ಬೆಳಗಾವಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಬ್ಯಾಲೇಟ್ ಪೇಪರ್ ಬಳಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ನಿರ್ಧಾರ ಹಾಸ್ಯಾಸ್ಪದವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಮತದಾರರು ಇವಿಎಂಗಳ ಮೂಲಕವೇ 2023ರ ವಿಧಾನಸಭಾ ಚುನಾವಣೆ ಹಾಗೂ 2024ರ ಉಪಚುನಾವಣೆಗಳಲ್ಲಿ ಮತಚಲಾಯಿಸಿದರು. ಆಗ ಫಲಿತಾಂಶಗಳು ಕಾಂಗ್ರೆಸ್ಸಿಗರಿಗೆ ಅನುಕೂಲಕರವಾಗಿದ್ದಾಗ ಇವಿಎಂ ಯಂತ್ರಗಳನ್ನು ಪ್ರಶ್ನಾತೀತವಾಗಿ ಸ್ವೀಕರಿಸಿದ್ದರು. ಆದರೆ, ಏಕಾಏಕಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳು ಇದ್ದಕ್ಕಿದ್ದಂತೆ ಹೇಗೆ ವಿಶ್ವಾಸಾರ್ಹವಲ್ಲ ಎನಿಸಿದವು? ಎಂದು ಪ್ರಶ್ನಿಸಿದರು.
ಸುಪ್ರೀಂ ಕೋರ್ಟ್ ಪದೇ ಪದೇ ಇವಿಎಂಗಳ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿದಿದೆ. ಮತಗಟ್ಟೆ ವಶಪಡಿಸಿಕೊಳ್ಳುವಿಕೆ, ಅಮಾನ್ಯ ಮತಗಳು, ವಿಳಂಬಿತ ಎಣಿಕೆ ಮತ್ತು ಕುಶಲತೆಯಿಂದ ಕೂಡಿದ ಯುಗದಿಂದ ದೂರ ಸರಿಯುವುದು ಭಾರತದ ಉದ್ದೇಶವಾಗಿತ್ತು. ಸಂಪೂರ್ಣ ಜಗತ್ತು ಅಭಿವೃದ್ಧಿಯನ್ನು ಒಪ್ಪಿಕೊಂಡರೆ ಕಾಂಗ್ರೆಸ್ ಮಾತ್ರ ದಿನದಿಂದ ದಿನಕ್ಕೆ ಹಿಂದೆ ಹೋಗುತ್ತಿದೆ ಎಂದು ದೂರಿದರು.
10:24 PM (IST) Feb 10
ಮಲೆನಾಡು ಮತ್ತು ಕರಾವಳಿ ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನದ ಫಲವಾಗಿ, ರಸ್ತೆ ಅಭಿವೃದ್ಧಿ ಹಾಗೂ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಚಾಲನೆ ನೀಡಲಾಗಿದ್ದು, 6 ತಿಂಗಳಲ್ಲಿ DPR ಸಿದ್ಧವಾಗಲಿದೆ.
10:05 PM (IST) Feb 10
'ಜೋಶ್' ಖ್ಯಾತಿಯ ನಟಿ ಪೂರ್ಣ ಅಲಿಯಾಸ್ ಶಮ್ನಾ ಖಾಸಿಮ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ತಮ್ಮ ಪತಿ ಶಾನಿದ್ ಆಸಿಫ್ ಮತ್ತು ಮಗನೊಂದಿಗೆ ಮೆಟರ್ನಿಟಿ ಫೋಟೋಶೂಟ್ ಮಾಡಿಸಿದ್ದಾರೆ.
