LIVE NOW
Published : Jun 10, 2026, 06:49 AM ISTUpdated : Jun 10, 2026, 09:59 AM IST

Karnataka News Live: ಮೆಟ್ರೋ ಬರುವ ಖುಷಿಯಲ್ಲಿದ್ದ ತುಮಕೂರಿನ ಜನತೆಗೆ ಬೇಸರದ ಸಂಗತಿ; ನಮಗ್ಯಾಕೆ ಬೇಕೆಂದ ಜನ

ಸಾರಾಂಶ

ಧಾರವಾಡ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳ ತಂಡವು ಮಂಗಳವಾರ ಜಿಲ್ಲೆಯ 24 ಗ್ರಾಪಂಗಳ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿತು.

ಕಳಪೆ ಕಾಮಗಾರಿ, ಬಿಲ್‌ ಪಾವತಿಗೆ ಹಣಕ್ಕಾಗಿ ಬೇಡಿಕೆ, ಕಾಮಗಾರಿಗಳ ಹಿರಿತನ ಆಧರಿಸಿ ಬಾಕಿ ಬಿಲ್​ ಪಾವತಿಸದಿರುವುದು, ದಾಖಲೆಗಳನ್ನು ನಿರ್ವಹಿಸದಿರುವುದು, ಫಲಾನುಭವಿಗಳಿಗೆ ಸೌಲಭ್ಯ ನೀಡಲು ವಿಳಂಬ ಸೇರಿ ಇನ್ನಿತರ ಲೋಪದೋಷಗಳ ಕುರಿತು ಲೋಕಾಯುಕ್ತರಿಗೆ ದೂರುಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಎಸ್‌.ಟಿ.ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಜಿಲ್ಲೆಯ 24 ಗ್ರಾಪಂಗಳ ದಾಖಲಾತಿ ಪರಿಶೀಲಿಸಿದ್ದು, ತಿಂಗಳಾಂತ್ಯಕ್ಕೆ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

09:59 AM (IST) Jun 10

ಮೆಟ್ರೋ ಬರುವ ಖುಷಿಯಲ್ಲಿದ್ದ ತುಮಕೂರಿನ ಜನತೆಗೆ ಬೇಸರದ ಸಂಗತಿ; ನಮಗ್ಯಾಕೆ ಬೇಕೆಂದ ಜನ

ತುಮಕೂರು ನಗರಕ್ಕೆ ಮೆಟ್ರೋ ರೈಲು ಬರುತ್ತೆ ಎಂಬ ಖುಷಿಯಲ್ಲಿದ್ದ ಈ ಭಾಗದ ಜನತೆಗೆ ಬೇಸರದ ಸಂಗತಿಯೊಂದು ಬಂದಿದೆ. ಈ ವಿಷಯ ತಿಳಿದ ಜನರು, ನಮಗ್ಯಾಕೆ ಬೇಕು ಮೆಟ್ರೋ ರೈಲು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Read Full Story

09:22 AM (IST) Jun 10

25 ವರ್ಷದ ಬಳಿಕ KSRTC ಬಸ್ ವೇಳಾಪಟ್ಟಿ ದಿಢೀರ್‌ ಬದಲಾವಣೆ - ಗ್ರಾಮಸ್ಥರಿಂದ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಬಸ್‌ನ ವೇಳಾಪಟ್ಟಿಯನ್ನು ಏಕಾಏಕಿ ಬದಲಿಸಿದ್ದಕ್ಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. 25 ವರ್ಷಗಳಿಂದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಗೆ ಅನುಕೂಲಕರವಾಗಿದ್ದ ಹಳೆಯ ವೇಳಾಪಟ್ಟಿಯನ್ನೇ ಮುಂದುವರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read Full Story

09:07 AM (IST) Jun 10

Bengaluru - ಬರೋಬ್ಬರಿ 5 ವರ್ಷದ ಬಳಿಕ ಪೀಣ್ಯ ಫ್ಲೈಓವರ್ ಪ್ರಯಾಣಿಕರಿಗೆ ಸಂತಸದ ಸುದ್ದಿ

ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯು ಹಲವು ಪರೀಕ್ಷೆಗಳಲ್ಲಿ ಯಶಸ್ವಿಯಾಗಿದ್ದು, ಇದೀಗ ಎಲ್ಲ ಬಗೆಯ ವಾಹನಗಳ ಸಂಚಾರಕ್ಕೆ ಸದೃಢವಾಗಿದೆ. ಮುಂಬೈ ಮೂಲದ ಕಂಪನಿಯು ನಡೆಸಿದ 'ಲೋಡ್ ಟೆಸ್ಟಿಂಗ್' ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸಿದ ನಂತರ, ಸಂಚಾರ ಪುನರಾರಂಭದ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.
Read Full Story

