ಬೆಳಗಾವಿ: ಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿ ಎಂಬ ನಕಲಿ ಫೇಸ್ಬುಕ್ ಖಾತೆಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬುವರು ಬೆಳಗಾವಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ವಿರುದ್ಧ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಆದರೆ, ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಅವರ ಹೆಸರು ಹಾಳು ಮಾಡಲು ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

07:36 AM (IST) Jun 01
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಮೊದಲ ಹಂತದ ಸಚಿವ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷರ ನೇಮಕ ಮತ್ತು ಡಿಸಿಎಂ ಹುದ್ದೆಗಳ ಕುರಿತು ಅಂತಿಮ ಚರ್ಚೆ ನಡೆಸಿ ಪಟ್ಟಿಯನ್ನು ಅಖೈರುಗೊಳಿಸಲಿದ್ದಾರೆ.
07:22 AM (IST) Jun 01
ಕುದುರೆಮುಖ ವನ್ಯಜೀವಿ ವಿಭಾಗದ ಪ್ರಮುಖ ಚಾರಣ ತಾಣಗಳಾದ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳಿಗೆ ಜೂ. 1ರಿಂದ ಚಾರಣಕ್ಕೆ ಅಧಿಕೃತವಾಗಿ ಅನುಮತಿ ನೀಡಲಾಗಿದೆ. ಚಾರಣಿಗರು 'ಅರಣ್ಯ ವಿಹಾರ' ವೆಬ್ಸೈಟ್ ಮೂಲಕ ಮುಂಗಡ ಬುಕ್ಕಿಂಗ್ ಮಾಡುವುದು ಕಡ್ಡಾಯವಾಗಿದೆ.
06:48 AM (IST) Jun 01
06:38 AM (IST) Jun 01
ರೈತರೊಬ್ಬರ ಜಮೀನಿನಲ್ಲಿ 101 ವರ್ಷ ಹಳೆಯ, ಅಪರೂಪದ ಔಷಧಿ ಗುಣಗಳನ್ನು ಹೊಂದಿರುವ ಮಡ್ಡಿ ಮರ (ಇಂಡಿಯನ್ ಮಲ್ಬೆರಿ) ಪತ್ತೆಯಾಗಿದೆ. ಆಯುರ್ವೇದದಲ್ಲಿ ಮಹತ್ವ ಪಡೆದಿರುವ ಈ ಮರವು ಕೀಲು ನೋವು, ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾಗಿದ್ದು, ಇದರ ಬೇರಿನಿಂದ ನೈಸರ್ಗಿಕ ಬಣ್ಣವನ್ನೂ ತಯಾರಿಸಲಾಗುತ್ತದೆ. ಈ ಮರವು ಜೀವವೈವಿಧ್ಯ ಸಂರಕ್ಷಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.
06:25 AM (IST) Jun 01
ತಿಪ್ಪನಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಕನಕರೆಡ್ಡಿ ಮಾದಿನಾಳ ಅವರು ಸತತ 33 ವರ್ಷಗಳ ಕಾಲ ಸೇವೆ ಸಲ್ಲಿಸಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ತಮ್ಮ ಅವಧಿಯಲ್ಲಿ ಸ್ಮಾರ್ಟ್ಕ್ಲಾಸ್, ಕಂಪ್ಯೂಟರ್ ಶಿಕ್ಷಣದಂತಹ ಸೌಲಭ್ಯಗಳನ್ನು ಒದಗಿಸಿ, ಇದೀಗ ಸೇವೆಯಿಂದ ನಿವೃತ್ತರಾಗಿದ್ದಾರೆ.
06:06 AM (IST) Jun 01
05:46 AM (IST) Jun 01
05:36 AM (IST) Jun 01
ಆರ್ಸಿಬಿ-ಜಿ.ಟಿ ಐಪಿಎಲ್ ಫೈನಲ್ ಪಂದ್ಯದ ವೇಳೆ, ಕಳೆದ ವರ್ಷದ ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರದಾದ್ಯಂತ ಹೈ ಅಲರ್ಟ್ ಘೋಷಿಸಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರು. ಈ ನಿಯಮಗಳ ನಡುವೆಯೂ ಆರ್ಸಿಬಿ ಗೆಲ್ಲುತ್ತಿದ್ದಂತೆ ರಾಜ್ಯಾದ್ಯಂತ ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.