09:38 PM (IST) Feb 10
ಫೆಬ್ರವರಿ 11 ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕೋರಮಂಗಲ, ಎಲೆಕ್ಟ್ರಾನಿಕ್ಸ್ ಸಿಟಿ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
09:27 PM (IST) Feb 10
09:25 PM (IST) Feb 10
ಗ್ರಾಹಕರಿಗೆ ತಮ್ಮ ಜಾತಿಯ ದೌಲತ್ತಿನಿಂದ ಧಮ್ಕಿ ಹಾಕಿದ್ದಾರೆ ಎನ್ನಲಾದ ಹೆಚ್ಡಿಎಫ್ಸಿ ಉದ್ಯೋಗಿ ಆಸ್ತಾ ಸಿಂಗ್ ಅವರ ವೀಡಿಯೋ ವೈರಲ್ ಆಗಿತ್ತು. ಈ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಅವರು, ಆ ವೀಡಿಯೋದಲ್ಲಿರುವುದು ಗ್ರಾಹಕರಲ್ಲ, ಬದಲಿಗೆ ಸಹೋದ್ಯೋಗಿ ಹಾಗೂ ಅದು ವೈಯಕ್ತಿಕ ಜಗಳವಾಗಿತ್ತು ಎಂದು ಹೇಳಿದ್ದಾರೆ.
09:03 PM (IST) Feb 10
07:56 PM (IST) Feb 10
ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತ ಪ್ರೀತಂಗೌಡ ಹೇಳಿಕೆಗೆ ತಿರುಗೇಟು ನೀಡಿರುವ ನಿಖಿಲ್ ಕುಮಾರಸ್ವಾಮಿ, ಬೀದಿ ರಂಪಾಟ ಮಾಡದಂತೆ ಎಚ್ಚರಿಸಿದ್ದಾರೆ. ಶಾಸಕ ಎ. ಮಂಜು ಕೂಡ ಪ್ರೀತಂ ಗೌಡರ ವಿರುದ್ಧ ಹತಾಶೆಯ ಮಾತುಗಳೆಂದು ಆಕ್ರೋಶ ವ್ಯಕ್ತಪಡಿಸಿದ್ದು, ಶಿವಲಿಂಗೇಗೌಡರ ಅಸಂವಿಧಾನಿಕ ಪದ ಬಳಕೆಯನ್ನು ಖಂಡಿಸಿದ್ದಾರೆ.
07:53 PM (IST) Feb 10
ವಿಜಯನಗರ ಜಿಲ್ಲೆಯಲ್ಲಿ, ಗುತ್ತಿಗೆದಾರನ ಬಿಲ್ ಪಾವತಿಸಲು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಮತ್ತು ಅಕೌಂಟೆಂಟ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗೆದಾರರ ದೂರಿನ ಮೇರೆಗೆ ಪಿಡಬ್ಲ್ಯೂಡಿ ಕಚೇರಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
07:07 PM (IST) Feb 10
07:03 PM (IST) Feb 10
06:47 PM (IST) Feb 10
'ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು' ಖ್ಯಾತಿಯ, 'ಕರಾವಳಿ ಹೆಣ್ಣು ಹುಲಿ' ಎಂದೇ ಪ್ರಸಿದ್ಧರಾದ ನಟಿ ಸುಷ್ಮಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿಯಲ್ಲಿ ನಿಧನರಾದ ತಮ್ಮ ತಂದೆ ಅಶೋಕ್ ಅವರೇ ಮಗನಾಗಿ ಮರುಹುಟ್ಟು ಪಡೆದಿದ್ದಾರೆ ಎಂದು, 'ಅಶೋಕ್ ರಾಜ್ ಈಸ್ ಬ್ಯಾಕ್' ಎಂದು ಬರೆದುಕೊಂಡಿದ್ದಾರೆ.
06:32 PM (IST) Feb 10
ಬೆಂಗಳೂರು: ಕರ್ಣ ಸೀರಿಯಲ್ ಮೂಲಕ ಕನ್ನಡಿಗರ ಮನೆಮಗನಾಗಿ ಗುರುತಿಸಿಕೊಂಡಿರುವ ಕಿರಣ್ ರಾಜ್ ಅವರಿಗೆ ರಾಜ್ಯದಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ಕಿರಣ್ ರಾಜ್ ತಮ್ಮ ಸೆಲಿಬ್ರಿಟಿ ಕ್ರಶ್ ಬಗ್ಗೆ ಮೊದಲ ಬಾರಿಗೆ ತುಟಿ ಬಿಚ್ಚಿದ್ದಾರೆ. ಕಿರಣ್ ರಾಜ್ ಈ ಬಗ್ಗೆ ಹೇಳಿದ್ದೇನು?
