LIVE NOW
Published : Mar 01, 2026, 06:24 AM ISTUpdated : Mar 01, 2026, 09:15 AM IST

Karnataka News Live: ಜಕ್ಕೂರು ವಿಲ್ಲಾ ಪಾರ್ಟಿಯಲ್ಲಿದ್ದ ಸಂತ್ರಸ್ತೆಯೂ ಸೇರಿದಂತೆ 10 ಮಂದಿಗೆ ಡ್ರಗ್ಸ್ ಪರೀಕ್ಷೆ

ಸಾರಾಂಶ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿ*ಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮಾಲೀಕ ಸೇರಿ ಮೂವರನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

8 ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯಸ್ಥ ಧನಂಜಯ್‌, ಕೃತ್ಯಕ್ಕೆ ನೆರವಾದ ಆರೋಪದ ಮೇಲೆ ಮಹಿಳಾ ವಾರ್ಡನ್‌ ಮತ್ತು ಕೃತ್ಯದ ಬಗ್ಗೆ ತಿಳಿದಿದ್ದರೂ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಧನಂಜಯ್‌ ಪತ್ನಿಯನ್ನು ಬಂಧಿಸಲಾಗಿದೆ. ಬಾಲಕಿಯ ಪಾಲಕರು ನೀಡಿದ ದೂರಿನನ್ವಯ ಮೂವರು ಆರೋಪಿಗಳನ್ನು ಬಂಧಿಸಿ ಪೊಲೀಸ್‌ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

09:15 AM (IST) Mar 01

ಜಕ್ಕೂರು ವಿಲ್ಲಾ ಪಾರ್ಟಿಯಲ್ಲಿದ್ದ ಸಂತ್ರಸ್ತೆಯೂ ಸೇರಿದಂತೆ 10 ಮಂದಿಗೆ ಡ್ರಗ್ಸ್ ಪರೀಕ್ಷೆ

Bengaluru Villa Party ಜಕ್ಕೂರು ಸಮೀಪದ ವಿಲ್ಲಾ ಪಾರ್ಟಿಯಲ್ಲಿ ಸಾಮೂಹಿಕ ಅತ್ಯಾ*ಚಾರ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಸಂತ್ರಸ್ತೆ ಸೇರಿದಂತೆ 10 ಜನರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಿದ್ದಾರೆ. 

Read Full Story

08:59 AM (IST) Mar 01

ಇರಾನ್-ಇಸ್ರೇಲ್‌ ದಾಳಿ; ಮುಂದಾಗೋ ಭೃಗು ಅಂಗಾರಕ ಯುತಿ ಅಪಾಯ ಬಿಚ್ಚಿಟ್ಟ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಾಗಿದೆ. ಇರಾಕ್‌ ಹಾಗೂ ಇರಾನ್‌ ಸಂಘರ್ಷದಲ್ಲಿ ಸಾಕಷ್ಟು ಜನರು ಒದ್ದಾಡುತ್ತಿದ್ದಾರೆ. ಈಗ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ ಅವರು ಈ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

 

Read Full Story

08:38 AM (IST) Mar 01

ಪ್ರತಿಭಾವಂತನ ಸ್ಥಾನವನ್ನು ನೂರು ಕಂಪ್ಯೂಟರ್ ತುಂಬಿಸಲಾಗದು - ಇಸ್ರೋ ವಿಜ್ಞಾನಿ ಡಾ.ದಾರುಕೇಶ

ಅನ್ಯಗ್ರಹ ಜೀವಿಗಳ ಬಗ್ಗೆ ಇನ್ನೂ ಸಂಶೋಧನೆ ನಡೆಯುತ್ತಿದೆ. ಅದರ ಬಗ್ಗೆ ನಿಖರವಾಗಿ ಹೇಳಲು ಆಗಲ್ಲ. ಇಸ್ರೋಗೆ ಸಂಶೋಧನೆಗಾಗಿ ಅನುದಾನದ ಕೊರತೆಯಿಲ್ಲ. ಭಾರತ ಸರ್ಕಾರ ಹಲವಾರು ಅನುದಾನಗಳನ್ನು ಸಂಶೋಧನೆಗೆ ಮೀಸಲಿಟ್ಟಿದೆ.

