LIVE NOW
Published : May 10, 2026, 07:06 AM ISTUpdated : May 10, 2026, 09:20 AM IST

Karnataka News Live: ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಈ ಭಾಗದಲ್ಲಿ 10.20 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣ

ಸಾರಾಂಶ

ಬೆಂಗಳೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಚಿವ ಡಿ.ಸುಧಾಕರ್ ಇಂದು ಬೆಳಗಿನ ಜಾವ 3.15ರ ವೇಳೆಗೆ ನಿಧನರಾಗಿದ್ದಾರೆ. ಡಿ.ಸುಧಾಕರ್ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಡಿ ಚಿಪ್ಪಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆಪರೇಷನ್ ಬಳಿಕ ಇನ್ನೇನು ಡಿಸ್ಚಾರ್ಜ್ ಆಗಬೇಕು ಎನ್ನುವಷ್ಟರಲ್ಲಿ ಶ್ವಾಸಕೋಶಕ್ಕೆ ಸೋಂಕು ತಗುಲಿತ್ತು ಹೆಚ್ಚು ಧೂಮಪಾನ ಮಾಡ್ತಿದ್ದ ಕಾರಣಕ್ಕೆ ಶ್ವಾಸಕೋಶದ ಸೋಂಕು ತೀವ್ರವಾಗಿತ್ತು. ಕೊನೆಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೂ ಯಾವುದೇ ಚೇತರಿಕೆ ಕಾಣಲಿಲ್ಲ

ಕೊನೆಗೆ ವೈದ್ಯರು ECMO ಅಳವಡಿಕೆ ಮಾಡಿದ್ದರು. ಶ್ವಾಸಕೋಶ ಹಾಗೂ ಹೃದಯ ಸರಿಯಾಗಿ ಕೆಲಸ ಮಾಡದ ಕಾರಣ, ECMO ಮಷಿನ್ ಈ ಕಾರ್ಯ ನಿರ್ವಹಿಸುತ್ತದೆ ನಾಲ್ಕು ವಾರಗಳ ನಿಗಾದಲ್ಲಿ ಇರಿಸಲಾಗಿತ್ತು. ಚೇತರಿಕೆ ಕಂಡುಬಂದರೆ ಶ್ವಾಸಕೋಶದ ಟ್ರಾನ್ಸ್‌ಪ್ಲಾಂಟ್ ಮಾಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಯಾವುದೇ ಚೇತರಿಕೆ ಕಾಣದೆ ಬೆಳಗಿನ ಜಾವ ಸುಧಾಕರ್ ಕೊನೆಯುಸಿರೆಳಿದಿದ್ದಾರೆ

09:20 AM (IST) May 10

ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಈ ಭಾಗದಲ್ಲಿ 10.20 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣ

ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು,  ಬಫರ್‌ ಜೋನ್‌ನಲ್ಲಿ 10.20 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ಬಿ-ಸ್ಮೈಲ್ ಮುಂದಾಗಿದೆ. ಈ ಯೋಜನೆಯಲ್ಲಿ ಸೌಂದರ್ಯೀಕರಣದ ಜೊತೆಗೆ, 200ಕ್ಕೂ ಹೆಚ್ಚು ಮರಗಳನ್ನು ತೆರವುಗೊಳಿಸಲಾಗುವುದು ಮತ್ತು ಆಸ್ತಿ ಕಳೆದುಕೊಳ್ಳುವವರಿಗೆ ಪರಿಹಾರ ನೀಡಲಾಗುವುದು.

Read Full Story

09:14 AM (IST) May 10

ಸಚಿವ ಡಿ. ಸುಧಾಕರ್ ನಿಧನ - ಹಿರಿಯೂರು ಶಾಸಕ, ಜನಪರ ನಾಯಕನ ರಾಜಕೀಯ ಜೀವನಕ್ಕೆ ಸ್ಪೂರ್ತಿಯೇ ಚಿಕ್ಕಪ್ಪ!