06:12 PM (IST) Feb 10
ಬೆಂಗಳೂರು ದಕ್ಷಿಣ ನಗರ ಪಾಲಿಕೆಯು, ಉತ್ತರಹಳ್ಳಿ ಉಪವಿಭಾಗದ ಗುಬ್ಬಲಾಳ ಗ್ರಾಮದಲ್ಲಿ ಪಾರ್ಕ್ಗಾಗಿ ಮೀಸಲಿಟ್ಟಿದ್ದ ಜಾಗದ ಒತ್ತುವರಿ ತೆರವುಗೊಳಿಸಿದೆ. ಸುಮಾರು 3,000 ಚದರ ಮೀಟರ್ ವಿಸ್ತೀರ್ಣದ, 3 ಕೋಟಿ ರೂಪಾಯಿ ಮೌಲ್ಯದ ಜಾಗವನ್ನು ಅನಧಿಕೃತ ಬೇಲಿ ತೆಗೆದುಹಾಕುವ ಮೂಲಕ ವಶಕ್ಕೆ ಪಡೆಯಲಾಗಿದೆ.
05:57 PM (IST) Feb 10
ಸಾಲ ಕೊಡಿಸುವ ನೆಪದಲ್ಲಿ ಹಲವು ಉದ್ಯಮಿಗಳಿಗೆ ವಂಚಿಸಿದ ಆರೋಪದ ಮೇಲೆ ಪೀಟರ್ ಡ್ಯಾಡಿ ಎಂಬಾತನ ನಿವಾಸದ ಮೇಲೆ ಸಿಐಡಿ ಆರ್ಥಿಕ ಅಪರಾಧ ದಳ ದಾಳಿ ನಡೆಸಿದೆ. ಆರೋಪಿಯು ಪ್ರೊಸೆಸಿಂಗ್ ಫೀ ಮತ್ತು ಕಮಿಷನ್ ಹೆಸರಿನಲ್ಲಿ ಹಣ ಪಡೆದು, ಹಣ ಕೇಳಿದವರ ಮೇಲೆ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸುತ್ತಿದ್ದನು.
05:42 PM (IST) Feb 10
ಮಾಡಿದ್ದುಣ್ಣೋ ಮಾರಾಯ ಅಂತಾರಲ್ಲ ಹಾಗೆ.. ಭಾಗ್ಯಲಕ್ಷ್ಮೀ ಧಾರಾವಾಹಿ ತಾಂಡವ್ ಸ್ಥಿತಿ ಆಗಿದೆ. ಅಷ್ಟು ವರ್ಷಗಳ ಕಾಲ ಪತ್ನಿ ಭಾಗ್ಯಗೆ ತೊಂದರೆ ಕೊಟ್ಟು, ಹಿಂಸೆ ಮಾಡಿದ್ದ ತಾಂಡವ್, ಈಗ ಅದನ್ನೆಲ್ಲ ಅನುಭವಿಸುತ್ತಿದ್ದಾನೆ. ಶ್ರೇಷ್ಠಳನ್ನು ಬಿಟ್ಟು ಭಾಗ್ಯ ಮನೆಗೆ ಬಂದ ಅವನಿಗೆ ತೊಂದರೆ ಶುರು ಆಗಿದೆ.
05:10 PM (IST) Feb 10
ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಚರ್ಚೆಗಳು ನಡೆಯುತ್ತಿವೆ. ರಾಜಕೀಯ ವಿರೋಧದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಈ ಪ್ರಸ್ತಾವನೆಯ ಬಗ್ಗೆ, ಹೊಸ ದರ ನಿಗದಿ ಸಮಿತಿ ರಚನೆ ಸೇರಿದಂತೆ ಅಂತಿಮ ನಿರ್ಧಾರವನ್ನು ಮುಂಬರುವ BMRCL ಬೋರ್ಡ್ ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆಯಿದೆ.