Read Full Story

08:30 AM (IST) Mar 01

ಅರ್ಧಕ್ಕೆ ನಿಂತ ಗ್ರಾಮದ ದೇಗುಲ ನಿರ್ಮಾಣಕ್ಕೆ ₹2.50 ಲಕ್ಷ ನೀಡಿದ 850 ‘ಗೃಹಲಕ್ಷ್ಮೀ’ಯರು

ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ, 850 ಮಹಿಳೆಯರು ತಮ್ಮ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಧಕ್ಕೆ ನಿಂತಿದ್ದ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ಸಮರ್ಪಿಸಿದ್ದಾರೆ.  ದೇಗುಲ ಕಾಮಗಾರಿಯನ್ನು ಪೂರ್ಣಗೊಳಿಸಲು ಈ ಮಹಿಳೆಯರು ಒಟ್ಟು ₹16 ಲಕ್ಷ ದೇಣಿಗೆ ನೀಡಲು ಮುಂದಾಗಿದ್ದಾರೆ.

Read Full Story

08:11 AM (IST) Mar 01

ಜೀವಂತ ರತಿ-ಮನ್ಮಥರನ್ನು ನಗಿಸಿ 13 ಲಕ್ಷ ಬಹುಮಾನ ಪಡೆಯಿರಿ; 67 ವರ್ಷದಿಂದ ಯಾರಿಗೂ ಸಾಧ್ಯವಾಗಿಲ್ಲ

ರಾಣಿಬೆನ್ನೂರಿನಲ್ಲಿ ಹೋಳಿ ಹಬ್ಬದ ಮುನ್ನಾದಿನ ಜೀವಂತ ರತಿ-ಮನ್ಮಥರನ್ನು ಕೂರಿಸುವ ವಿಶಿಷ್ಟ ಕಾರ್ಯಕ್ರಮ ನಡೆಯುತ್ತದೆ. ಇವರನ್ನು ನಗಿಸಿದವರಿಗೆ ಲಕ್ಷಾಂತರ ರೂಪಾಯಿ ಬಹುಮಾನ ಘೋಷಿಸಲಾಗಿದ್ದರೂ, ಕಳೆದ 67 ವರ್ಷಗಳಿಂದ ಯಾರೂ ಈ ಸವಾಲಿನಲ್ಲಿ ಯಶಸ್ವಿಯಾಗಿಲ್ಲ. 

Read Full Story

07:25 AM (IST) Mar 01

ಕೃಷಿಯಲ್ಲಿ ತೊಡಗಲು ಪೊಲೀಸ್‌ ಕಾನ್‌ಸ್ಟೇಬಲ್‌ ಹುದ್ದೆಗೆ ರಾಜೀನಾಮೆ!

ಕೊಡಗಿನ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ ಆಗಿ ಕರ್ತವ್ಯದಲ್ಲಿದ್ದ ತೇಜಸ್ವಿ (32) ಅವರು ತಮ್ಮ ಹುಟ್ಟೂರಲ್ಲಿ ಕೃಷಿ ಮಾಡುವ ಆಸಕ್ತಿಯಿಂದ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿದ್ದಾರೆ.

Read Full Story

07:06 AM (IST) Mar 01

ಇಂದಿನಿಂದ ಮೊಬೈಲಲ್ಲಿ ಸಿಮ್‌ ಇದ್ರೆ ಮಾತ್ರ ವಾಟ್ಸಪ್‌ ಬಳಕೆ!

ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ತೆರೆಯುವಾಗ ನೋಂದಾಯಿಸಲಾಗುವ ಸಂಖ್ಯೆಯ ಸಿಮ್‌ಕಾರ್ಡ್‌ ಮೊಬೈಲ್‌ನಲ್ಲಿ ಇದ್ದರೆ ಮಾತ್ರ ಇಂದಿನಿಂದ ಆ ಆ್ಯಪ್‌ಗಳನ್ನು ಬಳಸಲಾಗುವುದು. ಅಂತೆಯೇ ವಾಟ್ಸಪ್‌ ಮತ್ತು ಟೆಲಿಗ್ರಾಂಗೆ ವೆಬ್‌ನಲ್ಲಿ ಲಾಗ್‌ಇನ್‌ ಆಗಿದ್ದರೆ, ಅವುಗಳು 6 ತಾಸುಗಳ ಬಳಿಕ ತಾವಾಗಿಯೇ ಲಾಗ್‌ಔಟ್‌ ಆಗಲಿವೆ.

