ಅಯೋಧ್ಯೆಯಲ್ಲಿ ರಾಮ ಮಂದಿರ ಹುಂಡಿ ಕಳವು ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲಿ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಅಂಥ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ‘ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟೀವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.‘ಹುಂಡಿ ಇರುವ ಸ್ಥಳ, ಹಣ ಎಣಿಕೆ ಸ್ಥಳ ಸೇರಿದಂತೆ ದೇವಸ್ಥಾನದ ಎಲ್ಲ ಭಾಗಗಳಲ್ಲಿ ಸಿಸಿಟಿವಿ ಹಾಕಲಾಗುತ್ತದೆ. ದೇಗುಲದ ಚಟುವಟಿಕೆಗಳ ಮೇಲೆ ದಿನದ 24 ಗಂಟೆ ನಿಗಾ ಇಡಲಾಗುತ್ತದೆ ಎಂದರು.
ಮತ್ತೊಂದು ಕಡೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಬೆಳಗಾವಿ ಸಜ್ಜುಗೊಂಡಿದೆ. ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಸಂಘದ ಉನ್ನತ ನಾಯಕತ್ವ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಪ್ರಚಾರಕರು ಪಾಲ್ಗೊಳ್ಳಲಿದ್ದಾರೆ.
ಅನಗೋಳದ ಸಂತ ಮೀರಾ ಶಾಲೆ, ಶಾಸ್ತ್ರಿನಗರದಲ್ಲಿರುವ ಸಂಘದ ಕಚೇರಿ ಹಾಗೂ ಉದ್ಯಮಬಾಗದ ಫೌಂಡ್ರಿ ಕ್ಲಸ್ಟರ್ನಲ್ಲಿ ವಿವಿಧ ಹಂತದ ಸಭೆಗಳು ನಡೆಯಲಿವೆ. ಪ್ರಮುಖ ಚರ್ಚೆಗಳು ಸಂತ ಮೀರಾ ಶಾಲೆಯಲ್ಲೇ ನಡೆಯಲಿದ್ದು, ಸಭಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಆಹ್ವಾನಿತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
10:37 AM (IST) Jul 10
ಲಿಖಿತ ಆಫರ್ ಲೆಟರ್ ಹಾಗೂ 10 ಗಂಟೆಗಳ ಕೆಲಸದ ಅವಧಿಯ ಬಗ್ಗೆ ಸ್ಪಷ್ಟನೆ ಕೇಳಿದ ದೆಹಲಿಯ ಮಹಿಳಾ ಅಭ್ಯರ್ಥಿಯೊಬ್ಬರಿಗೆ ನೀಡಿದ್ದ ಉದ್ಯೋಗದ ಆಫರ್ ಅನ್ನು ಕಂಪನಿಯು ತಕ್ಷಣವೇ ರದ್ದುಗೊಳಿಸಿದೆ. ಆಕೆ 'ಹೆಚ್ಚಿನ ಹೊಂದಾಣಿಕೆ' ಬಯಸುತ್ತಿದ್ದಾರೆಂದು ನೆಪವೊಡ್ಡಿ ಆಫರ್ ಹಿಂಪಡೆದ ಕಂಪನಿಯ ಧೋರಣೆ ರೆಡ್ಡಿಟ್ನಲ್ಲಿ ವೈರಲ್ ಆಗಿದ್ದು, ಕಾರ್ಪೊರೇಟ್ ವಲಯದ ಕರಾಳ ಮುಖವನ್ನು ಬಯಲು ಮಾಡಿದೆ.
10:09 AM (IST) Jul 10
ಸಂಜು ಸ್ಯಾಮ್ಸನ್ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ. ಕೇರಳ ಕ್ರಿಕೆಟ್ ಲೀಗ್ನಿಂದ ಹಿಂದೆ ಸರಿದಿದ್ದು, ಇದಕ್ಕೆಲ್ಲ ಟೀಂ ಇಂಡಿಯಾದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳೇ ಕಾರಣ ಎನ್ನಲಾಗುತ್ತಿದೆ. ಈ ಕುರಿತ ಸುದ್ದಿ ಇಲ್ಲಿದೆ.
09:46 AM (IST) Jul 10
ಇತ್ತೀಚೆಗೆ 'ಕರಾವಳಿ' ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಟ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಎಂದು ಹೇಳಿಕೊಂಡು ಬಂದ ಕೆಲವರು ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಏನಿದು ಪ್ರಕರಣ? ಈ ಸ್ಟೋರಿ ಓದಿ
09:28 AM (IST) Jul 10
ಫುಟ್ಪಾತ್ ಒತ್ತುವರಿಯಿಂದಾಗಿ ಪಾದಚಾರಿಗಳು ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಪಾದಚಾರಿ ಮಾರ್ಗದಲ್ಲಿ ನಡೆಯುವುದು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಲೇಖನವು ಫುಟ್ಪಾತ್ಗಳ ಇತಿಹಾಸ, ಮಹತ್ವ ವಿವರಿಸುತ್ತದೆ.
09:25 AM (IST) Jul 10
08:35 AM (IST) Jul 10
08:04 AM (IST) Jul 10
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜನೆಗೆ ಮುಂದಾಗಿರುವುದನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ನ್ಯಾಯಾಲಯಕ್ಕೆ ದಾವೆ ಹೂಡಲು ಹಾಗೂ ಬೀದಿಗಿಳಿದು ಹೋರಾಟ ಮಾಡುವುದಾಗಿ ಪರಿಸರಕ್ಕಾಗಿ ನಾವು, ರೈತ ಸಂಘ ಮತ್ತು ದಲಿತ ಸಂಘಟನೆಗಳು ಘೋಷಿಸಿವೆ.