05:02 PM (IST) Feb 10
Bigg Boss Kannada 12: ಬಿಗ್ ಬಾಸ್ ಆಟ ಮುಗಿದರೂ ಸ್ಪರ್ಧಿಗಳ ನಡುವಿನ ಜಗಳ ಮುಗಿಯುತ್ತಿಲ್ಲ. ಚೈತ್ರಾ ಕುಂದಾಪುರ ಹಾಗೂ ಅಶ್ವಿನಿ ಗೌಡ ಅವರು ಆಟದ ವಿಚಾರವಾಗಿ ಜಗಳ ಆಡುತ್ತಿದ್ದಾರೆ. ಈಗ ಚೈತ್ರಾ ಪೋಸ್ಟ್ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿದೆ.
05:02 PM (IST) Feb 10
'ಸಪ್ತ ಸಾಗರದಾಚೆ ಎಲ್ಲೋ' ಮತ್ತು 'ಕಾಂತಾರ' ಚಿತ್ರಗಳ ಮೂಲಕ ಖ್ಯಾತಿ ಗಳಿಸಿದ ನಟಿ ರುಕ್ಮಿಣಿ ವಸಂತ್, ತಮ್ಮ ಯಶಸ್ಸಿನ ಹಿಂದಿನ ರಹಸ್ಯವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ದೇವಸ್ಥಾನವೇ ತಮ್ಮ ವೃತ್ತಿಜೀವನದ ಯಶಸ್ಸಿಗೆ ಕಾರಣ ಎಂದು ಅವರು ಬಹಿರಂಗಪಡಿಸಿದ್ದಾರೆ.
04:53 PM (IST) Feb 10
ನವದೆಹಲಿ: 2025-26ನೇ ಸಾಲಿನ ವಾರ್ಷಿಕ ಕೇಂದ್ರಿಯ ಗುತ್ತಿಗೆಯನ್ನು BCCI ಘೋಷಿಸಿದೆ. ಈ ಬಾರಿ ಒಟ್ಟು 30 ಆಟಗಾರರು ಎ, ಬಿ, ಸಿ ದರ್ಜೆಯ ಗುತ್ತಿಗೆ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಪ್ರಮುಖ ಮೂವರು ಆಟಗಾರರನ್ನು ಕೈಬಿಡಲಾಗಿದ್ದು, ಇವರ ಕ್ರಿಕೆಟ್ ಭವಿಷ್ಯ ಮುಗಿಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿವೆ.
04:43 PM (IST) Feb 10
04:21 PM (IST) Feb 10
Bigg Boss Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ದೊಡ್ಮನೆ ಹಬ್ಬ ಎಂದು ಕಾರ್ಯಕ್ರಮ ಮಾಡಲಾಗಿದೆ. ಆಗ ಭಾಗ್ಯಲಕ್ಷ್ಮೀ ಧಾರಾವಾಹಿ ನಟಿ ಸುಷ್ಮಾ ರಾವ್ ಅವರು ಬಿಗ್ ಬಾಸ್ ಸ್ಪರ್ಧಿಗಳ ಗುಟ್ಟು ರಟ್ಟು ಮಾಡಿದ್ದಾರೆ.
04:11 PM (IST) Feb 10
ರಾಮನಗರದ ಐತಿಹಾಸಿಕ ಸಾವನದುರ್ಗ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಹುಂಡಿ ಹಣದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಅವರು ಸುಮಾರು 10 ಲಕ್ಷಕ್ಕೂ ಅಧಿಕ ನಗದು ಮತ್ತು ಚಿನ್ನಾಭರಣಗಳನ್ನು ದುರ್ಬಳಕೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ.