ಕರ್ನಾಟಕದ ಸಾಂಖ್ಯಿಕ ಮತ್ತು ಯೋಜನಾ ಸಚಿವ ಡಿ. ಸುಧಾಕರ್ ಅವರು ಅನಾರೋಗ್ಯದಿಂದಾಗಿ ತಮ್ಮ 65ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಿರಿಯೂರು ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 'ಬಡವರ ಬಂಧು' ಎಂದೇ ಜನಪ್ರಿಯರಾಗಿದ್ದರು ಮತ್ತು ಸಹಕಾರ ಕ್ಷೇತ್ರದಲ್ಲೂ ಅಪಾರ ಸೇವೆ ಸಲ್ಲಿಸಿದ್ದರು.
Read Full Story

09:00 AM (IST) May 10

Mavu Mela - ಬೆಂಗಳೂರಿನ ಕಬ್ಬನ್ ಪಾರ್ಕ್‌ ಮೇಳ; 2 ದಿನದಲ್ಲಿಯೇ 7 ಟನ್‌+ ಮಾವು ಮಾರಾಟ

ಮಾವು-ಹಲಸು ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಸಾಯನಿಕ ಮುಕ್ತ, ನೈಸರ್ಗಿಕವಾಗಿ ಮಾಗಿದ ಮಾವು ಮತ್ತು ಹಲಸನ್ನು ರೈತರಿಂದ ನೇರವಾಗಿ ಕಡಿಮೆ ದರದಲ್ಲಿ ಒದಗಿಸುತ್ತಿದ್ದು, ಮೊದಲ ಎರಡು ದಿನಗಳಲ್ಲಿ ಏಳು ಟನ್‌ಗೂ ಹೆಚ್ಚು ಮಾವು ಮಾರಾಟವಾಗಿದೆ.

Read Full Story

08:44 AM (IST) May 10

ಬೇರೊಬ್ಬರ ವರದಿಯನ್ನು ಮತ್ತ್ಯಾರಿಗೋ ನೀಡಿ ರೋಗಿಯ ಪತಿಯನ್ನೇ ನಿಂದಿಸಿದ ಸ್ಕ್ಯಾನಿಂಗ್‌ ಸೆಂಟರ್‌ ಸಿಬ್ಬಂದಿ

ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಬೇರೊಬ್ಬರ ವರದಿಯನ್ನು ಮಹಿಳೆಯೊಬ್ಬರಿಗೆ ನೀಡಿದ ಪರಿಣಾಮ, ತಪ್ಪಾದ ಚಿಕಿತ್ಸೆಯಿಂದ ಅವರ ಆರೋಗ್ಯ ಹದಗೆಟ್ಟಿದೆ. ಕೇಂದ್ರದ ಸಿಬ್ಬಂದಿ ತಮ್ಮ ತಪ್ಪನ್ನು ಒಪ್ಪಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದು, ಈ ಘಟನೆಯು ಸರ್ಕಾರಿ ಆಸ್ಪತ್ರೆಯ ಸ್ಕ್ಯಾನಿಂಗ್ ಯಂತ್ರದ ದುಸ್ಥಿತಿಯನ್ನು ಸಹ ಬೆಳಕಿಗೆ ತಂದಿದೆ.

Read Full Story

08:33 AM (IST) May 10

ಪಂಚರಾಜ್ಯ ಚುನಾವಣಾ ಫಲಿತಾಂಶ ಬಳಿಕ ಕರ್ನಾಟಕ ಪ್ರಧಾನಿ ಮೋದಿ, ಆರು ತಿಂಗಳಲ್ಲಿ ಮೂರನೇ ಭೇಟಿ!

ಪಂಚರಾಜ್ಯಗಳ ಚುನಾವಣಾ ಗೆಲುವಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ, ಅವರು ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದು

Read Full Story

08:31 AM (IST) May 10

ಪೀಣ್ಯ ಫ್ಲೈಓವರ್‌ಗೆ ಕಠಿಣ ಪರೀಕ್ಷೆ ನಡೆಸಿದ ಪರಿಣಿತರ ತಂಡ; ರಿಸಲ್ಟ್‌ನಲ್ಲಿ ಬಂದಿದ್ದೇನು?

ಕೇಬಲ್ ಸಮಸ್ಯೆಯಿಂದ ಸುದ್ದಿಯಾಗಿದ್ದ ಪೀಣ್ಯ ಫ್ಲೈಓವರ್ ಕುರಿತ ಮಾಹಿತಿ ಇಲ್ಲಿದೆ. ಮೇಲ್ಸೇತುವೆಯು ಭಾರ ತಡೆಯುವ ಸಾಮರ್ಥ್ಯ ಹೊಂದಿದೆಯೇ ಎಂದು ಮೇ 5 ರಿಂದ ಲೋಡ್‌ ಟೆಸ್ಟಿಂಗ್‌ ನಡೆಸಿದೆ. ಈ ಪರೀಕ್ಷೆಯ ಫಲಿತಾಂಶ ಹೊರ ಬಂದಿದೆ.

