LIVE NOW
Published : Sep 01, 2026, 05:12 AM ISTUpdated : Sep 01, 2026, 06:36 AM IST

Karnataka News Live: Bengaluru - 3 ಸಾವಿರ ಎಕರೆಯ ಕಾರಂತ ಬಡಾವಣೆ; 3200 ರೈತರಿಗೆ ಹಂಚಿಕೆಯಾದ BDA ನಿವೇಶನ

ಸಾರಾಂಶ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮದಲ್ಲಿ ನೇರ ಅಥವಾ ಪರೋಕ್ಷವಾಗಿಯಾಗಲಿ ತಮ್ಮ ಪಾತ್ರವಿದೆ ಎಂಬುದು ಸಾಭೀತಾದರೆ ತಾವು ರಾಜಕೀಯ ನಿವೃತ್ತಿ ಪಡೆಯಲು ಸಿದ್ದ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, ಕೆಪಿಎಸ್‌ಸಿ ಪ್ರಕರಣದಲ್ಲಿ ತಮ್ಮ ಪಾತ್ರವಿದೆ ಎಂದು ಹೇಳುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು ತಮ್ಮ ಆರೋಪಕ್ಕೆ ಪೂರಕವಾದ ದಾಖಲೆ ಬಹಿರಂಗಪಡಿಸಲಿ, ತಮ್ಮ ಪಾತ್ರ ಸಾಭೀತಾದರೆ ನಮ್ಮ ಕುಟುಂಬವೂ ರಾಜಕೀಯವಾಗಿ ಹಿಂದೆ ಸರಿಯುವ ಪರಿಸ್ಥಿತಿ ಬರಬಹುದು. ಆದರೆ ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು ತಮ್ಮ ವಿರುದ್ಧದ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧರಿದ್ದಾರೆಯೇ ಎಂದು ಪ್ರಶ್ನಿಸಿದರು.

DK Shivakumar

06:36 AM (IST) Sep 01

Bengaluru - 3 ಸಾವಿರ ಎಕರೆಯ ಕಾರಂತ ಬಡಾವಣೆ; 3200 ರೈತರಿಗೆ ಹಂಚಿಕೆಯಾದ BDA ನಿವೇಶನ

18 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಡಾ. ಕೆ. ಶಿವರಾಮ ಕಾರಂತ ಬಡಾವಣೆಗಾಗಿ ಭೂಮಿ ನೀಡಿದ ರೈತರು ಮತ್ತು ಭೂಮಾಲೀಕರಿಗೆ ಪರಿಹಾರ ವಿತರಣೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ದೇಶದಲ್ಲೇ ಅತಿ ಹೆಚ್ಚು ಎನ್ನಲಾದ ಶೇ.40ರಷ್ಟು ಅಭಿವೃದ್ಧಿಪಡಿಸಿದ ಭೂಮಿ ಸೇರಿದಂತೆ ಹಲವು ಪರಿಹಾರ ಆಯ್ಕೆಗಳನ್ನು ಘೋಷಿಸಿದ್ದಾರೆ.

Read Full Story

06:26 AM (IST) Sep 01

ಸಚಿವರ ಹೆಸರಲ್ಲಿ ಗುತ್ತಿಗೆದಾರರಿಂದ 7% ಕಮಿಷನ್‌? ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ

ಪುತ್ತೂರು ಕಾಂಗ್ರೆಸ್‌ ಶಾಸಕ ಅಶೋಕ್ ಕುಮಾರ್ ರೈ ಅವರು ಕೆಆರ್‌ಐಡಿಎಲ್‌ ಮಂಗಳೂರು ವಿಭಾಗದ ಇಂಜಿನಿಯರ್‌ಗಳ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
Read Full Story

05:37 AM (IST) Sep 01

Bengaluru ಕರ್ನಾಟಕ ಗೃಹ ಮಂಡಳಿಯ ಸೂರ್ಯ ನಗರ ಲೇಔಟ್‌ ಭೂಸ್ವಾಧೀನ ರದ್ದು - ಹೈಕೋರ್ಟ್

ಪರಿಸರ ಸೂಕ್ಷ್ಮ ವಲಯದ ನಿಯಮ ಉಲ್ಲಂಘಿಸಿ ಕರ್ನಾಟಕ ಗೃಹ ಮಂಡಳಿಯು ಸೂರ್ಯ ನಗರ ಲೇಔಟ್‌ ಅಭಿವೃದ್ಧಿಪಡಿಸಿದ್ದರಿಂದ, ಹೈಕೋರ್ಟ್ ಭೂಸ್ವಾಧೀನವನ್ನು ರದ್ದುಪಡಿಸಿದೆ. ಈ ಆದೇಶದಿಂದ ಸಾವಿರಾರು ನಿವೇಶನ ಹಂಚಿಕೆದಾರರಲ್ಲಿ ಆತಂಕ ಸೃಷ್ಟಿಯಾಗಿದ್ದು, ಕೆಎಚ್‌ಬಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
Read Full Story

More Trending News