04:08 PM (IST) Feb 10
ಬಿಗ್ ಬಾಸ್ ವಿಜೇತ ಗಿಲ್ಲಿ ನಟ, ನಟ ದರ್ಶನ್ರ ದೊಡ್ಡ ಅಭಿಮಾನಿಯಾಗಿದ್ದು, ಅವರೊಂದಿಗೆ 'ದಿ ಡೆವಿಲ್' ಚಿತ್ರದಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದ ಕಾರಣ ಚಿತ್ರದ ಸಂಭ್ರಮವನ್ನು ತಪ್ಪಿಸಿಕೊಂಡಿದ್ದ ಗಿಲ್ಲಿ, ಇದೀಗ ಜೈಲಿನಲ್ಲಿರುವ ದರ್ಶನ್ರನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದಾರೆ.
03:49 PM (IST) Feb 10
ಮುಸ್ಲಿಂ ಹುಡುಗನಿಗೋಸ್ಕರ ಹಿಂದು ಯುವತಿಯು ಮತಾಂತರ ಆಗಿದ್ದಾಳೆ. ಕೋಲ್ಕತ್ತಾ ಮೂಲದ ಯುವತಿ ಸೃಷ್ಟಿ ತ್ರಿಪಾಠಿಯು ಬೆಂಗಳೂರಿನ ಬಿಟಿಎಂ ಲೇಔಟ್ನ ಹುಡುಗನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ. ಈಗ ಬೀದಿಗೆ ಬಿದ್ದಿದ್ದಾಳೆ.
03:47 PM (IST) Feb 10
ಬೆಂಗಳೂರಿನ ಸಣ್ಣ ಹಾಗೂ ಮಧ್ಯಮ ಹೋಟೆಲ್ಗಳಲ್ಲಿ ಗ್ರಾಹಕರು ಗಂಟೆಗಟ್ಟಲೆ ಕಾಲಹರಣ ಮಾಡುವುದರಿಂದ ವ್ಯಾಪಾರಕ್ಕೆ ನಷ್ಟವಾಗುತ್ತಿದೆ. ಈ ಸಮಸ್ಯೆಗೆ ಪರಿಹಾರವಾಗಿ, 'ಟೇಬಲ್ ಚಾರ್ಜ್' ಅಥವಾ 500 ರಿಂದ 1000 ರೂ.ವರೆಗೆ ದಂಡ ವಿಧಿಸಲು ಹೋಟೆಲ್ ಮಾಲೀಕರ ಸಂಘ ಚಿಂತನೆ ನಡೆಸಿದೆ.
03:37 PM (IST) Feb 10
ಸ್ಯಾಂಡಲ್ವುಡ್ ನಟಿ ಸುಧಾರಾಣಿ ಅವರು ಬೆಂಗಳೂರು ಹಾಲು ಒಕ್ಕೂಟದ (BAMUL) 'ನಂದಿನಿ' ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಡಾ.ರಾಜ್ಕುಮಾರ್ ಕುಟುಂಬದ ಹಾದಿಯಲ್ಲಿಯೇ ಅವರು ಸಾಗುತ್ತಿದ್ದಾರೆ.
03:35 PM (IST) Feb 10
ಹಿಂದೂ ವಿವಾಹದ ಪ್ರಮುಖ ಭಾಗವಾದ ಸಪ್ತಪದಿಯ ನಿಜವಾದ ಅರ್ಥ ಅನೇಕರಿಗೆ ತಿಳಿದಿಲ್ಲ. ಆದರೆ, ಇಲ್ಲೊಬ್ಬರು ಪುರೋಹಿತರು ವಧುವರರಿಗೆ ಏಳು ಹೆಜ್ಜೆಗಳ ಪ್ರತಿಯೊಂದು ಪ್ರತಿಜ್ಞೆ ಮತ್ತು ಅದರ ಮಹತ್ವವನ್ನು ಸೊಗಸಾಗಿ ವಿವರಿಸಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
03:26 PM (IST) Feb 10
ಕಲಬುರಗಿ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ಅವರು ಗನ್ ಹಿಡಿದು ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ನಂತರ, ಅದು ಅಸಲಿ ಗನ್ ಅಲ್ಲ, ಮಕ್ಕಳ ಆಟಿಕೆ ಎಂದು ಸ್ಪಷ್ಟನೆ. ತಮ್ಮ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರಲು ವಿರೋಧಿಗಳು ಈ ವಿಡಿಯೋವನ್ನು ದುರುದ್ದೇಶಪೂರ್ವಕವಾಗಿ ವೈರಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
03:12 PM (IST) Feb 10
Actor Jayaram: ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದೊಂದು ಹೆಜ್ಜೆ ಇಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಈಗ ಕಾಂತಾರ ಸಿನಿಮಾ ನಟ ಜಯರಾಂ ಅವರನ್ನು ವಿಚಾರಣೆಗೆ ಕರೆದಿದೆ. ಹಾಗಾದರೆ, ಈ ಕೇಸ್ನ ಮುಂದಿನ ಭವಿಷ್ಯವೇನು?