08:56 AM (IST) Jun 10

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ; ಮೈಕ್ ಮುಂದೆಯೇ ಸಾವು

ಹೊನ್ನಾವರದ ಮಸೀದಿಯೊಂದರಲ್ಲಿ ಆಝಾನ್ ನೀಡುತ್ತಿದ್ದ ವೇಳೆ ಬಂಟ್ವಾಳ ಮೂಲದ ಧರ್ಮಗುರು ಅಬ್ದುಲ್ ಲತೀಫ್ ಮದನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆಯ ನಮಾಝ್‌ಗೆ ಬಾಂಗ್ ಕೊಡುತ್ತಿದ್ದಾಗ ಅವರು ಮೈಕ್ ಮುಂದೆಯೇ ಕುಸಿದು ಬಿದ್ದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Read Full Story

08:53 AM (IST) Jun 10

Puneeth kerehalli - ರಾಯರ ದರ್ಶನಕ್ಕೆ ಹೋಗಿದ್ದ ಪುನೀತ್‌ ಕೆರೆಹಳ್ಳಿಗೆ ರಾಯಚೂರು ಪೊಲೀಸರು ಮಂತ್ರಾಲಯಕ್ಕೆ ಹೋಗಿ ನೋಟಿಸ್ ಕೊಟ್ಟಿದ್ದು ಸರಿಯೇ?

ಮಂತ್ರಾಲಯದ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳಿದ್ದ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಗೆ, ರಾಯಚೂರಿನ ಹಿಂದೂ ಮಹೋತ್ಸವಕ್ಕೆ ಆಗಮಿಸದಂತೆ ರಾಯಚೂರು ಪೊಲೀಸರು ನೋಟಿಸ್ ನೀಡಿದ್ದಾರೆ. ಇದು ಆಂಧ್ರಪ್ರದೇಶದ ವ್ಯಾಪ್ತಿಯಾಗಿದ್ದು, ಇಲ್ಲಿ ನೋಟಿಸ್ ನೀಡಿದ್ದಕ್ಕೆ ಕೆರೆಹಳ್ಳಿ ಪೊಲೀಸರ ನಡುವೆ ವಾಗ್ವಾದ.

Read Full Story

08:41 AM (IST) Jun 10

ಕುಸಿದ ಕಡವಾಡದ 60 ವರ್ಷ ಹಳೆಯ ಐತಿಹಾಸಿಕ ಸೇತುವೆ; ಮೀನುಗಾರರ ಬದುಕಿನ ಆಸರೆ ಈ ಸೇತುವೆ

ಕಾರವಾರದ ಕಡವಾಡ ಗ್ರಾಮದಲ್ಲಿ 60 ವರ್ಷಗಳ ಇತಿಹಾಸವಿದ್ದ, ರಾಮಕೃಷ್ಣ ಹೆಗಡೆಯವರಿಂದ ಉದ್ಘಾಟನೆಗೊಂಡಿದ್ದ ಹಳೆಯ ಸೇತುವೆಯು ಬಿರುಗಾಳಿ ಮಳೆಗೆ ಕುಸಿದು ಬಿದ್ದಿದೆ. ವಾಹನ ಸಂಚಾರಕ್ಕೆ ಮುಚ್ಚಿದ್ದರೂ, ಈ ಸೇತುವೆಯು ನೂರಾರು ಸ್ಥಳೀಯ ಮೀನುಗಾರ ಕುಟುಂಬಗಳ ಜೀವನೋಪಾಯಕ್ಕೆ ಪ್ರಮುಖ ಆಧಾರವಾಗಿತ್ತು.
Read Full Story

08:08 AM (IST) Jun 10

ಕಾಲಿಗೆ ಪೊರಕೆ ತಾಗಿದ್ದಕ್ಕೆ ಬೈದ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಥಳಿಸಿದ ಮಹಿಳೆ!

