LIVE NOW
Published : Jun 01, 2026, 05:20 AM ISTUpdated : Jun 01, 2026, 07:36 AM IST

Karnataka News Live: ಡಿಕೆಶಿ, ಸಿದ್ದು ಇಂದು ದೆಹಲಿಗೆ ಪ್ರಯಾಣ - ಸಂಪುಟ ಕಸರತ್ತು, ಯಾರಿಗೆ ಸಿಗಲಿದೆ ಪಟ್ಟ?

ಸಾರಾಂಶ

ಬೆಳಗಾವಿ: ಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿ ಎಂಬ ನಕಲಿ ಫೇಸ್‌ಬುಕ್ ಖಾತೆಯಲ್ಲಿ ಶಾಸಕ ಸತೀಶ್‌ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬುವರು ಬೆಳಗಾವಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ವಿರುದ್ಧ 37 ಶಾಸಕರಿಂದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಆದರೆ, ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಅವರ ಹೆಸರು ಹಾಳು ಮಾಡಲು ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Siddaramaiah DK Shivakumar

07:36 AM (IST) Jun 01

ಡಿಕೆಶಿ, ಸಿದ್ದು ಇಂದು ದೆಹಲಿಗೆ ಪ್ರಯಾಣ - ಸಂಪುಟ ಕಸರತ್ತು, ಯಾರಿಗೆ ಸಿಗಲಿದೆ ಪಟ್ಟ?

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಮೊದಲ ಹಂತದ ಸಚಿವ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷರ ನೇಮಕ ಮತ್ತು ಡಿಸಿಎಂ ಹುದ್ದೆಗಳ ಕುರಿತು ಅಂತಿಮ ಚರ್ಚೆ ನಡೆಸಿ ಪಟ್ಟಿಯನ್ನು ಅಖೈರುಗೊಳಿಸಲಿದ್ದಾರೆ.

Read Full Story

07:22 AM (IST) Jun 01

ಕುದುರೆಮುಖದ ಹಸಿರು ದ್ವಾರ ಮುಕ್ತ; ಚಾರಣಿಗರಿಗೆ ಹೊಸ ಕರೆಯೋಲೆ, ಇಂದಿನಿಂದ ಅಧಿಕೃತ ಅನುಮತಿ

ಕುದುರೆಮುಖ ವನ್ಯಜೀವಿ ವಿಭಾಗದ ಪ್ರಮುಖ ಚಾರಣ ತಾಣಗಳಾದ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳಿಗೆ ಜೂ. 1ರಿಂದ ಚಾರಣಕ್ಕೆ ಅಧಿಕೃತವಾಗಿ ಅನುಮತಿ ನೀಡಲಾಗಿದೆ. ಚಾರಣಿಗರು 'ಅರಣ್ಯ ವಿಹಾರ' ವೆಬ್‌ಸೈಟ್ ಮೂಲಕ ಮುಂಗಡ ಬುಕ್ಕಿಂಗ್ ಮಾಡುವುದು ಕಡ್ಡಾಯವಾಗಿದೆ.

Read Full Story

06:48 AM (IST) Jun 01

GBA ವಿರುದ್ಧ 1 ಕಿ.ಮೀ ಚಾಲೆಂಜ್ ಆರಂಭಿಸಿದ ಬೆಂಗಳೂರಿಗರು - ಫುಟ್‌ಪಾತ್‌ಗಾಗಿ ಹುಡುಕಾಟ

ಮಾಲಿನ್ಯ ಮತ್ತು ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ಜಿಬಿಎ ನೀಡಿದ 'ಒಂದು ಕಿ.ಮೀ ನಡಿಗೆ ಚಾಲೆಂಜ್'ಗೆ ಬೆಂಗಳೂರಿನ ನಾಗರಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಡೆಯಲು ಯೋಗ್ಯವಾದ ಫುಟ್‌ಪಾತ್‌ಗಳೇ ಇಲ್ಲದಿರುವಾಗ ಇಂತಹ ಸವಾಲುಗಳು ಅಸಂಬದ್ಧ ಎಂದು ಜಾಲತಾಣಗಳಲ್ಲಿ ಒತ್ತುವರಿಯಾದ ಮತ್ತು ಹದಗೆಟ್ಟ ಫುಟ್‌ಪಾತ್‌ಗಳ ಫೋಟೋಗಳೊಂದಿಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
Read Full Story