03:05 PM (IST) Feb 10
ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ನಡುವಿನ ಸಂಬಂಧದ ಕುರಿತು ಹೊಸ ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. ಮಗಳ ಜಾತಕ ತೋರಿಸುವ ನೆಪದಲ್ಲಿ ಆರಂಭವಾದ ಈ ಪರಿಚಯವು ಅಕ್ರಮ ಸಂಬಂಧಕ್ಕೆ ತಿರುಗಿ, ಹಣಕಾಸು ದುರುಪಯೋಗ ಮತ್ತು ಇತರರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿಸಿದ ಆರೋಪಗಳಿಗೆ ಕಾರಣವಾಗಿದೆ.
02:08 PM (IST) Feb 10
01:39 PM (IST) Feb 10
ಕಲಬುರಗಿ ಜಿಲ್ಲೆಯಲ್ಲಿ ಶಾಸಕ ಎಂ.ವೈ. ಪಾಟೀಲ್ ಅವರ ಆಪ್ತ, ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್, ಸಿನಿಮಾ ಶೈಲಿಯಲ್ಲಿ ಗನ್ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಗನ್ನ ನೈಜತೆ ಮತ್ತು ಕಾನೂನುಬದ್ಧತೆಯ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ.
01:30 PM (IST) Feb 10
ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಮತ್ತು ಕಾರ್ತಿಕ್ ಮಹೇಶ್ ಅವರ ಮದುವೆಯ ವದಂತಿಗಳು ಹರಿದಾಡುತ್ತಿವೆ. ಈ ಬಗ್ಗೆ ಇಬ್ಬರೂ ಸ್ಪಷ್ಟನೆ ನೀಡದಿದ್ದರೂ, ಇದೀಗ ಅವರ ಸ್ನೇಹಿತೆ ಸಂಗೀತಾ ಶೃಂಗೇರಿ ಈ ಜೋಡಿ ಮದುವೆಯಾದರೆ ತನಗೆ ಖುಷಿ, ಅವರಿಬ್ಬರೂ ಚೆನ್ನಾಗಿ ಕಾಣುತ್ತಾರೆ ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ
01:26 PM (IST) Feb 10
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಕಾಮೆಂಟ್ ಮಾಡಿದ್ದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಬಂಧಿತ ಆರು ಆರೋಪಿಗಳಿಗೆ ಜಾಮೀನು ಸಿಗದಂತೆ ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದಾರೆ.
01:19 PM (IST) Feb 10
Karna Kannada Serial Episode Update: ಕರ್ಣ ಧಾರಾವಾಹಿಯಲ್ಲಿ ಅಪ್ಪ-ಮಗನಿಗೆ ನಿಧಿ-ಕರ್ಣ-ನಿತ್ಯಾ ಬದುಕಿನಲ್ಲಿ ಆಟ ಆಡೋದು ದೊಡ್ಡ ಕೆಲಸವಾಗಿದೆ. ಈಗ ಸಂಜಯ್ ಕೂಡ ಅದೇ ಹಾದಿ ಹಿಡಿದಿದ್ದಾನೆ. ಇದರಿಂದ ನಿಧಿ ಕನಸು ಕಮರಿ ಹೋಗಿದೆ. ಹಾಗಾದರೆ ಮುಂದೆ ಏನಾಗುವುದು?