Read Full Story

08:12 AM (IST) May 10

ಯಶವಂತಪುರ -ವಿಜಯಪುರ-ಸಿಂಧನೂರು ​ರೈಲಿಗೆ ಜರ್ಮನ್ ತಂತ್ರಜ್ಞಾನ ; ಈಗ ಮತ್ತಷ್ಟು ಆರಾಮದಾಯಕ ಪ್ರಯಾಣ

ಯಶ್ವಂತಪುರ ​ವಿಜಯಪುರ ​ಯಶ್ವಂತಪುರ (16 547/48) ಹಾಗೂ ಯಶ್ವಂತಪುರ ​ಸಿಂಧನೂರು ​ಯಶ್ವಂತಪುರ (16 545/46) ಪ್ರಯಾಣಿಕರಿಗೆ ಸಂತಸದ ಸುದ್ದಿಯನ್ನು ನೀಡಿದೆ. ಆಧುನಿಕ ಮೂಲ ಸೌಲಭ್ಯ ನೀಡುತ್ತಿರುವ ಕುರಿತು ಅಧಿಕಾರಿಗಳು ನೀಡಿದ ಮಾಹಿತಿ ಇಲ್ಲಿದೆ.

Read Full Story

08:07 AM (IST) May 10

ಸಚಿವ ಡಿ. ಸುಧಾಕರ್ ನಿಧನ; ಡಿಸಿಎಂ ಡಿಕೆಶಿ ರಾಯಚೂರು ಪ್ರವಾಸ ದಿಢೀರ್ ರದ್ದು?

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಯಚೂರು ಜಿಲ್ಲಾ ಪ್ರವಾಸವು, ಅವರ ಸಂಪುಟ ಸಹೋದ್ಯೋಗಿ ಹಾಗೂ ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ರದ್ದಾಗಿದೆ. ತಮ್ಮ ಆಪ್ತ ಗೆಳೆಯನ ಅಗಲಿಕೆಗೆ ಡಿಕೆಶಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Read Full Story

07:43 AM (IST) May 10

Belagavi - ಪತಿ ಮನೆಯಲ್ಲೇ ಕಳ್ಳತನ ಮಾಡಿ ಪ್ರಿಯಕರನೊಂದಿಗೆ ತಗ್ಲಾಕೊಂಡ ನವವಿವಾಹಿತೆ

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ, ಪತಿಯ ಮನೆಯಲ್ಲಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪದ ಮೇಲೆ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯ ನಡೆದ 48 ಗಂಟೆಗಳಲ್ಲಿ ಆರೋಪಿಗಳನ್ನು ಸೆರೆಹಿಡಿದು, ಕಳವಾದ ಸಂಪೂರ್ಣ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
Read Full Story

07:36 AM (IST) May 10

DK Shivakumar Raichur visit Today - ಇಂದು ರಾಯಚೂರಿಗೆ ಡಿಸಿಎಂ ಡಿಕೆಶಿ ಸೇರಿ ‘ಕೈ’ ನಾಯಕರ ದಂಡು!

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಅವರು ಲಿಂಗಸೂಗೂರು ಮಾಜಿ ಶಾಸಕರ ಪುತ್ರಿಯ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದು, ಸಚಿವರು ಹಾಗೂ ಶಾಸಕರ ದಂಡೇ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ.
Read Full Story

07:08 AM (IST) May 10

Minister D Sudhakar No More: ಹಿರಿಯೂರಿನ ಧ್ವನಿ ಮೌನ: ಸಚಿವ ಡಿ. ಸುಧಾಕರ್ ಇನ್ನಿಲ್ಲ

ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಸಚಿವರಾಗಿದ್ದ ಡಿ. ಸುಧಾಕರ್ ಅವರು ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯೂರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ತಮ್ಮ ಚಿಕ್ಕಪ್ಪನ ರಾಜಕೀಯ ಮಾರ್ಗದರ್ಶನದಲ್ಲಿ ಸಾರ್ವಜನಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದರು.

 

 


More Trending News