ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಾಮೀನು ನೀಡಲು ಮೂರನೇ ಬಾರಿಗೆ ಇಲ್ಲಿಯ ಹೈಕೋರ್ಟ್ ಪೀಠವು ನಿರಾಕರಿಸಿದೆ. ಆರೋಪಿ ಫಯಾಜ್ ಪರವಾಗಿ ವಾದ ಮಂಡಿಸಿದ ನ್ಯಾಯವಾದಿ ಎಂ.ಹತ್ತರಕಿ, ಜಾಮೀನು ನೀಡುವಂತೆ ನ್ಯಾಯಪೀಠದ ಎದುರು ಮನವಿ ಮಾಡಿದರು.
ನೇಹಾ ಪರವಾಗಿ ವಾದಿಸಿದ ವಕೀಲ ರಾಘವೇಂದ್ರ ಮುತ್ತಗೀಕರ, ಆರೋಪಿ ಮಾಡಿರುವ ಕೊಲೆಯು ಗಂಭೀರ ಸ್ವರೂಪದ್ದಾಗಿದ್ದು, ಆರೋಪಿಗೆ ಶಿಕ್ಷೆ ಪ್ರಕಟವಾಗುವ ವರೆಗೂ ಜಾಮೀನು ನೀಡದಿರುವಂತೆ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
09:13 AM (IST) Jul 01
09:09 AM (IST) Jul 01
08:49 AM (IST) Jul 01
ದೂರು ಸ್ವೀಕಾರಕ್ಕೆ ಪೊಲೀಸರು ಹಿಂದೇಟು ಹಾಕುತ್ತಿರುವ ಆರೋಪ ಕೇಳಿಬಂದ ಬೆನ್ನಲ್ಲೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಜನಸ್ನೇಹಿ ವ್ಯವಸ್ಥೆ ಜಾರಿಗೆ ದಿಟ್ಟ ಕ್ರಮ. ಇನ್ನು ದೂರು ಕೊಡಲು ಪೊಲೀಸ್ ಠಾಣೆಗೆ ಹೋಗಬೇಕಿಲ್ಲ, ನೀವಿರುವಲ್ಲಿಂದಲೇ ಆನ್ಲೈನ್ ಮೂಲಕ ಪೊಲೀಸರಿಗೆ ದೂರು ನೀಡಿ ಸ್ವೀಕೃತಿ ಪಡೆಯಬಹುದಾಗಿದೆ.
08:47 AM (IST) Jul 01
ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಅವರ ಪತ್ನಿ ವರ್ಷ ಹರೀಶ್ ಗೌಡ ಅವರು, ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ಗೆ ಅಶ್ಲೀಲ ಕಮೆಂಟ್ ಹಾಕಿದ ಅನಾಮಿಕ ಖಾತೆಯ ವಿರುದ್ಧ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
08:35 AM (IST) Jul 01
ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಮರುಚಾಲನೆ ಸಿಕ್ಕಿದೆ. ಕೇಂದ್ರ ಸಚಿವ ವಿ.ಸೋಮಣ್ಣ 2027ರೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದರೆ, ಡಿಸಿಎಂ ಡಾ.ಜಿ.ಪರಮೇಶ್ವರ್ ಒಂದು ವರ್ಷದೊಳಗೆ ತುಮಕೂರು-ಪಾವಗಡ ಮಾರ್ಗ ಪೂರ್ಣಗೊಳಿಸಲು ಸೂಚಿಸಿದ್ದಾರೆ.
08:11 AM (IST) Jul 01
ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಶತಮಾನದ ನಂತರ ದಲಿತರು ಪ್ರವೇಶಿಸುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ತಾಲೂಕು ಆಡಳಿತ ಮತ್ತು ಪೊಲೀಸ್ ಬಂದೋಬಸ್ತ್ನಲ್ಲಿ, ಮೇಲ್ವರ್ಗದವರ ಸಹಕಾರದೊಂದಿಗೆ ಈ ದೇವಾಲಯ ಪ್ರವೇಶವು ಶಾಂತಿಯುತವಾಗಿ ನಡೆದು, ದಲಿತ ಸಮುದಾಯದ ಶತಮಾನದ ಕನಸು ನನಸಾಗಿದೆ.
08:08 AM (IST) Jul 01
ಸರ್ಕಾರಿ ನೌಕರಿ ಕನಸು ಕಂಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಿಗೆ 2,500 ಕಂಪ್ಯೂಟರ್ ಸೈನ್ಸ್ (ಗಣಕ ವಿಜ್ಞಾನ) ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಿದ್ದ ಸರ್ಕಾರವು, ಈ ಹುದ್ದೆಗಳ ನೇಮಕಾತಿಗೆ ನಿಯಮಾವಳಿಗೆ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.
07:58 AM (IST) Jul 01
07:37 AM (IST) Jul 01
ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿ, ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದ 12 ಬಾಂಗ್ಲಾದೇಶ ಮೂಲದ ಪ್ರಜೆಗಳನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾನವ ಕಳ್ಳ ಸಾಗಣೆ ಮೂಲಕ ಬಾಂಗ್ಲಾದೇಶದಿಂದ ಮಹಿಳೆಯರನ್ನು ಕರೆಯಿಸಿ ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪಿಗಳು.
07:23 AM (IST) Jul 01
ಲಂಬಾಣಿ ತಾಂಡಾಗಳಲ್ಲಿ, ಬಂಜಾರಾ ಕ್ರಾಂತಿದಳ ಮತ್ತು ಸೇವಾಲಾಲ ಜಯಂತಿ ಸಮಿತಿಗಳು ವರದಕ್ಷಿಣೆ ಪಿಡುಗಿನ ವಿರುದ್ಧ ಹೊಸ ಕ್ರಾಂತಿಯನ್ನು ಆರಂಭಿಸಿವೆ. ವರದಕ್ಷಿಣೆ ಕೊಡು-ಕೊಳ್ಳುವಿಕೆಯನ್ನು ನಿಷೇಧಿಸಿ, ನಿಯಮ ಉಲ್ಲಂಘಿಸಿದವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳುವ ಮೂಲಕ ಸರಳ ವಿವಾಹಗಳಿಗೆ ಆದ್ಯತೆ ನೀಡುತ್ತಿವೆ.