01:07 PM (IST) Feb 10
ರಕ್ಷಿತಾ ಶೆಟ್ಟಿ ಅವರ ಮಾತುಗಳು ಟ್ರೋಲ್ ಆಗುತ್ತಿರುತ್ತವೆ. ಇದೀಗ ಬೆಂಗಳೂರಿನ ಜನತೆಗೆ ರಕ್ಷಿತಾ ಶೆಟ್ಟಿ ಪ್ರಶ್ನೆಯೊಂದನ್ನು ಕೇಳಿದ್ದಾರೆ. ರಕ್ಷಿತಾ ವ್ಯಕ್ತಿಯೊಬ್ಬರ ಜೊತೆ ಮಾತನಾಡುತ್ತಾ, ತಮಗಿದ್ದ ತಪ್ಪು ಕಲ್ಪನೆಯ ಬಗ್ಗೆ ಹೇಳಿಕೊಂಡಿದ್ದಾರೆ.
12:53 PM (IST) Feb 10
ಗದಗ ಜಿಲ್ಲೆಯ ನರಗುಂದ ತಾಲೂಕಿನ ಡಾ. ಶಿವಕುಮಾರ್ ಸ್ವಾಮೀಜಿ, ರೈತ ಯುವಕರಿಗೆ ಕನ್ಯೆಯರು ಸಿಗದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ರೈತರಿಗೆ ತಮ್ಮ ಹೆಣ್ಣುಮಕ್ಕಳನ್ನು ಕೊಟ್ಟು ವಿವಾಹ ಮಾಡುವ ಕುಟುಂಬಗಳಿಗೆ ಸರ್ಕಾರವು 2 ಲಕ್ಷ ರೂಪಾಯಿ ಸಹಾಯಧನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
12:43 PM (IST) Feb 10
ಬೆಂಗಳೂರು–ಹುಬ್ಬಳ್ಳಿ ರೈಲ್ವೇ ಮಾರ್ಗದಲ್ಲಿ ಸಂಚರಿಸುವ 7 ರೈಲುಗಳನ್ನು ಸಂಪೂರ್ಣ ರದ್ದು ಮಾಡಲಾಗುತ್ತಿದೆ. ಫೆಬ್ರವರಿ 16 ಮತ್ತು 17 ರಂದು ವಂದೇ ಭಾರತ್ ಮತ್ತು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
12:36 PM (IST) Feb 10
ಕರ್ಣ ಸೀರಿಯಲ್ನಲ್ಲಿ, ರಮೇಶ್ನ ಯೋಜನೆಗೆ ತಿರುಗೇಟು ನೀಡಿದ ಕರ್ಣ 3 ಕೋಟಿ ಆಸ್ತಿಯನ್ನು ನಿತ್ಯಾ ಹೆಸರಿಗೆ ಬರೆಸಲು ಕೇಳಿದ್ದಾನೆ. ಇದೇ ವೇಳೆ, ನಿತ್ಯಾ ಪಾತ್ರಧಾರಿ ನಮ್ರತಾ ಗೌಡ ಮಾಡರ್ನ್ ಡ್ರೆಸ್ನಲ್ಲಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಏನಂದ್ರು ನೋಡಿ.
12:21 PM (IST) Feb 10
Bigg Boss Kannada Season 12 Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿಗಳ ಜೊತೆ ಕಲರ್ಸ್ ಕನ್ನಡ ದೊಡ್ಮನೆ ಹಬ್ಬ ಆಯೋಜನೆಯಾಗಿದೆ, ಆ ವೇಳೆ ಸುಷ್ಮಾ ರಾವ್ ಅವರು ಒಂದಿಷ್ಟು ಗುಟ್ಟುಗಳನ್ನು ರಟ್ಟು ಮಾಡಿದ್ದಾರೆ.