06:38 AM (IST) Jun 01

ಗದಗ - 101 ವರ್ಷ ಹಳೆಯ ಅಪರೂಪದ ಔಷಧಿ ಗುಣದ ಮಡ್ಡಿ ಮರ ಪತ್ತೆ; ಮಧುಮೇಹ ನಿಯಂತ್ರಣಕ್ಕೆ ರಾಮಬಾಣ

ರೈತರೊಬ್ಬರ ಜಮೀನಿನಲ್ಲಿ 101 ವರ್ಷ ಹಳೆಯ, ಅಪರೂಪದ ಔಷಧಿ ಗುಣಗಳನ್ನು ಹೊಂದಿರುವ ಮಡ್ಡಿ ಮರ (ಇಂಡಿಯನ್ ಮಲ್ಬೆರಿ) ಪತ್ತೆಯಾಗಿದೆ. ಆಯುರ್ವೇದದಲ್ಲಿ ಮಹತ್ವ ಪಡೆದಿರುವ ಈ ಮರವು ಕೀಲು ನೋವು, ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾಗಿದ್ದು, ಇದರ ಬೇರಿನಿಂದ ನೈಸರ್ಗಿಕ ಬಣ್ಣವನ್ನೂ ತಯಾರಿಸಲಾಗುತ್ತದೆ. ಈ ಮರವು ಜೀವವೈವಿಧ್ಯ ಸಂರಕ್ಷಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.

Read Full Story

06:25 AM (IST) Jun 01

1993 To 2026 - ಒಂದೇ ಶಾಲೆಯಲ್ಲಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕ!

ತಿಪ್ಪನಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಕನಕರೆಡ್ಡಿ ಮಾದಿನಾಳ ಅವರು ಸತತ 33 ವರ್ಷಗಳ ಕಾಲ ಸೇವೆ ಸಲ್ಲಿಸಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ತಮ್ಮ ಅವಧಿಯಲ್ಲಿ ಸ್ಮಾರ್ಟ್‌ಕ್ಲಾಸ್, ಕಂಪ್ಯೂಟರ್ ಶಿಕ್ಷಣದಂತಹ ಸೌಲಭ್ಯಗಳನ್ನು ಒದಗಿಸಿ, ಇದೀಗ ಸೇವೆಯಿಂದ ನಿವೃತ್ತರಾಗಿದ್ದಾರೆ.

Read Full Story

06:06 AM (IST) Jun 01

Chamarajanagar - ದಾಳಿ ಮಾಡಿದರೂ ಜಗ್ಗದೆ ಕಿರುಚಿ ಹುಲಿ ಓಡಿಸಿದ ಕುರಿಗಾಹಿ ನೂರಾಳು

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಳಿ ಕುರಿ ಮೇಯಿಸುತ್ತಿದ್ದ ನೂರಾಳು ಎಂಬುವರ ಮೇಲೆ ಹುಲಿ ದಾಳಿ ಮಾಡಿದೆ. ಆದರೆ, ಅವರು ಕಿರುಚಿಕೊಂಡಾಗ ಹುಲಿ ಹೆದರಿ ಓಡಿಹೋಗಿದ್ದು, ಕುರಿಗಾಹಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Read Full Story

05:46 AM (IST) Jun 01

ಡಿಕೆ ಸಂಪುಟ ರಚನೆ ಹೇಗೆ ಅಗುತ್ತೆ? ಯಾರಿಗೆಲ್ಲಾ ಸಿಗುತ್ತೆ ಸ್ಥಾನ? ಖರ್ಗೆ ಹೇಳಿದ ರಹಸ್ಯಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಡಿ.ಕೆ.ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದ ಸಂಪುಟ ರಚನೆಯು ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಕಲಬುರಗಿಯಲ್ಲಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 8-10 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ನಂತರ ಸಂಪುಟ ವಿಸ್ತರಣೆಯಾಗಲಿದೆ. ಅಲ್ಲದೆ, ಡಿಕೆಶಿ ಸಿಎಂ ಆದ ಬಳಿಕ ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆಯೂ ಅವರು ಸುಳಿವು ನೀಡಿದ್ದಾರೆ.
Read Full Story

05:36 AM (IST) Jun 01

ಖಾಕಿ ಹೈ ಅಲರ್ಟ್‌ನಲ್ಲೂ ಆರ್‌ಸಿಬಿ ಸಂಭ್ರಮಾಚರಣೆ; ಪಟಾಕಿ ಸಿಡಿಸಿ ಕುಣಿದ ಅಭಿಮಾನಿಗಳು

ಆರ್‌ಸಿಬಿ-ಜಿ.ಟಿ ಐಪಿಎಲ್‌ ಫೈನಲ್ ಪಂದ್ಯದ ವೇಳೆ, ಕಳೆದ ವರ್ಷದ ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರದಾದ್ಯಂತ ಹೈ ಅಲರ್ಟ್ ಘೋಷಿಸಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರು. ಈ ನಿಯಮಗಳ ನಡುವೆಯೂ ಆರ್‌ಸಿಬಿ ಗೆಲ್ಲುತ್ತಿದ್ದಂತೆ ರಾಜ್ಯಾದ್ಯಂತ ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

Read Full Story

More Trending News