Read Full Story

07:03 AM (IST) Mar 01

ಕಾಂಗ್ರೆಸ್‌ ಈಗ ಮುಸ್ಲಿಂ ಲೀಗ್‌ - ಮಾವೋವಾದಿ ಆಗಿದೆ - ಮೋದಿ ವಾಗ್ದಾಳಿ

ದೆಹಲಿಯಲ್ಲಿ ನಡೆದ ಜಾಗತಿಕ ಎಐ ಶೃಂಗಸಭೆ ವೇಳೆ ಶರ್ಟ್‌ ಬಿಚ್ಚಿ ಬನಿಯನ್‌ನಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ನ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದು, ‘ಇಂದು ವಿಪಕ್ಷವು ಮುಸ್ಲಿಂ ಲೀಗ್‌-ಮಾವೋವಾದಿ ಕಾಂಗ್ರೆಸ್‌ ಆಗಿದೆ.

Read Full Story

06:55 AM (IST) Mar 01

‘ವಿಶ್ವದ ಅತಿ ಬ್ಯುಸಿ’ ದುಬೈ ಏರ್ಪೋರ್ಟ್‌ ಸ್ಥಗಿತ

ಇರಾನ್‌ ದಾಳಿಯ ಕಾರಣ ವಿಶ್ವದ ಅತಿ ಬ್ಯುಸಿ ಏರ್‌ಪೋರ್ಟ್‌ ಎಂದೇ ಪ್ರಖ್ಯಾತಿ ಪಡೆದ ದುಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆಯನ್ನು ನಿಲ್ಲಿಸಿದೆ. ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

Read Full Story

06:49 AM (IST) Mar 01

ಬಂಗಾಳ ಅಂತಿಮ ಮತಪಟ್ಟಿ ಬಿಡುಗಡೆ - 63 ಲಕ್ಷ ಹೆಸರು ಡಿಲೀಟ್‌

ಪ. ಬಂಗಾಳದಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮುಗಿದಿದ್ದು, ಅಂತಿಮ ಮತಪಟ್ಟಿ ಬಿಡುಗಡೆ ಆಗಿದೆ ಹಾಗೂ ಸುಮಾರು 63 ಲಕ್ಷ ಜನರ ಹೆಸರನ್ನು ಕೈಬಿಡಲಾಗಿದೆ. ಇನ್ನೂ 60 ಲಕ್ಷ ಮಂದಿ ಹೆಸರು ಪರಿಶೀಲನೆ ಬಾಕಿ ಇದೆ.

Read Full Story

06:38 AM (IST) Mar 01

ಸ್ತ್ರೀಯರಿಗೆ ಗರ್ಭಕಂಠ ಕ್ಯಾನ್ಸರ್‌ ಲಸಿಕೆಗೆ ಮೋದಿ ಚಾಲನೆ

ಇತ್ತೀಚೆಗೆ ಸ್ತ್ರೀಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುತ್ತಿರುವ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜಸ್ಥಾನದ ಅಜ್ಮೇರ್‌ನಲ್ಲಿ ಚಾಲನೆ ನೀಡಿದರು.

Read Full Story

06:32 AM (IST) Mar 01

ಆ್ಯಂಥ್ರೋಪಿಕ್‌ ಎಐ ತಂತ್ರಜ್ಞಾನಕ್ಕೆ ಟ್ರಂಪ್‌ ನಿರ್ಬಂಧ

ಆ್ಯಂಥ್ರೋಪಿಕ್‌ ಟೆಕ್ನಾಲಜಿ ವಿರುದ್ಧ ಡೊನಾಲ್ಡ್‌ ಟ್ರಂಪ್‌ ಗರಂ ಆಗಿದ್ದಾರೆ. ಸಂಸ್ಥೆಯ ಎಐ ತಂತ್ರಜ್ಞಾನವನ್ನು ಸೇನೆಗೆ ಮುಕ್ತವಾಗಿ ಬಳಸಲು ಅವಕಾಶ ನೀಡದ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಟ್ರಂಪ್‌, ಅಮೆರಿಕದ ರಕ್ಷಣಾ ಸಂಸ್ಥೆಗಳು ಆ್ಯಂಥ್ರೋಪಿಕ್‌ ಟೆಕ್ನಾಲಜಿ ಬಳಸದಂತೆ ಆದೇಶ ಹೊರಡಿಸಿದ್ದಾರೆ.

Read Full Story

More Trending News