ರಾಯಚೂರಿನ ಕೇಂದ್ರ ಬಸ್ ನಿಲ್ದಾಣದ ಕ್ಯಾಂಟೀನ್‌ನಲ್ಲಿ, ಪೊರಕೆ ತಾಗಿದ್ದಕ್ಕೆ ಕೋಪಗೊಂಡ ಗ್ರಾಹಕನೊಬ್ಬ ಮಹಿಳಾ ಸಿಬ್ಬಂದಿಗೆ ಬೈದಿದ್ದಾನೆ. ಇದರಿಂದ ಕೆರಳಿದ ಮಹಿಳೆ, ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಪೊರಕೆಯಿಂದಲೇ ಥಳಿಸಿದ್ದಾರೆ. ಈ ಬೀದಿ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Read Full Story

07:40 AM (IST) Jun 10

ವರ್ಷಧಾರೆಗೆ ತುಂಬಿದ ನರೇಗಾ ಕಂದಕಗಳು - ಗಜೇಂದ್ರಗಡ ತಾಲೂಕಿನ ರೈತರ ಮೊಗದಲ್ಲಿ ಮಂದಹಾಸ!

ಗಜೇಂದ್ರಗಡ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಿಂದಾಗಿ, ಇತ್ತೀಚಿನ ಮಳೆಗೆ ಸಾವಿರಾರು ಕಂದಕಗಳು ಜಲಾವೃತಗೊಂಡಿವೆ. ಇದು ಮಣ್ಣಿನ ಸವಕಳಿಯನ್ನು ತಡೆಯುವುದರ ಜೊತೆಗೆ ಅಂತರ್ಜಲ ಮಟ್ಟ ಹೆಚ್ಚಿಸಲು ನೆರವಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.
Read Full Story

07:23 AM (IST) Jun 10

4 ವಿಧಗಳಲ್ಲಿ ತ್ಯಾಜ್ಯ ವಿಂಗಡಿಸದಿದ್ದರೆ ಪ್ರಕರಣ ದಾಖಲಿಸಿ ದಂಡ ಹಾಕಿ; ಮುಖ್ಯಾಧಿಕಾರಿ ಎಚ್ಚರಿಕೆ

ಪುರಸಭೆಯು ಘನತ್ಯಾಜ್ಯ ನಿರ್ವಹಣಾ ನಿಯಮದ ಅಡಿಯಲ್ಲಿ ತ್ಯಾಜ್ಯವನ್ನು 4 ವಿಧಗಳಲ್ಲಿ ವಿಂಗಡಿಸುವುದನ್ನು ಕಡ್ಡಾಯಗೊಳಿಸಿದೆ. ಈ ನಿಯಮ ಪಾಲಿಸದ ಸಾರ್ವಜನಿಕರು ಮತ್ತು ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಮುಖ್ಯಾಧಿಕಾರಿ ಟಿ.ಲೀಲಾವತಿ ಎಚ್ಚರಿಕೆ ನೀಡಿದ್ದಾರೆ.

Read Full Story

07:10 AM (IST) Jun 10

ಶ್ರವಣಬೆಳಗೊಳದಲ್ಲಿ ಮತ್ತೊಂದು ಕನ್ನಡ ಶಾಸನ ಪತ್ತೆ; 12ನೇ ಶತಮಾನದಲ್ಲಿನ ವೃತ್ತಿ ಉಲ್ಲೇಖ

ಶ್ರವಣಬೆಳಗೊಳದ ವಿಂದ್ಯಾಗಿರಿಯಲ್ಲಿ ಸ್ವಚ್ಛತಾ ಕಾರ್ಯದ ವೇಳೆ 12ನೇ ಶತಮಾನಕ್ಕೆ ಸೇರಿದ ಅಪೂರ್ವ ಶಿಲಾ ಶಾಸನವೊಂದು ಪತ್ತೆಯಾಗಿದೆ. ಕನ್ನಡ ಲಿಪಿಯಲ್ಲಿರುವ ಈ ದಾನ ಶಾಸನವು 'ಕಬ್ಬಹಿನ ವೃತ್ತಿ'ಗೆ ಸಂಬಂಧಿಸಿದ ವಿವರಗಳನ್ನು ಹೊಂದಿದ್ದು, ಕ್ಷೇತ್ರದ ಐತಿಹಾಸಿಕ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.
Read Full Story

More Trending News