ಬೆಂಗಳೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಚಿವ ಡಿ.ಸುಧಾಕರ್ ಇಂದು ಬೆಳಗಿನ ಜಾವ 3.15ರ ವೇಳೆಗೆ ನಿಧನರಾಗಿದ್ದಾರೆ. ಡಿ.ಸುಧಾಕರ್ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಡಿ ಚಿಪ್ಪಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆಪರೇಷನ್ ಬಳಿಕ ಇನ್ನೇನು ಡಿಸ್ಚಾರ್ಜ್ ಆಗಬೇಕು ಎನ್ನುವಷ್ಟರಲ್ಲಿ ಶ್ವಾಸಕೋಶಕ್ಕೆ ಸೋಂಕು ತಗುಲಿತ್ತು ಹೆಚ್ಚು ಧೂಮಪಾನ ಮಾಡ್ತಿದ್ದ ಕಾರಣಕ್ಕೆ ಶ್ವಾಸಕೋಶದ ಸೋಂಕು ತೀವ್ರವಾಗಿತ್ತು. ಕೊನೆಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೂ ಯಾವುದೇ ಚೇತರಿಕೆ ಕಾಣಲಿಲ್ಲ
ಕೊನೆಗೆ ವೈದ್ಯರು ECMO ಅಳವಡಿಕೆ ಮಾಡಿದ್ದರು. ಶ್ವಾಸಕೋಶ ಹಾಗೂ ಹೃದಯ ಸರಿಯಾಗಿ ಕೆಲಸ ಮಾಡದ ಕಾರಣ, ECMO ಮಷಿನ್ ಈ ಕಾರ್ಯ ನಿರ್ವಹಿಸುತ್ತದೆ ನಾಲ್ಕು ವಾರಗಳ ನಿಗಾದಲ್ಲಿ ಇರಿಸಲಾಗಿತ್ತು. ಚೇತರಿಕೆ ಕಂಡುಬಂದರೆ ಶ್ವಾಸಕೋಶದ ಟ್ರಾನ್ಸ್ಪ್ಲಾಂಟ್ ಮಾಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಯಾವುದೇ ಚೇತರಿಕೆ ಕಾಣದೆ ಬೆಳಗಿನ ಜಾವ ಸುಧಾಕರ್ ಕೊನೆಯುಸಿರೆಳಿದಿದ್ದಾರೆ
09:20 AM (IST) May 10
ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು, ಬಫರ್ ಜೋನ್ನಲ್ಲಿ 10.20 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ಬಿ-ಸ್ಮೈಲ್ ಮುಂದಾಗಿದೆ. ಈ ಯೋಜನೆಯಲ್ಲಿ ಸೌಂದರ್ಯೀಕರಣದ ಜೊತೆಗೆ, 200ಕ್ಕೂ ಹೆಚ್ಚು ಮರಗಳನ್ನು ತೆರವುಗೊಳಿಸಲಾಗುವುದು ಮತ್ತು ಆಸ್ತಿ ಕಳೆದುಕೊಳ್ಳುವವರಿಗೆ ಪರಿಹಾರ ನೀಡಲಾಗುವುದು.
09:14 AM (IST) May 10
09:00 AM (IST) May 10
ಮಾವು-ಹಲಸು ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಸಾಯನಿಕ ಮುಕ್ತ, ನೈಸರ್ಗಿಕವಾಗಿ ಮಾಗಿದ ಮಾವು ಮತ್ತು ಹಲಸನ್ನು ರೈತರಿಂದ ನೇರವಾಗಿ ಕಡಿಮೆ ದರದಲ್ಲಿ ಒದಗಿಸುತ್ತಿದ್ದು, ಮೊದಲ ಎರಡು ದಿನಗಳಲ್ಲಿ ಏಳು ಟನ್ಗೂ ಹೆಚ್ಚು ಮಾವು ಮಾರಾಟವಾಗಿದೆ.
08:44 AM (IST) May 10
ಸ್ಕ್ಯಾನಿಂಗ್ ಸೆಂಟರ್ನಲ್ಲಿ ಬೇರೊಬ್ಬರ ವರದಿಯನ್ನು ಮಹಿಳೆಯೊಬ್ಬರಿಗೆ ನೀಡಿದ ಪರಿಣಾಮ, ತಪ್ಪಾದ ಚಿಕಿತ್ಸೆಯಿಂದ ಅವರ ಆರೋಗ್ಯ ಹದಗೆಟ್ಟಿದೆ. ಕೇಂದ್ರದ ಸಿಬ್ಬಂದಿ ತಮ್ಮ ತಪ್ಪನ್ನು ಒಪ್ಪಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದು, ಈ ಘಟನೆಯು ಸರ್ಕಾರಿ ಆಸ್ಪತ್ರೆಯ ಸ್ಕ್ಯಾನಿಂಗ್ ಯಂತ್ರದ ದುಸ್ಥಿತಿಯನ್ನು ಸಹ ಬೆಳಕಿಗೆ ತಂದಿದೆ.
08:33 AM (IST) May 10
ಪಂಚರಾಜ್ಯಗಳ ಚುನಾವಣಾ ಗೆಲುವಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ, ಅವರು ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದು
08:31 AM (IST) May 10
ಕೇಬಲ್ ಸಮಸ್ಯೆಯಿಂದ ಸುದ್ದಿಯಾಗಿದ್ದ ಪೀಣ್ಯ ಫ್ಲೈಓವರ್ ಕುರಿತ ಮಾಹಿತಿ ಇಲ್ಲಿದೆ. ಮೇಲ್ಸೇತುವೆಯು ಭಾರ ತಡೆಯುವ ಸಾಮರ್ಥ್ಯ ಹೊಂದಿದೆಯೇ ಎಂದು ಮೇ 5 ರಿಂದ ಲೋಡ್ ಟೆಸ್ಟಿಂಗ್ ನಡೆಸಿದೆ. ಈ ಪರೀಕ್ಷೆಯ ಫಲಿತಾಂಶ ಹೊರ ಬಂದಿದೆ.
08:12 AM (IST) May 10
ಯಶ್ವಂತಪುರ ವಿಜಯಪುರ ಯಶ್ವಂತಪುರ (16 547/48) ಹಾಗೂ ಯಶ್ವಂತಪುರ ಸಿಂಧನೂರು ಯಶ್ವಂತಪುರ (16 545/46) ಪ್ರಯಾಣಿಕರಿಗೆ ಸಂತಸದ ಸುದ್ದಿಯನ್ನು ನೀಡಿದೆ. ಆಧುನಿಕ ಮೂಲ ಸೌಲಭ್ಯ ನೀಡುತ್ತಿರುವ ಕುರಿತು ಅಧಿಕಾರಿಗಳು ನೀಡಿದ ಮಾಹಿತಿ ಇಲ್ಲಿದೆ.
08:07 AM (IST) May 10
07:43 AM (IST) May 10
07:36 AM (IST) May 10
07:08 AM (IST) May 10
ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಸಚಿವರಾಗಿದ್ದ ಡಿ. ಸುಧಾಕರ್ ಅವರು ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯೂರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ತಮ್ಮ ಚಿಕ್ಕಪ್ಪನ ರಾಜಕೀಯ ಮಾರ್ಗದರ್ಶನದಲ್ಲಿ ಸಾರ್ವಜನಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದರು.