LIVE NOW
Published : Jul 01, 2026, 06:39 AM ISTUpdated : Jul 01, 2026, 09:13 AM IST

Karnataka News Live: ಮಂಗಳೂರು - ಭಾರೀ ಮಳೆಗೆ ನಾಗುರಿಯಲ್ಲಿ ನಸುಕಿನ ವೇಳೆ ಗುಡ್ಡ ಕುಸಿದು ಬಿಹಾರಿ ಕುಟುಂಬ ಸೇರಿ ಮೂರು ಸಾವು!

ಸಾರಾಂಶ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಾಮೀನು ನೀಡಲು ಮೂರನೇ ಬಾರಿಗೆ ಇಲ್ಲಿಯ ಹೈಕೋರ್ಟ್ ಪೀಠವು ನಿರಾಕರಿಸಿದೆ. ಆರೋಪಿ ಫಯಾಜ್‌ ಪರವಾಗಿ ವಾದ ಮಂಡಿಸಿದ ನ್ಯಾಯವಾದಿ ಎಂ.ಹತ್ತರಕಿ, ಜಾಮೀನು ನೀಡುವಂತೆ ನ್ಯಾಯಪೀಠದ ಎದುರು ಮನವಿ ಮಾಡಿದರು.

ನೇಹಾ ಪರವಾಗಿ ವಾದಿಸಿದ ವಕೀಲ ರಾಘವೇಂದ್ರ ಮುತ್ತಗೀಕರ, ಆರೋಪಿ ಮಾಡಿರುವ ಕೊಲೆಯು ಗಂಭೀರ ಸ್ವರೂಪದ್ದಾಗಿದ್ದು, ಆರೋಪಿಗೆ ಶಿಕ್ಷೆ ಪ್ರಕಟವಾಗುವ ವರೆಗೂ ಜಾಮೀನು ನೀಡದಿರುವಂತೆ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

09:13 AM (IST) Jul 01

ಮಂಗಳೂರು - ಭಾರೀ ಮಳೆಗೆ ನಾಗುರಿಯಲ್ಲಿ ನಸುಕಿನ ವೇಳೆ ಗುಡ್ಡ ಕುಸಿದು ಬಿಹಾರಿ ಕುಟುಂಬ ಸೇರಿ ಮೂರು ಸಾವು!

ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಾಗುರಿ ಬಳಿ ತಡೆಗೋಡೆ ಕುಸಿದು ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದು, ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ. ಬಿಹಾರ ಮೂಲದ ಕುಟುಂಬ ಹಾಗೂ ಸ್ಥಳೀಯ ಕುಟುಂಬವೊಂದು ಈ ದುರಂತಕ್ಕೆ ತುತ್ತಾಗಿದೆ.
Read Full Story

09:09 AM (IST) Jul 01

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಮೂರು ಸರ್ಕಾರಿ ಕಾಲೇಜುಗಳಲ್ಲಿ ಬಿಎ ವಿಭಾಗ ಬಂದ್‌

ವಿದ್ಯಾರ್ಥಿಗಳ ಕೊರತೆಯಿಂದಾಗಿ, ಮಂಗಳೂರು ವಿಶ್ವವಿದ್ಯಾಲಯವು ಮೂರು ಸರ್ಕಾರಿ ಕಾಲೇಜುಗಳಲ್ಲಿ 2026-27ನೇ ಸಾಲಿನಿಂದ ಬಿಎ ಕೋರ್ಸ್‌ಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ವಾಣಿಜ್ಯ ಮತ್ತು ತಂತ್ರಜ್ಞಾನ ಆಧಾರಿತ ಕೋರ್ಸ್‌ಗಳತ್ತ ವಿದ್ಯಾರ್ಥಿಗಳ ಒಲವು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಹೊಸ ಉದ್ಯೋಗ ಆಧಾರಿತ ಕೋರ್ಸ್‌ಗಳನ್ನು ಪರಿಚಯಿಸಲಾಗುತ್ತಿದೆ.
Read Full Story

08:49 AM (IST) Jul 01

Online FIR - ಪೊಲೀಸ್ ಸೇವೆ ಮತ್ತಷ್ಟು ಡಿಜಿಟಲ್! ನೀವಿರುವಲ್ಲಿಂದಲೇ FIR ಮಾಡಿ, ಗೃಹಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಸೂಚನೆ

ದೂರು ಸ್ವೀಕಾರಕ್ಕೆ ಪೊಲೀಸರು ಹಿಂದೇಟು ಹಾಕುತ್ತಿರುವ ಆರೋಪ ಕೇಳಿಬಂದ ಬೆನ್ನಲ್ಲೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಜನಸ್ನೇಹಿ ವ್ಯವಸ್ಥೆ ಜಾರಿಗೆ ದಿಟ್ಟ ಕ್ರಮ. ಇನ್ನು ದೂರು ಕೊಡಲು ಪೊಲೀಸ್ ಠಾಣೆಗೆ ಹೋಗಬೇಕಿಲ್ಲ, ನೀವಿರುವಲ್ಲಿಂದಲೇ ಆನ್‌ಲೈನ್ ಮೂಲಕ ಪೊಲೀಸರಿಗೆ ದೂರು ನೀಡಿ ಸ್ವೀಕೃತಿ ಪಡೆಯಬಹುದಾಗಿದೆ. 

Read Full Story

08:47 AM (IST) Jul 01

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡರ ಪತ್ನಿಗೆ ಅಶ್ಲೀಲ ಕಮೆಂಟ್‌; ಮೈಸೂರಿನಲ್ಲಿ ದೂರು ದಾಖಲು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಅವರ ಪತ್ನಿ ವರ್ಷ ಹರೀಶ್‌ ಗೌಡ ಅವರು, ತಮ್ಮ ಇನ್ಸ್ಟಾಗ್ರಾಂ ಪೋಸ್ಟ್‌ಗೆ ಅಶ್ಲೀಲ ಕಮೆಂಟ್‌ ಹಾಕಿದ ಅನಾಮಿಕ ಖಾತೆಯ ವಿರುದ್ಧ ಮೈಸೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

Read Full Story

08:35 AM (IST) Jul 01

ತುಮಕೂರು-ರಾಯದುರ್ಗ-ಪಾವಗಡ ರೈಲು ಮಾರ್ಗಕ್ಕೆ ಮರುಜೀವ; ಯಾವಾಗ ಶುರುವಾಗಲಿದೆ ಸಂಚಾರ?

ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಮರುಚಾಲನೆ ಸಿಕ್ಕಿದೆ. ಕೇಂದ್ರ ಸಚಿವ ವಿ.ಸೋಮಣ್ಣ 2027ರೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದರೆ, ಡಿಸಿಎಂ ಡಾ.ಜಿ.ಪರಮೇಶ್ವರ್ ಒಂದು ವರ್ಷದೊಳಗೆ ತುಮಕೂರು-ಪಾವಗಡ ಮಾರ್ಗ ಪೂರ್ಣಗೊಳಿಸಲು ಸೂಚಿಸಿದ್ದಾರೆ. 

Read Full Story

08:11 AM (IST) Jul 01

Kadur - ಶತಮಾನದ ಬಳಿಕ ಪೊಲೀಸರ ಬಿಗಿ ಭದ್ರತೆಯಲ್ಲಿ ಹನುಮ ದೇಗುಲ ಪ್ರವೇಶಿಸಿದ ದಲಿತರು

ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಶತಮಾನದ ನಂತರ ದಲಿತರು ಪ್ರವೇಶಿಸುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ತಾಲೂಕು ಆಡಳಿತ ಮತ್ತು ಪೊಲೀಸ್ ಬಂದೋಬಸ್ತ್‌ನಲ್ಲಿ, ಮೇಲ್ವರ್ಗದವರ ಸಹಕಾರದೊಂದಿಗೆ ಈ ದೇವಾಲಯ ಪ್ರವೇಶವು ಶಾಂತಿಯುತವಾಗಿ ನಡೆದು, ದಲಿತ ಸಮುದಾಯದ ಶತಮಾನದ ಕನಸು ನನಸಾಗಿದೆ.

Read Full Story

08:08 AM (IST) Jul 01

2500 Govt Jobs - ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ಸುದ್ದಿ - ಬರೋಬ್ಬರಿ 2500 ಹುದ್ದೆಗಳಿಗೆ ನೇಮಕಾತಿ ಬಿಗ್ ಅಪ್ಡೇಟ್!

ಸರ್ಕಾರಿ ನೌಕರಿ ಕನಸು ಕಂಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಿಗೆ 2,500 ಕಂಪ್ಯೂಟರ್ ಸೈನ್ಸ್ (ಗಣಕ ವಿಜ್ಞಾನ) ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಿದ್ದ ಸರ್ಕಾರವು, ಈ ಹುದ್ದೆಗಳ ನೇಮಕಾತಿಗೆ ನಿಯಮಾವಳಿಗೆ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.

Read Full Story

07:58 AM (IST) Jul 01

ಕೊನೆಗೂ ಕುಮಟಾದ ಯಡ್ತಾರೆ-ಕಬ್ಬರ್ಗಿ ಗ್ರಾಮಕ್ಕೆ ಬಂತು ಬಸ್; ಅಧಿಕೃತವಾಗಿ ಪ್ರತಿನಿತ್ಯ ಸಂಚಾರ

ಶಾಸಕ ದಿನಕರ ಶೆಟ್ಟಿ ಅವರು ಕುಮಟಾದ ಯಡ್ತಾರೆ-ಕಬ್ಬರ್ಗಿ ಗ್ರಾಮಕ್ಕೆ ಬಹುನಿರೀಕ್ಷಿತ ಸಾರಿಗೆ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದ್ದು, ಈ ಭಾಗದ ರಸ್ತೆ, ಸೇತುವೆ, ನೀರಿನ ಯೋಜನೆಗಳಂತಹ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಶಾಸಕರು ಮಾಹಿತಿ ನೀಡಿದರು.
Read Full Story

07:37 AM (IST) Jul 01

Illegal Bangladeshi in Bengaluru - ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 12 ಮಂದಿ ಬಾಂಗ್ಲಾದೇಶಿಗರ ಬಂಧನ

ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿ, ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದ 12 ಬಾಂಗ್ಲಾದೇಶ ಮೂಲದ ಪ್ರಜೆಗಳನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾನವ ಕಳ್ಳ ಸಾಗಣೆ ಮೂಲಕ ಬಾಂಗ್ಲಾದೇಶದಿಂದ ಮಹಿಳೆಯರನ್ನು ಕರೆಯಿಸಿ ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪಿಗಳು.

Read Full Story

07:23 AM (IST) Jul 01

ತಾಂಡಾಗಳಲ್ಲಿ ಕ್ರಾಂತಿಕಾರಿ ಹೆಜ್ಜೆ; ನಿಯಮ ಉಲ್ಲಂಘಿಸಿದವರಿಗೆ 1 ಲಕ್ಷ ರೂಪಾಯಿ ದಂಡ

ಲಂಬಾಣಿ ತಾಂಡಾಗಳಲ್ಲಿ, ಬಂಜಾರಾ ಕ್ರಾಂತಿದಳ ಮತ್ತು ಸೇವಾಲಾಲ ಜಯಂತಿ ಸಮಿತಿಗಳು ವರದಕ್ಷಿಣೆ ಪಿಡುಗಿನ ವಿರುದ್ಧ ಹೊಸ ಕ್ರಾಂತಿಯನ್ನು ಆರಂಭಿಸಿವೆ. ವರದಕ್ಷಿಣೆ ಕೊಡು-ಕೊಳ್ಳುವಿಕೆಯನ್ನು ನಿಷೇಧಿಸಿ, ನಿಯಮ ಉಲ್ಲಂಘಿಸಿದವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳುವ ಮೂಲಕ ಸರಳ ವಿವಾಹಗಳಿಗೆ ಆದ್ಯತೆ ನೀಡುತ್ತಿವೆ.

Read Full Story

More Trending News