಯಲ್ಲಿ ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧ್ರುವಂತ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಗಿಲ್ಲಿ ನಟನ ಕಾಮಿಡಿಗೆ ತಿರುಗೇಟು ನೀಡಲು ಹೋದಾಗ, ಅವರು 'ಮುದುಕಿ', 'ಅಜ್ಜಿ', 'ವಿಗ್' ಎಂಬಂತಹ ಪದಗಳನ್ನು ಬಳಸಿ ವೈಯಕ್ತಿಕ ನಿಂದನೆ ನಡೆಸಿದರು.
09:16 AM (IST) Jan 01
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಮತ್ತು ಶಿಕ್ಷಣ ತಜ್ಞ ಎನ್. ವಿನಯ್ ಹೆಗ್ಡೆ (86) ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಗ್ರಾಮೀಣ ಪ್ರದೇಶ ನಿಟ್ಟೆಯನ್ನು ಅಂತರಾಷ್ಟ್ರೀಯ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಅವರು, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸೋದರರಾಗಿದ್ದರು.
08:21 AM (IST) Jan 01
08:11 AM (IST) Jan 01
ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನ್ಯಾಯದ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿ ನಟ ದರ್ಶನ್ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ.
08:04 AM (IST) Jan 01
07:31 AM (IST) Jan 01
ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ಹೊಸ ವರ್ಷವನ್ನು ಪಾರ್ಟಿ, ಪಟಾಕಿ ಹಾಗೂ ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಜನಸಾಗರವೇ ಸೇರಿದ್ದು, ಹೋಟೆಲ್, ಪಬ್ಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
07:24 AM (IST) Jan 01
ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಜಕೀಯ ಸ್ವರೂಪ ಪಡೆದಿದೆ. ಈ ಪ್ರದೇಶವು ಸ್ಲೀಪರ್ ಸೆಲ್ಗಳ ಕೇಂದ್ರವಾಗುವ ಅಪಾಯವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಎನ್ಐಎ ತನಿಖೆಗೆ ಆಗ್ರಹಿಸಿದ್ದಾರೆ.
06:48 AM (IST) Jan 01
ಸಾಮಾಜಿಕ ಜಾಲತಾಣದಲ್ಲಿನ ಅಶ್ಲೀಲ ಕಾಮೆಂಟ್ಗಳ ವಿರುದ್ಧ ನೀಡಿದ ದೂರು ನಿರ್ಲಕ್ಷಿಸಲಾಗಿದೆ ಎಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
06:42 AM (IST) Jan 01
ಬೆಂಗಳೂರಿನಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್ಸಿಬಿ) ಅಧಿಕಾರಿಗಳು ಸುಮಾರು 8 ಕೋಟಿ ರೂಪಾಯಿ ಮೌಲ್ಯದ 160 ಕೆಜಿ ‘ಖಾಟ್ ಎಲೆಗಳನ್ನು’ ವಶಪಡಿಸಿಕೊಂಡಿದ್ದಾರೆ. ಇಥಿಯೋಪಿಯಾದಿಂದ ಭಾರತದ ಮೂಲಕ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